Homeಮುಖಪುಟಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಅತ್ತ ಎನ್‌ಸಿಪಿ, ಇತ್ತ ಬಿಜೆಪಿ ಎಷ್ಟೇ ಒತ್ತಾಯ ಮಾಡಿದರೂ ಮುಖ್ಯಮಂತ್ರಿ ಹುದ್ದೆಯ ಪಟ್ಟು ಬಿಡದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಎನ್‌ಸಿಪಿ ಪಕ್ಷವು ಮೊದಲು ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧ ಕಡಿದುಕೊಂಡು ನಂತರ ಮಾತುಕತೆಗೆ ಬನ್ನಿ ಎಂದು ಶಿವಸೇನೆಗೆ ಖಡಕ್‌ ಆಗಿ ಹೇಳಿದೆ. ಸದ್ಯ ಕೇಂದ್ರ ಸಚಿವ ಸಂಪುಟದಲ್ಲಿ ಶಿವಸೇನೆಯಿಂದ ಅರವಿಂದ್‌ ಸಾವಂತ್‌ ಸಚಿವರಾಗಿದ್ದಾರೆ. ಅವರು ತಕ್ಷಣ ರಾಜಿನಾಮೆ ನೀಡಿ ಹೊರಬರಬೇಕು ಮತ್ತು ಎನ್‌ಡಿಎ ಜೊತೆಗೆ ಶಿವಸೇನೆ ಸಂಬಂಧ ಕಡಿದುಕೊಳ್ಳಬೇಕು. ನಂತರ ನಾವು ಬೆಂಬಲ ನೀಡಬಹುದು ಎಂದು ಎನ್‌ಸಿಪಿ ವಕ್ತಾರ ನವಾಬ್‌ ಮಲ್ಲಿಕ್‌ರವರು ತಿಳಿಸಿದ್ದಾರೆ.

ಅಲ್ಲದೇ ಕೆಲವು ಶಿವಸೇನೆಯ ಶಾಸಕರು ಈಗಲೂ ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಅದು ಸಂಪೂರ್ಣ ತಪ್ಪಬೇಕು. ಆನಂತರವಷ್ಟೇ ನಾವು ಬೆಂಬಲ ನೀಡಬಹುದು ಎಂದು ನವಾಬ್‌ ಮಲ್ಲಿಕೆ ತಿಳಿಸಿದ್ದಾರೆ. ಒಮ್ಮೆ ನಾವು ಬೆಂಬಲ ಕೊಟ್ಟಲ್ಲಿ ಅದು ಸ್ಥಿರ ಸರ್ಕಾರವಾಗಿರಬೇಕು. ಹಾಗಾಗಿ ಶಿವಸೇನೆ ಸಂಪೂರ್ಣವಾಗಿ ಬಿಜೆಪಿಯನ್ನು ತ್ಯಜಿಸಿ ಬಂದರೆ ಮಾತ್ರ ಬೆಂಬಲ ನೀಡಬಹುದು ಎಂದಿದ್ದಾರೆ.

ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಇನ್ನು ಬಿಜೆಪಿ ಪಕ್ಷವೂ ಈಗಲೂ ಶಿವಸೇನೆಗೆ ಬಿಜೆಪಿಯ ಬಾಗಿಲು ಮುಕ್ತವಾಗಿ ತೆಗೆದಿದೆ. ಬನ್ನಿ ಏನಾದರೂ ಬೇಕಾದರೆ ಕೇಳಿ ಆದರೆ ಮುಖ್ಯಮಂತ್ರಿ ಮಾತ್ರ ದೇವೇಂದ್ರ ಫಡ್ನಾವೀಸ್‌ ಆಗಿರುತ್ತಾರೆ ಎಂದು ಬಿಜೆಪಿ ಹೇಳಿದೆ.

ಮಾತುಕತೆಗೆ ದಿನದ 24 ಗಂಟೆಯೂ ಬಿಜೆಪಿಯ ಬಾಗಿಲು ತೆರೆದಿದೆ. ಏಕೆಂದರೆ ಜನ ನಮಗೆ ಬಹುಮತ ನೀಡಿದ್ದಾರೆ. ಹಾಗಾಗಿ ಸರ್ಕಾರ ರಚಿಸಬೇಕಾದರೆ ನಾವು ಮಾತುಕತೆ ಮಾಡಬೇಕಿದೆ ಎಂದು ಮುಖ್ಯಮಂತ್ರಿಗಳ ಸಭೆಯ ನಂತರ ಬಿಜೆಪಿಯ ಮುಖಂಡ ಚಂದ್ರಕಾಂತ್‌ ಪಾಟೀಲ್‌ ಹೇಳಿದ್ದಾರೆ.

ಶಿವಸೇನೆ ಪಟ್ಟು ಹಿಡಿಯಲು ಕಾರಣವೇನು?

ಮಹಾರಾಷ್ಟ್ರದಲ್ಲಿ ಶಿವಸೇನೆಯವರು ಮುಖ್ಯಮಂತ್ರಿಯಾಗಿ 20 ವರ್ಷವಾಗಿದೆ. 1999ರಲ್ಲಿ ನಾರಾಯಣ್‌ ರಾಣೆ ಮುಖ್ಯಮಂತ್ರಿಯಾಗಿದ್ದೆ ಕೊನೆ. ಇನ್ನು ಕಳೆದ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಇಲ್ಲದೇ 63 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ ಈ ಬಾರಿ ಚುನಾವಣಾ ಪೂರ್ವ ಮೈತ್ರಿ ಇದ್ದರೂ ಸಹ 56ಕ್ಕೆ ಕುಸಿದಿದೆ. ಅಂದರೆ ಶಿವಸೇನೆ ಬಲಾಢ್ಯ ಇದ್ದ ಜಾಗಗಳಲೆಲ್ಲಾ ಬಿಜೆಪಿ ಗೆಲ್ಲುತ್ತಾ ಬಂದಿದೆ. ಹಾಗಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಶಿವಸೇನೆಗೆ ಮತ್ತೆ ಅಧಿಕಾರ ಬೇಕಿದೆ. ಹಾಗಾಗಿ ಅದು ಪಟ್ಟು ಬಿಡದೇ ಕುಳಿತಿದೆ ಮಾತ್ರವಲ್ಲ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೂ ಮೈತ್ರಿಗೆ ಮುಂದಾಗಿದೆ.

ಹಾಗೆ ನೋಡಿದರೆ 2014ರಿಂದಲೇ ಶಿವಸೇನೆಯ ಸ್ಥಾನವನ್ನು ಬಿಜೆಪಿ ಆಕ್ರಮಿಸುತ್ತಾ ಬಂದಿದೆ. ಹಾಗಾಗಿಯೇ ಶಿವಸೇನೆ ಬಿಜೆಪಿಯನ್ನು ಬಹಿರಂಗವಾಗಿಯೇ ಟೀಕಿಸುತ್ತಾ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ಭಿನ್ನಮತ ಭುಗಿಲೆದ್ದಿತು. ಹೇಗೋ ನಿವಾರಿಸಿಕೊಂಡರೂ ಸಹ ಅವರ ನಡುಗೆ ಅಂತಹ ಭಾಂದವ್ಯವೇನೂ ಉಳಿದಿಲ್ಲ. ಹಾಗಾಗೆ ಈ ಬಾರಿ ಬಿಜೆಪಿಗೆ ಶಿವಸೇನೆ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲದಂತಾಗಿದೆ. ಇದೇ ಸಂದರ್ಭ ಬಳಸಿಕೊಂಡು ಮುಖ್ಯಮಂತ್ರಿ ಹುದ್ದೆ ಪಡೆದೇ ತೀರಬೇಕೆಂದು ಶಿವಸೇನೆ ತೀರ್ಮಾನಿಸಿದೆ.

ಇನ್ನು ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅದಕ್ಕೆ ಶಿವಸೇನೆಯ ಬೆಂಬಲವಿಲ್ಲದೇ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ. ಆದರೆ ಮುಖ್ಯಮಂತ್ರಿಯ ಹುದ್ದೆಯನ್ನು ಸಹ ಬಿಟ್ಟುಕೊಡಲು ಬಿಜೆಪಿ ಸಿದ್ದರಿಲ್ಲ. ಹೆಚ್ಚು ಕಮ್ಮಿ ಇಡೀ ದೇಶವೇ ಬಿಜೆಪಿಯ ಕೈಯಲ್ಲಿರುವಾಗ ಅತಿದೊಡ್ಡ ಆರ್ಥಿಕತೆ ಹೊಂದಿರುವ ಮಹಾರಾಷ್ಟ್ರವನ್ನು ಬಿಟ್ಟುಕೊಡಲು ಅದು ತಯಾರಿಲ್ಲ. ಇನ್ನು ಸರ್ವಾಧಿಕಾರಿ ಮನಸ್ಥಿತಿಯ ಬಿಜೆಪಿ ಮತ್ತೊಂದು ಸರ್ವಾಧಿಕಾರಿ ಮನಸ್ಥಿತಿಯ ಶಿವಸೇನೆಯ ಕೈಕೆಳಗೆ ಕೆಲಸ ಮಾಡುವುದು ಅವರ ಅಹಂಕಾರಕ್ಕೆ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.

ಸರ್ಕಾರ ರಚನೆಗೆ ಇನ್ನೆರೆಡು ದಿನಗಳು ಮಾತ್ರ ಬಾಕಿ ಉಳಿದಿವೆ. ಹಗ್ಗ ಜಗ್ಗಾಟ ಮುಂದುವರೆದಿದೆ. ಯಾರು ಯಾರ ಜೊತೆಗೆ ಬೇಕಾದರೂ ಸೇರಿ ಸರ್ಕಾರ ರಚಿಸುವ ಅವಕಾಶವಿದೆ. ಇಲ್ಲವೇ ರಾಷ್ಟ್ರಪತಿ ಆಡಳಿತಕ್ಕೆ ಹೋಗುವ ದಾರಿಯಿದೆ. ಇನ್ನೆರೆಡು ದಿನದಲ್ಲಿ ಏನಾಗಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...