Homeಮುಖಪುಟವಿವಾದಾತ್ಮಕ ಕೃಷಿ ಕಾಯ್ದೆಗಳ ಹಿಂದೆ ಮೈಕ್ರೋಸಾಫ್ಟ್, ಅಮೆಜಾನ್ ಕಂಪನಿಗಳ ಲಾಬಿ: ಕುಮಾರ್ ಎಸ್

ವಿವಾದಾತ್ಮಕ ಕೃಷಿ ಕಾಯ್ದೆಗಳ ಹಿಂದೆ ಮೈಕ್ರೋಸಾಫ್ಟ್, ಅಮೆಜಾನ್ ಕಂಪನಿಗಳ ಲಾಬಿ: ಕುಮಾರ್ ಎಸ್

ರೈತನ ಖಾಸಗಿ ಮಾಹಿತಿಯನ್ನು ಸಂಗ್ರಹಿಸುವ, ವಾಣಿಜ್ಯ ಉದ್ದೇಶಗಳಿಗೆ ಬಳಸುವುದಕ್ಕೆ ಅವಕಾಶ ಮಾಡಿಕೊಡುವ ಅಗ್ರಿಸ್ಟ್ಯಾಕ್‌ ಮೂಲಕ ಸರ್ಕಾರ ಕೃಷಿ ಕ್ಷೇತ್ರ ಮತ್ತು ರೈತನನ್ನು ಬಲಿಕೊಡುತ್ತಿದೆ ಎಂಬ ಟೀಕೆ ತೀವ್ರವಾಗುತ್ತಿದೆ.

- Advertisement -
- Advertisement -

ಒಕ್ಕೂಟ ಸರ್ಕಾರ ಕಳೆದ ವರ್ಷ ಸೆಪ್ಟೆಂಬರ್‌ ತಿಂಗಳಲ್ಲಿ 3 ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿತು. ಅದನ್ನು ವಿರೋಧಿಸಿ 300 ದಿನಗಳಿಂದ ದೆಹಲಿಯ ನಾಲ್ಕೂ ದಿಕ್ಕುಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತನ ಭೂಮಿಯನ್ನು, ಬೆಳೆದ ಬೆಳೆಯನ್ನು ಕಸಿದುಕೊಳ್ಳುವ ಹುನ್ನಾರವಿರುವ ಈ ಕೃಷಿ ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ಅನ್ನವನ್ನು ನಂಬಿರುವ ಎಲ್ಲರಿಗೂ ಅಪಾಯ ತಂದೊಡ್ಡಲಿವೆ ಎಂದು ತಜ್ಞರು, ಚಿಂತಕರೂ ಕಳೆದು ಒಂದು ವರ್ಷದಿಂದ ನಾನಾ ರೀತಿಯಲ್ಲಿ ಸರ್ಕಾರಕ್ಕೆ ತಿಳಿ ಹೇಳುತ್ತಿದ್ದಾರೆ.

ಆದರೂ ಕೇಂದ್ರ ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸುವ ನಾಟಕವಾಡಿತೆ ಹೊರತು ಕಾಯ್ದೆಗಳನ್ನು ಹಿಂಪಡೆಯುವ ಸೊಲ್ಲೆತ್ತಲಿಲ್ಲ. ದೆಹಲಿಯಲ್ಲಿ ಲಾಠಿ ಚಾರ್ಜ್‌, ರೈತರ ಮೇಲೆ ಹಲ್ಲೆ ನಡೆದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಮಧ್ಯ ಪ್ರವೇಶಿಸಿದ್ದರಿಂದ ಕಾಯ್ದೆಗಳನ್ನು ತಾತ್ಕಾಲಿಕವಾಗಿ ಹಿಂಪಡೆದಿದೆ.

ಈ ನಡುವೆ ರೈತ ಹೋರಾಟವನ್ನು ಪ್ರಾಯೋಜಿತ ಹೋರಾಟವೆಂದು, ಎಡಪಂಥೀಯರ ಸಂಚೆಂದು, ಖಾಲಿಸ್ತಾನಿಗಳ ಹುನ್ನಾರವೆಂದೂ ಸರ್ಕಾರ ಮಾಧ್ಯಮಗಳ ಮೂಲಕ ಹಲವು ಸುಳ್ಳುಸುದ್ದಿಗಳನ್ನು ಹರಿಯಬಿಟ್ಟು, ಹೋರಾಟವನ್ನು ಒಡೆಯುವ ಪ್ರಯತ್ನ ಮಾಡಿತು. ಕೋವಿಡ್‌ ಸೋಂಕನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಪ್ರಯತ್ನವನ್ನೂ ಮಾಡಿತು. ಇಷ್ಟಾಗಿಯೂ ರೈತರ ಹೋರಾಟದ ಬದ್ಧತೆಯಲ್ಲಿ ಒಂದಿನಿತೂ ಬದಲಾಗಿಲ್ಲ. ಸರ್ಕಾರದ ಮೊಂಡುತನದಲ್ಲೂ..

ಸರ್ಕಾರ ಯಾಕೆ ದೇಶದ ರೈತರ ಹಿತವನ್ನು ಬಲಿಕೊಡುವುದಕ್ಕೆ ಇಷ್ಟು ಹಟ ಹಿಡಿದು ಕೂತಿದೆ ಎಂಬ ಪ್ರಶ್ನೆ ಕಾಯ್ದೆ ಜಾರಿಗೆ ಬಂದಾಗಿನಿಂದ ಚರ್ಚೆಯಾಗುತ್ತಿದೆ. ಮೊದಮೊದಲು ರೈತರ ಆಕ್ರೋಶಕ್ಕೆ, ರೈತ ಪರ ಕಾಳಜಿ ಇರುವವರ ಅನುಮಾನಕ್ಕೆ ಗುರಿಯಾಗಿದ್ದು ಅಂಬಾನಿಯ ರಿಲಯನ್ಸ್‌ ಮತ್ತು ಅದಾನಿಯ ಫಾರ್ಚ್ಯೂನ್‌ ಕಂಪನಿಗಳು. ರೊಚ್ಚಿಗೆದ್ದ ರೈತರು ರಿಲಯನ್ಸ್‌ ಕಂಪನಿಗಳ ಉತ್ಪನ್ನಗಳನ್ನು ಬಾಯ್ಕಾಟ್‌ ಮಾಡಿದರು, ಮೊಬೈಲ್‌ ಟವರ್‌ಗಳನ್ನು ಕಿತ್ತರು. ಕೃಷಿ ಕಾಯ್ದೆಗಳು ಜಾರಿಗೆ ಬರುವ ಕೆಲವೇ ದಿನಗಳ ಮೊದಲು ದೊಡ್ಡ ಪ್ರಮಾಣದ ದಾಸ್ತಾನು ಸಂಗ್ರಹಗಾರರಗಳನ್ನು ನಿರ್ಮಿಸಿದ್ದ ಅದಾನಿ ಕಂಪನಿ, ಕಾಂಟ್ರ್ಯಾಕ್ಟ್‌ ಫಾರ್ಮಿಂಗ್‌ಗೆ ತಯಾರಿ ನಡೆಸುತ್ತಿದ್ದ ರಿಲಯನ್ಸ್‌ ಕಂಪನಿಗಳು ಸಹಜವಾಗಿಯೇ ರೈತರ ಆಕ್ರೋಶದ ಕೇಂದ್ರವಾದರು. ಆದರೆ ಕಳೆದ ಮೂರು ತಿಂಗಳುಗಳಿಂದ ಹೊರಬರುತ್ತಿರುವ ಒಂದೊಂದು ಸುದ್ದಿಯೂ ಕಾಯ್ದೆಗಳ ಜಾರಿಗೆ ಹೊಸ ಆಯಾಮವನ್ನೇ ತೆರೆದಿಡುತ್ತಿವೆ. ಕೇವಲ ಭಾರತೀಯ ಕಾರ್ಪೊರೇಟ್‌ ಶಕ್ತಿಗಳಷ್ಟೇ ಈ ಕಾಯ್ದೆಗಳ ಹಿಂದಿಲ್ಲ, ಜಗತ್ತಿನ ಪ್ರಮುಖ ಟೆಕ್‌ ಸಂಸ್ಥೆಗಳು ಇದರಲ್ಲಿ ಶಾಮೀಲು ಎಂಬ ಅಂಶವನ್ನು ಹೊರಗೆಡಹುತ್ತಿವೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014ರಲ್ಲಿ ಮೊದಲ ಅವಧಿಗೆ ಅಧಿಕಾರಕ್ಕೆ ಬಂದಾಗಲೇ ಅಮೆರಿಕದ ಮೂರು ದೊಡ್ಡ ಕಂಪನಿಗಳ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು. ಅಗ್ರಿಸ್ಟ್ಯಾಕ್‌ ಎಂಬ ಯೋಜನೆಯಡಿ ಈ ಒಪ್ಪಂದ ನಡೆದಿತ್ತು. ಅವತ್ತಿಗೆ ಭಾರತದಲ್ಲಿ ಆಹಾರ ಭದ್ರತೆಯನ್ನು ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆ ಎಂದು ಹೇಳಲಾಗಿತ್ತು. ಈ ಒಪ್ಪಂದವಾಗುವಾಗ ಮೊಬೈಲ್‌ ಅಪ್ಲಿಕೇಷನ್‌ಗಳು ಮತ್ತು ಬೆಳೆ ಫಸಲು, ಮಣ್ಣಿನ ಗುಣ, ಭೂ ಹಿಡುವಳಿ ಇತ್ಯಾದಿ ಮಾಹಿತಿಗಳನ್ನು ಆಧರಿಸಿ ಸಿದ್ಧಪಡಿಸಿದ ಸಾಧನಗಳು ರೈತರು ಹೆಚ್ಚು ಫಸಲು ಹೊಂದುವುದಕ್ಕೆ ಸಾಧ್ಯವಿದೆ, ಈ ನಿಟ್ಟಿನಲ್ಲಿ ಖಾಸಗಿ ವಲಯ ನೆರವಾಗಲಿದೆ ಎಂದು ಮೋದಿ ನಂಬಿದ್ದರಂತೆ!

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಜೊತೆ ಚರ್ಚೆ ನಡೆಸುತ್ತಿರುವ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್

ವಾಸ್ತವಾದಲ್ಲಿ ಅಗ್ರಿಸ್ಟ್ಯಾಕ್‌ ಏನು?

ಇದೊಂದು ವೇದಿಕೆ. ರೈತ ಮತ್ತು ಅವನ ಕೃಷಿ ಚಟುವಟಿಕೆಯ ಎಲ್ಲ ಮಾಹಿತಿಗಳನ್ನು ಒಂದೆಡೆ ಕಲೆ ಹಾಕುವ ವ್ಯವಸ್ಥೆ. ಇಲ್ಲಿ ರೈತನ ಆರ್ಥಿಕ ಸ್ಥಿತಿಗತಿ ಮತ್ತು ಕೃಷಿ ಚಟುವಟಿಕೆ, ಅಂದರೆ, ಬೀಜ, ಬೆಳೆ, ಬೆಳೆ ವಿನ್ಯಾಸ, ಮಣ್ಣಿನ ಫಲವತ್ತತೆ, ವಿಮೆ, ಹವಾಮಾನದ ವಿನ್ಯಾಸ ಇತ್ಯಾದಿ ಮಾಹಿತಿಗಳನ್ನು ಈ ಡೇಟಾಬೇಸ್‌ನಲ್ಲಿ ಸಂಗ್ರಹಿಸಲಾಗುತ್ತದೆ. ಈ ಮಾಹಿತಿಯನ್ನು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್ ಮತ್ತು ಡೇಟಾ ಅನಾಲಿಸ್‌ ಮೂಲಕ ವಿಶ್ಲೇಷಿಸಿ, ಉತ್ತಮ ಇಳುವರಿಗೆ ಇರುವ ಸವಾಲು ಮತ್ತು ಅದಕ್ಕೆ ಪರಿಹಾರಗಳನ್ನು ಕಂಡುಕೊಳ್ಳಲಾಗುವುದು. ಒಪ್ಪಂದದಂತೆ ಸರ್ಕಾರಕ್ಕೆ ಈ ಪರಿಹಾರ ಸೂತ್ರಗಳ ನೀಡುವ ಮೂಲಕ ಕಾರ್ಪೊರೇಟ್‌ ಕಂಪನಿಗಳು ಸರ್ಕಾರಕ್ಕೆ ನೆರವಾಗುವುದು, ಯೋಜನೆಯ ಉದ್ದೇಶ.

 

ಅಮೆರಿಕದ ಮೈಕ್ರೋಸಾಫ್ಟ್‌, ಅಮೆಜಾನ್‌ ದೈತ್ಯ ಕಂಪನಿಗಳ ಜೊತೆಗೆ ಭಾರತದ ಮುಕೇಶ್‌ ಅಂಬಾನಿ ಒಡೆತನದ ಜಿಯೋ ಪ್ಲಾಟ್‌ಫಾರ್ಮ್ ಲಿಮಿಟೆಡ್‌, ತಂಬಾಕು ಉತ್ಪನ್ನಗಳಿಗೆ ಹೆಸರಾದ ಐಟಿಸಿ ಲಿಮಿಟೆಡ್ ಸಂಸ್ಥೆಗಳು ಈ ಯೋಜನೆಯಲ್ಲಿ ಪ್ರಮುಖ ಪಾಲುದಾರರು. 130 ಕೋಟಿ ಜನರಿರುವ ಈ ದೇಶದಲ್ಲಿ, 5ನೇ ಒಂದು ಭಾಗದಷ್ಟು ಆರ್ಥಿಕ ಕೊಡುಗೆ ನೀಡುವ ಕೃಷಿ ಕ್ಷೇತ್ರವನ್ನು ತಂತ್ರಜ್ಞಾನ ಕ್ರಾಂತಿಯ ಮೂಲಕ ಇನ್ನಷ್ಟು ಸಮೃದ್ಧಗೊಳಿಸಬಹುದು, ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳುವುದು ತಗ್ಗಿಸಬಹುದು, ಗ್ರಾಮೀಣ ಆರ್ಥಿಕತೆ ಉತ್ತಮಗೊಳಿಸಬಹುದು. ಎಂದೆಲ್ಲಾ ಕೇಂದ್ರ ಸರ್ಕಾರ ಈ ಯೋಜನೆಯ ಬಗ್ಗೆ ಕೊಂಡಾಡಿತ್ತು.

ಟೆಕ್‌ ಕಂಪನಿಗಳು ಹೇಳಿರುವುದು ನಿಜವೇ ಆದರೆ 2025ರ ಹೊತ್ತಿಗೆ 24 ಬಿಲಿಯನ್‌ ಡಾಲರ್‌ ಅಂದರೆ 1.77 ಲಕ್ಷ ಕೋಟಿ ರೂ.ಗಳಷ್ಟು ಆದಾಯ ತರಬಹುದಾದ ಉದ್ಯಮವಾಗಬಹುದು ಎಂದು ಅರ್ನ್ಸ್ಟ್‌ ಮತ್ತು ಯಂಗ್‌ ಸಂಸ್ಥೆ ಅಂದಾಜು ಮಾಡಿದೆ. ಪ್ರತಿ ವರ್ಷದ 1 ಟ್ರಿಲಿಯನ್‌ ಡಾಲರ್‌ಗಳಷ್ಟು ಚಿಲ್ಲರೆ ವಹಿವಾಟು ಇರುವ ಭಾರತದಲ್ಲಿ ದವಸ ಧಾನ್ಯಗಳ ಮಾರುಕಟ್ಟೆ ಅತಿ ದೊಡ್ಡ ಜಾಲವಾಗಬಹುದು ಎಂದು ಮನಗಂಡ ಎಲ್ಲ ಕಾರ್ಪೋರೇಟ್‌ ಕಂಪನಿಗಳು ಮೋದಿ ಸರ್ಕಾರ ಸೃಷ್ಟಿಸಿದ ಅವಕಾಶವನ್ನು ಬಾಚಿಕೊಂಡಿದ್ದಾರೆ.

ಕಳೆದ ಏಳು ವರ್ಷಗಳಿಂದ ಹಂತ ಹಂತವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯುತ್ತಿರುವ ಯೋಜನೆಯ ಭಾಗವಾಗಿಯೇ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಹಾಗಾಗಿಯೇ ಕಾಯ್ದೆಯಲ್ಲಿ ಮುಕ್ತ ಮಾರುಕಟ್ಟೆ, ಕಾಂಟ್ರ್ಯಾಕ್ಟ್‌ ಫಾರ್ಮಿಂಗ್‌ಗೆ, ಆನ್‌ಲೈನ್‌ ಮಾರುಕಟ್ಟೆಗೆ ಹೆಚ್ಚು ಒತ್ತು ನೀಡಲಾಗಿದೆ. ಖಾಸಗಿಯವರ ಪಾಲ್ಗೊಳ್ಳುವಿಕೆಗೆ ಮುಕ್ತ ಅವಕಾಶ ನೀಡಿರುವ ಈ ಕಾಯ್ದೆಗಳು ಯಾವುದೇ ರೀತಿಯಲ್ಲಿ ರೈತನಿಗೆ ಭದ್ರತೆಯನ್ನು ಒದಗಿಸುವ ಸಾಧ್ಯತೆಯನ್ನೇ ತೋರಿಲ್ಲ. ಬದಲಿಗೆ ಸಬ್ಸಿಡಿ ಕಡಿಮೆ ಮಾಡಲಾಗಿದೆ, ಗೊಬ್ಬರ ದರ ಹೆಚ್ಚಿಸಲಾಗಿದೆ, ಎಂಎಸ್‌ಪಿ ವಿಷಯದಲ್ಲಿ ಕಳ್ಳಾಟವಾಡುತ್ತಿರುವುದನ್ನು ನೋಡುತ್ತಿದ್ದೇವೆ. ಕೃಷಿ ಮತ್ತು ಕೃಷಿಕನ್ನು ಉದ್ಧಾರ ಮಾಡುವುದೇ ಉದ್ದೇಶವಾದರೆ, ಕೊಟ್ಟು ಕಸಿಯುವ ವಂಚಕ ನಡೆಯನ್ನು ಸರ್ಕಾರ ಯಾಕೆ ಅನುಸರಿಸುತ್ತದೆ!

ಕೃಷಿ
ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತ ಹೋರಾಟ

ನಿಮಗೆ ಗೊತ್ತಿರಲಿ, 12 ಕೋಟಿ ಸಣ್ಣ-ಮಧ್ಯಮ ಗಾತ್ರದ ಭೂಹಿಡುವಳಿದಾರರ ಪೈಕಿ ಈಗಾಗಲೇ ಈ ಖಾಸಗಿ ಕಂಪನಿಗಳು 5 ಕೋಟಿ ರೈತ ಮಾಹಿತಿಯನ್ನು ಸರ್ಕಾರದ ಮೂಲಕ ಸಂಗ್ರಹಿಸಿವೆ ಎನ್ನಲಾಗುತ್ತಿದೆ. ವಿದೇಶಿ ಕಾರ್ಪೋರೇಟ್‌ ದೈತ್ಯರ ಜೊತೆಗೆ ಭಾರತದ ಅಗ್ರಿಬಜಾರ್ ಟೆಕ್ನಾಲಜಿ, ಇಎಸ್‌ಆರ್‌ಐ ಇಂಡಿಯಾ ಟೆಕ್ನಾಲಜೀಸ್‌, ಬಾಬಾ ರಾಮ್‌ದೇವ್‌ ಅವರ ಪತಂಜಲಿ ಆರ್ಗ್ಯಾನಿಕ್‌ ರೀಸರ್ಚ್‌ ಇನ್‌ಸ್ಟಿಟ್ಯೂಟ್‌ ಮತ್ತು ನಿಂಜಾಕಾರ್ಟ್‌ ಕೂಡ ಈ ಯೋಜನೆಯಲ್ಲಿ ಭಾಗಿಯಾಗಿರುವ ಸಂಸ್ಥೆಗಳು. ಸರ್ಕಾರ ಖಾಸಗಿ ಪಾಲುದಾರಿಕೆಯೊಂದಿಗೆ ದೊಡ್ಡ ಕ್ರಾಂತಿ ಮಾಡುವ ಭ್ರಮೆಯನ್ನಂತು ಬಿತ್ತಿದೆ. ಆದರೆ ಯಶಸ್ಸು ಎಷ್ಟರ ಮಟ್ಟಿಗೆ ಸಾಧ್ಯ? ಈ ಪ್ರಶ್ನೆಯನ್ನೇ ಕೇಳಬಾರದೇನೊ ಎನ್ನಿಸುವಂತೆ ಸರ್ಕಾರ ಕಾರ್ಪೋರೇಟ್‌ ಕಂಪನಿಗಳ ಪರವಾಗಿ ನಿಂತಿದೆ ಎಂಬುದನ್ನು ನೋಡುತ್ತಲೇ ಇದ್ದೇವೆ.

ಈಗ ರೈತನ ಖಾಸಗಿ ಮಾಹಿತಿಯನ್ನು ಸಂಗ್ರಹಿಸುವ, ವಾಣಿಜ್ಯ ಉದ್ದೇಶಗಳಿಗೆ ಬಳಸುವುದಕ್ಕೆ ಅವಕಾಶ ಮಾಡಿಕೊಡುವ ಅಗ್ರಿಸ್ಟ್ಯಾಕ್‌ ಮೂಲಕ ಸರ್ಕಾರ ಕೃಷಿ ಕ್ಷೇತ್ರ ಮತ್ತು ರೈತನನ್ನು ಬಲಿಕೊಡುತ್ತಿದೆ ಎಂಬ ಟೀಕೆ ತೀವ್ರವಾಗುತ್ತಿದೆ. ಕೃಷಿ ಕಾಯ್ದೆಗಳನ್ನು ವಿರೋಧಿಸುತ್ತಿರುವ ಹೊತ್ತಲ್ಲಿ, ರೈತರ ಬಗ್ಗೆ ಯಾವ ರೀತಿಯ ಕಾಳಜಿಯನ್ನು ವ್ಯಕ್ತಪಡಿಸಿದ ಸರ್ಕಾರ, ಖಾಸಗಿ ಕಂಪನಿಗಳ ಜೊತೆಗೆ ಹೊಸ ಯೋಜನೆಯ ಜಾರಿಗೆ ತರಾತುರಿಯಿಂದ ಸಜ್ಜಾಗುತ್ತಿರುವುದನ್ನು ನೋಡಿದರೆ, ಇದು ಹಲವು ದಿನಗಳ ವ್ಯವಸ್ಥಿತ ಯೋಜನೆಯಾಗಿತ್ತು ಎಂದೇ ಅನ್ನಿಸುತ್ತದೆ.

ನೋಡಿ, ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಖಾಸಗಿ ಮಾಹಿತಿ ರಕ್ಷಣಾ ಮಸೂದೆ ಅಂಗೀಕಾರವಾಗಿಲ್ಲ. ಎಲ್ಲ ರೀತಿಯ ಡಿಜಿಟಲ್‌ ಮಾಹಿತಿಯನ್ನು ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿರುವ ಸರ್ಕಾರ ಈ ಕಾಯ್ದೆ ಜಾರಿಗೆ ಬಂದರೆ ತಮ್ಮ ಕೈ ಕಟ್ಟಿಹಾಕುತ್ತದೆ ಎಂದು ಸ್ಪಷ್ಟವಾಗಿ ತಿಳಿದಿದೆ. ಕೃಷಿ ವಿಷಯದಲ್ಲೂ ರೈತನ ಮಾಹಿತಿಯೇ ಅತಿ ದೊಡ್ಡ ಸಂಪತ್ತಾಗಿರುವುದರಿಂದ ಈ ಕಾಯ್ದೆಯನ್ನು ಇನ್ನು ನನೆಗುದಿಗೆ ಬಿದ್ದಿರುವಂತೆ ನೋಡಿಕೊಂಡಿದೆ. ಅಗ್ರಿಸ್ಟ್ಯಾಕ್‌ ಮೂಲಕ ರೈತರ ಅತ್ಯಂತ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಲಾಗುತ್ತದೆ. ಅಂದರೆ ರೈತನ ಹೆಸರು, ವಿಳಾಸ ಇತ್ಯಾದಿಗಳ ಜೊತೆಗೆ ಎಷ್ಟು ಭೂಮಿಯಿದೆ, ಎಷ್ಟು ಸಾಲವಿದೆ, ಹಣಕಾಸಿನ ಸ್ಥಿತಿ ಇತ್ಯಾದಿ ವಿವರಗಳನ್ನು ಸಂಗ್ರಹಿಸುತ್ತದೆ. ಈ ಮಾಹಿತಿಯನ್ನು ರೈತನಿಗೆ ಸಾಲ ಕೊಡುವ ಬ್ಯಾಂಕ್‌ಗಳಿಗೆ ನೀಡಲಾಗುತ್ತದೆ. ಅಂದ ಮೇಲೆ ಖಾಸಗಿತನ ಇಲ್ಲಿ ಗಾಳಿಗೆ ತೂರಿದಂತಾಯಿತಲ್ಲವೆ. ಖಾಸಗಿ ಮಾಹಿತಿ ರಕ್ಷಣೆಯ ಕಾನೂನು ಇದ್ದಿದ್ದರೆ ಸರ್ಕಾರ ಇಂತಹ ನಡೆಗಳಿಗೆ ಅವಕಾಶವಿರುತ್ತಿರಲಿಲ್ಲ.

ಒಂದೆಡೆ ಖಾಸಗಿತನದ ಪ್ರಶ್ನೆ ಕಾಡುತ್ತಿರುವಾಗಲೇ ದೇಶದಲ್ಲಿರುವ 14 ಕೋಟಿಗೂ ಅಧಿಕ ಸಂಖ್ಯೆಯಲ್ಲಿರುವ ಭೂಹೀನ ರೈತರು ಈ ಯೋಜನೆಯಿಂದ ಹೊರಗೆ ಉಳಿಯುವ ಆತಂಕವೂ ಕಾಡುತ್ತಿದೆ. ಸರ್ಕಾರದ ಯಾವುದೇ ಯೋಜನೆ ಎಲ್ಲರನ್ನೂ ಒಳಗೊಳ್ಳುವ ಮೂಲ ಆಶಯದೊಂದಿಗೆ ಸಿದ್ಧವಾಗಬೇಕು ಮತ್ತು ಜಾರಿಯಾಗಬೇಕು. ದೊಡ್ಡ ಸಂಖ್ಯೆಯ ಜನ ಹೀಗೆ ಹೊರಗುಳಿಯುವಂತೆ ಮಾಡುವುದೇ ಜನವಿರೋಧಿಯಾದ ನಡೆಯಾಗುತ್ತದೆ. ಉಳ್ಳವರ ಹಿತಾಸಕ್ತಿ ಕಾಯುವ ಯೋಜನೆಗಳಿಗೆ ಮಾತ್ರ ಇಂತಹ ಕುರುಡುತನ ಇರುತ್ತದೆ. ಈ ದುರುದ್ದೇಶದ ಕುರುಡುತನವನ್ನು ಪ್ರಶ್ನಿಸಿಯೇ ರೈತರು ದೆಹಲಿ ಗಡಿಯಲ್ಲಿ ಕೂತು ಧಿಕ್ಕರಿಸುತ್ತಿದ್ದಾರೆ. ಈ ಸರ್ಕಾರ ಆ ಕೂಗಿಗೆ ಕಿವುಡಾಗಿ ಕೂತಿದೆ.

ದೇಶವ್ಯಾಪಿ ಹೋರಾಟ, ಟೀಕೆಗಳ ನಡುವೆಯೂ ಕಳೆದ ಏಪ್ರಿಲ್‌ ತಿಂಗಳಲ್ಲಿ ಮೈಕ್ರೋಸಾಫ್ಟ್‌ ಸಂಸ್ಥೆಯೊಂದಿಗೆ ತಿಳಿವಳಿಕೆ ಪತ್ರಿಕಕ್ಕೆ ಸಹಿ ಹಾಕಿದ್ದು ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ 6ರಾಜ್ಯಗಳ100 ಹಳ್ಳಿಗಳಲ್ಲಿ ಪ್ರಾಯೋಗಿಕ ಯೋಜನೆ ಜಾರಿಯಾಗಿದೆ. ಇತ್ತ ಈ ಯೋಜನೆಗೆ ಕಾನೂನು ಶಾಸನದ ಚೌಕಟ್ಟು ತರಲು ‘ಇಂಡಿಯಾ ಡಿಜಿಟಲ್‌ ಎಕೊಸಿಸ್ಟಮ್‌ ಆಫ್‌ ಅಗ್ರಿಕಲ್ಚರ್‌’ ಎಂಬ ಕಾರ್ಯವಿಧಾನವೊಂದನ್ನು ಅಂತಿಮಗೊಳಿಸುವುದಕ್ಕೆ ಸಿದ್ಧವಾಗಿದೆ. ಆದರೆ ರೈತರು, ಸಂಘಟನೆಗಳು, ಕೃಷಿತಜ್ಞರೊಂದಿಗೆ ಸೂಕ್ತ ಸಮಾಲೋಚನೆ ನಡೆಸಿದೆ, ಅಭಿಪ್ರಾಯ ಸಂಗ್ರಹಿಸದೆ ನಡೆಯುತ್ತಿರುವ ಈ ಯೋಜನಾ ತಯಾರಿಗಳ ಬಗ್ಗೆ ಟೀಕೆ ಕೇಳಿ ಬಂದಿವೆ. 55 ಸಂಘಟನೆಗಳು, ರೈತರ ಮೂಲಭೂತ ಹಕ್ಕು, ಖಾಸಗಿತನಕ್ಕೆ ಈ ಯೋಜನೆ ಧಕ್ಕೆ ಉಂಟು ಮಾಡಲಿದೆ, ಕೃಷಿ ಕ್ಷೇತ್ರಕ್ಕೆ ಅಪಾಯ ತಂದೊಡ್ಡಲಿವೆ ಎಂದು ಪತ್ರವನ್ನು ಬರೆದಿವೆ.

ಇಷ್ಟಾಗಿಯೂ ಕೇಂದ್ರ ಸರ್ಕಾರ ತನ್ನ ರೈತ ಕಾಳಜಿ, ಕೃಷಿ ಪರ ನಿಲುವು ರೈತರ ನೆಲೆಯಲ್ಲಿಅಲ್ಲ, ಕಾರ್ಪೊರೇಟ್‌ ಕಂಪನಿಗಳ ನೆಲೆಯಲ್ಲಿ ಎಂಬುದನ್ನು ಸ್ಪಷ್ಟಪಡಿಸುವಂತೆ ನಡೆದುಕೊಳ್ಳುತ್ತಲೇ ಇದೆ. ನಿಜವಾದ ರೈತ ಕಾಳಜಿ ಇದ್ದಿದ್ದರೆ, ರೈತರನ್ನುಚಳಿ,ಮಳೆಗೆ ಬೀದಿಯಲ್ಲಿ ಕಾಲ ಕಳೆಯುವಂತೆ ಮಾಡಿ, ಕೃಷಿ ಅಭಿವೃದ್ಧಿ ಮಾಡುತ್ತೇವೆ ಎಂಬ ಸೋಗಿನಲ್ಲಿ ಕಾರ್ಪೋರೇಟ್‌ ಕಂಪನಿಗಳ ಜೊತೆಗೆ ಕೈ ಜೋಡಿಸುತ್ತಿರಲಿಲ್ಲ.

  • ಕುಮಾರ್ ಎಸ್

ಕೃಪೆ: ಅನ್ನದಋಣ.ಕಾಂ


ಇದನ್ನೂ ಓದಿ: ಕೃಷಿ ಕಾಯ್ದೆಗಳ ಜಾರಿಗೆ ಒಂದು ವರ್ಷ; ನಿಲ್ಲದ ಪ್ರತಿಭಟನೆ; ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಚುನಾವಣೆಗಳ ಮೇಲೆ ಪ್ರಭಾವ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...