Homeಮುಖಪುಟಲೋಕಸಭೆಯಲ್ಲಿ 20 ನಿಮಿಷ ಮೈಕ್ರೊಫೋನ್‌ ಮ್ಯೂಟ್: ಇದು ಪ್ರಜಾಪ್ರಭುತ್ವವೇ? ಎಂದ ಕಾಂಗ್ರೆಸ್

ಲೋಕಸಭೆಯಲ್ಲಿ 20 ನಿಮಿಷ ಮೈಕ್ರೊಫೋನ್‌ ಮ್ಯೂಟ್: ಇದು ಪ್ರಜಾಪ್ರಭುತ್ವವೇ? ಎಂದ ಕಾಂಗ್ರೆಸ್

- Advertisement -
- Advertisement -

ರಾಹುಲ್ ಗಾಂಧಿ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಬೇಕು ಎಂದು ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಲೋಕಸಭೆಯ ಕಲಾಪದ ವೇಳೆ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ 20 ನಿಮಿಷಗಳ ಕಾಲ ಮೈಕ್ರೊಫೋನ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

ಸಂಸದ ರಾಹುಲ್ ಗಾಂಧಿ ಅವರು ಲಂಡನ್ ಸಂಸತ್ತಿನಲ್ಲಿ ಬ್ರಿಟಿಷ್ ಸಂಸದರನ್ನು ಉದ್ದೇಶಿಸಿ ಮಾತನಾಡುತ್ತಾ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಆಗಾಗ್ಗೆ ಮ್ಯೂಟ್ ಮಾಡಲಾಗುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ನೀಡಿದ ನಾಲ್ಕು ದಿನಗಳ ನಂತರ ಮತ್ತೆ ಅದು ಮರುಕಳಿಸಿದೆ.

ಸಂಸತ್ ಟಿವಿಯಲ್ಲಿ ಲೋಕಸಭೆಯ ಕಲಾಪಗಳ ನೇರ ಪ್ರಸಾರದ ಕಿರು ವಿಡಿಯೋವನ್ನು ಕಾಂಗ್ರೆಸ್ ಪೋಸ್ಟ್ ಮಾಡಿದೆ. ಈ ವಿಡಿಯೋದಲ್ಲಿ ಪ್ರತಿಪಕ್ಷಗಳ ಸಂಸದರು ಆರಂಭದಲ್ಲಿ ”ರಾಹುಲ್ ಜಿ ಕೊ ಬೋಲ್ನೆ ದೋ [ರಾಹುಲ್ ಜಿ ಮಾತನಾಡಲಿ]” ಎಂದು ಘೋಷಣೆಗಳನ್ನು ಕೂಗುತ್ತಿರುವುದು ಕೇಳಿಬಂದಿದೆ.

”ಪ್ರತಿಪಕ್ಷಗಳ ಧ್ವನಿ ಕೇಳದಂತೆ ತಡೆಯಲು ಮೈಕ್ರೋಫೋನ್ ಮ್ಯೂಟ್ ಮಾಡುವುದು ಪ್ರಜಾಪ್ರಭುತ್ವವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಟೆಲಿಕಾಸ್ಟ್‌ನಿಂದ ಆಡಿಯೋ ಸುಮಾರು ಮುಂದಿನ 20 ನಿಮಿಷಗಳವರೆಗೆ ಕೇಳಿಸುವುದಿಲ್ಲ. ಸ್ಪೀಕರ್ ಓಂ ಬಿರ್ಲಾ ಅವರು ಘೋಷಣೆ ಕೂಗುವುದನ್ನು ನಿಲ್ಲಿಸುವಂತೆ ಸದಸ್ಯರನ್ನು ಒತ್ತಾಯಿಸಿದಾಗ, ಅವರು ನಿಲ್ಲಿಸುವುದಿಲ್ಲ. ನಂತರ ಸದನವನ್ನು ಮುಂದೂಡಲಾಯಿತು.

ಪ್ರತಿಪಕ್ಷಗಳ ನಾಯಕರು ಸ್ಪೀಕರ್ ಕುರ್ಚಿಯ ಬಳಿ ಪ್ರತಿಭಟನೆ ನಡೆಸುತ್ತಿರುವ ದೃಶ್ಯಗಳು ಮತ್ತು ಸಂಸದರು ಖಜಾನೆ ಪೀಠದ ಮೇಲೆ ಕುಳಿತು ತಮ್ಮ ಕಾಲುಗಳ ಮೇಲೆ ಕುಳಿತುಕೊಂಡಿರುವುದನ್ನು ದೃಶ್ಯಗಳು ತೋರಿಸಿವೆ.

ಉದ್ದೇಶಪೂರ್ವಕವಾಗಿ ಆಡಿಯೋ ಮ್ಯೂಟ್ ಮಾಡಿಲ್ಲ ಎಂದು ಸರ್ಕಾರಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ”ಇದು ತಾಂತ್ರಿಕ ದೋಷವಾಗಿದೆ, ಉದ್ದೇಶಪೂರ್ವಕವಾಗಿ ಮಾಡಲಾಗಿಲ್ಲ. ಪ್ರತಿದಿನ ಘೋಷಣೆ ಕೂಗುವಿಕೆಯನ್ನು ಅಡ್ಡಿಪಡಿಸುವ ಸಮಯದಲ್ಲಿ ಪ್ರಸಾರ ಮಾಡಲಾಗುತ್ತಿದೆ” ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಚಾನಲ್ ಹೇಳಿದೆ.

ಬುಧವಾರ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು, ”ಕಳೆದ ಮೂರು ದಿನಗಳಿಂದ ತಮ್ಮ ಮೈಕ್ರೊಫೋನ್‌ನ್ನು ಮ್ಯೂಟ್ ಮಾಡಲಾಗಿದೆ” ಎಂದು ಆರೋಪಿಸಿ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.

”ಮಾರ್ಚ್ 13, 2023 ರಿಂದ, ಸದನದಲ್ಲಿ ಸರ್ಕಾರಿ ಪ್ರಾಯೋಜಿತ ತೊಂದರೆ ಕಂಡುಬಂದಿದೆ. ಿದನ್ನು ಗಮನಿಸಿದ ನಾನು ಹತಾಶೆಕೊಂಡಿದ್ದೇನೆ. ವಿರೋಧ ಪಕ್ಷದ ಒಬ್ಬ ಸದಸ್ಯನ ಪ್ರತಿಷ್ಠೆಯನ್ನು ಹಾಳುಮಾಡಲು ಅಧಿಕಾರದಲ್ಲಿರುವ ಪಕ್ಷದ ಕಡೆಯಿಂದ ಸಂಚು ರೂಪಿಸಿದಂತೆ ನನಗೆ ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಲಂಡನ್‌ನಲ್ಲಿ ಮಾಡಿದ “ಪ್ರಜಾಪ್ರಭುತ್ವ-ದಾಳಿ” ಟೀಕೆಗಳಿಗಾಗಿ ಭಾರತೀಯ ಜನತಾ ಪಕ್ಷದ ಸಂಸದರು ಗಾಂಧಿಯವರ ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತಿರುವುದರಿಂದ ಸಂಸತ್ತಿನ ಕಲಾಪಗಳು ಈ ವಾರದುದ್ದಕ್ಕೂ ಪದೇ ಪದೇ ಅಡ್ಡಿಪಡಿಸುತ್ತಿವೆ. ಮತ್ತೊಂದೆಡೆ ಅದಾನಿ ಗ್ರೂಪ್ ವಿರುದ್ಧ ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್ ಮಾಡಿರುವ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಕೋರಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...