Homeಮುಖಪುಟಲೋಕಸಭೆಯಲ್ಲಿ 20 ನಿಮಿಷ ಮೈಕ್ರೊಫೋನ್‌ ಮ್ಯೂಟ್: ಇದು ಪ್ರಜಾಪ್ರಭುತ್ವವೇ? ಎಂದ ಕಾಂಗ್ರೆಸ್

ಲೋಕಸಭೆಯಲ್ಲಿ 20 ನಿಮಿಷ ಮೈಕ್ರೊಫೋನ್‌ ಮ್ಯೂಟ್: ಇದು ಪ್ರಜಾಪ್ರಭುತ್ವವೇ? ಎಂದ ಕಾಂಗ್ರೆಸ್

- Advertisement -
- Advertisement -

ರಾಹುಲ್ ಗಾಂಧಿ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಬೇಕು ಎಂದು ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಲೋಕಸಭೆಯ ಕಲಾಪದ ವೇಳೆ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ 20 ನಿಮಿಷಗಳ ಕಾಲ ಮೈಕ್ರೊಫೋನ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

ಸಂಸದ ರಾಹುಲ್ ಗಾಂಧಿ ಅವರು ಲಂಡನ್ ಸಂಸತ್ತಿನಲ್ಲಿ ಬ್ರಿಟಿಷ್ ಸಂಸದರನ್ನು ಉದ್ದೇಶಿಸಿ ಮಾತನಾಡುತ್ತಾ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಆಗಾಗ್ಗೆ ಮ್ಯೂಟ್ ಮಾಡಲಾಗುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ನೀಡಿದ ನಾಲ್ಕು ದಿನಗಳ ನಂತರ ಮತ್ತೆ ಅದು ಮರುಕಳಿಸಿದೆ.

ಸಂಸತ್ ಟಿವಿಯಲ್ಲಿ ಲೋಕಸಭೆಯ ಕಲಾಪಗಳ ನೇರ ಪ್ರಸಾರದ ಕಿರು ವಿಡಿಯೋವನ್ನು ಕಾಂಗ್ರೆಸ್ ಪೋಸ್ಟ್ ಮಾಡಿದೆ. ಈ ವಿಡಿಯೋದಲ್ಲಿ ಪ್ರತಿಪಕ್ಷಗಳ ಸಂಸದರು ಆರಂಭದಲ್ಲಿ ”ರಾಹುಲ್ ಜಿ ಕೊ ಬೋಲ್ನೆ ದೋ [ರಾಹುಲ್ ಜಿ ಮಾತನಾಡಲಿ]” ಎಂದು ಘೋಷಣೆಗಳನ್ನು ಕೂಗುತ್ತಿರುವುದು ಕೇಳಿಬಂದಿದೆ.

”ಪ್ರತಿಪಕ್ಷಗಳ ಧ್ವನಿ ಕೇಳದಂತೆ ತಡೆಯಲು ಮೈಕ್ರೋಫೋನ್ ಮ್ಯೂಟ್ ಮಾಡುವುದು ಪ್ರಜಾಪ್ರಭುತ್ವವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಟೆಲಿಕಾಸ್ಟ್‌ನಿಂದ ಆಡಿಯೋ ಸುಮಾರು ಮುಂದಿನ 20 ನಿಮಿಷಗಳವರೆಗೆ ಕೇಳಿಸುವುದಿಲ್ಲ. ಸ್ಪೀಕರ್ ಓಂ ಬಿರ್ಲಾ ಅವರು ಘೋಷಣೆ ಕೂಗುವುದನ್ನು ನಿಲ್ಲಿಸುವಂತೆ ಸದಸ್ಯರನ್ನು ಒತ್ತಾಯಿಸಿದಾಗ, ಅವರು ನಿಲ್ಲಿಸುವುದಿಲ್ಲ. ನಂತರ ಸದನವನ್ನು ಮುಂದೂಡಲಾಯಿತು.

ಪ್ರತಿಪಕ್ಷಗಳ ನಾಯಕರು ಸ್ಪೀಕರ್ ಕುರ್ಚಿಯ ಬಳಿ ಪ್ರತಿಭಟನೆ ನಡೆಸುತ್ತಿರುವ ದೃಶ್ಯಗಳು ಮತ್ತು ಸಂಸದರು ಖಜಾನೆ ಪೀಠದ ಮೇಲೆ ಕುಳಿತು ತಮ್ಮ ಕಾಲುಗಳ ಮೇಲೆ ಕುಳಿತುಕೊಂಡಿರುವುದನ್ನು ದೃಶ್ಯಗಳು ತೋರಿಸಿವೆ.

ಉದ್ದೇಶಪೂರ್ವಕವಾಗಿ ಆಡಿಯೋ ಮ್ಯೂಟ್ ಮಾಡಿಲ್ಲ ಎಂದು ಸರ್ಕಾರಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ”ಇದು ತಾಂತ್ರಿಕ ದೋಷವಾಗಿದೆ, ಉದ್ದೇಶಪೂರ್ವಕವಾಗಿ ಮಾಡಲಾಗಿಲ್ಲ. ಪ್ರತಿದಿನ ಘೋಷಣೆ ಕೂಗುವಿಕೆಯನ್ನು ಅಡ್ಡಿಪಡಿಸುವ ಸಮಯದಲ್ಲಿ ಪ್ರಸಾರ ಮಾಡಲಾಗುತ್ತಿದೆ” ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಚಾನಲ್ ಹೇಳಿದೆ.

ಬುಧವಾರ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು, ”ಕಳೆದ ಮೂರು ದಿನಗಳಿಂದ ತಮ್ಮ ಮೈಕ್ರೊಫೋನ್‌ನ್ನು ಮ್ಯೂಟ್ ಮಾಡಲಾಗಿದೆ” ಎಂದು ಆರೋಪಿಸಿ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.

”ಮಾರ್ಚ್ 13, 2023 ರಿಂದ, ಸದನದಲ್ಲಿ ಸರ್ಕಾರಿ ಪ್ರಾಯೋಜಿತ ತೊಂದರೆ ಕಂಡುಬಂದಿದೆ. ಿದನ್ನು ಗಮನಿಸಿದ ನಾನು ಹತಾಶೆಕೊಂಡಿದ್ದೇನೆ. ವಿರೋಧ ಪಕ್ಷದ ಒಬ್ಬ ಸದಸ್ಯನ ಪ್ರತಿಷ್ಠೆಯನ್ನು ಹಾಳುಮಾಡಲು ಅಧಿಕಾರದಲ್ಲಿರುವ ಪಕ್ಷದ ಕಡೆಯಿಂದ ಸಂಚು ರೂಪಿಸಿದಂತೆ ನನಗೆ ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಲಂಡನ್‌ನಲ್ಲಿ ಮಾಡಿದ “ಪ್ರಜಾಪ್ರಭುತ್ವ-ದಾಳಿ” ಟೀಕೆಗಳಿಗಾಗಿ ಭಾರತೀಯ ಜನತಾ ಪಕ್ಷದ ಸಂಸದರು ಗಾಂಧಿಯವರ ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತಿರುವುದರಿಂದ ಸಂಸತ್ತಿನ ಕಲಾಪಗಳು ಈ ವಾರದುದ್ದಕ್ಕೂ ಪದೇ ಪದೇ ಅಡ್ಡಿಪಡಿಸುತ್ತಿವೆ. ಮತ್ತೊಂದೆಡೆ ಅದಾನಿ ಗ್ರೂಪ್ ವಿರುದ್ಧ ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್ ಮಾಡಿರುವ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಕೋರಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...

ಕರ್ನಾಟಕ ಎಸ್‌ಐಆರ್: ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಬೆಂಗಳೂರು ನಗರದಲ್ಲೇ ಭಾರೀ ಬೇಡಿಕೆ: ಕಂದಾಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಡುವೆಯೇ, ಕಂದಾಯ ಇಲಾಖೆಗೆ ಸಲ್ಲಿಕೆಯಾಗುತ್ತಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅರ್ಜಿಗಳ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆಯು...

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...