Homeಮುಖಪುಟಮೈಕೆಲ್ ಹನೆಕೆಯ ’ದ ಹಿಡನ್': ಸಾಮೂಹಿಕ ಪಶ್ಚಾತ್ತಾಪ ಮತ್ತು ವೈಯಕ್ತಿಕ ಜವಾಬ್ದಾರಿ

ಮೈಕೆಲ್ ಹನೆಕೆಯ ’ದ ಹಿಡನ್’: ಸಾಮೂಹಿಕ ಪಶ್ಚಾತ್ತಾಪ ಮತ್ತು ವೈಯಕ್ತಿಕ ಜವಾಬ್ದಾರಿ

- Advertisement -
- Advertisement -

ಸಾಮಾನ್ಯ ಹೊರಜಗತ್ತಿಗೆ ಯುರೋಪ್ ಎಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಉದಾತ್ತ ಆಶಯಗಳನ್ನು ಮೈಗೂಡಿಸಿಕೊಂಡಂತ ದೇಶಗಳ ಖಂಡ. ಸಮಕಾಲಿನ ಯುರೋಪ್ ಸಿನಿಮಾಗಳಲ್ಲಿ ಕಾಣುವುದು ಇವೇ ಸಂಗತಿಗಳನ್ನು. (ನಾನು ನೋಡಿರುವ ಬಹುತೇಕ ಸಿನಿಮಾಗಳಲ್ಲಿ). ಇನ್ನು ಇವರ ಸಿನಿಮಾಗಳಿಗೆ ಹಿಂಸೆ, ದೌರ್ಜನ್ಯ, ದಬ್ಬಾಳಿಕೆ ಕುರಿತಾದ ವಿಷಯಗಳಿಗೆ ವಸ್ತುವಾಗುವುದು ಎರಡನೇ ಮಹಾಯುದ್ಧದಲ್ಲಿ ಜರ್ಮನಿ ನಡೆಸಿದ ಕ್ರೌರ್ಯ ಮತ್ತು ಅವು ಮನುಷ್ಯನಲ್ಲಿ ಉಂಟು ಮಾಡಿದ ಅಸ್ತಿತ್ವದ ಪ್ರಶ್ನೆಗಳಲ್ಲಿ ಮಾತ್ರ. ಒಂದು ಕಾಲಕ್ಕೆ ಸಾಮ್ರಾಜ್ಯಶಾಹಿಗಳಾಗಿದ್ದ ಯುರೋಪ್‌ನ ಹಲವು ದೇಶಗಳು ಇತರೆ ಖಂಡಗಳಲ್ಲಿ ನಡೆಸಿದ ಹಿಂಸೆ, ದೌರ್ಜನ್ಯ, ದಬ್ಬಾಳಿಕೆ ಇವರ ಸಿನಿಮಾಗಳಿಗೆ ವಸ್ತುಗಳಾಗುವುದು ವಿರಳ. ಈ ಗತದ ಕೃತ್ಯಗಳಿಗೆ ಇವರ ಸಿನಿಮಾಗಳಲ್ಲಿ ಪಶ್ಚಾತ್ತಾಪಕ್ಕೂ ಜಾಗ ಸಿಕ್ಕುವುದಿಲ್ಲ.

’ದ ಹಿಡನ್’ (2005)

ಯಾರನ್ನ ನಾವು ಬೌದ್ಧಿಕ ಮೇಲ್ಪಂಕ್ತಿಯಲ್ಲಿ ಇಟ್ಟು ಕಾಣುತ್ತೇವೆಯೋ, ಅದೇ ಯುರೋಪ್ ದೇಶಗಳ ಸಮುದಾಯಗಳು ತಾವು ನಡೆಸಿದ ರಾಜಕೀಯ ಕ್ರೌರ್ಯಗಳಿಗೆ ಜಾಣ ಕುರುಡಾಗಿರುವುದನ್ನು ಮತ್ತು ಅವರ ಬೂರ್ಜ್ವಾ ಗುಣ, ಹೇಡಿತನ ಹಾಗೂ ಅವರು ಹೊರಜಗತ್ತಿನ ಸಮುದಾಯವನ್ನ ಗ್ರಹಿಸುವ ರೀತಿಯನ್ನು ಹನೆಕೆ ತನ್ನ ’ದ ಹಿಡನ್’ ಸಿನಿಮಾದಲ್ಲಿ ಚರ್ಚಿಸುತ್ತಾರೆ. ಹನೆಕೆ ಆಸ್ಟ್ರಿಯಾ ದೇಶದವರಾದರು ’ದ ಹಿಡನ್’ ಸಿನಿಮಾದ ಕಾಲ ದೇಶಗಳು ಮಾತ್ರ ಫ್ರಾನ್ಸಿನದು. ಅಲ್ಜೀರಿಯಾ ಯುದ್ಧದ (1954-62) ಸಂದರ್ಭದಲ್ಲಿ, ಅಲ್ಜೀರಿಯನ್ ನ್ಯಾಷನಲ್ ಲಿಬರಲ್ ಫ್ರಂಟ್ ಸಂಘಟನೆಯ ಸುಮಾರು 30 ಸಾವಿರ ಜನ ನಡೆಸುತ್ತಿದ್ದ ಶಾಂತಿಯುತ ಮೆರವಣಿಗೆಯ ಮೇಲೆ ಫ್ರಾನ್ಸ್ ಪೊಲೀಸ್ ನಡೆಸಿದ ಹತ್ಯಾಕಾಂಡದಲ್ಲಿ ಸುಮಾರು 300 ಜನ ಸಾಯುತ್ತಾರೆ ಮತ್ತು ಹಲವರು ಕಣ್ಮರೆಯಾಗುತ್ತಾರೆ. ಈ ಘಟನೆಯನ್ನು ಹಿನ್ನೆಲೆಯಾಗಿಟ್ಟುಕೊಂಡು, ಫ್ರಾನ್ಸ್‌ನ ಮಧ್ಯಮ ವರ್ಗದ ಬೌದ್ಧಿಕ ಪರಿಸರದಲ್ಲಿ ಬದುಕುತ್ತಿರುವ ಕುಟುಂಬವೊಂದರ ಖಾಸಗಿ ಬದುಕಿನ ಘಟನೆಗಳನ್ನು ಹನೆಕೆ ಚಿತ್ರಿಸುತ್ತಾರೆ. ಖಾಸಗಿ ಸಂಗತಿಯಲ್ಲಿ ಮಾಡುವ ಪಶ್ಚಾತ್ತಾಪ ನಿರಾಕರಣೆ ಹೇಗೆ ಇಡೀ ದೇಶದ ಪಶ್ಚಾತ್ತಾಪದ ನಿರಾಕರಣೆ ಆಗಿರುತ್ತದೆ ಎಂಬುದನ್ನು ಹನಕೆ ಹೊಸ ಮಾದರಿಯ ದೃಶ್ಯಕಟ್ಟುವಿಕೆಯ ಮೂಲಕ ಹೆಣೆಯುತ್ತಾರೆ. ಇದಕ್ಕೆ ಸಿನಿಮಾದ ಪ್ರಾರಂಭದ ದೃಶ್ಯವೇ ಸಾಕ್ಷಿಯಾಗಿದೆ.

ಬೌದ್ಧಿಕ ಪ್ರತಿನಿಧಿಗಳಂತಿರುವ ಜಾರ್ಜ್ ಮತ್ತು ಅನ್ನೆ ದಂಪತಿಗಳು ಫ್ರಾನ್ಸ್ ನಗರದ ಸುಸಜ್ಜಿತ ಮನೆಯೊಂದರಲ್ಲಿ ಸಂತೃಪ್ತಿಯಿಂದ ಬದುಕುತ್ತಿದ್ದಾರೆ. ಜಾರ್ಜ್ ಟಿವಿ ಒಂದರಲ್ಲಿ ಸಾಹಿತ್ಯ ಕುರಿತಾದ ಕಾರ್ಯಕ್ರಮ ನಡೆಸಿಕೊಡುವ ನಿರೂಪಕನ ವೃತ್ತಿಯಲ್ಲಿದ್ದರೆ, ಅನ್ನೆ ಪುಸ್ತಕ ಪ್ರಕಾಶನ ಸ್ವರೂಪದ ವೃತ್ತಿಯಲ್ಲಿ ಇದ್ದಾಳೆ. ಜಾರ್ಜ್ ಮತ್ತು ಅನ್ನೆಯರ ನೆಮ್ಮದಿ ಬದುಕು ಒಂದು ದಿನ ದಿಢೀರ್ ಎಂದು ಬರುವ ವಿಡಿಯೋಟೇಪ್‌ನಿಂದ ಡಿಸ್ಟರ್ಬ್ ಆಗುತ್ತದೆ. ಇವರದ್ದೇ ಮನೆ ಮತ್ತು ದಿನಚರಿಯ ದೃಶ್ಯಗಳನ್ನು ಗೌಪ್ಯ ಕ್ಯಾಮೆರಾ ಮೂಲಕ ಆ ವಿಡಿಯೋದಲ್ಲಿ ಸೆರೆಹಿಡಿಯಲಾಗಿರುತ್ತದೆ. ಜಾರ್ಜ್ ದಂಪತಿಗಳಿಗೆ ನಾವು ಯಾರದೋ ಕಣ್ಗಾವಲಿನಲ್ಲಿ ಇದ್ದೇವೆ ಮತ್ತು ಈ ಮೂಲಕ ನಮ್ಮನ್ನು ಯಾರೋ ಬೆದರಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಅರಿವಿಗೆ ಬರುತ್ತದೆ. ಮುಂದೆ ಬರುವ ವಿಡಿಯೊ ಟೇಪ್ ಮತ್ತು ಅದರೊಂದಿಗೆ ಬರುವ ಡ್ರಾಯಿಂಗ್‌ನಿಂದ, ಜಾರ್ಜ್‌ಗೆ ತನ್ನ ಬಾಲ್ಯದ ದಿನಗಳು ನೆನಪಾಗುತ್ತವೆ ಮತ್ತು ಈ ವಿಡಿಯೋ ಕಳುಹಿಸುತ್ತಿರುವವರು ಯಾರೆಂಬ ಬಗ್ಗೆ ಒಂದು ಅಂದಾಜಿಗೆ ಬರುತ್ತಾನೆ.

ಜಾರ್ಜ್ 5 ವರ್ಷದವನಿದ್ದಾಗ ಅವನ ತಂದೆ, 1961ರ ಫ್ರಾನ್ಸ್ ಹತ್ಯಾಕಾಂಡದಲ್ಲಿ ಮೃತನಾಗಿರಬಹುದಾದ ಅಥವಾ ಕಣ್ಮರೆಯಾಗಿದ್ದ ಅಲ್ಜೀರಿಯನ್ ದಂಪತಿಗಳ ಮಗುವೊಂದನ್ನು ದತ್ತು ಪಡೆದು ತನ್ನ ಹಳ್ಳಿ ಮನೆಗೆ ಕರೆದುಕೊಂಡು ಬಂದಿರುತ್ತಾನೆ. ವಯಸ್ಸಿನಲ್ಲಿ ಜಾರ್ಜ್‌ಗಿಂತ ಹಿರಿಯನಾದ ಆ ನಿರಾಶ್ರಿತ ಮಗುವಿನ ಹೆಸರು ಮಜೀದ್. ಮಜೀದ್ ಮನೆಗೆ ಬಂದ ನಂತರ ಜಾರ್ಜ್‌ಗೆ ಮನೆಯಲ್ಲಿ ತಾನು ಒಬ್ಬನೇ ಇದ್ದಾಗಿನ ಕಂಫರ್ಟ್ ಈಗಿಲ್ಲ ಎಂಬ ಭಾವನೆ ಪ್ರಾರಂಭವಾಗಿ, ತನಗಿಂತ ಬಲಶಾಲಿಯಾದ ಮಜೀದ್‌ನನ್ನು ನೋಡಿದಾಗಲೆಲ್ಲ ಅಭದ್ರತೆಗೆ ಒಳಗಾಗುತ್ತಾನೆ. ತನ್ನ ತಂದೆ ತಾಯಿಗೆ ಮಜೀದ್ ಮೇಲೆ ಸುಳ್ಳು ಅರೋಪಗಳನ್ನು ಮಾಡಿ ಅವನನ್ನು ಮನೆಯಿಂದ ಅನಾಥಾಶ್ರಮಕ್ಕೆ ಸಾಗಿಹಾಕಲು ಕಾರಣವಾಗುತ್ತಾನೆ.

ಜಾರ್ಜ್‌ನ ಬಾಲ್ಯದ ನೆನಪು ಅನಾಮಧೇಯವಾಗಿ ಬಂದ ವಿಡಿಯೋ ಟೇಪ್ ಕಾರಣವಾಗಿ ನೆನಪಿಗೆ ಬರುತ್ತದೆಯೇ ಹೊರತು ಆ ಘಟನೆಯ ಬಗ್ಗೆ ಪಶ್ಚಾತ್ತಾಪ ಇರುವುದಿಲ್ಲ. ಅನ್ನೆಯಳಿಗೆ ಈ ಘಟನೆಯನ್ನು ವಿವರಿಸುವಾಗ ಕೂಡ ಜಾರ್ಜ್ ತನ್ನ ಪೋಷಕರಿಗೆ ಮಜೀದ್ ವಿರುದ್ಧ ಹೇಳಿದ ಸುಳ್ಳುಗಳು ಬಾಲ್ಯದ ಸಹಜ ವರ್ತನೆ ಎಂದು ಸಮರ್ಥಿಸಿಕೊಳ್ಳುತ್ತಾನೆ. ಈ ವಿಡಿಯೋಗಳನ್ನು ಮಜೀದ್ ತನ್ನ ಮೇಲಿನ ಪ್ರತೀಕಾರಕ್ಕೆ ಕಳುಹಿಸುತ್ತಿದ್ದಾನೆ ಎಂಬ ಖಚಿತ ನಿಲುವಿಗೆ ಜಾರ್ಜ್ ಬರುತ್ತಾನೆ. ಎಲ್ಲೋ ಒಂದು ಇಕ್ಕಟ್ಟಾದ ವಸತಿ ಸಂಕೀರ್ಣದಲ್ಲಿ ಬದುಕುತ್ತಿರುವ ಮಜೀದ್‌ನನ್ನು ಹುಡುಕುವ ಜಾರ್ಜ್, ಅವನಿಗೆ ಈ ರೀತಿಯ ವಿಡಿಯೋಗಳನ್ನು ಯಾಕೆ ಕಳುಹಿಸುತ್ತಿದ್ದೀಯಾ ಎಂದು ಕೇಳುತ್ತಾನೆ. ಮಜೀದ್ ಈ ಅರೋಪವನ್ನು ನಿರಾಕರಿಸುತ್ತಾನೆ. ಆದರೂ ಜಾರ್ಜ್ ಅವನಿಗೆ ಎಚ್ಚರಿಕೆ ನೀಡುತ್ತಾನೆ. ಈ ಎಚ್ಚರಿಕೆ ನೀಡಿದ ದೃಶ್ಯಗಳಿರುವ ವಿಡಿಯೋ ಟೇಪ್ ಜಾರ್ಜ್ ಕಚೆರಿಯ ವಿಳಾಸಕ್ಕೆ ಮರುದಿನ ತಲುಪುತ್ತದೆ. ಆ ರಾತ್ರಿ ಜಾರ್ಜ್ ಮಗ ಪಿರ್ರೋಟ್ ಮನೆ ತಲುಪುವುದಿಲ್ಲ. ಇದು ಮಜೀದ್‌ನದೆ ಕೃತ್ಯ ಎಂದು ನಿರ್ಧರಿಸುವ ಜಾರ್ಜ್ ಪೊಲೀಸ್ ಕಂಪ್ಲೇಟ್ ನೀಡುತ್ತಾನೆ. ಮಜೀದ್‌ನನ್ನು ಬಂಧಿಸಲಾಗುತ್ತದೆ. ಪಿರ್ರೋಟ್ ಕಾಣಿಯಾಗಿರುವ ಬಗ್ಗೆ ಮಜೀದ್ ಕೈವಾಡ ಇಲ್ಲವಾಗಿ ಮಾರನೆ ದಿನ ಅವನು ಬಿಡುಗಡೆಯಾಗುತ್ತಾನೆ. ಪಿರ್ರೋಟ್ ತನ್ನ ತಾಯಿಯ ಮೇಲಿನ ಕೋಪಕ್ಕೆ ರಾತ್ರಿ ಮನೆಗೆ ಬಂದಿರುವುದಿಲ್ಲ ಎಂದು ತಿಳಿಯುತ್ತದೆ. ಮಾರನೆಯ ದಿನ ಮಜೀದ್ ಜಾರ್ಜ್‌ನನ್ನು ತನ್ನ ಮನೆಗೆ ಅಹ್ವಾನಿಸುತ್ತಾನೆ. ಜಾರ್ಜ್ ಮಜೀದ್ ಮನೆಗೆ ಬಂದು ಮಾತು ಪ್ರಾರಂಭಿಸುತ್ತಿದ್ದಂತೆಯೇ ’ನಾನು ಕರೆದದ್ದು ಇದರ ಸಲುವಾಗಿ’ ಎಂದು ಹೇಳುತ್ತಾ ಮಜೀದ್ ತನ್ನ ಜೇಬಿನಲ್ಲಿದ್ದ ರೇಜರ್ ತೆಗೆದು ತನ್ನ ಕತ್ತನ್ನು ಕೊಯ್ದುಕೊಂಡು ಸಾಯುತ್ತಾನೆ.

ಇದಿಷ್ಟು ಕಥಾಹಂದರ. ಈ ವಿಡಿಯೋ ಚಿತ್ರೀಕರಣ ಮಾಡಿದ್ದು ಯಾರು ಎಂಬ ಸಸ್ಪೆನ್ಸ್ ಬಿಡಿಸುವ ಮತ್ತು ಆ ಮೂಲಕ ಪ್ರೇಕ್ಷಕನನ್ನು ಥ್ರಿಲ್ ಮೂಡ್‌ಗೆ ಒಳಪಡಿಸುವ ಯಾವ ಇರಾದೆಯೂ ಹನೆಕೆಗೆ ಇಲ್ಲ ಎಂಬುದು ಬಹಳ ನಿಧಾನಕ್ಕೆ ತಿಳಿಯುತ್ತದೆ. ಜಾರ್ಜ್ ಹುಡುಕಹೊರಡುವುದು ವಿಡಿಯೋ ಮುಖಾಂತರ ತನ್ನ ಕುಟುಂಬವನ್ನು ಭಯಪಡಿಸುತ್ತಿರುವವರು ಯಾರೆಂದು. ಹನೆಕೆ ಹುಡುಕುತ್ತಿರುವುದು ಭಯಭೀತನಾದ ಜಾರ್ಜ್‌ನ ಗತದ ಕೃತ್ಯ ಯಾವುದು ಮತ್ತು ಆ ಕೃತ್ಯದ ಬಗ್ಗೆ ಅವನಿಗಿರುವ ಅಭಿಪ್ರಾಯವಾದರೂ ಏನೆಂಬುದನ್ನು. ಅಮೆರಿಕಾದ 9/11ರ ಘಟನೆ ಮತ್ತು ಆನಂತರದ ಅಮೆರಿಕದ ವರ್ತನೆಗಳೆ ಹನೆಕೆಗೆ ಈ ಸಿನಿಮಾಗೆ ಮೂಲ ಪ್ರೇರಣೆ ಎಂದು ಒಂದು ಕಡೆ ಓದಿದ ನೆನಪು.

ಜಾರ್ಜ್ ತನ್ನ ಬಾಲ್ಯದಲ್ಲಿ ಮಜೀದ್ ವಿಚಾರವಾಗಿ ತಾಳಿದ ಅಸಹನೆ ಮತ್ತು ಅವನ ಮೇಲೆ ಮಾಡಿದ ಸುಳ್ಳು ಆರೋಪದಿಂದ ಮಜೀದ್ ತನಗೆ ದೊರಕಬಹುದಾಗಿದ್ದ ಉತ್ತಮ ಶಿಕ್ಷಣ, ಆರೈಕೆ ಮತ್ತು ಭವಿಷ್ಯದಿಂದ ವಂಚಿತನಾಗಿದ್ದಾನೆ. ಜಾರ್ಜ್‌ನ ಈ ಕೃತ್ಯದ ಬಗ್ಗೆ ನೆನಪು ಮಾಡಲು ಪ್ರಯತ್ನಿಸುವ ಮತ್ತು ಅದಕ್ಕಾಗಿ ಕಿಂಚಿತ್ ಪಶ್ಚಾತ್ತಾಪ ಏನಾದರೂ ಇದೆಯಾ ಎಂದು ಹುಡುಕುವ ಮಜೀದ್ ಮಾತುಗಳು; ಇದಕ್ಕೆ ಜಾರ್ಜ್ ತೋರಿಸುವ ನಿರ್ಲಕ್ಷ್ಯ ಮತ್ತು ತನ್ನ ತಪ್ಪುಗಳಿಗೆ ಅವನು ಕೊಡುವ ಸಮರ್ಥನೆ; ಇವು ದಬ್ಬಾಳಿಕೆ ನಡೆಸುವ ಪ್ರತಿಯೊಂದು ದೇಶ, ಸಮುದಾಯ ಕೊಡುವ ಸಮರ್ಥನೆಗಳೂ ಹೌದು. ಜಾರ್ಜ್‌ನ ವೈಯಕ್ತಿಕ ಪಶ್ಚಾತ್ತಾಪದ ನಿರಾಕರಣೆ, ದೇಶ ಮತ್ತು ಸಮುದಾಯಗಳ ಸಾಮೂಹಿಕ ಪಶ್ಚಾತ್ತಾಪದ ನಿರಾಕರಣೆಯೂ ಹೌದು. ಹನೆಕೆ ಈ ಸಿನಿಮಾದಲ್ಲಿ ಹೇಳಹೊರಟಿರುವುದು ಅದನ್ನೇ ಅನಿಸುತ್ತದೆ.


ಇದನ್ನೂ ಓದಿ: ‘ಗರಂ ಹವಾ’: ಒಂದು ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...