Homeಅಂತರಾಷ್ಟ್ರೀಯಟಿಕ್‌ಟಾಕ್‌ ಖರೀದಿಗೆ ಟ್ರಂಪ್‌ ಜೊತೆ ಮೈಕ್ರೋಸಾಫ್ಟ್‌‌ ಮಾತುಕತೆ: ಸತ್ಯ ನಾದೆಲ್ಲಾ

ಟಿಕ್‌ಟಾಕ್‌ ಖರೀದಿಗೆ ಟ್ರಂಪ್‌ ಜೊತೆ ಮೈಕ್ರೋಸಾಫ್ಟ್‌‌ ಮಾತುಕತೆ: ಸತ್ಯ ನಾದೆಲ್ಲಾ

ಮೈಕ್ರೋಸಾಫ್ಟ್ ಹೇಳಿಕೆಯು ಟ್ರಂಪ್ ಒಪ್ಪಂದವನ್ನು ಅಂಗೀಕರಿಸುತ್ತಾರೆಯೆ ಅಥವಾ ಟಿಕ್‌ಟಾಕ್ ನಿಷೇಧವನ್ನು ತ್ಯಜಿಸುತ್ತಾರೆಯೆ ಎಂದು ಸ್ಪಷ್ಟವಾಗಿ ಹೇಳಲಿಲ್ಲ, ಆದರೂ ಮೈಕ್ರೋಸಾಫ್ಟ್ ಟ್ರಂಪ್ ಅವರೊಂದಿಗೆ ಚರ್ಚೆಯಲ್ಲಿದೆ ಎಂದು ಹೇಳಿದೆ.

- Advertisement -
- Advertisement -

ಅಮೆರಿಕಾದಲ್ಲಿ ಕಾರ್ಯನಿರ್ವಹಿಸುವ ಟಿಕ್‌ಟಾಕ್‌ ಅಪ್ಲಿಕೇಶನ್ ಅನ್ನು ಖರೀದಿಸಲು ಆಡಳಿತದ ಬೆಂಬಲವನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದರ ಕುರಿತು ಮೈಕ್ರೋಸಾಫ್ಟ್ ಕಾರ್ಪ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾದೆಲ್ಲಾ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು ಎನ್ನಲಾಗಿದೆ.

ಮೈಕ್ರೋಸಾಫ್ಟ್ ಅಮೆರಿಕಾ ಸೇರಿದಂತೆ ಕೆನಡಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗಳಲ್ಲಿ ಟಿಕ್‌ಟಾಕ್‌ ಅನ್ನು  ಖರೀದಿಸುವ ಮಾತುಕತೆ ದೃಡಪಡಿಸಿದೆ ಮತ್ತು ಸೆಪ್ಟೆಂಬರ್ 15 ರ ನಂತರ ಒಪ್ಪಂದವನ್ನು ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಹೆಚ್ಚುತ್ತಿರುವ ಅಮೆರಿಕಾ-ಚೀನಾ ಉದ್ವಿಗ್ನತೆಗಳಲ್ಲಿ ಟಿಕ್‌ಟಾಕ್ ಕೂಡಾ ಕೇಂದ್ರ ಬಿಂದುವಾಗಿದೆ. ಅಮೆರಿಕನ್ ಬಳಕೆದಾರರ ಡೇಟಾವನ್ನು ಬೀಜಿಂಗ್‌ಗೆ ಹಸ್ತಾಂತರಿಸಲು, 165 ಮಿಲಿಯನ್ ಅಮೆರಿಕನ್ನರ ಮೇಲೆ ಪ್ರಭಾವ ಬೀರಲು ಟಿಕ್ ಟಾಕ್‌ ಅಪ್ಲಿಕೇಶನ್ ಅನ್ನು ಬಳಸಬಹುದೆಂದು ಅಮರಿಕಾ ರಾಜಕಾರಣಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಜಾಗತಿಕವಾಗಿ 2 ಶತಕೋಟಿಗಿಂತ ಹೆಚ್ಚು ಬಳಕೆದಾರರು ಆಪ್‌ ಅನ್ನು ಡೌನ್‌ಲೋಡ್ ಮಾಡಿದ್ದಾರೆ. ಟ್ರಂಪ್ ವಿರೋಧಿ ಕಾರ್ಯಕರ್ತರು ಪ್ರಚಾರ ಚಟುವಟಿಕೆಗಳನ್ನು ನಡೆಸಲು ಈ ವೇದಿಕೆಯನ್ನು ಬಳಸಿದ ನಂತರ ಅಪ್ಲಿಕೇಶನ್ ಅಮೆರಿಕಾ ಅಧ್ಯಕ್ಷರ ಕೆಂಗಣ್ಣಿಗೆ ಗುರಿಯಾಗಿದೆ.

ಮೈಕ್ರೋಸಾಫ್ಟ್ ತನ್ನ ಬ್ಲಾಗ್ ಪೋಸ್ಟ್‌ನಲ್ಲಿ, ಟಿಕ್‌ಟಾಕ್ ಅಪ್ಲಿಕೇಶನ್‌ಗೆ ಹೆಚ್ಚಿನ ಸುರಕ್ಷತೆ, ಗೌಪ್ಯತೆ ಮತ್ತು ಡಿಜಿಟಲ್ ಸುರಕ್ಷತಾ ರಕ್ಷಣೆಗಳನ್ನು ಸೇರಿಸಲು ಮತ್ತು ಅಮೆರಿಕನ್ನರ ಎಲ್ಲಾ ಖಾಸಗಿ ಡೇಟಾವನ್ನು ಅಮೆರಿಕಾಗೆ ಹಿಂತಿರುಗಿಸಲು ಮತ್ತು ದೇಶದ ಹೊರಗಿನ ಸರ್ವರ್‌ಗಳಿಂದ ಅಳಿಸುವುದನ್ನು ಖಚಿತಪಡಿಸಿಕೊಳ್ಳಲು ಭರವಸೆ ನೀಡಿದೆ. ಕಂಪನಿಯ ಅಲ್ಪ ಪಾಲನ್ನು ತೆಗೆದುಕೊಳ್ಳಲು ಅಮೆರಿಕದ ಇತರ ಹೂಡಿಕೆದಾರರನ್ನು ಆಹ್ವಾನಿಸಬಹುದು ಎಂದು ಕಂಪನಿ ಹೇಳಿದೆ.

ಮೈಕ್ರೋಸಾಫ್ಟ್ ಹೇಳಿಕೆಯು ಟ್ರಂಪ್ ಒಪ್ಪಂದವನ್ನು ಅಂಗೀಕರಿಸುತ್ತಾರೆಯೆ ಅಥವಾ ಟಿಕ್‌ಟಾಕ್ ನಿಷೇಧವನ್ನು ತ್ಯಜಿಸುತ್ತಾರೆಯೆ ಎಂದು ಸ್ಪಷ್ಟವಾಗಿ ಹೇಳಲಿಲ್ಲ, ಆದರೂ ಮೈಕ್ರೋಸಾಫ್ಟ್ ಟ್ರಂಪ್ ಅವರೊಂದಿಗೆ ಚರ್ಚೆಯಲ್ಲಿದೆ ಎಂದು ಹೇಳಿದೆ.

ಅದಾಗ್ಯೂ ಬೈಟೆಡೆನ್ಸ್ ಜಾಗತಿಕ ಕಂಪನಿಯಾಗಲು ಬದ್ಧವಾಗಿದೆ ಮತ್ತು ಸ್ಥಳೀಯ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತದೆ ಎಂದು ಟಿಕ್‌ಟಾಕ್ ಮಾಲೀಕರು ಆನ್‌ಲೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಟಿಕ್‌ಟಾಕ್ ಅನ್ನು ಎರಡು ವರ್ಷಗಳ ಹಿಂದೆ ಅಮೆರಿಕದಲ್ಲಿ ಪ್ರಾರಂಭಿಸಲಾಯಿತು. ಟಿಕ್‌ಟಾಕ್ ಜನಪ್ರಿಯವಾಗುತ್ತಿದ್ದಂತೆ, ಅದರ ವಿರುದ್ಧ ಟೀಕೆಗಳು ಸಹ ಕೇಳಿಬಂದಿವೆ.


ಓದಿ: ಅಮೇರಿಕದಲ್ಲಿ ಟಿಕ್ ಟಾಕ್ ಬ್ಯಾನ್ ಮಾಡುತ್ತೇವೆ; ಡೋನಾಲ್ಡ್ ಟ್ರಂಪ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...