Homeಮುಖಪುಟಮೈಕೆಲ್ ಹನೆಕೆಯ ’ದ ಹಿಡನ್': ಸಾಮೂಹಿಕ ಪಶ್ಚಾತ್ತಾಪ ಮತ್ತು ವೈಯಕ್ತಿಕ ಜವಾಬ್ದಾರಿ

ಮೈಕೆಲ್ ಹನೆಕೆಯ ’ದ ಹಿಡನ್’: ಸಾಮೂಹಿಕ ಪಶ್ಚಾತ್ತಾಪ ಮತ್ತು ವೈಯಕ್ತಿಕ ಜವಾಬ್ದಾರಿ

- Advertisement -
- Advertisement -

ಸಾಮಾನ್ಯ ಹೊರಜಗತ್ತಿಗೆ ಯುರೋಪ್ ಎಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಉದಾತ್ತ ಆಶಯಗಳನ್ನು ಮೈಗೂಡಿಸಿಕೊಂಡಂತ ದೇಶಗಳ ಖಂಡ. ಸಮಕಾಲಿನ ಯುರೋಪ್ ಸಿನಿಮಾಗಳಲ್ಲಿ ಕಾಣುವುದು ಇವೇ ಸಂಗತಿಗಳನ್ನು. (ನಾನು ನೋಡಿರುವ ಬಹುತೇಕ ಸಿನಿಮಾಗಳಲ್ಲಿ). ಇನ್ನು ಇವರ ಸಿನಿಮಾಗಳಿಗೆ ಹಿಂಸೆ, ದೌರ್ಜನ್ಯ, ದಬ್ಬಾಳಿಕೆ ಕುರಿತಾದ ವಿಷಯಗಳಿಗೆ ವಸ್ತುವಾಗುವುದು ಎರಡನೇ ಮಹಾಯುದ್ಧದಲ್ಲಿ ಜರ್ಮನಿ ನಡೆಸಿದ ಕ್ರೌರ್ಯ ಮತ್ತು ಅವು ಮನುಷ್ಯನಲ್ಲಿ ಉಂಟು ಮಾಡಿದ ಅಸ್ತಿತ್ವದ ಪ್ರಶ್ನೆಗಳಲ್ಲಿ ಮಾತ್ರ. ಒಂದು ಕಾಲಕ್ಕೆ ಸಾಮ್ರಾಜ್ಯಶಾಹಿಗಳಾಗಿದ್ದ ಯುರೋಪ್‌ನ ಹಲವು ದೇಶಗಳು ಇತರೆ ಖಂಡಗಳಲ್ಲಿ ನಡೆಸಿದ ಹಿಂಸೆ, ದೌರ್ಜನ್ಯ, ದಬ್ಬಾಳಿಕೆ ಇವರ ಸಿನಿಮಾಗಳಿಗೆ ವಸ್ತುಗಳಾಗುವುದು ವಿರಳ. ಈ ಗತದ ಕೃತ್ಯಗಳಿಗೆ ಇವರ ಸಿನಿಮಾಗಳಲ್ಲಿ ಪಶ್ಚಾತ್ತಾಪಕ್ಕೂ ಜಾಗ ಸಿಕ್ಕುವುದಿಲ್ಲ.

’ದ ಹಿಡನ್’ (2005)

ಯಾರನ್ನ ನಾವು ಬೌದ್ಧಿಕ ಮೇಲ್ಪಂಕ್ತಿಯಲ್ಲಿ ಇಟ್ಟು ಕಾಣುತ್ತೇವೆಯೋ, ಅದೇ ಯುರೋಪ್ ದೇಶಗಳ ಸಮುದಾಯಗಳು ತಾವು ನಡೆಸಿದ ರಾಜಕೀಯ ಕ್ರೌರ್ಯಗಳಿಗೆ ಜಾಣ ಕುರುಡಾಗಿರುವುದನ್ನು ಮತ್ತು ಅವರ ಬೂರ್ಜ್ವಾ ಗುಣ, ಹೇಡಿತನ ಹಾಗೂ ಅವರು ಹೊರಜಗತ್ತಿನ ಸಮುದಾಯವನ್ನ ಗ್ರಹಿಸುವ ರೀತಿಯನ್ನು ಹನೆಕೆ ತನ್ನ ’ದ ಹಿಡನ್’ ಸಿನಿಮಾದಲ್ಲಿ ಚರ್ಚಿಸುತ್ತಾರೆ. ಹನೆಕೆ ಆಸ್ಟ್ರಿಯಾ ದೇಶದವರಾದರು ’ದ ಹಿಡನ್’ ಸಿನಿಮಾದ ಕಾಲ ದೇಶಗಳು ಮಾತ್ರ ಫ್ರಾನ್ಸಿನದು. ಅಲ್ಜೀರಿಯಾ ಯುದ್ಧದ (1954-62) ಸಂದರ್ಭದಲ್ಲಿ, ಅಲ್ಜೀರಿಯನ್ ನ್ಯಾಷನಲ್ ಲಿಬರಲ್ ಫ್ರಂಟ್ ಸಂಘಟನೆಯ ಸುಮಾರು 30 ಸಾವಿರ ಜನ ನಡೆಸುತ್ತಿದ್ದ ಶಾಂತಿಯುತ ಮೆರವಣಿಗೆಯ ಮೇಲೆ ಫ್ರಾನ್ಸ್ ಪೊಲೀಸ್ ನಡೆಸಿದ ಹತ್ಯಾಕಾಂಡದಲ್ಲಿ ಸುಮಾರು 300 ಜನ ಸಾಯುತ್ತಾರೆ ಮತ್ತು ಹಲವರು ಕಣ್ಮರೆಯಾಗುತ್ತಾರೆ. ಈ ಘಟನೆಯನ್ನು ಹಿನ್ನೆಲೆಯಾಗಿಟ್ಟುಕೊಂಡು, ಫ್ರಾನ್ಸ್‌ನ ಮಧ್ಯಮ ವರ್ಗದ ಬೌದ್ಧಿಕ ಪರಿಸರದಲ್ಲಿ ಬದುಕುತ್ತಿರುವ ಕುಟುಂಬವೊಂದರ ಖಾಸಗಿ ಬದುಕಿನ ಘಟನೆಗಳನ್ನು ಹನೆಕೆ ಚಿತ್ರಿಸುತ್ತಾರೆ. ಖಾಸಗಿ ಸಂಗತಿಯಲ್ಲಿ ಮಾಡುವ ಪಶ್ಚಾತ್ತಾಪ ನಿರಾಕರಣೆ ಹೇಗೆ ಇಡೀ ದೇಶದ ಪಶ್ಚಾತ್ತಾಪದ ನಿರಾಕರಣೆ ಆಗಿರುತ್ತದೆ ಎಂಬುದನ್ನು ಹನಕೆ ಹೊಸ ಮಾದರಿಯ ದೃಶ್ಯಕಟ್ಟುವಿಕೆಯ ಮೂಲಕ ಹೆಣೆಯುತ್ತಾರೆ. ಇದಕ್ಕೆ ಸಿನಿಮಾದ ಪ್ರಾರಂಭದ ದೃಶ್ಯವೇ ಸಾಕ್ಷಿಯಾಗಿದೆ.

ಬೌದ್ಧಿಕ ಪ್ರತಿನಿಧಿಗಳಂತಿರುವ ಜಾರ್ಜ್ ಮತ್ತು ಅನ್ನೆ ದಂಪತಿಗಳು ಫ್ರಾನ್ಸ್ ನಗರದ ಸುಸಜ್ಜಿತ ಮನೆಯೊಂದರಲ್ಲಿ ಸಂತೃಪ್ತಿಯಿಂದ ಬದುಕುತ್ತಿದ್ದಾರೆ. ಜಾರ್ಜ್ ಟಿವಿ ಒಂದರಲ್ಲಿ ಸಾಹಿತ್ಯ ಕುರಿತಾದ ಕಾರ್ಯಕ್ರಮ ನಡೆಸಿಕೊಡುವ ನಿರೂಪಕನ ವೃತ್ತಿಯಲ್ಲಿದ್ದರೆ, ಅನ್ನೆ ಪುಸ್ತಕ ಪ್ರಕಾಶನ ಸ್ವರೂಪದ ವೃತ್ತಿಯಲ್ಲಿ ಇದ್ದಾಳೆ. ಜಾರ್ಜ್ ಮತ್ತು ಅನ್ನೆಯರ ನೆಮ್ಮದಿ ಬದುಕು ಒಂದು ದಿನ ದಿಢೀರ್ ಎಂದು ಬರುವ ವಿಡಿಯೋಟೇಪ್‌ನಿಂದ ಡಿಸ್ಟರ್ಬ್ ಆಗುತ್ತದೆ. ಇವರದ್ದೇ ಮನೆ ಮತ್ತು ದಿನಚರಿಯ ದೃಶ್ಯಗಳನ್ನು ಗೌಪ್ಯ ಕ್ಯಾಮೆರಾ ಮೂಲಕ ಆ ವಿಡಿಯೋದಲ್ಲಿ ಸೆರೆಹಿಡಿಯಲಾಗಿರುತ್ತದೆ. ಜಾರ್ಜ್ ದಂಪತಿಗಳಿಗೆ ನಾವು ಯಾರದೋ ಕಣ್ಗಾವಲಿನಲ್ಲಿ ಇದ್ದೇವೆ ಮತ್ತು ಈ ಮೂಲಕ ನಮ್ಮನ್ನು ಯಾರೋ ಬೆದರಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಅರಿವಿಗೆ ಬರುತ್ತದೆ. ಮುಂದೆ ಬರುವ ವಿಡಿಯೊ ಟೇಪ್ ಮತ್ತು ಅದರೊಂದಿಗೆ ಬರುವ ಡ್ರಾಯಿಂಗ್‌ನಿಂದ, ಜಾರ್ಜ್‌ಗೆ ತನ್ನ ಬಾಲ್ಯದ ದಿನಗಳು ನೆನಪಾಗುತ್ತವೆ ಮತ್ತು ಈ ವಿಡಿಯೋ ಕಳುಹಿಸುತ್ತಿರುವವರು ಯಾರೆಂಬ ಬಗ್ಗೆ ಒಂದು ಅಂದಾಜಿಗೆ ಬರುತ್ತಾನೆ.

ಜಾರ್ಜ್ 5 ವರ್ಷದವನಿದ್ದಾಗ ಅವನ ತಂದೆ, 1961ರ ಫ್ರಾನ್ಸ್ ಹತ್ಯಾಕಾಂಡದಲ್ಲಿ ಮೃತನಾಗಿರಬಹುದಾದ ಅಥವಾ ಕಣ್ಮರೆಯಾಗಿದ್ದ ಅಲ್ಜೀರಿಯನ್ ದಂಪತಿಗಳ ಮಗುವೊಂದನ್ನು ದತ್ತು ಪಡೆದು ತನ್ನ ಹಳ್ಳಿ ಮನೆಗೆ ಕರೆದುಕೊಂಡು ಬಂದಿರುತ್ತಾನೆ. ವಯಸ್ಸಿನಲ್ಲಿ ಜಾರ್ಜ್‌ಗಿಂತ ಹಿರಿಯನಾದ ಆ ನಿರಾಶ್ರಿತ ಮಗುವಿನ ಹೆಸರು ಮಜೀದ್. ಮಜೀದ್ ಮನೆಗೆ ಬಂದ ನಂತರ ಜಾರ್ಜ್‌ಗೆ ಮನೆಯಲ್ಲಿ ತಾನು ಒಬ್ಬನೇ ಇದ್ದಾಗಿನ ಕಂಫರ್ಟ್ ಈಗಿಲ್ಲ ಎಂಬ ಭಾವನೆ ಪ್ರಾರಂಭವಾಗಿ, ತನಗಿಂತ ಬಲಶಾಲಿಯಾದ ಮಜೀದ್‌ನನ್ನು ನೋಡಿದಾಗಲೆಲ್ಲ ಅಭದ್ರತೆಗೆ ಒಳಗಾಗುತ್ತಾನೆ. ತನ್ನ ತಂದೆ ತಾಯಿಗೆ ಮಜೀದ್ ಮೇಲೆ ಸುಳ್ಳು ಅರೋಪಗಳನ್ನು ಮಾಡಿ ಅವನನ್ನು ಮನೆಯಿಂದ ಅನಾಥಾಶ್ರಮಕ್ಕೆ ಸಾಗಿಹಾಕಲು ಕಾರಣವಾಗುತ್ತಾನೆ.

ಜಾರ್ಜ್‌ನ ಬಾಲ್ಯದ ನೆನಪು ಅನಾಮಧೇಯವಾಗಿ ಬಂದ ವಿಡಿಯೋ ಟೇಪ್ ಕಾರಣವಾಗಿ ನೆನಪಿಗೆ ಬರುತ್ತದೆಯೇ ಹೊರತು ಆ ಘಟನೆಯ ಬಗ್ಗೆ ಪಶ್ಚಾತ್ತಾಪ ಇರುವುದಿಲ್ಲ. ಅನ್ನೆಯಳಿಗೆ ಈ ಘಟನೆಯನ್ನು ವಿವರಿಸುವಾಗ ಕೂಡ ಜಾರ್ಜ್ ತನ್ನ ಪೋಷಕರಿಗೆ ಮಜೀದ್ ವಿರುದ್ಧ ಹೇಳಿದ ಸುಳ್ಳುಗಳು ಬಾಲ್ಯದ ಸಹಜ ವರ್ತನೆ ಎಂದು ಸಮರ್ಥಿಸಿಕೊಳ್ಳುತ್ತಾನೆ. ಈ ವಿಡಿಯೋಗಳನ್ನು ಮಜೀದ್ ತನ್ನ ಮೇಲಿನ ಪ್ರತೀಕಾರಕ್ಕೆ ಕಳುಹಿಸುತ್ತಿದ್ದಾನೆ ಎಂಬ ಖಚಿತ ನಿಲುವಿಗೆ ಜಾರ್ಜ್ ಬರುತ್ತಾನೆ. ಎಲ್ಲೋ ಒಂದು ಇಕ್ಕಟ್ಟಾದ ವಸತಿ ಸಂಕೀರ್ಣದಲ್ಲಿ ಬದುಕುತ್ತಿರುವ ಮಜೀದ್‌ನನ್ನು ಹುಡುಕುವ ಜಾರ್ಜ್, ಅವನಿಗೆ ಈ ರೀತಿಯ ವಿಡಿಯೋಗಳನ್ನು ಯಾಕೆ ಕಳುಹಿಸುತ್ತಿದ್ದೀಯಾ ಎಂದು ಕೇಳುತ್ತಾನೆ. ಮಜೀದ್ ಈ ಅರೋಪವನ್ನು ನಿರಾಕರಿಸುತ್ತಾನೆ. ಆದರೂ ಜಾರ್ಜ್ ಅವನಿಗೆ ಎಚ್ಚರಿಕೆ ನೀಡುತ್ತಾನೆ. ಈ ಎಚ್ಚರಿಕೆ ನೀಡಿದ ದೃಶ್ಯಗಳಿರುವ ವಿಡಿಯೋ ಟೇಪ್ ಜಾರ್ಜ್ ಕಚೆರಿಯ ವಿಳಾಸಕ್ಕೆ ಮರುದಿನ ತಲುಪುತ್ತದೆ. ಆ ರಾತ್ರಿ ಜಾರ್ಜ್ ಮಗ ಪಿರ್ರೋಟ್ ಮನೆ ತಲುಪುವುದಿಲ್ಲ. ಇದು ಮಜೀದ್‌ನದೆ ಕೃತ್ಯ ಎಂದು ನಿರ್ಧರಿಸುವ ಜಾರ್ಜ್ ಪೊಲೀಸ್ ಕಂಪ್ಲೇಟ್ ನೀಡುತ್ತಾನೆ. ಮಜೀದ್‌ನನ್ನು ಬಂಧಿಸಲಾಗುತ್ತದೆ. ಪಿರ್ರೋಟ್ ಕಾಣಿಯಾಗಿರುವ ಬಗ್ಗೆ ಮಜೀದ್ ಕೈವಾಡ ಇಲ್ಲವಾಗಿ ಮಾರನೆ ದಿನ ಅವನು ಬಿಡುಗಡೆಯಾಗುತ್ತಾನೆ. ಪಿರ್ರೋಟ್ ತನ್ನ ತಾಯಿಯ ಮೇಲಿನ ಕೋಪಕ್ಕೆ ರಾತ್ರಿ ಮನೆಗೆ ಬಂದಿರುವುದಿಲ್ಲ ಎಂದು ತಿಳಿಯುತ್ತದೆ. ಮಾರನೆಯ ದಿನ ಮಜೀದ್ ಜಾರ್ಜ್‌ನನ್ನು ತನ್ನ ಮನೆಗೆ ಅಹ್ವಾನಿಸುತ್ತಾನೆ. ಜಾರ್ಜ್ ಮಜೀದ್ ಮನೆಗೆ ಬಂದು ಮಾತು ಪ್ರಾರಂಭಿಸುತ್ತಿದ್ದಂತೆಯೇ ’ನಾನು ಕರೆದದ್ದು ಇದರ ಸಲುವಾಗಿ’ ಎಂದು ಹೇಳುತ್ತಾ ಮಜೀದ್ ತನ್ನ ಜೇಬಿನಲ್ಲಿದ್ದ ರೇಜರ್ ತೆಗೆದು ತನ್ನ ಕತ್ತನ್ನು ಕೊಯ್ದುಕೊಂಡು ಸಾಯುತ್ತಾನೆ.

ಇದಿಷ್ಟು ಕಥಾಹಂದರ. ಈ ವಿಡಿಯೋ ಚಿತ್ರೀಕರಣ ಮಾಡಿದ್ದು ಯಾರು ಎಂಬ ಸಸ್ಪೆನ್ಸ್ ಬಿಡಿಸುವ ಮತ್ತು ಆ ಮೂಲಕ ಪ್ರೇಕ್ಷಕನನ್ನು ಥ್ರಿಲ್ ಮೂಡ್‌ಗೆ ಒಳಪಡಿಸುವ ಯಾವ ಇರಾದೆಯೂ ಹನೆಕೆಗೆ ಇಲ್ಲ ಎಂಬುದು ಬಹಳ ನಿಧಾನಕ್ಕೆ ತಿಳಿಯುತ್ತದೆ. ಜಾರ್ಜ್ ಹುಡುಕಹೊರಡುವುದು ವಿಡಿಯೋ ಮುಖಾಂತರ ತನ್ನ ಕುಟುಂಬವನ್ನು ಭಯಪಡಿಸುತ್ತಿರುವವರು ಯಾರೆಂದು. ಹನೆಕೆ ಹುಡುಕುತ್ತಿರುವುದು ಭಯಭೀತನಾದ ಜಾರ್ಜ್‌ನ ಗತದ ಕೃತ್ಯ ಯಾವುದು ಮತ್ತು ಆ ಕೃತ್ಯದ ಬಗ್ಗೆ ಅವನಿಗಿರುವ ಅಭಿಪ್ರಾಯವಾದರೂ ಏನೆಂಬುದನ್ನು. ಅಮೆರಿಕಾದ 9/11ರ ಘಟನೆ ಮತ್ತು ಆನಂತರದ ಅಮೆರಿಕದ ವರ್ತನೆಗಳೆ ಹನೆಕೆಗೆ ಈ ಸಿನಿಮಾಗೆ ಮೂಲ ಪ್ರೇರಣೆ ಎಂದು ಒಂದು ಕಡೆ ಓದಿದ ನೆನಪು.

ಜಾರ್ಜ್ ತನ್ನ ಬಾಲ್ಯದಲ್ಲಿ ಮಜೀದ್ ವಿಚಾರವಾಗಿ ತಾಳಿದ ಅಸಹನೆ ಮತ್ತು ಅವನ ಮೇಲೆ ಮಾಡಿದ ಸುಳ್ಳು ಆರೋಪದಿಂದ ಮಜೀದ್ ತನಗೆ ದೊರಕಬಹುದಾಗಿದ್ದ ಉತ್ತಮ ಶಿಕ್ಷಣ, ಆರೈಕೆ ಮತ್ತು ಭವಿಷ್ಯದಿಂದ ವಂಚಿತನಾಗಿದ್ದಾನೆ. ಜಾರ್ಜ್‌ನ ಈ ಕೃತ್ಯದ ಬಗ್ಗೆ ನೆನಪು ಮಾಡಲು ಪ್ರಯತ್ನಿಸುವ ಮತ್ತು ಅದಕ್ಕಾಗಿ ಕಿಂಚಿತ್ ಪಶ್ಚಾತ್ತಾಪ ಏನಾದರೂ ಇದೆಯಾ ಎಂದು ಹುಡುಕುವ ಮಜೀದ್ ಮಾತುಗಳು; ಇದಕ್ಕೆ ಜಾರ್ಜ್ ತೋರಿಸುವ ನಿರ್ಲಕ್ಷ್ಯ ಮತ್ತು ತನ್ನ ತಪ್ಪುಗಳಿಗೆ ಅವನು ಕೊಡುವ ಸಮರ್ಥನೆ; ಇವು ದಬ್ಬಾಳಿಕೆ ನಡೆಸುವ ಪ್ರತಿಯೊಂದು ದೇಶ, ಸಮುದಾಯ ಕೊಡುವ ಸಮರ್ಥನೆಗಳೂ ಹೌದು. ಜಾರ್ಜ್‌ನ ವೈಯಕ್ತಿಕ ಪಶ್ಚಾತ್ತಾಪದ ನಿರಾಕರಣೆ, ದೇಶ ಮತ್ತು ಸಮುದಾಯಗಳ ಸಾಮೂಹಿಕ ಪಶ್ಚಾತ್ತಾಪದ ನಿರಾಕರಣೆಯೂ ಹೌದು. ಹನೆಕೆ ಈ ಸಿನಿಮಾದಲ್ಲಿ ಹೇಳಹೊರಟಿರುವುದು ಅದನ್ನೇ ಅನಿಸುತ್ತದೆ.


ಇದನ್ನೂ ಓದಿ: ‘ಗರಂ ಹವಾ’: ಒಂದು ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...