Homeಅಂತರಾಷ್ಟ್ರೀಯಟಿಕ್‌ಟಾಕ್‌ ಖರೀದಿಗೆ ಟ್ರಂಪ್‌ ಜೊತೆ ಮೈಕ್ರೋಸಾಫ್ಟ್‌‌ ಮಾತುಕತೆ: ಸತ್ಯ ನಾದೆಲ್ಲಾ

ಟಿಕ್‌ಟಾಕ್‌ ಖರೀದಿಗೆ ಟ್ರಂಪ್‌ ಜೊತೆ ಮೈಕ್ರೋಸಾಫ್ಟ್‌‌ ಮಾತುಕತೆ: ಸತ್ಯ ನಾದೆಲ್ಲಾ

ಮೈಕ್ರೋಸಾಫ್ಟ್ ಹೇಳಿಕೆಯು ಟ್ರಂಪ್ ಒಪ್ಪಂದವನ್ನು ಅಂಗೀಕರಿಸುತ್ತಾರೆಯೆ ಅಥವಾ ಟಿಕ್‌ಟಾಕ್ ನಿಷೇಧವನ್ನು ತ್ಯಜಿಸುತ್ತಾರೆಯೆ ಎಂದು ಸ್ಪಷ್ಟವಾಗಿ ಹೇಳಲಿಲ್ಲ, ಆದರೂ ಮೈಕ್ರೋಸಾಫ್ಟ್ ಟ್ರಂಪ್ ಅವರೊಂದಿಗೆ ಚರ್ಚೆಯಲ್ಲಿದೆ ಎಂದು ಹೇಳಿದೆ.

- Advertisement -
- Advertisement -

ಅಮೆರಿಕಾದಲ್ಲಿ ಕಾರ್ಯನಿರ್ವಹಿಸುವ ಟಿಕ್‌ಟಾಕ್‌ ಅಪ್ಲಿಕೇಶನ್ ಅನ್ನು ಖರೀದಿಸಲು ಆಡಳಿತದ ಬೆಂಬಲವನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದರ ಕುರಿತು ಮೈಕ್ರೋಸಾಫ್ಟ್ ಕಾರ್ಪ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾದೆಲ್ಲಾ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು ಎನ್ನಲಾಗಿದೆ.

ಮೈಕ್ರೋಸಾಫ್ಟ್ ಅಮೆರಿಕಾ ಸೇರಿದಂತೆ ಕೆನಡಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗಳಲ್ಲಿ ಟಿಕ್‌ಟಾಕ್‌ ಅನ್ನು  ಖರೀದಿಸುವ ಮಾತುಕತೆ ದೃಡಪಡಿಸಿದೆ ಮತ್ತು ಸೆಪ್ಟೆಂಬರ್ 15 ರ ನಂತರ ಒಪ್ಪಂದವನ್ನು ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಹೆಚ್ಚುತ್ತಿರುವ ಅಮೆರಿಕಾ-ಚೀನಾ ಉದ್ವಿಗ್ನತೆಗಳಲ್ಲಿ ಟಿಕ್‌ಟಾಕ್ ಕೂಡಾ ಕೇಂದ್ರ ಬಿಂದುವಾಗಿದೆ. ಅಮೆರಿಕನ್ ಬಳಕೆದಾರರ ಡೇಟಾವನ್ನು ಬೀಜಿಂಗ್‌ಗೆ ಹಸ್ತಾಂತರಿಸಲು, 165 ಮಿಲಿಯನ್ ಅಮೆರಿಕನ್ನರ ಮೇಲೆ ಪ್ರಭಾವ ಬೀರಲು ಟಿಕ್ ಟಾಕ್‌ ಅಪ್ಲಿಕೇಶನ್ ಅನ್ನು ಬಳಸಬಹುದೆಂದು ಅಮರಿಕಾ ರಾಜಕಾರಣಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಜಾಗತಿಕವಾಗಿ 2 ಶತಕೋಟಿಗಿಂತ ಹೆಚ್ಚು ಬಳಕೆದಾರರು ಆಪ್‌ ಅನ್ನು ಡೌನ್‌ಲೋಡ್ ಮಾಡಿದ್ದಾರೆ. ಟ್ರಂಪ್ ವಿರೋಧಿ ಕಾರ್ಯಕರ್ತರು ಪ್ರಚಾರ ಚಟುವಟಿಕೆಗಳನ್ನು ನಡೆಸಲು ಈ ವೇದಿಕೆಯನ್ನು ಬಳಸಿದ ನಂತರ ಅಪ್ಲಿಕೇಶನ್ ಅಮೆರಿಕಾ ಅಧ್ಯಕ್ಷರ ಕೆಂಗಣ್ಣಿಗೆ ಗುರಿಯಾಗಿದೆ.

ಮೈಕ್ರೋಸಾಫ್ಟ್ ತನ್ನ ಬ್ಲಾಗ್ ಪೋಸ್ಟ್‌ನಲ್ಲಿ, ಟಿಕ್‌ಟಾಕ್ ಅಪ್ಲಿಕೇಶನ್‌ಗೆ ಹೆಚ್ಚಿನ ಸುರಕ್ಷತೆ, ಗೌಪ್ಯತೆ ಮತ್ತು ಡಿಜಿಟಲ್ ಸುರಕ್ಷತಾ ರಕ್ಷಣೆಗಳನ್ನು ಸೇರಿಸಲು ಮತ್ತು ಅಮೆರಿಕನ್ನರ ಎಲ್ಲಾ ಖಾಸಗಿ ಡೇಟಾವನ್ನು ಅಮೆರಿಕಾಗೆ ಹಿಂತಿರುಗಿಸಲು ಮತ್ತು ದೇಶದ ಹೊರಗಿನ ಸರ್ವರ್‌ಗಳಿಂದ ಅಳಿಸುವುದನ್ನು ಖಚಿತಪಡಿಸಿಕೊಳ್ಳಲು ಭರವಸೆ ನೀಡಿದೆ. ಕಂಪನಿಯ ಅಲ್ಪ ಪಾಲನ್ನು ತೆಗೆದುಕೊಳ್ಳಲು ಅಮೆರಿಕದ ಇತರ ಹೂಡಿಕೆದಾರರನ್ನು ಆಹ್ವಾನಿಸಬಹುದು ಎಂದು ಕಂಪನಿ ಹೇಳಿದೆ.

ಮೈಕ್ರೋಸಾಫ್ಟ್ ಹೇಳಿಕೆಯು ಟ್ರಂಪ್ ಒಪ್ಪಂದವನ್ನು ಅಂಗೀಕರಿಸುತ್ತಾರೆಯೆ ಅಥವಾ ಟಿಕ್‌ಟಾಕ್ ನಿಷೇಧವನ್ನು ತ್ಯಜಿಸುತ್ತಾರೆಯೆ ಎಂದು ಸ್ಪಷ್ಟವಾಗಿ ಹೇಳಲಿಲ್ಲ, ಆದರೂ ಮೈಕ್ರೋಸಾಫ್ಟ್ ಟ್ರಂಪ್ ಅವರೊಂದಿಗೆ ಚರ್ಚೆಯಲ್ಲಿದೆ ಎಂದು ಹೇಳಿದೆ.

ಅದಾಗ್ಯೂ ಬೈಟೆಡೆನ್ಸ್ ಜಾಗತಿಕ ಕಂಪನಿಯಾಗಲು ಬದ್ಧವಾಗಿದೆ ಮತ್ತು ಸ್ಥಳೀಯ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತದೆ ಎಂದು ಟಿಕ್‌ಟಾಕ್ ಮಾಲೀಕರು ಆನ್‌ಲೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಟಿಕ್‌ಟಾಕ್ ಅನ್ನು ಎರಡು ವರ್ಷಗಳ ಹಿಂದೆ ಅಮೆರಿಕದಲ್ಲಿ ಪ್ರಾರಂಭಿಸಲಾಯಿತು. ಟಿಕ್‌ಟಾಕ್ ಜನಪ್ರಿಯವಾಗುತ್ತಿದ್ದಂತೆ, ಅದರ ವಿರುದ್ಧ ಟೀಕೆಗಳು ಸಹ ಕೇಳಿಬಂದಿವೆ.


ಓದಿ: ಅಮೇರಿಕದಲ್ಲಿ ಟಿಕ್ ಟಾಕ್ ಬ್ಯಾನ್ ಮಾಡುತ್ತೇವೆ; ಡೋನಾಲ್ಡ್ ಟ್ರಂಪ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...