Homeಮುಖಪುಟಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಅತ್ತ ಎನ್‌ಸಿಪಿ, ಇತ್ತ ಬಿಜೆಪಿ ಎಷ್ಟೇ ಒತ್ತಾಯ ಮಾಡಿದರೂ ಮುಖ್ಯಮಂತ್ರಿ ಹುದ್ದೆಯ ಪಟ್ಟು ಬಿಡದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಎನ್‌ಸಿಪಿ ಪಕ್ಷವು ಮೊದಲು ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧ ಕಡಿದುಕೊಂಡು ನಂತರ ಮಾತುಕತೆಗೆ ಬನ್ನಿ ಎಂದು ಶಿವಸೇನೆಗೆ ಖಡಕ್‌ ಆಗಿ ಹೇಳಿದೆ. ಸದ್ಯ ಕೇಂದ್ರ ಸಚಿವ ಸಂಪುಟದಲ್ಲಿ ಶಿವಸೇನೆಯಿಂದ ಅರವಿಂದ್‌ ಸಾವಂತ್‌ ಸಚಿವರಾಗಿದ್ದಾರೆ. ಅವರು ತಕ್ಷಣ ರಾಜಿನಾಮೆ ನೀಡಿ ಹೊರಬರಬೇಕು ಮತ್ತು ಎನ್‌ಡಿಎ ಜೊತೆಗೆ ಶಿವಸೇನೆ ಸಂಬಂಧ ಕಡಿದುಕೊಳ್ಳಬೇಕು. ನಂತರ ನಾವು ಬೆಂಬಲ ನೀಡಬಹುದು ಎಂದು ಎನ್‌ಸಿಪಿ ವಕ್ತಾರ ನವಾಬ್‌ ಮಲ್ಲಿಕ್‌ರವರು ತಿಳಿಸಿದ್ದಾರೆ.

ಅಲ್ಲದೇ ಕೆಲವು ಶಿವಸೇನೆಯ ಶಾಸಕರು ಈಗಲೂ ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಅದು ಸಂಪೂರ್ಣ ತಪ್ಪಬೇಕು. ಆನಂತರವಷ್ಟೇ ನಾವು ಬೆಂಬಲ ನೀಡಬಹುದು ಎಂದು ನವಾಬ್‌ ಮಲ್ಲಿಕೆ ತಿಳಿಸಿದ್ದಾರೆ. ಒಮ್ಮೆ ನಾವು ಬೆಂಬಲ ಕೊಟ್ಟಲ್ಲಿ ಅದು ಸ್ಥಿರ ಸರ್ಕಾರವಾಗಿರಬೇಕು. ಹಾಗಾಗಿ ಶಿವಸೇನೆ ಸಂಪೂರ್ಣವಾಗಿ ಬಿಜೆಪಿಯನ್ನು ತ್ಯಜಿಸಿ ಬಂದರೆ ಮಾತ್ರ ಬೆಂಬಲ ನೀಡಬಹುದು ಎಂದಿದ್ದಾರೆ.

ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಇನ್ನು ಬಿಜೆಪಿ ಪಕ್ಷವೂ ಈಗಲೂ ಶಿವಸೇನೆಗೆ ಬಿಜೆಪಿಯ ಬಾಗಿಲು ಮುಕ್ತವಾಗಿ ತೆಗೆದಿದೆ. ಬನ್ನಿ ಏನಾದರೂ ಬೇಕಾದರೆ ಕೇಳಿ ಆದರೆ ಮುಖ್ಯಮಂತ್ರಿ ಮಾತ್ರ ದೇವೇಂದ್ರ ಫಡ್ನಾವೀಸ್‌ ಆಗಿರುತ್ತಾರೆ ಎಂದು ಬಿಜೆಪಿ ಹೇಳಿದೆ.

ಮಾತುಕತೆಗೆ ದಿನದ 24 ಗಂಟೆಯೂ ಬಿಜೆಪಿಯ ಬಾಗಿಲು ತೆರೆದಿದೆ. ಏಕೆಂದರೆ ಜನ ನಮಗೆ ಬಹುಮತ ನೀಡಿದ್ದಾರೆ. ಹಾಗಾಗಿ ಸರ್ಕಾರ ರಚಿಸಬೇಕಾದರೆ ನಾವು ಮಾತುಕತೆ ಮಾಡಬೇಕಿದೆ ಎಂದು ಮುಖ್ಯಮಂತ್ರಿಗಳ ಸಭೆಯ ನಂತರ ಬಿಜೆಪಿಯ ಮುಖಂಡ ಚಂದ್ರಕಾಂತ್‌ ಪಾಟೀಲ್‌ ಹೇಳಿದ್ದಾರೆ.

ಶಿವಸೇನೆ ಪಟ್ಟು ಹಿಡಿಯಲು ಕಾರಣವೇನು?

ಮಹಾರಾಷ್ಟ್ರದಲ್ಲಿ ಶಿವಸೇನೆಯವರು ಮುಖ್ಯಮಂತ್ರಿಯಾಗಿ 20 ವರ್ಷವಾಗಿದೆ. 1999ರಲ್ಲಿ ನಾರಾಯಣ್‌ ರಾಣೆ ಮುಖ್ಯಮಂತ್ರಿಯಾಗಿದ್ದೆ ಕೊನೆ. ಇನ್ನು ಕಳೆದ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಇಲ್ಲದೇ 63 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ ಈ ಬಾರಿ ಚುನಾವಣಾ ಪೂರ್ವ ಮೈತ್ರಿ ಇದ್ದರೂ ಸಹ 56ಕ್ಕೆ ಕುಸಿದಿದೆ. ಅಂದರೆ ಶಿವಸೇನೆ ಬಲಾಢ್ಯ ಇದ್ದ ಜಾಗಗಳಲೆಲ್ಲಾ ಬಿಜೆಪಿ ಗೆಲ್ಲುತ್ತಾ ಬಂದಿದೆ. ಹಾಗಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಶಿವಸೇನೆಗೆ ಮತ್ತೆ ಅಧಿಕಾರ ಬೇಕಿದೆ. ಹಾಗಾಗಿ ಅದು ಪಟ್ಟು ಬಿಡದೇ ಕುಳಿತಿದೆ ಮಾತ್ರವಲ್ಲ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೂ ಮೈತ್ರಿಗೆ ಮುಂದಾಗಿದೆ.

ಹಾಗೆ ನೋಡಿದರೆ 2014ರಿಂದಲೇ ಶಿವಸೇನೆಯ ಸ್ಥಾನವನ್ನು ಬಿಜೆಪಿ ಆಕ್ರಮಿಸುತ್ತಾ ಬಂದಿದೆ. ಹಾಗಾಗಿಯೇ ಶಿವಸೇನೆ ಬಿಜೆಪಿಯನ್ನು ಬಹಿರಂಗವಾಗಿಯೇ ಟೀಕಿಸುತ್ತಾ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ಭಿನ್ನಮತ ಭುಗಿಲೆದ್ದಿತು. ಹೇಗೋ ನಿವಾರಿಸಿಕೊಂಡರೂ ಸಹ ಅವರ ನಡುಗೆ ಅಂತಹ ಭಾಂದವ್ಯವೇನೂ ಉಳಿದಿಲ್ಲ. ಹಾಗಾಗೆ ಈ ಬಾರಿ ಬಿಜೆಪಿಗೆ ಶಿವಸೇನೆ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲದಂತಾಗಿದೆ. ಇದೇ ಸಂದರ್ಭ ಬಳಸಿಕೊಂಡು ಮುಖ್ಯಮಂತ್ರಿ ಹುದ್ದೆ ಪಡೆದೇ ತೀರಬೇಕೆಂದು ಶಿವಸೇನೆ ತೀರ್ಮಾನಿಸಿದೆ.

ಇನ್ನು ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅದಕ್ಕೆ ಶಿವಸೇನೆಯ ಬೆಂಬಲವಿಲ್ಲದೇ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ. ಆದರೆ ಮುಖ್ಯಮಂತ್ರಿಯ ಹುದ್ದೆಯನ್ನು ಸಹ ಬಿಟ್ಟುಕೊಡಲು ಬಿಜೆಪಿ ಸಿದ್ದರಿಲ್ಲ. ಹೆಚ್ಚು ಕಮ್ಮಿ ಇಡೀ ದೇಶವೇ ಬಿಜೆಪಿಯ ಕೈಯಲ್ಲಿರುವಾಗ ಅತಿದೊಡ್ಡ ಆರ್ಥಿಕತೆ ಹೊಂದಿರುವ ಮಹಾರಾಷ್ಟ್ರವನ್ನು ಬಿಟ್ಟುಕೊಡಲು ಅದು ತಯಾರಿಲ್ಲ. ಇನ್ನು ಸರ್ವಾಧಿಕಾರಿ ಮನಸ್ಥಿತಿಯ ಬಿಜೆಪಿ ಮತ್ತೊಂದು ಸರ್ವಾಧಿಕಾರಿ ಮನಸ್ಥಿತಿಯ ಶಿವಸೇನೆಯ ಕೈಕೆಳಗೆ ಕೆಲಸ ಮಾಡುವುದು ಅವರ ಅಹಂಕಾರಕ್ಕೆ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.

ಸರ್ಕಾರ ರಚನೆಗೆ ಇನ್ನೆರೆಡು ದಿನಗಳು ಮಾತ್ರ ಬಾಕಿ ಉಳಿದಿವೆ. ಹಗ್ಗ ಜಗ್ಗಾಟ ಮುಂದುವರೆದಿದೆ. ಯಾರು ಯಾರ ಜೊತೆಗೆ ಬೇಕಾದರೂ ಸೇರಿ ಸರ್ಕಾರ ರಚಿಸುವ ಅವಕಾಶವಿದೆ. ಇಲ್ಲವೇ ರಾಷ್ಟ್ರಪತಿ ಆಡಳಿತಕ್ಕೆ ಹೋಗುವ ದಾರಿಯಿದೆ. ಇನ್ನೆರೆಡು ದಿನದಲ್ಲಿ ಏನಾಗಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...