Homeಕರ್ನಾಟಕಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

ಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ-2025 ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2025 ಸೋಮವಾರ (ಮಾ.11) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿವೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವ ಉದ್ದೇಶದಿಂದ ಹೊರಡಿಸಿದ್ದ ಸುಗ್ರಿವಾಜ್ಞೆಗೆ ಬಲ ನೀಡುವ ಸಲುವಾಗಿ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ-2025 ಅಥವಾ ಮೈಕ್ರೋ ಫೈನಾನ್ಸ್ ಮಸೂದೆಯನ್ನು ಮಂಡಿಸಿ ಸರ್ಕಾರ ಅನುಮೋದನೆ ಪಡೆದುಕೊಂಡಿದೆ.

ಸಮಗ್ರ ಬೆಂಗಳೂರು ಆಡಳಿತ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲು ಹಾಗೂ ಬಿಬಿಎಂಪಿಯ ವ್ಯಾಪ್ತಿಯನ್ನು ವಿಸ್ತರಿಸಿ ಏಳು ನಗರ ಪಾಲಿಕೆಗಳನ್ನು ಸೃಜಿಸಲು ಅವಕಾಶ ಕಲ್ಪಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2025ಕ್ಕೆ ಅನುಮೋದನೆ ಪಡೆಯಲಾಗಿದೆ.

ಮೈಕ್ರೋ ಫೈನಾನ್ಸ್ ಮಸೂದೆಯನ್ನು ರಾಜ್ಯ ಹಣಕಾಸು ಮಂತ್ರಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಮಂಡಿಸಿದರು. ಗ್ರೇಟರ್ ಬೆಂಗಳೂರು ಮಸೂದೆಯನ್ನು ಬೆಂಗಳೂರು ನಗರಾಭಿವೃದ್ದಿ ಇಲಾಖೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಡಿಸಿದರು.

ಮೈಕ್ರೋ ಫೈನಾನ್ಸ್ ಮಸೂದೆ ಕುರಿತು ವಿವರಿಸಿದ ಸಚಿವ ಹೆಚ್‌.ಕೆ ಪಾಟೀಲ್, ಕೆಲ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಿಗೆ ಕಠಿಣ ಕ್ರಮಗಳನ್ನು ಅನುಸರಿಸಿದ್ದರಿಂದ ಜನರು ಆತ್ಮವಿಶ್ವಾಸ ಕಳೆದುಕೊಂಡಿದ್ದರು. ಇದರ ಪರಿಣಾಮ 19 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲ ವಸೂಲಾತಿ ಸಂಸ್ಥೆಗಳ ಕಿರುಕುಳದಿಂದ ಚಾಮರಾಜನರ ಜಿಲ್ಲೆಯ ಗ್ರಾಮವೊಂದರ ಗ್ರಾಮಸ್ಥರು ಮನೆಗಳನ್ನು ಬಿಟ್ಟು ಹೋಗಿದ್ದರು. ಜನರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಕಠಿಣ ಕಾನೂನಿನ ಅಗತ್ಯವಿತ್ತು ಎಂದು ಪ್ರತಿಪಾದಿಸಿದರು.

ರಾಜ್ಯದಲ್ಲಿ ನೋಂದಾಯಿತವಲ್ಲದ ಹಣಕಾಸು ಸಂಸ್ಥೆಗಳು, ಲೇವಾದೇವಿದಾರರು ಸುಮಾರು 40 ಸಾವಿರ ಕೋಟಿ ರೂಪಾಯಿ ಸಾಲ ನೀಡಿದ್ದಾರೆ. ಕೆಲವು ಸಂಸ್ಥೆಗಳು ತಿಂಗಳಿಗೆ ಶೇಖಡ 10ರಷ್ಟು ಬಡ್ಡಿ ವಿಧಿಸುತ್ತಿವೆ. ಬಹುತೇಕ ಕಪ್ಪು ಹಣವೇ ಬಳಕೆ ಆಗುತ್ತಿತ್ತು. ಸಣ್ಣ ವ್ಯಾಪಾರಿಗಳಿಗೆ ದಿನಕ್ಕೆ 5,000 ರೂಪಾಯಿ ಸಾಲ ನೀಡುವಾಗಲೇ 500 ರೂಪಾಯಿ ಹಿಡಿದುಕೊಳ್ಳುತ್ತಾರೆ. ಸಂಜೆ 5,000 ರೂಪಾಯಿ ವಾಪಸ್‌ ಮಾಡಬೇಕಾಗುತ್ತದೆ. ಕಿರುಕುಳ ನೀಡುವುದಕ್ಕೆ, ಬಡವರ ರಕ್ತ ಹೀರುವುದಕ್ಕೆ ಹೊಸ ಕಾಯ್ದೆಯಿಂದ ಕಡಿವಾಣ ಬೀಳಲಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ್, ಸರ್ಕಾರ ಮಸೂದೆ ಮಂಡಿಸಿರುವುದು ರೈಲು ಹೋದ ಮೇಲೆ ಟಿಕೆಟ್‌ ಪಡೆದ ಹಾಗೆ ಆಗಿದೆ. ಸರ್ಕಾರ ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತು. ಇದ್ದ ಕಾನೂನು ಬಳಸಿ ಕಿರುಕುಳ ನೀಡುತ್ತಿದ್ದವರನ್ನು ಶಿಕ್ಷೆಗೆ ಗುರಿಪಡಿಸಿದ್ದರೆ 30 ಜನರ ಪ್ರಾಣ ಉಳಿಸಬಹುದಿತ್ತು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್‌.ಕೆ ಪಾಟೀಲ್, ಹೊಸ ಮಸೂದೆಯಲ್ಲಿ ದಂಡ ಮತ್ತು ಶಿಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. ದಂಡ ಮೊತ್ತ 1,000 ರೂಪಾಯಿಯಿಂದ 10 ಸಾವಿರ ರೂಪಾಯಿ ಮತ್ತು 6 ತಿಂಗಳವರೆಗೆ ಶಿಕ್ಷೆ ಇತ್ತು. ಈಗ ದಂಡವನ್ನು 5 ಲಕ್ಷ ರೂಪಾಯಿ ಮತ್ತು ಜೈಲು ಶಿಕ್ಷೆಯನ್ನು 10 ವರ್ಷದವರೆಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಚರ್ಚೆಯಲ್ಲಿ ಜೆಡಿಎಸ್‌ನ ಹೆಚ್‌.ಟಿ.ಕೃಷ್ಣಪ್ಪ, ಕಾಂಗ್ರೆಸ್‌ನ ಲಕ್ಷ್ಮಣ ಸವದಿ ಭಾಗವಹಿಸಿದ್ದರು.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಂಡಿಸಿದ ಗ್ರೇಟರ್ ಬೆಂಗಳೂರು ಮಸೂದೆ ಕುರಿತು ಸದನದಲ್ಲಿ ಸುದೀರ್ಘ ಚರ್ಚೆ ನಡೆಯಿತು.

ಬಿಜೆಪಿ ಹಲವು ಸದಸ್ಯರು ಮಸೂದೆಯನ್ನು ವಿರೋಧಿಸಿದರು. ಬಿಬಿಎಂಪಿಯನ್ನು ವಿಭಜಿಸುವುದಾದರೆ ಸಂಪನ್ಮೂಲದ ಸಮಾನ ಹಂಚಿಕೆ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಬಿಜೆಪಿಯ ಎಸ್‌.ಟಿ ಸೋಮಶೇಖರ್ ಮಸೂದೆಯನ್ನು ಬೆಂಬಲಿಸಿದರು.

ವಿರೋಧ ಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, “ಬೆಂಗಳೂರಿನ ಬೆಳವಣಿಗೆಯನ್ನು ತಡೆಯಲು ಸಾಧ್ಯವಿಲ್ಲ. ಬಿಬಿಎಂಪಿ ಈಗ ಇರುವ ಸ್ಥಿತಿಯಲ್ಲಿ ಆಡಳಿತ ನಡೆಸಲೂ ಸಾಧ್ಯವಿಲ್ಲ. ನಾವು ಬಿಬಿಎಂಪಿಯನ್ನು ಛಿದ್ರಗೊಳಿಸುತ್ತಿಲ್ಲ, ಗಟ್ಟಿಗೊಳಿಸುತ್ತಿದ್ದೇವೆ” ಎಂದು ಸಮರ್ಥಿಸಿಕೊಂಡರು.

ಪರ-ವಿರೋಧ ಚರ್ಚೆಯ ಬಳಿಕ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಮಸೂದೆಯ ಅಂಗೀಕಾರದ ಪ್ರಸ್ತಾವವನ್ನು ಧ್ವನಿಮತಕ್ಕೆ ಹಾಕಲು ಮುಂದಾದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ಗದ್ದಲದ ನಡುವೆಯೇ ಮಸೂದೆ ಅಂಗೀಕಾರಗೊಂಡಿತು.

ಮೈಕ್ರೋ ಫೈನಾನ್ಸ್ ಮಸೂದೆ :

ಕೆಳ ತಿಂಗಳ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ಮನೆ ಬಿಟ್ಟು ಹೋಗುವುದು, ಆತ್ಮಹತ್ಯೆಗೆ ಶರಣಾಗುತ್ತಿರುವ ಬಗ್ಗೆ ವರದಿಯಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಹಂತದಲ್ಲಿ ಕೆಲ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ ಸಾಲ ಪಡೆದವರಿಗೆ ಕಿರುಕುಳ ಕೊಡದಂತೆ ತಾಕೀತು ಮಾಡಿದ್ದರು.

ನಂತರ, ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಲಗಾಮು ಹಾಕಲು ಸರ್ಕಾರ ಸುಗ್ರಿವಾಜ್ಞೆ ತಂದಿತು. ಅದನ್ನು ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳಿಸಿದಾಗ, ರಾಜ್ಯಪಾಲರು ಕೆಲ ಕಾರಣಗಳನ್ನು ನೀಡಿ ವಾಪಸ್ ಮಾಡಿದ್ದರು. ಸರ್ಕಾರ ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಸುಗ್ರಿವಾಜ್ಞೆಯನ್ನು ಮತ್ತೆ ರಾಜಭವನಕ್ಕೆ ಕಳುಹಿಸಿತ್ತು. ಅದಕ್ಕೆ ರಾಜ್ಯಪಾಲರು ಸಹಿ ಹಾಕಿದ್ದರು. ರಾಜ್ಯಪಾಲರ ಅಂಕಿತ ಬಿದ್ದ ದಿನವೇ, ಅಂದರೆ ಫೆಬ್ರವರಿ 12, 2025ರಂದು ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮೂಲಕ ಕಾನೂನು ಜಾರಿ ಮಾಡಿತು.

ಗ್ರೇಟರ್ ಬೆಂಗಳೂರು ಮಸೂದೆ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸುವ ಗ್ರೇಟರ್ ಬೆಂಗಳೂರು ಮಸೂದೆ ಮಂಡನೆಗೂ ಮುನ್ನ, ಅದರ ಪರಿಶೀಲನೆಗಾಗಿ ಶಿವಾಜಿನಗರ ಶಾಸಕ ರಿಝ್ವಾನ್ ಅರ್ಷದ್ ಅವರ ನೇತೃತ್ವದಲ್ಲಿ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿತ್ತು.

ಈ ಸಮಿತಿ ಮಸೂದೆ ಸಂಬಂಧ ಸಾರ್ವಜನಿಕರು, ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆದು, ಕೆಲ ತಿದ್ದುಪಡಿಗಳೊಂದಿಗೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆ ತಿದ್ದುಪಡಿಗಳನ್ನು ಪರಿಗಣಿಸಿ ಸರ್ಕಾರ ಮಸೂದೆ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ.

ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅಮಿತ್ ಶಾ ಜೊತೆ ಸಭೆ ನಡೆಸಲಿರುವ ಬಿಜೆಪಿ ಭಿನ್ನಮತೀಯ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...