Homeಮುಖಪುಟಮೈಕೆಲ್ ಹನೆಕೆಯ ’ದ ಹಿಡನ್': ಸಾಮೂಹಿಕ ಪಶ್ಚಾತ್ತಾಪ ಮತ್ತು ವೈಯಕ್ತಿಕ ಜವಾಬ್ದಾರಿ

ಮೈಕೆಲ್ ಹನೆಕೆಯ ’ದ ಹಿಡನ್’: ಸಾಮೂಹಿಕ ಪಶ್ಚಾತ್ತಾಪ ಮತ್ತು ವೈಯಕ್ತಿಕ ಜವಾಬ್ದಾರಿ

- Advertisement -
- Advertisement -

ಸಾಮಾನ್ಯ ಹೊರಜಗತ್ತಿಗೆ ಯುರೋಪ್ ಎಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಉದಾತ್ತ ಆಶಯಗಳನ್ನು ಮೈಗೂಡಿಸಿಕೊಂಡಂತ ದೇಶಗಳ ಖಂಡ. ಸಮಕಾಲಿನ ಯುರೋಪ್ ಸಿನಿಮಾಗಳಲ್ಲಿ ಕಾಣುವುದು ಇವೇ ಸಂಗತಿಗಳನ್ನು. (ನಾನು ನೋಡಿರುವ ಬಹುತೇಕ ಸಿನಿಮಾಗಳಲ್ಲಿ). ಇನ್ನು ಇವರ ಸಿನಿಮಾಗಳಿಗೆ ಹಿಂಸೆ, ದೌರ್ಜನ್ಯ, ದಬ್ಬಾಳಿಕೆ ಕುರಿತಾದ ವಿಷಯಗಳಿಗೆ ವಸ್ತುವಾಗುವುದು ಎರಡನೇ ಮಹಾಯುದ್ಧದಲ್ಲಿ ಜರ್ಮನಿ ನಡೆಸಿದ ಕ್ರೌರ್ಯ ಮತ್ತು ಅವು ಮನುಷ್ಯನಲ್ಲಿ ಉಂಟು ಮಾಡಿದ ಅಸ್ತಿತ್ವದ ಪ್ರಶ್ನೆಗಳಲ್ಲಿ ಮಾತ್ರ. ಒಂದು ಕಾಲಕ್ಕೆ ಸಾಮ್ರಾಜ್ಯಶಾಹಿಗಳಾಗಿದ್ದ ಯುರೋಪ್‌ನ ಹಲವು ದೇಶಗಳು ಇತರೆ ಖಂಡಗಳಲ್ಲಿ ನಡೆಸಿದ ಹಿಂಸೆ, ದೌರ್ಜನ್ಯ, ದಬ್ಬಾಳಿಕೆ ಇವರ ಸಿನಿಮಾಗಳಿಗೆ ವಸ್ತುಗಳಾಗುವುದು ವಿರಳ. ಈ ಗತದ ಕೃತ್ಯಗಳಿಗೆ ಇವರ ಸಿನಿಮಾಗಳಲ್ಲಿ ಪಶ್ಚಾತ್ತಾಪಕ್ಕೂ ಜಾಗ ಸಿಕ್ಕುವುದಿಲ್ಲ.

’ದ ಹಿಡನ್’ (2005)

ಯಾರನ್ನ ನಾವು ಬೌದ್ಧಿಕ ಮೇಲ್ಪಂಕ್ತಿಯಲ್ಲಿ ಇಟ್ಟು ಕಾಣುತ್ತೇವೆಯೋ, ಅದೇ ಯುರೋಪ್ ದೇಶಗಳ ಸಮುದಾಯಗಳು ತಾವು ನಡೆಸಿದ ರಾಜಕೀಯ ಕ್ರೌರ್ಯಗಳಿಗೆ ಜಾಣ ಕುರುಡಾಗಿರುವುದನ್ನು ಮತ್ತು ಅವರ ಬೂರ್ಜ್ವಾ ಗುಣ, ಹೇಡಿತನ ಹಾಗೂ ಅವರು ಹೊರಜಗತ್ತಿನ ಸಮುದಾಯವನ್ನ ಗ್ರಹಿಸುವ ರೀತಿಯನ್ನು ಹನೆಕೆ ತನ್ನ ’ದ ಹಿಡನ್’ ಸಿನಿಮಾದಲ್ಲಿ ಚರ್ಚಿಸುತ್ತಾರೆ. ಹನೆಕೆ ಆಸ್ಟ್ರಿಯಾ ದೇಶದವರಾದರು ’ದ ಹಿಡನ್’ ಸಿನಿಮಾದ ಕಾಲ ದೇಶಗಳು ಮಾತ್ರ ಫ್ರಾನ್ಸಿನದು. ಅಲ್ಜೀರಿಯಾ ಯುದ್ಧದ (1954-62) ಸಂದರ್ಭದಲ್ಲಿ, ಅಲ್ಜೀರಿಯನ್ ನ್ಯಾಷನಲ್ ಲಿಬರಲ್ ಫ್ರಂಟ್ ಸಂಘಟನೆಯ ಸುಮಾರು 30 ಸಾವಿರ ಜನ ನಡೆಸುತ್ತಿದ್ದ ಶಾಂತಿಯುತ ಮೆರವಣಿಗೆಯ ಮೇಲೆ ಫ್ರಾನ್ಸ್ ಪೊಲೀಸ್ ನಡೆಸಿದ ಹತ್ಯಾಕಾಂಡದಲ್ಲಿ ಸುಮಾರು 300 ಜನ ಸಾಯುತ್ತಾರೆ ಮತ್ತು ಹಲವರು ಕಣ್ಮರೆಯಾಗುತ್ತಾರೆ. ಈ ಘಟನೆಯನ್ನು ಹಿನ್ನೆಲೆಯಾಗಿಟ್ಟುಕೊಂಡು, ಫ್ರಾನ್ಸ್‌ನ ಮಧ್ಯಮ ವರ್ಗದ ಬೌದ್ಧಿಕ ಪರಿಸರದಲ್ಲಿ ಬದುಕುತ್ತಿರುವ ಕುಟುಂಬವೊಂದರ ಖಾಸಗಿ ಬದುಕಿನ ಘಟನೆಗಳನ್ನು ಹನೆಕೆ ಚಿತ್ರಿಸುತ್ತಾರೆ. ಖಾಸಗಿ ಸಂಗತಿಯಲ್ಲಿ ಮಾಡುವ ಪಶ್ಚಾತ್ತಾಪ ನಿರಾಕರಣೆ ಹೇಗೆ ಇಡೀ ದೇಶದ ಪಶ್ಚಾತ್ತಾಪದ ನಿರಾಕರಣೆ ಆಗಿರುತ್ತದೆ ಎಂಬುದನ್ನು ಹನಕೆ ಹೊಸ ಮಾದರಿಯ ದೃಶ್ಯಕಟ್ಟುವಿಕೆಯ ಮೂಲಕ ಹೆಣೆಯುತ್ತಾರೆ. ಇದಕ್ಕೆ ಸಿನಿಮಾದ ಪ್ರಾರಂಭದ ದೃಶ್ಯವೇ ಸಾಕ್ಷಿಯಾಗಿದೆ.

ಬೌದ್ಧಿಕ ಪ್ರತಿನಿಧಿಗಳಂತಿರುವ ಜಾರ್ಜ್ ಮತ್ತು ಅನ್ನೆ ದಂಪತಿಗಳು ಫ್ರಾನ್ಸ್ ನಗರದ ಸುಸಜ್ಜಿತ ಮನೆಯೊಂದರಲ್ಲಿ ಸಂತೃಪ್ತಿಯಿಂದ ಬದುಕುತ್ತಿದ್ದಾರೆ. ಜಾರ್ಜ್ ಟಿವಿ ಒಂದರಲ್ಲಿ ಸಾಹಿತ್ಯ ಕುರಿತಾದ ಕಾರ್ಯಕ್ರಮ ನಡೆಸಿಕೊಡುವ ನಿರೂಪಕನ ವೃತ್ತಿಯಲ್ಲಿದ್ದರೆ, ಅನ್ನೆ ಪುಸ್ತಕ ಪ್ರಕಾಶನ ಸ್ವರೂಪದ ವೃತ್ತಿಯಲ್ಲಿ ಇದ್ದಾಳೆ. ಜಾರ್ಜ್ ಮತ್ತು ಅನ್ನೆಯರ ನೆಮ್ಮದಿ ಬದುಕು ಒಂದು ದಿನ ದಿಢೀರ್ ಎಂದು ಬರುವ ವಿಡಿಯೋಟೇಪ್‌ನಿಂದ ಡಿಸ್ಟರ್ಬ್ ಆಗುತ್ತದೆ. ಇವರದ್ದೇ ಮನೆ ಮತ್ತು ದಿನಚರಿಯ ದೃಶ್ಯಗಳನ್ನು ಗೌಪ್ಯ ಕ್ಯಾಮೆರಾ ಮೂಲಕ ಆ ವಿಡಿಯೋದಲ್ಲಿ ಸೆರೆಹಿಡಿಯಲಾಗಿರುತ್ತದೆ. ಜಾರ್ಜ್ ದಂಪತಿಗಳಿಗೆ ನಾವು ಯಾರದೋ ಕಣ್ಗಾವಲಿನಲ್ಲಿ ಇದ್ದೇವೆ ಮತ್ತು ಈ ಮೂಲಕ ನಮ್ಮನ್ನು ಯಾರೋ ಬೆದರಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಅರಿವಿಗೆ ಬರುತ್ತದೆ. ಮುಂದೆ ಬರುವ ವಿಡಿಯೊ ಟೇಪ್ ಮತ್ತು ಅದರೊಂದಿಗೆ ಬರುವ ಡ್ರಾಯಿಂಗ್‌ನಿಂದ, ಜಾರ್ಜ್‌ಗೆ ತನ್ನ ಬಾಲ್ಯದ ದಿನಗಳು ನೆನಪಾಗುತ್ತವೆ ಮತ್ತು ಈ ವಿಡಿಯೋ ಕಳುಹಿಸುತ್ತಿರುವವರು ಯಾರೆಂಬ ಬಗ್ಗೆ ಒಂದು ಅಂದಾಜಿಗೆ ಬರುತ್ತಾನೆ.

ಜಾರ್ಜ್ 5 ವರ್ಷದವನಿದ್ದಾಗ ಅವನ ತಂದೆ, 1961ರ ಫ್ರಾನ್ಸ್ ಹತ್ಯಾಕಾಂಡದಲ್ಲಿ ಮೃತನಾಗಿರಬಹುದಾದ ಅಥವಾ ಕಣ್ಮರೆಯಾಗಿದ್ದ ಅಲ್ಜೀರಿಯನ್ ದಂಪತಿಗಳ ಮಗುವೊಂದನ್ನು ದತ್ತು ಪಡೆದು ತನ್ನ ಹಳ್ಳಿ ಮನೆಗೆ ಕರೆದುಕೊಂಡು ಬಂದಿರುತ್ತಾನೆ. ವಯಸ್ಸಿನಲ್ಲಿ ಜಾರ್ಜ್‌ಗಿಂತ ಹಿರಿಯನಾದ ಆ ನಿರಾಶ್ರಿತ ಮಗುವಿನ ಹೆಸರು ಮಜೀದ್. ಮಜೀದ್ ಮನೆಗೆ ಬಂದ ನಂತರ ಜಾರ್ಜ್‌ಗೆ ಮನೆಯಲ್ಲಿ ತಾನು ಒಬ್ಬನೇ ಇದ್ದಾಗಿನ ಕಂಫರ್ಟ್ ಈಗಿಲ್ಲ ಎಂಬ ಭಾವನೆ ಪ್ರಾರಂಭವಾಗಿ, ತನಗಿಂತ ಬಲಶಾಲಿಯಾದ ಮಜೀದ್‌ನನ್ನು ನೋಡಿದಾಗಲೆಲ್ಲ ಅಭದ್ರತೆಗೆ ಒಳಗಾಗುತ್ತಾನೆ. ತನ್ನ ತಂದೆ ತಾಯಿಗೆ ಮಜೀದ್ ಮೇಲೆ ಸುಳ್ಳು ಅರೋಪಗಳನ್ನು ಮಾಡಿ ಅವನನ್ನು ಮನೆಯಿಂದ ಅನಾಥಾಶ್ರಮಕ್ಕೆ ಸಾಗಿಹಾಕಲು ಕಾರಣವಾಗುತ್ತಾನೆ.

ಜಾರ್ಜ್‌ನ ಬಾಲ್ಯದ ನೆನಪು ಅನಾಮಧೇಯವಾಗಿ ಬಂದ ವಿಡಿಯೋ ಟೇಪ್ ಕಾರಣವಾಗಿ ನೆನಪಿಗೆ ಬರುತ್ತದೆಯೇ ಹೊರತು ಆ ಘಟನೆಯ ಬಗ್ಗೆ ಪಶ್ಚಾತ್ತಾಪ ಇರುವುದಿಲ್ಲ. ಅನ್ನೆಯಳಿಗೆ ಈ ಘಟನೆಯನ್ನು ವಿವರಿಸುವಾಗ ಕೂಡ ಜಾರ್ಜ್ ತನ್ನ ಪೋಷಕರಿಗೆ ಮಜೀದ್ ವಿರುದ್ಧ ಹೇಳಿದ ಸುಳ್ಳುಗಳು ಬಾಲ್ಯದ ಸಹಜ ವರ್ತನೆ ಎಂದು ಸಮರ್ಥಿಸಿಕೊಳ್ಳುತ್ತಾನೆ. ಈ ವಿಡಿಯೋಗಳನ್ನು ಮಜೀದ್ ತನ್ನ ಮೇಲಿನ ಪ್ರತೀಕಾರಕ್ಕೆ ಕಳುಹಿಸುತ್ತಿದ್ದಾನೆ ಎಂಬ ಖಚಿತ ನಿಲುವಿಗೆ ಜಾರ್ಜ್ ಬರುತ್ತಾನೆ. ಎಲ್ಲೋ ಒಂದು ಇಕ್ಕಟ್ಟಾದ ವಸತಿ ಸಂಕೀರ್ಣದಲ್ಲಿ ಬದುಕುತ್ತಿರುವ ಮಜೀದ್‌ನನ್ನು ಹುಡುಕುವ ಜಾರ್ಜ್, ಅವನಿಗೆ ಈ ರೀತಿಯ ವಿಡಿಯೋಗಳನ್ನು ಯಾಕೆ ಕಳುಹಿಸುತ್ತಿದ್ದೀಯಾ ಎಂದು ಕೇಳುತ್ತಾನೆ. ಮಜೀದ್ ಈ ಅರೋಪವನ್ನು ನಿರಾಕರಿಸುತ್ತಾನೆ. ಆದರೂ ಜಾರ್ಜ್ ಅವನಿಗೆ ಎಚ್ಚರಿಕೆ ನೀಡುತ್ತಾನೆ. ಈ ಎಚ್ಚರಿಕೆ ನೀಡಿದ ದೃಶ್ಯಗಳಿರುವ ವಿಡಿಯೋ ಟೇಪ್ ಜಾರ್ಜ್ ಕಚೆರಿಯ ವಿಳಾಸಕ್ಕೆ ಮರುದಿನ ತಲುಪುತ್ತದೆ. ಆ ರಾತ್ರಿ ಜಾರ್ಜ್ ಮಗ ಪಿರ್ರೋಟ್ ಮನೆ ತಲುಪುವುದಿಲ್ಲ. ಇದು ಮಜೀದ್‌ನದೆ ಕೃತ್ಯ ಎಂದು ನಿರ್ಧರಿಸುವ ಜಾರ್ಜ್ ಪೊಲೀಸ್ ಕಂಪ್ಲೇಟ್ ನೀಡುತ್ತಾನೆ. ಮಜೀದ್‌ನನ್ನು ಬಂಧಿಸಲಾಗುತ್ತದೆ. ಪಿರ್ರೋಟ್ ಕಾಣಿಯಾಗಿರುವ ಬಗ್ಗೆ ಮಜೀದ್ ಕೈವಾಡ ಇಲ್ಲವಾಗಿ ಮಾರನೆ ದಿನ ಅವನು ಬಿಡುಗಡೆಯಾಗುತ್ತಾನೆ. ಪಿರ್ರೋಟ್ ತನ್ನ ತಾಯಿಯ ಮೇಲಿನ ಕೋಪಕ್ಕೆ ರಾತ್ರಿ ಮನೆಗೆ ಬಂದಿರುವುದಿಲ್ಲ ಎಂದು ತಿಳಿಯುತ್ತದೆ. ಮಾರನೆಯ ದಿನ ಮಜೀದ್ ಜಾರ್ಜ್‌ನನ್ನು ತನ್ನ ಮನೆಗೆ ಅಹ್ವಾನಿಸುತ್ತಾನೆ. ಜಾರ್ಜ್ ಮಜೀದ್ ಮನೆಗೆ ಬಂದು ಮಾತು ಪ್ರಾರಂಭಿಸುತ್ತಿದ್ದಂತೆಯೇ ’ನಾನು ಕರೆದದ್ದು ಇದರ ಸಲುವಾಗಿ’ ಎಂದು ಹೇಳುತ್ತಾ ಮಜೀದ್ ತನ್ನ ಜೇಬಿನಲ್ಲಿದ್ದ ರೇಜರ್ ತೆಗೆದು ತನ್ನ ಕತ್ತನ್ನು ಕೊಯ್ದುಕೊಂಡು ಸಾಯುತ್ತಾನೆ.

ಇದಿಷ್ಟು ಕಥಾಹಂದರ. ಈ ವಿಡಿಯೋ ಚಿತ್ರೀಕರಣ ಮಾಡಿದ್ದು ಯಾರು ಎಂಬ ಸಸ್ಪೆನ್ಸ್ ಬಿಡಿಸುವ ಮತ್ತು ಆ ಮೂಲಕ ಪ್ರೇಕ್ಷಕನನ್ನು ಥ್ರಿಲ್ ಮೂಡ್‌ಗೆ ಒಳಪಡಿಸುವ ಯಾವ ಇರಾದೆಯೂ ಹನೆಕೆಗೆ ಇಲ್ಲ ಎಂಬುದು ಬಹಳ ನಿಧಾನಕ್ಕೆ ತಿಳಿಯುತ್ತದೆ. ಜಾರ್ಜ್ ಹುಡುಕಹೊರಡುವುದು ವಿಡಿಯೋ ಮುಖಾಂತರ ತನ್ನ ಕುಟುಂಬವನ್ನು ಭಯಪಡಿಸುತ್ತಿರುವವರು ಯಾರೆಂದು. ಹನೆಕೆ ಹುಡುಕುತ್ತಿರುವುದು ಭಯಭೀತನಾದ ಜಾರ್ಜ್‌ನ ಗತದ ಕೃತ್ಯ ಯಾವುದು ಮತ್ತು ಆ ಕೃತ್ಯದ ಬಗ್ಗೆ ಅವನಿಗಿರುವ ಅಭಿಪ್ರಾಯವಾದರೂ ಏನೆಂಬುದನ್ನು. ಅಮೆರಿಕಾದ 9/11ರ ಘಟನೆ ಮತ್ತು ಆನಂತರದ ಅಮೆರಿಕದ ವರ್ತನೆಗಳೆ ಹನೆಕೆಗೆ ಈ ಸಿನಿಮಾಗೆ ಮೂಲ ಪ್ರೇರಣೆ ಎಂದು ಒಂದು ಕಡೆ ಓದಿದ ನೆನಪು.

ಜಾರ್ಜ್ ತನ್ನ ಬಾಲ್ಯದಲ್ಲಿ ಮಜೀದ್ ವಿಚಾರವಾಗಿ ತಾಳಿದ ಅಸಹನೆ ಮತ್ತು ಅವನ ಮೇಲೆ ಮಾಡಿದ ಸುಳ್ಳು ಆರೋಪದಿಂದ ಮಜೀದ್ ತನಗೆ ದೊರಕಬಹುದಾಗಿದ್ದ ಉತ್ತಮ ಶಿಕ್ಷಣ, ಆರೈಕೆ ಮತ್ತು ಭವಿಷ್ಯದಿಂದ ವಂಚಿತನಾಗಿದ್ದಾನೆ. ಜಾರ್ಜ್‌ನ ಈ ಕೃತ್ಯದ ಬಗ್ಗೆ ನೆನಪು ಮಾಡಲು ಪ್ರಯತ್ನಿಸುವ ಮತ್ತು ಅದಕ್ಕಾಗಿ ಕಿಂಚಿತ್ ಪಶ್ಚಾತ್ತಾಪ ಏನಾದರೂ ಇದೆಯಾ ಎಂದು ಹುಡುಕುವ ಮಜೀದ್ ಮಾತುಗಳು; ಇದಕ್ಕೆ ಜಾರ್ಜ್ ತೋರಿಸುವ ನಿರ್ಲಕ್ಷ್ಯ ಮತ್ತು ತನ್ನ ತಪ್ಪುಗಳಿಗೆ ಅವನು ಕೊಡುವ ಸಮರ್ಥನೆ; ಇವು ದಬ್ಬಾಳಿಕೆ ನಡೆಸುವ ಪ್ರತಿಯೊಂದು ದೇಶ, ಸಮುದಾಯ ಕೊಡುವ ಸಮರ್ಥನೆಗಳೂ ಹೌದು. ಜಾರ್ಜ್‌ನ ವೈಯಕ್ತಿಕ ಪಶ್ಚಾತ್ತಾಪದ ನಿರಾಕರಣೆ, ದೇಶ ಮತ್ತು ಸಮುದಾಯಗಳ ಸಾಮೂಹಿಕ ಪಶ್ಚಾತ್ತಾಪದ ನಿರಾಕರಣೆಯೂ ಹೌದು. ಹನೆಕೆ ಈ ಸಿನಿಮಾದಲ್ಲಿ ಹೇಳಹೊರಟಿರುವುದು ಅದನ್ನೇ ಅನಿಸುತ್ತದೆ.


ಇದನ್ನೂ ಓದಿ: ‘ಗರಂ ಹವಾ’: ಒಂದು ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...