Homeಮುಖಪುಟಲೋಕಸಭೆಯಲ್ಲಿ 20 ನಿಮಿಷ ಮೈಕ್ರೊಫೋನ್‌ ಮ್ಯೂಟ್: ಇದು ಪ್ರಜಾಪ್ರಭುತ್ವವೇ? ಎಂದ ಕಾಂಗ್ರೆಸ್

ಲೋಕಸಭೆಯಲ್ಲಿ 20 ನಿಮಿಷ ಮೈಕ್ರೊಫೋನ್‌ ಮ್ಯೂಟ್: ಇದು ಪ್ರಜಾಪ್ರಭುತ್ವವೇ? ಎಂದ ಕಾಂಗ್ರೆಸ್

- Advertisement -
- Advertisement -

ರಾಹುಲ್ ಗಾಂಧಿ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಬೇಕು ಎಂದು ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಲೋಕಸಭೆಯ ಕಲಾಪದ ವೇಳೆ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ 20 ನಿಮಿಷಗಳ ಕಾಲ ಮೈಕ್ರೊಫೋನ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

ಸಂಸದ ರಾಹುಲ್ ಗಾಂಧಿ ಅವರು ಲಂಡನ್ ಸಂಸತ್ತಿನಲ್ಲಿ ಬ್ರಿಟಿಷ್ ಸಂಸದರನ್ನು ಉದ್ದೇಶಿಸಿ ಮಾತನಾಡುತ್ತಾ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಆಗಾಗ್ಗೆ ಮ್ಯೂಟ್ ಮಾಡಲಾಗುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ನೀಡಿದ ನಾಲ್ಕು ದಿನಗಳ ನಂತರ ಮತ್ತೆ ಅದು ಮರುಕಳಿಸಿದೆ.

ಸಂಸತ್ ಟಿವಿಯಲ್ಲಿ ಲೋಕಸಭೆಯ ಕಲಾಪಗಳ ನೇರ ಪ್ರಸಾರದ ಕಿರು ವಿಡಿಯೋವನ್ನು ಕಾಂಗ್ರೆಸ್ ಪೋಸ್ಟ್ ಮಾಡಿದೆ. ಈ ವಿಡಿಯೋದಲ್ಲಿ ಪ್ರತಿಪಕ್ಷಗಳ ಸಂಸದರು ಆರಂಭದಲ್ಲಿ ”ರಾಹುಲ್ ಜಿ ಕೊ ಬೋಲ್ನೆ ದೋ [ರಾಹುಲ್ ಜಿ ಮಾತನಾಡಲಿ]” ಎಂದು ಘೋಷಣೆಗಳನ್ನು ಕೂಗುತ್ತಿರುವುದು ಕೇಳಿಬಂದಿದೆ.

”ಪ್ರತಿಪಕ್ಷಗಳ ಧ್ವನಿ ಕೇಳದಂತೆ ತಡೆಯಲು ಮೈಕ್ರೋಫೋನ್ ಮ್ಯೂಟ್ ಮಾಡುವುದು ಪ್ರಜಾಪ್ರಭುತ್ವವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಟೆಲಿಕಾಸ್ಟ್‌ನಿಂದ ಆಡಿಯೋ ಸುಮಾರು ಮುಂದಿನ 20 ನಿಮಿಷಗಳವರೆಗೆ ಕೇಳಿಸುವುದಿಲ್ಲ. ಸ್ಪೀಕರ್ ಓಂ ಬಿರ್ಲಾ ಅವರು ಘೋಷಣೆ ಕೂಗುವುದನ್ನು ನಿಲ್ಲಿಸುವಂತೆ ಸದಸ್ಯರನ್ನು ಒತ್ತಾಯಿಸಿದಾಗ, ಅವರು ನಿಲ್ಲಿಸುವುದಿಲ್ಲ. ನಂತರ ಸದನವನ್ನು ಮುಂದೂಡಲಾಯಿತು.

ಪ್ರತಿಪಕ್ಷಗಳ ನಾಯಕರು ಸ್ಪೀಕರ್ ಕುರ್ಚಿಯ ಬಳಿ ಪ್ರತಿಭಟನೆ ನಡೆಸುತ್ತಿರುವ ದೃಶ್ಯಗಳು ಮತ್ತು ಸಂಸದರು ಖಜಾನೆ ಪೀಠದ ಮೇಲೆ ಕುಳಿತು ತಮ್ಮ ಕಾಲುಗಳ ಮೇಲೆ ಕುಳಿತುಕೊಂಡಿರುವುದನ್ನು ದೃಶ್ಯಗಳು ತೋರಿಸಿವೆ.

ಉದ್ದೇಶಪೂರ್ವಕವಾಗಿ ಆಡಿಯೋ ಮ್ಯೂಟ್ ಮಾಡಿಲ್ಲ ಎಂದು ಸರ್ಕಾರಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ”ಇದು ತಾಂತ್ರಿಕ ದೋಷವಾಗಿದೆ, ಉದ್ದೇಶಪೂರ್ವಕವಾಗಿ ಮಾಡಲಾಗಿಲ್ಲ. ಪ್ರತಿದಿನ ಘೋಷಣೆ ಕೂಗುವಿಕೆಯನ್ನು ಅಡ್ಡಿಪಡಿಸುವ ಸಮಯದಲ್ಲಿ ಪ್ರಸಾರ ಮಾಡಲಾಗುತ್ತಿದೆ” ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಚಾನಲ್ ಹೇಳಿದೆ.

ಬುಧವಾರ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು, ”ಕಳೆದ ಮೂರು ದಿನಗಳಿಂದ ತಮ್ಮ ಮೈಕ್ರೊಫೋನ್‌ನ್ನು ಮ್ಯೂಟ್ ಮಾಡಲಾಗಿದೆ” ಎಂದು ಆರೋಪಿಸಿ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.

”ಮಾರ್ಚ್ 13, 2023 ರಿಂದ, ಸದನದಲ್ಲಿ ಸರ್ಕಾರಿ ಪ್ರಾಯೋಜಿತ ತೊಂದರೆ ಕಂಡುಬಂದಿದೆ. ಿದನ್ನು ಗಮನಿಸಿದ ನಾನು ಹತಾಶೆಕೊಂಡಿದ್ದೇನೆ. ವಿರೋಧ ಪಕ್ಷದ ಒಬ್ಬ ಸದಸ್ಯನ ಪ್ರತಿಷ್ಠೆಯನ್ನು ಹಾಳುಮಾಡಲು ಅಧಿಕಾರದಲ್ಲಿರುವ ಪಕ್ಷದ ಕಡೆಯಿಂದ ಸಂಚು ರೂಪಿಸಿದಂತೆ ನನಗೆ ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಲಂಡನ್‌ನಲ್ಲಿ ಮಾಡಿದ “ಪ್ರಜಾಪ್ರಭುತ್ವ-ದಾಳಿ” ಟೀಕೆಗಳಿಗಾಗಿ ಭಾರತೀಯ ಜನತಾ ಪಕ್ಷದ ಸಂಸದರು ಗಾಂಧಿಯವರ ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತಿರುವುದರಿಂದ ಸಂಸತ್ತಿನ ಕಲಾಪಗಳು ಈ ವಾರದುದ್ದಕ್ಕೂ ಪದೇ ಪದೇ ಅಡ್ಡಿಪಡಿಸುತ್ತಿವೆ. ಮತ್ತೊಂದೆಡೆ ಅದಾನಿ ಗ್ರೂಪ್ ವಿರುದ್ಧ ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್ ಮಾಡಿರುವ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಕೋರಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...