Homeಮುಖಪುಟಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಅತ್ತ ಎನ್‌ಸಿಪಿ, ಇತ್ತ ಬಿಜೆಪಿ ಎಷ್ಟೇ ಒತ್ತಾಯ ಮಾಡಿದರೂ ಮುಖ್ಯಮಂತ್ರಿ ಹುದ್ದೆಯ ಪಟ್ಟು ಬಿಡದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಎನ್‌ಸಿಪಿ ಪಕ್ಷವು ಮೊದಲು ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧ ಕಡಿದುಕೊಂಡು ನಂತರ ಮಾತುಕತೆಗೆ ಬನ್ನಿ ಎಂದು ಶಿವಸೇನೆಗೆ ಖಡಕ್‌ ಆಗಿ ಹೇಳಿದೆ. ಸದ್ಯ ಕೇಂದ್ರ ಸಚಿವ ಸಂಪುಟದಲ್ಲಿ ಶಿವಸೇನೆಯಿಂದ ಅರವಿಂದ್‌ ಸಾವಂತ್‌ ಸಚಿವರಾಗಿದ್ದಾರೆ. ಅವರು ತಕ್ಷಣ ರಾಜಿನಾಮೆ ನೀಡಿ ಹೊರಬರಬೇಕು ಮತ್ತು ಎನ್‌ಡಿಎ ಜೊತೆಗೆ ಶಿವಸೇನೆ ಸಂಬಂಧ ಕಡಿದುಕೊಳ್ಳಬೇಕು. ನಂತರ ನಾವು ಬೆಂಬಲ ನೀಡಬಹುದು ಎಂದು ಎನ್‌ಸಿಪಿ ವಕ್ತಾರ ನವಾಬ್‌ ಮಲ್ಲಿಕ್‌ರವರು ತಿಳಿಸಿದ್ದಾರೆ.

ಅಲ್ಲದೇ ಕೆಲವು ಶಿವಸೇನೆಯ ಶಾಸಕರು ಈಗಲೂ ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಅದು ಸಂಪೂರ್ಣ ತಪ್ಪಬೇಕು. ಆನಂತರವಷ್ಟೇ ನಾವು ಬೆಂಬಲ ನೀಡಬಹುದು ಎಂದು ನವಾಬ್‌ ಮಲ್ಲಿಕೆ ತಿಳಿಸಿದ್ದಾರೆ. ಒಮ್ಮೆ ನಾವು ಬೆಂಬಲ ಕೊಟ್ಟಲ್ಲಿ ಅದು ಸ್ಥಿರ ಸರ್ಕಾರವಾಗಿರಬೇಕು. ಹಾಗಾಗಿ ಶಿವಸೇನೆ ಸಂಪೂರ್ಣವಾಗಿ ಬಿಜೆಪಿಯನ್ನು ತ್ಯಜಿಸಿ ಬಂದರೆ ಮಾತ್ರ ಬೆಂಬಲ ನೀಡಬಹುದು ಎಂದಿದ್ದಾರೆ.

ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಇನ್ನು ಬಿಜೆಪಿ ಪಕ್ಷವೂ ಈಗಲೂ ಶಿವಸೇನೆಗೆ ಬಿಜೆಪಿಯ ಬಾಗಿಲು ಮುಕ್ತವಾಗಿ ತೆಗೆದಿದೆ. ಬನ್ನಿ ಏನಾದರೂ ಬೇಕಾದರೆ ಕೇಳಿ ಆದರೆ ಮುಖ್ಯಮಂತ್ರಿ ಮಾತ್ರ ದೇವೇಂದ್ರ ಫಡ್ನಾವೀಸ್‌ ಆಗಿರುತ್ತಾರೆ ಎಂದು ಬಿಜೆಪಿ ಹೇಳಿದೆ.

ಮಾತುಕತೆಗೆ ದಿನದ 24 ಗಂಟೆಯೂ ಬಿಜೆಪಿಯ ಬಾಗಿಲು ತೆರೆದಿದೆ. ಏಕೆಂದರೆ ಜನ ನಮಗೆ ಬಹುಮತ ನೀಡಿದ್ದಾರೆ. ಹಾಗಾಗಿ ಸರ್ಕಾರ ರಚಿಸಬೇಕಾದರೆ ನಾವು ಮಾತುಕತೆ ಮಾಡಬೇಕಿದೆ ಎಂದು ಮುಖ್ಯಮಂತ್ರಿಗಳ ಸಭೆಯ ನಂತರ ಬಿಜೆಪಿಯ ಮುಖಂಡ ಚಂದ್ರಕಾಂತ್‌ ಪಾಟೀಲ್‌ ಹೇಳಿದ್ದಾರೆ.

ಶಿವಸೇನೆ ಪಟ್ಟು ಹಿಡಿಯಲು ಕಾರಣವೇನು?

ಮಹಾರಾಷ್ಟ್ರದಲ್ಲಿ ಶಿವಸೇನೆಯವರು ಮುಖ್ಯಮಂತ್ರಿಯಾಗಿ 20 ವರ್ಷವಾಗಿದೆ. 1999ರಲ್ಲಿ ನಾರಾಯಣ್‌ ರಾಣೆ ಮುಖ್ಯಮಂತ್ರಿಯಾಗಿದ್ದೆ ಕೊನೆ. ಇನ್ನು ಕಳೆದ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಇಲ್ಲದೇ 63 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ ಈ ಬಾರಿ ಚುನಾವಣಾ ಪೂರ್ವ ಮೈತ್ರಿ ಇದ್ದರೂ ಸಹ 56ಕ್ಕೆ ಕುಸಿದಿದೆ. ಅಂದರೆ ಶಿವಸೇನೆ ಬಲಾಢ್ಯ ಇದ್ದ ಜಾಗಗಳಲೆಲ್ಲಾ ಬಿಜೆಪಿ ಗೆಲ್ಲುತ್ತಾ ಬಂದಿದೆ. ಹಾಗಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಶಿವಸೇನೆಗೆ ಮತ್ತೆ ಅಧಿಕಾರ ಬೇಕಿದೆ. ಹಾಗಾಗಿ ಅದು ಪಟ್ಟು ಬಿಡದೇ ಕುಳಿತಿದೆ ಮಾತ್ರವಲ್ಲ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೂ ಮೈತ್ರಿಗೆ ಮುಂದಾಗಿದೆ.

ಹಾಗೆ ನೋಡಿದರೆ 2014ರಿಂದಲೇ ಶಿವಸೇನೆಯ ಸ್ಥಾನವನ್ನು ಬಿಜೆಪಿ ಆಕ್ರಮಿಸುತ್ತಾ ಬಂದಿದೆ. ಹಾಗಾಗಿಯೇ ಶಿವಸೇನೆ ಬಿಜೆಪಿಯನ್ನು ಬಹಿರಂಗವಾಗಿಯೇ ಟೀಕಿಸುತ್ತಾ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ಭಿನ್ನಮತ ಭುಗಿಲೆದ್ದಿತು. ಹೇಗೋ ನಿವಾರಿಸಿಕೊಂಡರೂ ಸಹ ಅವರ ನಡುಗೆ ಅಂತಹ ಭಾಂದವ್ಯವೇನೂ ಉಳಿದಿಲ್ಲ. ಹಾಗಾಗೆ ಈ ಬಾರಿ ಬಿಜೆಪಿಗೆ ಶಿವಸೇನೆ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲದಂತಾಗಿದೆ. ಇದೇ ಸಂದರ್ಭ ಬಳಸಿಕೊಂಡು ಮುಖ್ಯಮಂತ್ರಿ ಹುದ್ದೆ ಪಡೆದೇ ತೀರಬೇಕೆಂದು ಶಿವಸೇನೆ ತೀರ್ಮಾನಿಸಿದೆ.

ಇನ್ನು ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅದಕ್ಕೆ ಶಿವಸೇನೆಯ ಬೆಂಬಲವಿಲ್ಲದೇ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ. ಆದರೆ ಮುಖ್ಯಮಂತ್ರಿಯ ಹುದ್ದೆಯನ್ನು ಸಹ ಬಿಟ್ಟುಕೊಡಲು ಬಿಜೆಪಿ ಸಿದ್ದರಿಲ್ಲ. ಹೆಚ್ಚು ಕಮ್ಮಿ ಇಡೀ ದೇಶವೇ ಬಿಜೆಪಿಯ ಕೈಯಲ್ಲಿರುವಾಗ ಅತಿದೊಡ್ಡ ಆರ್ಥಿಕತೆ ಹೊಂದಿರುವ ಮಹಾರಾಷ್ಟ್ರವನ್ನು ಬಿಟ್ಟುಕೊಡಲು ಅದು ತಯಾರಿಲ್ಲ. ಇನ್ನು ಸರ್ವಾಧಿಕಾರಿ ಮನಸ್ಥಿತಿಯ ಬಿಜೆಪಿ ಮತ್ತೊಂದು ಸರ್ವಾಧಿಕಾರಿ ಮನಸ್ಥಿತಿಯ ಶಿವಸೇನೆಯ ಕೈಕೆಳಗೆ ಕೆಲಸ ಮಾಡುವುದು ಅವರ ಅಹಂಕಾರಕ್ಕೆ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.

ಸರ್ಕಾರ ರಚನೆಗೆ ಇನ್ನೆರೆಡು ದಿನಗಳು ಮಾತ್ರ ಬಾಕಿ ಉಳಿದಿವೆ. ಹಗ್ಗ ಜಗ್ಗಾಟ ಮುಂದುವರೆದಿದೆ. ಯಾರು ಯಾರ ಜೊತೆಗೆ ಬೇಕಾದರೂ ಸೇರಿ ಸರ್ಕಾರ ರಚಿಸುವ ಅವಕಾಶವಿದೆ. ಇಲ್ಲವೇ ರಾಷ್ಟ್ರಪತಿ ಆಡಳಿತಕ್ಕೆ ಹೋಗುವ ದಾರಿಯಿದೆ. ಇನ್ನೆರೆಡು ದಿನದಲ್ಲಿ ಏನಾಗಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...