Homeಕರ್ನಾಟಕಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

ಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ-2025 ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2025 ಸೋಮವಾರ (ಮಾ.11) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿವೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವ ಉದ್ದೇಶದಿಂದ ಹೊರಡಿಸಿದ್ದ ಸುಗ್ರಿವಾಜ್ಞೆಗೆ ಬಲ ನೀಡುವ ಸಲುವಾಗಿ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ-2025 ಅಥವಾ ಮೈಕ್ರೋ ಫೈನಾನ್ಸ್ ಮಸೂದೆಯನ್ನು ಮಂಡಿಸಿ ಸರ್ಕಾರ ಅನುಮೋದನೆ ಪಡೆದುಕೊಂಡಿದೆ.

ಸಮಗ್ರ ಬೆಂಗಳೂರು ಆಡಳಿತ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲು ಹಾಗೂ ಬಿಬಿಎಂಪಿಯ ವ್ಯಾಪ್ತಿಯನ್ನು ವಿಸ್ತರಿಸಿ ಏಳು ನಗರ ಪಾಲಿಕೆಗಳನ್ನು ಸೃಜಿಸಲು ಅವಕಾಶ ಕಲ್ಪಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2025ಕ್ಕೆ ಅನುಮೋದನೆ ಪಡೆಯಲಾಗಿದೆ.

ಮೈಕ್ರೋ ಫೈನಾನ್ಸ್ ಮಸೂದೆಯನ್ನು ರಾಜ್ಯ ಹಣಕಾಸು ಮಂತ್ರಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಮಂಡಿಸಿದರು. ಗ್ರೇಟರ್ ಬೆಂಗಳೂರು ಮಸೂದೆಯನ್ನು ಬೆಂಗಳೂರು ನಗರಾಭಿವೃದ್ದಿ ಇಲಾಖೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಡಿಸಿದರು.

ಮೈಕ್ರೋ ಫೈನಾನ್ಸ್ ಮಸೂದೆ ಕುರಿತು ವಿವರಿಸಿದ ಸಚಿವ ಹೆಚ್‌.ಕೆ ಪಾಟೀಲ್, ಕೆಲ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಿಗೆ ಕಠಿಣ ಕ್ರಮಗಳನ್ನು ಅನುಸರಿಸಿದ್ದರಿಂದ ಜನರು ಆತ್ಮವಿಶ್ವಾಸ ಕಳೆದುಕೊಂಡಿದ್ದರು. ಇದರ ಪರಿಣಾಮ 19 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲ ವಸೂಲಾತಿ ಸಂಸ್ಥೆಗಳ ಕಿರುಕುಳದಿಂದ ಚಾಮರಾಜನರ ಜಿಲ್ಲೆಯ ಗ್ರಾಮವೊಂದರ ಗ್ರಾಮಸ್ಥರು ಮನೆಗಳನ್ನು ಬಿಟ್ಟು ಹೋಗಿದ್ದರು. ಜನರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಕಠಿಣ ಕಾನೂನಿನ ಅಗತ್ಯವಿತ್ತು ಎಂದು ಪ್ರತಿಪಾದಿಸಿದರು.

ರಾಜ್ಯದಲ್ಲಿ ನೋಂದಾಯಿತವಲ್ಲದ ಹಣಕಾಸು ಸಂಸ್ಥೆಗಳು, ಲೇವಾದೇವಿದಾರರು ಸುಮಾರು 40 ಸಾವಿರ ಕೋಟಿ ರೂಪಾಯಿ ಸಾಲ ನೀಡಿದ್ದಾರೆ. ಕೆಲವು ಸಂಸ್ಥೆಗಳು ತಿಂಗಳಿಗೆ ಶೇಖಡ 10ರಷ್ಟು ಬಡ್ಡಿ ವಿಧಿಸುತ್ತಿವೆ. ಬಹುತೇಕ ಕಪ್ಪು ಹಣವೇ ಬಳಕೆ ಆಗುತ್ತಿತ್ತು. ಸಣ್ಣ ವ್ಯಾಪಾರಿಗಳಿಗೆ ದಿನಕ್ಕೆ 5,000 ರೂಪಾಯಿ ಸಾಲ ನೀಡುವಾಗಲೇ 500 ರೂಪಾಯಿ ಹಿಡಿದುಕೊಳ್ಳುತ್ತಾರೆ. ಸಂಜೆ 5,000 ರೂಪಾಯಿ ವಾಪಸ್‌ ಮಾಡಬೇಕಾಗುತ್ತದೆ. ಕಿರುಕುಳ ನೀಡುವುದಕ್ಕೆ, ಬಡವರ ರಕ್ತ ಹೀರುವುದಕ್ಕೆ ಹೊಸ ಕಾಯ್ದೆಯಿಂದ ಕಡಿವಾಣ ಬೀಳಲಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ್, ಸರ್ಕಾರ ಮಸೂದೆ ಮಂಡಿಸಿರುವುದು ರೈಲು ಹೋದ ಮೇಲೆ ಟಿಕೆಟ್‌ ಪಡೆದ ಹಾಗೆ ಆಗಿದೆ. ಸರ್ಕಾರ ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತು. ಇದ್ದ ಕಾನೂನು ಬಳಸಿ ಕಿರುಕುಳ ನೀಡುತ್ತಿದ್ದವರನ್ನು ಶಿಕ್ಷೆಗೆ ಗುರಿಪಡಿಸಿದ್ದರೆ 30 ಜನರ ಪ್ರಾಣ ಉಳಿಸಬಹುದಿತ್ತು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್‌.ಕೆ ಪಾಟೀಲ್, ಹೊಸ ಮಸೂದೆಯಲ್ಲಿ ದಂಡ ಮತ್ತು ಶಿಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. ದಂಡ ಮೊತ್ತ 1,000 ರೂಪಾಯಿಯಿಂದ 10 ಸಾವಿರ ರೂಪಾಯಿ ಮತ್ತು 6 ತಿಂಗಳವರೆಗೆ ಶಿಕ್ಷೆ ಇತ್ತು. ಈಗ ದಂಡವನ್ನು 5 ಲಕ್ಷ ರೂಪಾಯಿ ಮತ್ತು ಜೈಲು ಶಿಕ್ಷೆಯನ್ನು 10 ವರ್ಷದವರೆಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಚರ್ಚೆಯಲ್ಲಿ ಜೆಡಿಎಸ್‌ನ ಹೆಚ್‌.ಟಿ.ಕೃಷ್ಣಪ್ಪ, ಕಾಂಗ್ರೆಸ್‌ನ ಲಕ್ಷ್ಮಣ ಸವದಿ ಭಾಗವಹಿಸಿದ್ದರು.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಂಡಿಸಿದ ಗ್ರೇಟರ್ ಬೆಂಗಳೂರು ಮಸೂದೆ ಕುರಿತು ಸದನದಲ್ಲಿ ಸುದೀರ್ಘ ಚರ್ಚೆ ನಡೆಯಿತು.

ಬಿಜೆಪಿ ಹಲವು ಸದಸ್ಯರು ಮಸೂದೆಯನ್ನು ವಿರೋಧಿಸಿದರು. ಬಿಬಿಎಂಪಿಯನ್ನು ವಿಭಜಿಸುವುದಾದರೆ ಸಂಪನ್ಮೂಲದ ಸಮಾನ ಹಂಚಿಕೆ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಬಿಜೆಪಿಯ ಎಸ್‌.ಟಿ ಸೋಮಶೇಖರ್ ಮಸೂದೆಯನ್ನು ಬೆಂಬಲಿಸಿದರು.

ವಿರೋಧ ಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, “ಬೆಂಗಳೂರಿನ ಬೆಳವಣಿಗೆಯನ್ನು ತಡೆಯಲು ಸಾಧ್ಯವಿಲ್ಲ. ಬಿಬಿಎಂಪಿ ಈಗ ಇರುವ ಸ್ಥಿತಿಯಲ್ಲಿ ಆಡಳಿತ ನಡೆಸಲೂ ಸಾಧ್ಯವಿಲ್ಲ. ನಾವು ಬಿಬಿಎಂಪಿಯನ್ನು ಛಿದ್ರಗೊಳಿಸುತ್ತಿಲ್ಲ, ಗಟ್ಟಿಗೊಳಿಸುತ್ತಿದ್ದೇವೆ” ಎಂದು ಸಮರ್ಥಿಸಿಕೊಂಡರು.

ಪರ-ವಿರೋಧ ಚರ್ಚೆಯ ಬಳಿಕ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಮಸೂದೆಯ ಅಂಗೀಕಾರದ ಪ್ರಸ್ತಾವವನ್ನು ಧ್ವನಿಮತಕ್ಕೆ ಹಾಕಲು ಮುಂದಾದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ಗದ್ದಲದ ನಡುವೆಯೇ ಮಸೂದೆ ಅಂಗೀಕಾರಗೊಂಡಿತು.

ಮೈಕ್ರೋ ಫೈನಾನ್ಸ್ ಮಸೂದೆ :

ಕೆಳ ತಿಂಗಳ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ಮನೆ ಬಿಟ್ಟು ಹೋಗುವುದು, ಆತ್ಮಹತ್ಯೆಗೆ ಶರಣಾಗುತ್ತಿರುವ ಬಗ್ಗೆ ವರದಿಯಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಹಂತದಲ್ಲಿ ಕೆಲ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ ಸಾಲ ಪಡೆದವರಿಗೆ ಕಿರುಕುಳ ಕೊಡದಂತೆ ತಾಕೀತು ಮಾಡಿದ್ದರು.

ನಂತರ, ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಲಗಾಮು ಹಾಕಲು ಸರ್ಕಾರ ಸುಗ್ರಿವಾಜ್ಞೆ ತಂದಿತು. ಅದನ್ನು ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳಿಸಿದಾಗ, ರಾಜ್ಯಪಾಲರು ಕೆಲ ಕಾರಣಗಳನ್ನು ನೀಡಿ ವಾಪಸ್ ಮಾಡಿದ್ದರು. ಸರ್ಕಾರ ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಸುಗ್ರಿವಾಜ್ಞೆಯನ್ನು ಮತ್ತೆ ರಾಜಭವನಕ್ಕೆ ಕಳುಹಿಸಿತ್ತು. ಅದಕ್ಕೆ ರಾಜ್ಯಪಾಲರು ಸಹಿ ಹಾಕಿದ್ದರು. ರಾಜ್ಯಪಾಲರ ಅಂಕಿತ ಬಿದ್ದ ದಿನವೇ, ಅಂದರೆ ಫೆಬ್ರವರಿ 12, 2025ರಂದು ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮೂಲಕ ಕಾನೂನು ಜಾರಿ ಮಾಡಿತು.

ಗ್ರೇಟರ್ ಬೆಂಗಳೂರು ಮಸೂದೆ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸುವ ಗ್ರೇಟರ್ ಬೆಂಗಳೂರು ಮಸೂದೆ ಮಂಡನೆಗೂ ಮುನ್ನ, ಅದರ ಪರಿಶೀಲನೆಗಾಗಿ ಶಿವಾಜಿನಗರ ಶಾಸಕ ರಿಝ್ವಾನ್ ಅರ್ಷದ್ ಅವರ ನೇತೃತ್ವದಲ್ಲಿ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿತ್ತು.

ಈ ಸಮಿತಿ ಮಸೂದೆ ಸಂಬಂಧ ಸಾರ್ವಜನಿಕರು, ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆದು, ಕೆಲ ತಿದ್ದುಪಡಿಗಳೊಂದಿಗೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆ ತಿದ್ದುಪಡಿಗಳನ್ನು ಪರಿಗಣಿಸಿ ಸರ್ಕಾರ ಮಸೂದೆ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ.

ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅಮಿತ್ ಶಾ ಜೊತೆ ಸಭೆ ನಡೆಸಲಿರುವ ಬಿಜೆಪಿ ಭಿನ್ನಮತೀಯ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...