Homeಕರ್ನಾಟಕಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

ಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ-2025 ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2025 ಸೋಮವಾರ (ಮಾ.11) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿವೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವ ಉದ್ದೇಶದಿಂದ ಹೊರಡಿಸಿದ್ದ ಸುಗ್ರಿವಾಜ್ಞೆಗೆ ಬಲ ನೀಡುವ ಸಲುವಾಗಿ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಮಸೂದೆ-2025 ಅಥವಾ ಮೈಕ್ರೋ ಫೈನಾನ್ಸ್ ಮಸೂದೆಯನ್ನು ಮಂಡಿಸಿ ಸರ್ಕಾರ ಅನುಮೋದನೆ ಪಡೆದುಕೊಂಡಿದೆ.

ಸಮಗ್ರ ಬೆಂಗಳೂರು ಆಡಳಿತ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲು ಹಾಗೂ ಬಿಬಿಎಂಪಿಯ ವ್ಯಾಪ್ತಿಯನ್ನು ವಿಸ್ತರಿಸಿ ಏಳು ನಗರ ಪಾಲಿಕೆಗಳನ್ನು ಸೃಜಿಸಲು ಅವಕಾಶ ಕಲ್ಪಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2025ಕ್ಕೆ ಅನುಮೋದನೆ ಪಡೆಯಲಾಗಿದೆ.

ಮೈಕ್ರೋ ಫೈನಾನ್ಸ್ ಮಸೂದೆಯನ್ನು ರಾಜ್ಯ ಹಣಕಾಸು ಮಂತ್ರಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಮಂಡಿಸಿದರು. ಗ್ರೇಟರ್ ಬೆಂಗಳೂರು ಮಸೂದೆಯನ್ನು ಬೆಂಗಳೂರು ನಗರಾಭಿವೃದ್ದಿ ಇಲಾಖೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಡಿಸಿದರು.

ಮೈಕ್ರೋ ಫೈನಾನ್ಸ್ ಮಸೂದೆ ಕುರಿತು ವಿವರಿಸಿದ ಸಚಿವ ಹೆಚ್‌.ಕೆ ಪಾಟೀಲ್, ಕೆಲ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಿಗೆ ಕಠಿಣ ಕ್ರಮಗಳನ್ನು ಅನುಸರಿಸಿದ್ದರಿಂದ ಜನರು ಆತ್ಮವಿಶ್ವಾಸ ಕಳೆದುಕೊಂಡಿದ್ದರು. ಇದರ ಪರಿಣಾಮ 19 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲ ವಸೂಲಾತಿ ಸಂಸ್ಥೆಗಳ ಕಿರುಕುಳದಿಂದ ಚಾಮರಾಜನರ ಜಿಲ್ಲೆಯ ಗ್ರಾಮವೊಂದರ ಗ್ರಾಮಸ್ಥರು ಮನೆಗಳನ್ನು ಬಿಟ್ಟು ಹೋಗಿದ್ದರು. ಜನರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಕಠಿಣ ಕಾನೂನಿನ ಅಗತ್ಯವಿತ್ತು ಎಂದು ಪ್ರತಿಪಾದಿಸಿದರು.

ರಾಜ್ಯದಲ್ಲಿ ನೋಂದಾಯಿತವಲ್ಲದ ಹಣಕಾಸು ಸಂಸ್ಥೆಗಳು, ಲೇವಾದೇವಿದಾರರು ಸುಮಾರು 40 ಸಾವಿರ ಕೋಟಿ ರೂಪಾಯಿ ಸಾಲ ನೀಡಿದ್ದಾರೆ. ಕೆಲವು ಸಂಸ್ಥೆಗಳು ತಿಂಗಳಿಗೆ ಶೇಖಡ 10ರಷ್ಟು ಬಡ್ಡಿ ವಿಧಿಸುತ್ತಿವೆ. ಬಹುತೇಕ ಕಪ್ಪು ಹಣವೇ ಬಳಕೆ ಆಗುತ್ತಿತ್ತು. ಸಣ್ಣ ವ್ಯಾಪಾರಿಗಳಿಗೆ ದಿನಕ್ಕೆ 5,000 ರೂಪಾಯಿ ಸಾಲ ನೀಡುವಾಗಲೇ 500 ರೂಪಾಯಿ ಹಿಡಿದುಕೊಳ್ಳುತ್ತಾರೆ. ಸಂಜೆ 5,000 ರೂಪಾಯಿ ವಾಪಸ್‌ ಮಾಡಬೇಕಾಗುತ್ತದೆ. ಕಿರುಕುಳ ನೀಡುವುದಕ್ಕೆ, ಬಡವರ ರಕ್ತ ಹೀರುವುದಕ್ಕೆ ಹೊಸ ಕಾಯ್ದೆಯಿಂದ ಕಡಿವಾಣ ಬೀಳಲಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ್, ಸರ್ಕಾರ ಮಸೂದೆ ಮಂಡಿಸಿರುವುದು ರೈಲು ಹೋದ ಮೇಲೆ ಟಿಕೆಟ್‌ ಪಡೆದ ಹಾಗೆ ಆಗಿದೆ. ಸರ್ಕಾರ ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತು. ಇದ್ದ ಕಾನೂನು ಬಳಸಿ ಕಿರುಕುಳ ನೀಡುತ್ತಿದ್ದವರನ್ನು ಶಿಕ್ಷೆಗೆ ಗುರಿಪಡಿಸಿದ್ದರೆ 30 ಜನರ ಪ್ರಾಣ ಉಳಿಸಬಹುದಿತ್ತು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್‌.ಕೆ ಪಾಟೀಲ್, ಹೊಸ ಮಸೂದೆಯಲ್ಲಿ ದಂಡ ಮತ್ತು ಶಿಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. ದಂಡ ಮೊತ್ತ 1,000 ರೂಪಾಯಿಯಿಂದ 10 ಸಾವಿರ ರೂಪಾಯಿ ಮತ್ತು 6 ತಿಂಗಳವರೆಗೆ ಶಿಕ್ಷೆ ಇತ್ತು. ಈಗ ದಂಡವನ್ನು 5 ಲಕ್ಷ ರೂಪಾಯಿ ಮತ್ತು ಜೈಲು ಶಿಕ್ಷೆಯನ್ನು 10 ವರ್ಷದವರೆಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಚರ್ಚೆಯಲ್ಲಿ ಜೆಡಿಎಸ್‌ನ ಹೆಚ್‌.ಟಿ.ಕೃಷ್ಣಪ್ಪ, ಕಾಂಗ್ರೆಸ್‌ನ ಲಕ್ಷ್ಮಣ ಸವದಿ ಭಾಗವಹಿಸಿದ್ದರು.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಂಡಿಸಿದ ಗ್ರೇಟರ್ ಬೆಂಗಳೂರು ಮಸೂದೆ ಕುರಿತು ಸದನದಲ್ಲಿ ಸುದೀರ್ಘ ಚರ್ಚೆ ನಡೆಯಿತು.

ಬಿಜೆಪಿ ಹಲವು ಸದಸ್ಯರು ಮಸೂದೆಯನ್ನು ವಿರೋಧಿಸಿದರು. ಬಿಬಿಎಂಪಿಯನ್ನು ವಿಭಜಿಸುವುದಾದರೆ ಸಂಪನ್ಮೂಲದ ಸಮಾನ ಹಂಚಿಕೆ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಬಿಜೆಪಿಯ ಎಸ್‌.ಟಿ ಸೋಮಶೇಖರ್ ಮಸೂದೆಯನ್ನು ಬೆಂಬಲಿಸಿದರು.

ವಿರೋಧ ಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, “ಬೆಂಗಳೂರಿನ ಬೆಳವಣಿಗೆಯನ್ನು ತಡೆಯಲು ಸಾಧ್ಯವಿಲ್ಲ. ಬಿಬಿಎಂಪಿ ಈಗ ಇರುವ ಸ್ಥಿತಿಯಲ್ಲಿ ಆಡಳಿತ ನಡೆಸಲೂ ಸಾಧ್ಯವಿಲ್ಲ. ನಾವು ಬಿಬಿಎಂಪಿಯನ್ನು ಛಿದ್ರಗೊಳಿಸುತ್ತಿಲ್ಲ, ಗಟ್ಟಿಗೊಳಿಸುತ್ತಿದ್ದೇವೆ” ಎಂದು ಸಮರ್ಥಿಸಿಕೊಂಡರು.

ಪರ-ವಿರೋಧ ಚರ್ಚೆಯ ಬಳಿಕ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಮಸೂದೆಯ ಅಂಗೀಕಾರದ ಪ್ರಸ್ತಾವವನ್ನು ಧ್ವನಿಮತಕ್ಕೆ ಹಾಕಲು ಮುಂದಾದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ಗದ್ದಲದ ನಡುವೆಯೇ ಮಸೂದೆ ಅಂಗೀಕಾರಗೊಂಡಿತು.

ಮೈಕ್ರೋ ಫೈನಾನ್ಸ್ ಮಸೂದೆ :

ಕೆಳ ತಿಂಗಳ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ಮನೆ ಬಿಟ್ಟು ಹೋಗುವುದು, ಆತ್ಮಹತ್ಯೆಗೆ ಶರಣಾಗುತ್ತಿರುವ ಬಗ್ಗೆ ವರದಿಯಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಹಂತದಲ್ಲಿ ಕೆಲ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ ಸಾಲ ಪಡೆದವರಿಗೆ ಕಿರುಕುಳ ಕೊಡದಂತೆ ತಾಕೀತು ಮಾಡಿದ್ದರು.

ನಂತರ, ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಲಗಾಮು ಹಾಕಲು ಸರ್ಕಾರ ಸುಗ್ರಿವಾಜ್ಞೆ ತಂದಿತು. ಅದನ್ನು ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳಿಸಿದಾಗ, ರಾಜ್ಯಪಾಲರು ಕೆಲ ಕಾರಣಗಳನ್ನು ನೀಡಿ ವಾಪಸ್ ಮಾಡಿದ್ದರು. ಸರ್ಕಾರ ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಸುಗ್ರಿವಾಜ್ಞೆಯನ್ನು ಮತ್ತೆ ರಾಜಭವನಕ್ಕೆ ಕಳುಹಿಸಿತ್ತು. ಅದಕ್ಕೆ ರಾಜ್ಯಪಾಲರು ಸಹಿ ಹಾಕಿದ್ದರು. ರಾಜ್ಯಪಾಲರ ಅಂಕಿತ ಬಿದ್ದ ದಿನವೇ, ಅಂದರೆ ಫೆಬ್ರವರಿ 12, 2025ರಂದು ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮೂಲಕ ಕಾನೂನು ಜಾರಿ ಮಾಡಿತು.

ಗ್ರೇಟರ್ ಬೆಂಗಳೂರು ಮಸೂದೆ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸುವ ಗ್ರೇಟರ್ ಬೆಂಗಳೂರು ಮಸೂದೆ ಮಂಡನೆಗೂ ಮುನ್ನ, ಅದರ ಪರಿಶೀಲನೆಗಾಗಿ ಶಿವಾಜಿನಗರ ಶಾಸಕ ರಿಝ್ವಾನ್ ಅರ್ಷದ್ ಅವರ ನೇತೃತ್ವದಲ್ಲಿ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿತ್ತು.

ಈ ಸಮಿತಿ ಮಸೂದೆ ಸಂಬಂಧ ಸಾರ್ವಜನಿಕರು, ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆದು, ಕೆಲ ತಿದ್ದುಪಡಿಗಳೊಂದಿಗೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆ ತಿದ್ದುಪಡಿಗಳನ್ನು ಪರಿಗಣಿಸಿ ಸರ್ಕಾರ ಮಸೂದೆ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ.

ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅಮಿತ್ ಶಾ ಜೊತೆ ಸಭೆ ನಡೆಸಲಿರುವ ಬಿಜೆಪಿ ಭಿನ್ನಮತೀಯ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...