Homeಮುಖಪುಟಮೈಕೆಲ್ ಹನೆಕೆಯ ’ದ ಹಿಡನ್': ಸಾಮೂಹಿಕ ಪಶ್ಚಾತ್ತಾಪ ಮತ್ತು ವೈಯಕ್ತಿಕ ಜವಾಬ್ದಾರಿ

ಮೈಕೆಲ್ ಹನೆಕೆಯ ’ದ ಹಿಡನ್’: ಸಾಮೂಹಿಕ ಪಶ್ಚಾತ್ತಾಪ ಮತ್ತು ವೈಯಕ್ತಿಕ ಜವಾಬ್ದಾರಿ

- Advertisement -
- Advertisement -

ಸಾಮಾನ್ಯ ಹೊರಜಗತ್ತಿಗೆ ಯುರೋಪ್ ಎಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಉದಾತ್ತ ಆಶಯಗಳನ್ನು ಮೈಗೂಡಿಸಿಕೊಂಡಂತ ದೇಶಗಳ ಖಂಡ. ಸಮಕಾಲಿನ ಯುರೋಪ್ ಸಿನಿಮಾಗಳಲ್ಲಿ ಕಾಣುವುದು ಇವೇ ಸಂಗತಿಗಳನ್ನು. (ನಾನು ನೋಡಿರುವ ಬಹುತೇಕ ಸಿನಿಮಾಗಳಲ್ಲಿ). ಇನ್ನು ಇವರ ಸಿನಿಮಾಗಳಿಗೆ ಹಿಂಸೆ, ದೌರ್ಜನ್ಯ, ದಬ್ಬಾಳಿಕೆ ಕುರಿತಾದ ವಿಷಯಗಳಿಗೆ ವಸ್ತುವಾಗುವುದು ಎರಡನೇ ಮಹಾಯುದ್ಧದಲ್ಲಿ ಜರ್ಮನಿ ನಡೆಸಿದ ಕ್ರೌರ್ಯ ಮತ್ತು ಅವು ಮನುಷ್ಯನಲ್ಲಿ ಉಂಟು ಮಾಡಿದ ಅಸ್ತಿತ್ವದ ಪ್ರಶ್ನೆಗಳಲ್ಲಿ ಮಾತ್ರ. ಒಂದು ಕಾಲಕ್ಕೆ ಸಾಮ್ರಾಜ್ಯಶಾಹಿಗಳಾಗಿದ್ದ ಯುರೋಪ್‌ನ ಹಲವು ದೇಶಗಳು ಇತರೆ ಖಂಡಗಳಲ್ಲಿ ನಡೆಸಿದ ಹಿಂಸೆ, ದೌರ್ಜನ್ಯ, ದಬ್ಬಾಳಿಕೆ ಇವರ ಸಿನಿಮಾಗಳಿಗೆ ವಸ್ತುಗಳಾಗುವುದು ವಿರಳ. ಈ ಗತದ ಕೃತ್ಯಗಳಿಗೆ ಇವರ ಸಿನಿಮಾಗಳಲ್ಲಿ ಪಶ್ಚಾತ್ತಾಪಕ್ಕೂ ಜಾಗ ಸಿಕ್ಕುವುದಿಲ್ಲ.

’ದ ಹಿಡನ್’ (2005)

ಯಾರನ್ನ ನಾವು ಬೌದ್ಧಿಕ ಮೇಲ್ಪಂಕ್ತಿಯಲ್ಲಿ ಇಟ್ಟು ಕಾಣುತ್ತೇವೆಯೋ, ಅದೇ ಯುರೋಪ್ ದೇಶಗಳ ಸಮುದಾಯಗಳು ತಾವು ನಡೆಸಿದ ರಾಜಕೀಯ ಕ್ರೌರ್ಯಗಳಿಗೆ ಜಾಣ ಕುರುಡಾಗಿರುವುದನ್ನು ಮತ್ತು ಅವರ ಬೂರ್ಜ್ವಾ ಗುಣ, ಹೇಡಿತನ ಹಾಗೂ ಅವರು ಹೊರಜಗತ್ತಿನ ಸಮುದಾಯವನ್ನ ಗ್ರಹಿಸುವ ರೀತಿಯನ್ನು ಹನೆಕೆ ತನ್ನ ’ದ ಹಿಡನ್’ ಸಿನಿಮಾದಲ್ಲಿ ಚರ್ಚಿಸುತ್ತಾರೆ. ಹನೆಕೆ ಆಸ್ಟ್ರಿಯಾ ದೇಶದವರಾದರು ’ದ ಹಿಡನ್’ ಸಿನಿಮಾದ ಕಾಲ ದೇಶಗಳು ಮಾತ್ರ ಫ್ರಾನ್ಸಿನದು. ಅಲ್ಜೀರಿಯಾ ಯುದ್ಧದ (1954-62) ಸಂದರ್ಭದಲ್ಲಿ, ಅಲ್ಜೀರಿಯನ್ ನ್ಯಾಷನಲ್ ಲಿಬರಲ್ ಫ್ರಂಟ್ ಸಂಘಟನೆಯ ಸುಮಾರು 30 ಸಾವಿರ ಜನ ನಡೆಸುತ್ತಿದ್ದ ಶಾಂತಿಯುತ ಮೆರವಣಿಗೆಯ ಮೇಲೆ ಫ್ರಾನ್ಸ್ ಪೊಲೀಸ್ ನಡೆಸಿದ ಹತ್ಯಾಕಾಂಡದಲ್ಲಿ ಸುಮಾರು 300 ಜನ ಸಾಯುತ್ತಾರೆ ಮತ್ತು ಹಲವರು ಕಣ್ಮರೆಯಾಗುತ್ತಾರೆ. ಈ ಘಟನೆಯನ್ನು ಹಿನ್ನೆಲೆಯಾಗಿಟ್ಟುಕೊಂಡು, ಫ್ರಾನ್ಸ್‌ನ ಮಧ್ಯಮ ವರ್ಗದ ಬೌದ್ಧಿಕ ಪರಿಸರದಲ್ಲಿ ಬದುಕುತ್ತಿರುವ ಕುಟುಂಬವೊಂದರ ಖಾಸಗಿ ಬದುಕಿನ ಘಟನೆಗಳನ್ನು ಹನೆಕೆ ಚಿತ್ರಿಸುತ್ತಾರೆ. ಖಾಸಗಿ ಸಂಗತಿಯಲ್ಲಿ ಮಾಡುವ ಪಶ್ಚಾತ್ತಾಪ ನಿರಾಕರಣೆ ಹೇಗೆ ಇಡೀ ದೇಶದ ಪಶ್ಚಾತ್ತಾಪದ ನಿರಾಕರಣೆ ಆಗಿರುತ್ತದೆ ಎಂಬುದನ್ನು ಹನಕೆ ಹೊಸ ಮಾದರಿಯ ದೃಶ್ಯಕಟ್ಟುವಿಕೆಯ ಮೂಲಕ ಹೆಣೆಯುತ್ತಾರೆ. ಇದಕ್ಕೆ ಸಿನಿಮಾದ ಪ್ರಾರಂಭದ ದೃಶ್ಯವೇ ಸಾಕ್ಷಿಯಾಗಿದೆ.

ಬೌದ್ಧಿಕ ಪ್ರತಿನಿಧಿಗಳಂತಿರುವ ಜಾರ್ಜ್ ಮತ್ತು ಅನ್ನೆ ದಂಪತಿಗಳು ಫ್ರಾನ್ಸ್ ನಗರದ ಸುಸಜ್ಜಿತ ಮನೆಯೊಂದರಲ್ಲಿ ಸಂತೃಪ್ತಿಯಿಂದ ಬದುಕುತ್ತಿದ್ದಾರೆ. ಜಾರ್ಜ್ ಟಿವಿ ಒಂದರಲ್ಲಿ ಸಾಹಿತ್ಯ ಕುರಿತಾದ ಕಾರ್ಯಕ್ರಮ ನಡೆಸಿಕೊಡುವ ನಿರೂಪಕನ ವೃತ್ತಿಯಲ್ಲಿದ್ದರೆ, ಅನ್ನೆ ಪುಸ್ತಕ ಪ್ರಕಾಶನ ಸ್ವರೂಪದ ವೃತ್ತಿಯಲ್ಲಿ ಇದ್ದಾಳೆ. ಜಾರ್ಜ್ ಮತ್ತು ಅನ್ನೆಯರ ನೆಮ್ಮದಿ ಬದುಕು ಒಂದು ದಿನ ದಿಢೀರ್ ಎಂದು ಬರುವ ವಿಡಿಯೋಟೇಪ್‌ನಿಂದ ಡಿಸ್ಟರ್ಬ್ ಆಗುತ್ತದೆ. ಇವರದ್ದೇ ಮನೆ ಮತ್ತು ದಿನಚರಿಯ ದೃಶ್ಯಗಳನ್ನು ಗೌಪ್ಯ ಕ್ಯಾಮೆರಾ ಮೂಲಕ ಆ ವಿಡಿಯೋದಲ್ಲಿ ಸೆರೆಹಿಡಿಯಲಾಗಿರುತ್ತದೆ. ಜಾರ್ಜ್ ದಂಪತಿಗಳಿಗೆ ನಾವು ಯಾರದೋ ಕಣ್ಗಾವಲಿನಲ್ಲಿ ಇದ್ದೇವೆ ಮತ್ತು ಈ ಮೂಲಕ ನಮ್ಮನ್ನು ಯಾರೋ ಬೆದರಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಅರಿವಿಗೆ ಬರುತ್ತದೆ. ಮುಂದೆ ಬರುವ ವಿಡಿಯೊ ಟೇಪ್ ಮತ್ತು ಅದರೊಂದಿಗೆ ಬರುವ ಡ್ರಾಯಿಂಗ್‌ನಿಂದ, ಜಾರ್ಜ್‌ಗೆ ತನ್ನ ಬಾಲ್ಯದ ದಿನಗಳು ನೆನಪಾಗುತ್ತವೆ ಮತ್ತು ಈ ವಿಡಿಯೋ ಕಳುಹಿಸುತ್ತಿರುವವರು ಯಾರೆಂಬ ಬಗ್ಗೆ ಒಂದು ಅಂದಾಜಿಗೆ ಬರುತ್ತಾನೆ.

ಜಾರ್ಜ್ 5 ವರ್ಷದವನಿದ್ದಾಗ ಅವನ ತಂದೆ, 1961ರ ಫ್ರಾನ್ಸ್ ಹತ್ಯಾಕಾಂಡದಲ್ಲಿ ಮೃತನಾಗಿರಬಹುದಾದ ಅಥವಾ ಕಣ್ಮರೆಯಾಗಿದ್ದ ಅಲ್ಜೀರಿಯನ್ ದಂಪತಿಗಳ ಮಗುವೊಂದನ್ನು ದತ್ತು ಪಡೆದು ತನ್ನ ಹಳ್ಳಿ ಮನೆಗೆ ಕರೆದುಕೊಂಡು ಬಂದಿರುತ್ತಾನೆ. ವಯಸ್ಸಿನಲ್ಲಿ ಜಾರ್ಜ್‌ಗಿಂತ ಹಿರಿಯನಾದ ಆ ನಿರಾಶ್ರಿತ ಮಗುವಿನ ಹೆಸರು ಮಜೀದ್. ಮಜೀದ್ ಮನೆಗೆ ಬಂದ ನಂತರ ಜಾರ್ಜ್‌ಗೆ ಮನೆಯಲ್ಲಿ ತಾನು ಒಬ್ಬನೇ ಇದ್ದಾಗಿನ ಕಂಫರ್ಟ್ ಈಗಿಲ್ಲ ಎಂಬ ಭಾವನೆ ಪ್ರಾರಂಭವಾಗಿ, ತನಗಿಂತ ಬಲಶಾಲಿಯಾದ ಮಜೀದ್‌ನನ್ನು ನೋಡಿದಾಗಲೆಲ್ಲ ಅಭದ್ರತೆಗೆ ಒಳಗಾಗುತ್ತಾನೆ. ತನ್ನ ತಂದೆ ತಾಯಿಗೆ ಮಜೀದ್ ಮೇಲೆ ಸುಳ್ಳು ಅರೋಪಗಳನ್ನು ಮಾಡಿ ಅವನನ್ನು ಮನೆಯಿಂದ ಅನಾಥಾಶ್ರಮಕ್ಕೆ ಸಾಗಿಹಾಕಲು ಕಾರಣವಾಗುತ್ತಾನೆ.

ಜಾರ್ಜ್‌ನ ಬಾಲ್ಯದ ನೆನಪು ಅನಾಮಧೇಯವಾಗಿ ಬಂದ ವಿಡಿಯೋ ಟೇಪ್ ಕಾರಣವಾಗಿ ನೆನಪಿಗೆ ಬರುತ್ತದೆಯೇ ಹೊರತು ಆ ಘಟನೆಯ ಬಗ್ಗೆ ಪಶ್ಚಾತ್ತಾಪ ಇರುವುದಿಲ್ಲ. ಅನ್ನೆಯಳಿಗೆ ಈ ಘಟನೆಯನ್ನು ವಿವರಿಸುವಾಗ ಕೂಡ ಜಾರ್ಜ್ ತನ್ನ ಪೋಷಕರಿಗೆ ಮಜೀದ್ ವಿರುದ್ಧ ಹೇಳಿದ ಸುಳ್ಳುಗಳು ಬಾಲ್ಯದ ಸಹಜ ವರ್ತನೆ ಎಂದು ಸಮರ್ಥಿಸಿಕೊಳ್ಳುತ್ತಾನೆ. ಈ ವಿಡಿಯೋಗಳನ್ನು ಮಜೀದ್ ತನ್ನ ಮೇಲಿನ ಪ್ರತೀಕಾರಕ್ಕೆ ಕಳುಹಿಸುತ್ತಿದ್ದಾನೆ ಎಂಬ ಖಚಿತ ನಿಲುವಿಗೆ ಜಾರ್ಜ್ ಬರುತ್ತಾನೆ. ಎಲ್ಲೋ ಒಂದು ಇಕ್ಕಟ್ಟಾದ ವಸತಿ ಸಂಕೀರ್ಣದಲ್ಲಿ ಬದುಕುತ್ತಿರುವ ಮಜೀದ್‌ನನ್ನು ಹುಡುಕುವ ಜಾರ್ಜ್, ಅವನಿಗೆ ಈ ರೀತಿಯ ವಿಡಿಯೋಗಳನ್ನು ಯಾಕೆ ಕಳುಹಿಸುತ್ತಿದ್ದೀಯಾ ಎಂದು ಕೇಳುತ್ತಾನೆ. ಮಜೀದ್ ಈ ಅರೋಪವನ್ನು ನಿರಾಕರಿಸುತ್ತಾನೆ. ಆದರೂ ಜಾರ್ಜ್ ಅವನಿಗೆ ಎಚ್ಚರಿಕೆ ನೀಡುತ್ತಾನೆ. ಈ ಎಚ್ಚರಿಕೆ ನೀಡಿದ ದೃಶ್ಯಗಳಿರುವ ವಿಡಿಯೋ ಟೇಪ್ ಜಾರ್ಜ್ ಕಚೆರಿಯ ವಿಳಾಸಕ್ಕೆ ಮರುದಿನ ತಲುಪುತ್ತದೆ. ಆ ರಾತ್ರಿ ಜಾರ್ಜ್ ಮಗ ಪಿರ್ರೋಟ್ ಮನೆ ತಲುಪುವುದಿಲ್ಲ. ಇದು ಮಜೀದ್‌ನದೆ ಕೃತ್ಯ ಎಂದು ನಿರ್ಧರಿಸುವ ಜಾರ್ಜ್ ಪೊಲೀಸ್ ಕಂಪ್ಲೇಟ್ ನೀಡುತ್ತಾನೆ. ಮಜೀದ್‌ನನ್ನು ಬಂಧಿಸಲಾಗುತ್ತದೆ. ಪಿರ್ರೋಟ್ ಕಾಣಿಯಾಗಿರುವ ಬಗ್ಗೆ ಮಜೀದ್ ಕೈವಾಡ ಇಲ್ಲವಾಗಿ ಮಾರನೆ ದಿನ ಅವನು ಬಿಡುಗಡೆಯಾಗುತ್ತಾನೆ. ಪಿರ್ರೋಟ್ ತನ್ನ ತಾಯಿಯ ಮೇಲಿನ ಕೋಪಕ್ಕೆ ರಾತ್ರಿ ಮನೆಗೆ ಬಂದಿರುವುದಿಲ್ಲ ಎಂದು ತಿಳಿಯುತ್ತದೆ. ಮಾರನೆಯ ದಿನ ಮಜೀದ್ ಜಾರ್ಜ್‌ನನ್ನು ತನ್ನ ಮನೆಗೆ ಅಹ್ವಾನಿಸುತ್ತಾನೆ. ಜಾರ್ಜ್ ಮಜೀದ್ ಮನೆಗೆ ಬಂದು ಮಾತು ಪ್ರಾರಂಭಿಸುತ್ತಿದ್ದಂತೆಯೇ ’ನಾನು ಕರೆದದ್ದು ಇದರ ಸಲುವಾಗಿ’ ಎಂದು ಹೇಳುತ್ತಾ ಮಜೀದ್ ತನ್ನ ಜೇಬಿನಲ್ಲಿದ್ದ ರೇಜರ್ ತೆಗೆದು ತನ್ನ ಕತ್ತನ್ನು ಕೊಯ್ದುಕೊಂಡು ಸಾಯುತ್ತಾನೆ.

ಇದಿಷ್ಟು ಕಥಾಹಂದರ. ಈ ವಿಡಿಯೋ ಚಿತ್ರೀಕರಣ ಮಾಡಿದ್ದು ಯಾರು ಎಂಬ ಸಸ್ಪೆನ್ಸ್ ಬಿಡಿಸುವ ಮತ್ತು ಆ ಮೂಲಕ ಪ್ರೇಕ್ಷಕನನ್ನು ಥ್ರಿಲ್ ಮೂಡ್‌ಗೆ ಒಳಪಡಿಸುವ ಯಾವ ಇರಾದೆಯೂ ಹನೆಕೆಗೆ ಇಲ್ಲ ಎಂಬುದು ಬಹಳ ನಿಧಾನಕ್ಕೆ ತಿಳಿಯುತ್ತದೆ. ಜಾರ್ಜ್ ಹುಡುಕಹೊರಡುವುದು ವಿಡಿಯೋ ಮುಖಾಂತರ ತನ್ನ ಕುಟುಂಬವನ್ನು ಭಯಪಡಿಸುತ್ತಿರುವವರು ಯಾರೆಂದು. ಹನೆಕೆ ಹುಡುಕುತ್ತಿರುವುದು ಭಯಭೀತನಾದ ಜಾರ್ಜ್‌ನ ಗತದ ಕೃತ್ಯ ಯಾವುದು ಮತ್ತು ಆ ಕೃತ್ಯದ ಬಗ್ಗೆ ಅವನಿಗಿರುವ ಅಭಿಪ್ರಾಯವಾದರೂ ಏನೆಂಬುದನ್ನು. ಅಮೆರಿಕಾದ 9/11ರ ಘಟನೆ ಮತ್ತು ಆನಂತರದ ಅಮೆರಿಕದ ವರ್ತನೆಗಳೆ ಹನೆಕೆಗೆ ಈ ಸಿನಿಮಾಗೆ ಮೂಲ ಪ್ರೇರಣೆ ಎಂದು ಒಂದು ಕಡೆ ಓದಿದ ನೆನಪು.

ಜಾರ್ಜ್ ತನ್ನ ಬಾಲ್ಯದಲ್ಲಿ ಮಜೀದ್ ವಿಚಾರವಾಗಿ ತಾಳಿದ ಅಸಹನೆ ಮತ್ತು ಅವನ ಮೇಲೆ ಮಾಡಿದ ಸುಳ್ಳು ಆರೋಪದಿಂದ ಮಜೀದ್ ತನಗೆ ದೊರಕಬಹುದಾಗಿದ್ದ ಉತ್ತಮ ಶಿಕ್ಷಣ, ಆರೈಕೆ ಮತ್ತು ಭವಿಷ್ಯದಿಂದ ವಂಚಿತನಾಗಿದ್ದಾನೆ. ಜಾರ್ಜ್‌ನ ಈ ಕೃತ್ಯದ ಬಗ್ಗೆ ನೆನಪು ಮಾಡಲು ಪ್ರಯತ್ನಿಸುವ ಮತ್ತು ಅದಕ್ಕಾಗಿ ಕಿಂಚಿತ್ ಪಶ್ಚಾತ್ತಾಪ ಏನಾದರೂ ಇದೆಯಾ ಎಂದು ಹುಡುಕುವ ಮಜೀದ್ ಮಾತುಗಳು; ಇದಕ್ಕೆ ಜಾರ್ಜ್ ತೋರಿಸುವ ನಿರ್ಲಕ್ಷ್ಯ ಮತ್ತು ತನ್ನ ತಪ್ಪುಗಳಿಗೆ ಅವನು ಕೊಡುವ ಸಮರ್ಥನೆ; ಇವು ದಬ್ಬಾಳಿಕೆ ನಡೆಸುವ ಪ್ರತಿಯೊಂದು ದೇಶ, ಸಮುದಾಯ ಕೊಡುವ ಸಮರ್ಥನೆಗಳೂ ಹೌದು. ಜಾರ್ಜ್‌ನ ವೈಯಕ್ತಿಕ ಪಶ್ಚಾತ್ತಾಪದ ನಿರಾಕರಣೆ, ದೇಶ ಮತ್ತು ಸಮುದಾಯಗಳ ಸಾಮೂಹಿಕ ಪಶ್ಚಾತ್ತಾಪದ ನಿರಾಕರಣೆಯೂ ಹೌದು. ಹನೆಕೆ ಈ ಸಿನಿಮಾದಲ್ಲಿ ಹೇಳಹೊರಟಿರುವುದು ಅದನ್ನೇ ಅನಿಸುತ್ತದೆ.


ಇದನ್ನೂ ಓದಿ: ‘ಗರಂ ಹವಾ’: ಒಂದು ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...