Homeಮುಖಪುಟಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಅತ್ತ ಎನ್‌ಸಿಪಿ, ಇತ್ತ ಬಿಜೆಪಿ ಎಷ್ಟೇ ಒತ್ತಾಯ ಮಾಡಿದರೂ ಮುಖ್ಯಮಂತ್ರಿ ಹುದ್ದೆಯ ಪಟ್ಟು ಬಿಡದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಎನ್‌ಸಿಪಿ ಪಕ್ಷವು ಮೊದಲು ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧ ಕಡಿದುಕೊಂಡು ನಂತರ ಮಾತುಕತೆಗೆ ಬನ್ನಿ ಎಂದು ಶಿವಸೇನೆಗೆ ಖಡಕ್‌ ಆಗಿ ಹೇಳಿದೆ. ಸದ್ಯ ಕೇಂದ್ರ ಸಚಿವ ಸಂಪುಟದಲ್ಲಿ ಶಿವಸೇನೆಯಿಂದ ಅರವಿಂದ್‌ ಸಾವಂತ್‌ ಸಚಿವರಾಗಿದ್ದಾರೆ. ಅವರು ತಕ್ಷಣ ರಾಜಿನಾಮೆ ನೀಡಿ ಹೊರಬರಬೇಕು ಮತ್ತು ಎನ್‌ಡಿಎ ಜೊತೆಗೆ ಶಿವಸೇನೆ ಸಂಬಂಧ ಕಡಿದುಕೊಳ್ಳಬೇಕು. ನಂತರ ನಾವು ಬೆಂಬಲ ನೀಡಬಹುದು ಎಂದು ಎನ್‌ಸಿಪಿ ವಕ್ತಾರ ನವಾಬ್‌ ಮಲ್ಲಿಕ್‌ರವರು ತಿಳಿಸಿದ್ದಾರೆ.

ಅಲ್ಲದೇ ಕೆಲವು ಶಿವಸೇನೆಯ ಶಾಸಕರು ಈಗಲೂ ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಅದು ಸಂಪೂರ್ಣ ತಪ್ಪಬೇಕು. ಆನಂತರವಷ್ಟೇ ನಾವು ಬೆಂಬಲ ನೀಡಬಹುದು ಎಂದು ನವಾಬ್‌ ಮಲ್ಲಿಕೆ ತಿಳಿಸಿದ್ದಾರೆ. ಒಮ್ಮೆ ನಾವು ಬೆಂಬಲ ಕೊಟ್ಟಲ್ಲಿ ಅದು ಸ್ಥಿರ ಸರ್ಕಾರವಾಗಿರಬೇಕು. ಹಾಗಾಗಿ ಶಿವಸೇನೆ ಸಂಪೂರ್ಣವಾಗಿ ಬಿಜೆಪಿಯನ್ನು ತ್ಯಜಿಸಿ ಬಂದರೆ ಮಾತ್ರ ಬೆಂಬಲ ನೀಡಬಹುದು ಎಂದಿದ್ದಾರೆ.

ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಇನ್ನು ಬಿಜೆಪಿ ಪಕ್ಷವೂ ಈಗಲೂ ಶಿವಸೇನೆಗೆ ಬಿಜೆಪಿಯ ಬಾಗಿಲು ಮುಕ್ತವಾಗಿ ತೆಗೆದಿದೆ. ಬನ್ನಿ ಏನಾದರೂ ಬೇಕಾದರೆ ಕೇಳಿ ಆದರೆ ಮುಖ್ಯಮಂತ್ರಿ ಮಾತ್ರ ದೇವೇಂದ್ರ ಫಡ್ನಾವೀಸ್‌ ಆಗಿರುತ್ತಾರೆ ಎಂದು ಬಿಜೆಪಿ ಹೇಳಿದೆ.

ಮಾತುಕತೆಗೆ ದಿನದ 24 ಗಂಟೆಯೂ ಬಿಜೆಪಿಯ ಬಾಗಿಲು ತೆರೆದಿದೆ. ಏಕೆಂದರೆ ಜನ ನಮಗೆ ಬಹುಮತ ನೀಡಿದ್ದಾರೆ. ಹಾಗಾಗಿ ಸರ್ಕಾರ ರಚಿಸಬೇಕಾದರೆ ನಾವು ಮಾತುಕತೆ ಮಾಡಬೇಕಿದೆ ಎಂದು ಮುಖ್ಯಮಂತ್ರಿಗಳ ಸಭೆಯ ನಂತರ ಬಿಜೆಪಿಯ ಮುಖಂಡ ಚಂದ್ರಕಾಂತ್‌ ಪಾಟೀಲ್‌ ಹೇಳಿದ್ದಾರೆ.

ಶಿವಸೇನೆ ಪಟ್ಟು ಹಿಡಿಯಲು ಕಾರಣವೇನು?

ಮಹಾರಾಷ್ಟ್ರದಲ್ಲಿ ಶಿವಸೇನೆಯವರು ಮುಖ್ಯಮಂತ್ರಿಯಾಗಿ 20 ವರ್ಷವಾಗಿದೆ. 1999ರಲ್ಲಿ ನಾರಾಯಣ್‌ ರಾಣೆ ಮುಖ್ಯಮಂತ್ರಿಯಾಗಿದ್ದೆ ಕೊನೆ. ಇನ್ನು ಕಳೆದ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಇಲ್ಲದೇ 63 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ ಈ ಬಾರಿ ಚುನಾವಣಾ ಪೂರ್ವ ಮೈತ್ರಿ ಇದ್ದರೂ ಸಹ 56ಕ್ಕೆ ಕುಸಿದಿದೆ. ಅಂದರೆ ಶಿವಸೇನೆ ಬಲಾಢ್ಯ ಇದ್ದ ಜಾಗಗಳಲೆಲ್ಲಾ ಬಿಜೆಪಿ ಗೆಲ್ಲುತ್ತಾ ಬಂದಿದೆ. ಹಾಗಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಶಿವಸೇನೆಗೆ ಮತ್ತೆ ಅಧಿಕಾರ ಬೇಕಿದೆ. ಹಾಗಾಗಿ ಅದು ಪಟ್ಟು ಬಿಡದೇ ಕುಳಿತಿದೆ ಮಾತ್ರವಲ್ಲ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೂ ಮೈತ್ರಿಗೆ ಮುಂದಾಗಿದೆ.

ಹಾಗೆ ನೋಡಿದರೆ 2014ರಿಂದಲೇ ಶಿವಸೇನೆಯ ಸ್ಥಾನವನ್ನು ಬಿಜೆಪಿ ಆಕ್ರಮಿಸುತ್ತಾ ಬಂದಿದೆ. ಹಾಗಾಗಿಯೇ ಶಿವಸೇನೆ ಬಿಜೆಪಿಯನ್ನು ಬಹಿರಂಗವಾಗಿಯೇ ಟೀಕಿಸುತ್ತಾ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ಭಿನ್ನಮತ ಭುಗಿಲೆದ್ದಿತು. ಹೇಗೋ ನಿವಾರಿಸಿಕೊಂಡರೂ ಸಹ ಅವರ ನಡುಗೆ ಅಂತಹ ಭಾಂದವ್ಯವೇನೂ ಉಳಿದಿಲ್ಲ. ಹಾಗಾಗೆ ಈ ಬಾರಿ ಬಿಜೆಪಿಗೆ ಶಿವಸೇನೆ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲದಂತಾಗಿದೆ. ಇದೇ ಸಂದರ್ಭ ಬಳಸಿಕೊಂಡು ಮುಖ್ಯಮಂತ್ರಿ ಹುದ್ದೆ ಪಡೆದೇ ತೀರಬೇಕೆಂದು ಶಿವಸೇನೆ ತೀರ್ಮಾನಿಸಿದೆ.

ಇನ್ನು ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅದಕ್ಕೆ ಶಿವಸೇನೆಯ ಬೆಂಬಲವಿಲ್ಲದೇ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ. ಆದರೆ ಮುಖ್ಯಮಂತ್ರಿಯ ಹುದ್ದೆಯನ್ನು ಸಹ ಬಿಟ್ಟುಕೊಡಲು ಬಿಜೆಪಿ ಸಿದ್ದರಿಲ್ಲ. ಹೆಚ್ಚು ಕಮ್ಮಿ ಇಡೀ ದೇಶವೇ ಬಿಜೆಪಿಯ ಕೈಯಲ್ಲಿರುವಾಗ ಅತಿದೊಡ್ಡ ಆರ್ಥಿಕತೆ ಹೊಂದಿರುವ ಮಹಾರಾಷ್ಟ್ರವನ್ನು ಬಿಟ್ಟುಕೊಡಲು ಅದು ತಯಾರಿಲ್ಲ. ಇನ್ನು ಸರ್ವಾಧಿಕಾರಿ ಮನಸ್ಥಿತಿಯ ಬಿಜೆಪಿ ಮತ್ತೊಂದು ಸರ್ವಾಧಿಕಾರಿ ಮನಸ್ಥಿತಿಯ ಶಿವಸೇನೆಯ ಕೈಕೆಳಗೆ ಕೆಲಸ ಮಾಡುವುದು ಅವರ ಅಹಂಕಾರಕ್ಕೆ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.

ಸರ್ಕಾರ ರಚನೆಗೆ ಇನ್ನೆರೆಡು ದಿನಗಳು ಮಾತ್ರ ಬಾಕಿ ಉಳಿದಿವೆ. ಹಗ್ಗ ಜಗ್ಗಾಟ ಮುಂದುವರೆದಿದೆ. ಯಾರು ಯಾರ ಜೊತೆಗೆ ಬೇಕಾದರೂ ಸೇರಿ ಸರ್ಕಾರ ರಚಿಸುವ ಅವಕಾಶವಿದೆ. ಇಲ್ಲವೇ ರಾಷ್ಟ್ರಪತಿ ಆಡಳಿತಕ್ಕೆ ಹೋಗುವ ದಾರಿಯಿದೆ. ಇನ್ನೆರೆಡು ದಿನದಲ್ಲಿ ಏನಾಗಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...