Homeಕರ್ನಾಟಕಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

ಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ-2025 ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2025 ಸೋಮವಾರ (ಮಾ.11) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿವೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವ ಉದ್ದೇಶದಿಂದ ಹೊರಡಿಸಿದ್ದ ಸುಗ್ರಿವಾಜ್ಞೆಗೆ ಬಲ ನೀಡುವ ಸಲುವಾಗಿ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ-2025 ಅಥವಾ ಮೈಕ್ರೋ ಫೈನಾನ್ಸ್ ಮಸೂದೆಯನ್ನು ಮಂಡಿಸಿ ಸರ್ಕಾರ ಅನುಮೋದನೆ ಪಡೆದುಕೊಂಡಿದೆ.

ಸಮಗ್ರ ಬೆಂಗಳೂರು ಆಡಳಿತ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲು ಹಾಗೂ ಬಿಬಿಎಂಪಿಯ ವ್ಯಾಪ್ತಿಯನ್ನು ವಿಸ್ತರಿಸಿ ಏಳು ನಗರ ಪಾಲಿಕೆಗಳನ್ನು ಸೃಜಿಸಲು ಅವಕಾಶ ಕಲ್ಪಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2025ಕ್ಕೆ ಅನುಮೋದನೆ ಪಡೆಯಲಾಗಿದೆ.

ಮೈಕ್ರೋ ಫೈನಾನ್ಸ್ ಮಸೂದೆಯನ್ನು ರಾಜ್ಯ ಹಣಕಾಸು ಮಂತ್ರಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಮಂಡಿಸಿದರು. ಗ್ರೇಟರ್ ಬೆಂಗಳೂರು ಮಸೂದೆಯನ್ನು ಬೆಂಗಳೂರು ನಗರಾಭಿವೃದ್ದಿ ಇಲಾಖೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಡಿಸಿದರು.

ಮೈಕ್ರೋ ಫೈನಾನ್ಸ್ ಮಸೂದೆ ಕುರಿತು ವಿವರಿಸಿದ ಸಚಿವ ಹೆಚ್‌.ಕೆ ಪಾಟೀಲ್, ಕೆಲ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಿಗೆ ಕಠಿಣ ಕ್ರಮಗಳನ್ನು ಅನುಸರಿಸಿದ್ದರಿಂದ ಜನರು ಆತ್ಮವಿಶ್ವಾಸ ಕಳೆದುಕೊಂಡಿದ್ದರು. ಇದರ ಪರಿಣಾಮ 19 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲ ವಸೂಲಾತಿ ಸಂಸ್ಥೆಗಳ ಕಿರುಕುಳದಿಂದ ಚಾಮರಾಜನರ ಜಿಲ್ಲೆಯ ಗ್ರಾಮವೊಂದರ ಗ್ರಾಮಸ್ಥರು ಮನೆಗಳನ್ನು ಬಿಟ್ಟು ಹೋಗಿದ್ದರು. ಜನರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಕಠಿಣ ಕಾನೂನಿನ ಅಗತ್ಯವಿತ್ತು ಎಂದು ಪ್ರತಿಪಾದಿಸಿದರು.

ರಾಜ್ಯದಲ್ಲಿ ನೋಂದಾಯಿತವಲ್ಲದ ಹಣಕಾಸು ಸಂಸ್ಥೆಗಳು, ಲೇವಾದೇವಿದಾರರು ಸುಮಾರು 40 ಸಾವಿರ ಕೋಟಿ ರೂಪಾಯಿ ಸಾಲ ನೀಡಿದ್ದಾರೆ. ಕೆಲವು ಸಂಸ್ಥೆಗಳು ತಿಂಗಳಿಗೆ ಶೇಖಡ 10ರಷ್ಟು ಬಡ್ಡಿ ವಿಧಿಸುತ್ತಿವೆ. ಬಹುತೇಕ ಕಪ್ಪು ಹಣವೇ ಬಳಕೆ ಆಗುತ್ತಿತ್ತು. ಸಣ್ಣ ವ್ಯಾಪಾರಿಗಳಿಗೆ ದಿನಕ್ಕೆ 5,000 ರೂಪಾಯಿ ಸಾಲ ನೀಡುವಾಗಲೇ 500 ರೂಪಾಯಿ ಹಿಡಿದುಕೊಳ್ಳುತ್ತಾರೆ. ಸಂಜೆ 5,000 ರೂಪಾಯಿ ವಾಪಸ್‌ ಮಾಡಬೇಕಾಗುತ್ತದೆ. ಕಿರುಕುಳ ನೀಡುವುದಕ್ಕೆ, ಬಡವರ ರಕ್ತ ಹೀರುವುದಕ್ಕೆ ಹೊಸ ಕಾಯ್ದೆಯಿಂದ ಕಡಿವಾಣ ಬೀಳಲಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ್, ಸರ್ಕಾರ ಮಸೂದೆ ಮಂಡಿಸಿರುವುದು ರೈಲು ಹೋದ ಮೇಲೆ ಟಿಕೆಟ್‌ ಪಡೆದ ಹಾಗೆ ಆಗಿದೆ. ಸರ್ಕಾರ ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತು. ಇದ್ದ ಕಾನೂನು ಬಳಸಿ ಕಿರುಕುಳ ನೀಡುತ್ತಿದ್ದವರನ್ನು ಶಿಕ್ಷೆಗೆ ಗುರಿಪಡಿಸಿದ್ದರೆ 30 ಜನರ ಪ್ರಾಣ ಉಳಿಸಬಹುದಿತ್ತು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್‌.ಕೆ ಪಾಟೀಲ್, ಹೊಸ ಮಸೂದೆಯಲ್ಲಿ ದಂಡ ಮತ್ತು ಶಿಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. ದಂಡ ಮೊತ್ತ 1,000 ರೂಪಾಯಿಯಿಂದ 10 ಸಾವಿರ ರೂಪಾಯಿ ಮತ್ತು 6 ತಿಂಗಳವರೆಗೆ ಶಿಕ್ಷೆ ಇತ್ತು. ಈಗ ದಂಡವನ್ನು 5 ಲಕ್ಷ ರೂಪಾಯಿ ಮತ್ತು ಜೈಲು ಶಿಕ್ಷೆಯನ್ನು 10 ವರ್ಷದವರೆಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಚರ್ಚೆಯಲ್ಲಿ ಜೆಡಿಎಸ್‌ನ ಹೆಚ್‌.ಟಿ.ಕೃಷ್ಣಪ್ಪ, ಕಾಂಗ್ರೆಸ್‌ನ ಲಕ್ಷ್ಮಣ ಸವದಿ ಭಾಗವಹಿಸಿದ್ದರು.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಂಡಿಸಿದ ಗ್ರೇಟರ್ ಬೆಂಗಳೂರು ಮಸೂದೆ ಕುರಿತು ಸದನದಲ್ಲಿ ಸುದೀರ್ಘ ಚರ್ಚೆ ನಡೆಯಿತು.

ಬಿಜೆಪಿ ಹಲವು ಸದಸ್ಯರು ಮಸೂದೆಯನ್ನು ವಿರೋಧಿಸಿದರು. ಬಿಬಿಎಂಪಿಯನ್ನು ವಿಭಜಿಸುವುದಾದರೆ ಸಂಪನ್ಮೂಲದ ಸಮಾನ ಹಂಚಿಕೆ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಬಿಜೆಪಿಯ ಎಸ್‌.ಟಿ ಸೋಮಶೇಖರ್ ಮಸೂದೆಯನ್ನು ಬೆಂಬಲಿಸಿದರು.

ವಿರೋಧ ಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, “ಬೆಂಗಳೂರಿನ ಬೆಳವಣಿಗೆಯನ್ನು ತಡೆಯಲು ಸಾಧ್ಯವಿಲ್ಲ. ಬಿಬಿಎಂಪಿ ಈಗ ಇರುವ ಸ್ಥಿತಿಯಲ್ಲಿ ಆಡಳಿತ ನಡೆಸಲೂ ಸಾಧ್ಯವಿಲ್ಲ. ನಾವು ಬಿಬಿಎಂಪಿಯನ್ನು ಛಿದ್ರಗೊಳಿಸುತ್ತಿಲ್ಲ, ಗಟ್ಟಿಗೊಳಿಸುತ್ತಿದ್ದೇವೆ” ಎಂದು ಸಮರ್ಥಿಸಿಕೊಂಡರು.

ಪರ-ವಿರೋಧ ಚರ್ಚೆಯ ಬಳಿಕ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಮಸೂದೆಯ ಅಂಗೀಕಾರದ ಪ್ರಸ್ತಾವವನ್ನು ಧ್ವನಿಮತಕ್ಕೆ ಹಾಕಲು ಮುಂದಾದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ಗದ್ದಲದ ನಡುವೆಯೇ ಮಸೂದೆ ಅಂಗೀಕಾರಗೊಂಡಿತು.

ಮೈಕ್ರೋ ಫೈನಾನ್ಸ್ ಮಸೂದೆ :

ಕೆಳ ತಿಂಗಳ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ಮನೆ ಬಿಟ್ಟು ಹೋಗುವುದು, ಆತ್ಮಹತ್ಯೆಗೆ ಶರಣಾಗುತ್ತಿರುವ ಬಗ್ಗೆ ವರದಿಯಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಹಂತದಲ್ಲಿ ಕೆಲ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ ಸಾಲ ಪಡೆದವರಿಗೆ ಕಿರುಕುಳ ಕೊಡದಂತೆ ತಾಕೀತು ಮಾಡಿದ್ದರು.

ನಂತರ, ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಲಗಾಮು ಹಾಕಲು ಸರ್ಕಾರ ಸುಗ್ರಿವಾಜ್ಞೆ ತಂದಿತು. ಅದನ್ನು ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳಿಸಿದಾಗ, ರಾಜ್ಯಪಾಲರು ಕೆಲ ಕಾರಣಗಳನ್ನು ನೀಡಿ ವಾಪಸ್ ಮಾಡಿದ್ದರು. ಸರ್ಕಾರ ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಸುಗ್ರಿವಾಜ್ಞೆಯನ್ನು ಮತ್ತೆ ರಾಜಭವನಕ್ಕೆ ಕಳುಹಿಸಿತ್ತು. ಅದಕ್ಕೆ ರಾಜ್ಯಪಾಲರು ಸಹಿ ಹಾಕಿದ್ದರು. ರಾಜ್ಯಪಾಲರ ಅಂಕಿತ ಬಿದ್ದ ದಿನವೇ, ಅಂದರೆ ಫೆಬ್ರವರಿ 12, 2025ರಂದು ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮೂಲಕ ಕಾನೂನು ಜಾರಿ ಮಾಡಿತು.

ಗ್ರೇಟರ್ ಬೆಂಗಳೂರು ಮಸೂದೆ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸುವ ಗ್ರೇಟರ್ ಬೆಂಗಳೂರು ಮಸೂದೆ ಮಂಡನೆಗೂ ಮುನ್ನ, ಅದರ ಪರಿಶೀಲನೆಗಾಗಿ ಶಿವಾಜಿನಗರ ಶಾಸಕ ರಿಝ್ವಾನ್ ಅರ್ಷದ್ ಅವರ ನೇತೃತ್ವದಲ್ಲಿ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿತ್ತು.

ಈ ಸಮಿತಿ ಮಸೂದೆ ಸಂಬಂಧ ಸಾರ್ವಜನಿಕರು, ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆದು, ಕೆಲ ತಿದ್ದುಪಡಿಗಳೊಂದಿಗೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆ ತಿದ್ದುಪಡಿಗಳನ್ನು ಪರಿಗಣಿಸಿ ಸರ್ಕಾರ ಮಸೂದೆ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ.

ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅಮಿತ್ ಶಾ ಜೊತೆ ಸಭೆ ನಡೆಸಲಿರುವ ಬಿಜೆಪಿ ಭಿನ್ನಮತೀಯ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...