Homeಅಂತರಾಷ್ಟ್ರೀಯಟಿಕ್‌ಟಾಕ್‌ ಖರೀದಿಗೆ ಟ್ರಂಪ್‌ ಜೊತೆ ಮೈಕ್ರೋಸಾಫ್ಟ್‌‌ ಮಾತುಕತೆ: ಸತ್ಯ ನಾದೆಲ್ಲಾ

ಟಿಕ್‌ಟಾಕ್‌ ಖರೀದಿಗೆ ಟ್ರಂಪ್‌ ಜೊತೆ ಮೈಕ್ರೋಸಾಫ್ಟ್‌‌ ಮಾತುಕತೆ: ಸತ್ಯ ನಾದೆಲ್ಲಾ

ಮೈಕ್ರೋಸಾಫ್ಟ್ ಹೇಳಿಕೆಯು ಟ್ರಂಪ್ ಒಪ್ಪಂದವನ್ನು ಅಂಗೀಕರಿಸುತ್ತಾರೆಯೆ ಅಥವಾ ಟಿಕ್‌ಟಾಕ್ ನಿಷೇಧವನ್ನು ತ್ಯಜಿಸುತ್ತಾರೆಯೆ ಎಂದು ಸ್ಪಷ್ಟವಾಗಿ ಹೇಳಲಿಲ್ಲ, ಆದರೂ ಮೈಕ್ರೋಸಾಫ್ಟ್ ಟ್ರಂಪ್ ಅವರೊಂದಿಗೆ ಚರ್ಚೆಯಲ್ಲಿದೆ ಎಂದು ಹೇಳಿದೆ.

- Advertisement -
- Advertisement -

ಅಮೆರಿಕಾದಲ್ಲಿ ಕಾರ್ಯನಿರ್ವಹಿಸುವ ಟಿಕ್‌ಟಾಕ್‌ ಅಪ್ಲಿಕೇಶನ್ ಅನ್ನು ಖರೀದಿಸಲು ಆಡಳಿತದ ಬೆಂಬಲವನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದರ ಕುರಿತು ಮೈಕ್ರೋಸಾಫ್ಟ್ ಕಾರ್ಪ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾದೆಲ್ಲಾ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು ಎನ್ನಲಾಗಿದೆ.

ಮೈಕ್ರೋಸಾಫ್ಟ್ ಅಮೆರಿಕಾ ಸೇರಿದಂತೆ ಕೆನಡಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗಳಲ್ಲಿ ಟಿಕ್‌ಟಾಕ್‌ ಅನ್ನು  ಖರೀದಿಸುವ ಮಾತುಕತೆ ದೃಡಪಡಿಸಿದೆ ಮತ್ತು ಸೆಪ್ಟೆಂಬರ್ 15 ರ ನಂತರ ಒಪ್ಪಂದವನ್ನು ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಹೆಚ್ಚುತ್ತಿರುವ ಅಮೆರಿಕಾ-ಚೀನಾ ಉದ್ವಿಗ್ನತೆಗಳಲ್ಲಿ ಟಿಕ್‌ಟಾಕ್ ಕೂಡಾ ಕೇಂದ್ರ ಬಿಂದುವಾಗಿದೆ. ಅಮೆರಿಕನ್ ಬಳಕೆದಾರರ ಡೇಟಾವನ್ನು ಬೀಜಿಂಗ್‌ಗೆ ಹಸ್ತಾಂತರಿಸಲು, 165 ಮಿಲಿಯನ್ ಅಮೆರಿಕನ್ನರ ಮೇಲೆ ಪ್ರಭಾವ ಬೀರಲು ಟಿಕ್ ಟಾಕ್‌ ಅಪ್ಲಿಕೇಶನ್ ಅನ್ನು ಬಳಸಬಹುದೆಂದು ಅಮರಿಕಾ ರಾಜಕಾರಣಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಜಾಗತಿಕವಾಗಿ 2 ಶತಕೋಟಿಗಿಂತ ಹೆಚ್ಚು ಬಳಕೆದಾರರು ಆಪ್‌ ಅನ್ನು ಡೌನ್‌ಲೋಡ್ ಮಾಡಿದ್ದಾರೆ. ಟ್ರಂಪ್ ವಿರೋಧಿ ಕಾರ್ಯಕರ್ತರು ಪ್ರಚಾರ ಚಟುವಟಿಕೆಗಳನ್ನು ನಡೆಸಲು ಈ ವೇದಿಕೆಯನ್ನು ಬಳಸಿದ ನಂತರ ಅಪ್ಲಿಕೇಶನ್ ಅಮೆರಿಕಾ ಅಧ್ಯಕ್ಷರ ಕೆಂಗಣ್ಣಿಗೆ ಗುರಿಯಾಗಿದೆ.

ಮೈಕ್ರೋಸಾಫ್ಟ್ ತನ್ನ ಬ್ಲಾಗ್ ಪೋಸ್ಟ್‌ನಲ್ಲಿ, ಟಿಕ್‌ಟಾಕ್ ಅಪ್ಲಿಕೇಶನ್‌ಗೆ ಹೆಚ್ಚಿನ ಸುರಕ್ಷತೆ, ಗೌಪ್ಯತೆ ಮತ್ತು ಡಿಜಿಟಲ್ ಸುರಕ್ಷತಾ ರಕ್ಷಣೆಗಳನ್ನು ಸೇರಿಸಲು ಮತ್ತು ಅಮೆರಿಕನ್ನರ ಎಲ್ಲಾ ಖಾಸಗಿ ಡೇಟಾವನ್ನು ಅಮೆರಿಕಾಗೆ ಹಿಂತಿರುಗಿಸಲು ಮತ್ತು ದೇಶದ ಹೊರಗಿನ ಸರ್ವರ್‌ಗಳಿಂದ ಅಳಿಸುವುದನ್ನು ಖಚಿತಪಡಿಸಿಕೊಳ್ಳಲು ಭರವಸೆ ನೀಡಿದೆ. ಕಂಪನಿಯ ಅಲ್ಪ ಪಾಲನ್ನು ತೆಗೆದುಕೊಳ್ಳಲು ಅಮೆರಿಕದ ಇತರ ಹೂಡಿಕೆದಾರರನ್ನು ಆಹ್ವಾನಿಸಬಹುದು ಎಂದು ಕಂಪನಿ ಹೇಳಿದೆ.

ಮೈಕ್ರೋಸಾಫ್ಟ್ ಹೇಳಿಕೆಯು ಟ್ರಂಪ್ ಒಪ್ಪಂದವನ್ನು ಅಂಗೀಕರಿಸುತ್ತಾರೆಯೆ ಅಥವಾ ಟಿಕ್‌ಟಾಕ್ ನಿಷೇಧವನ್ನು ತ್ಯಜಿಸುತ್ತಾರೆಯೆ ಎಂದು ಸ್ಪಷ್ಟವಾಗಿ ಹೇಳಲಿಲ್ಲ, ಆದರೂ ಮೈಕ್ರೋಸಾಫ್ಟ್ ಟ್ರಂಪ್ ಅವರೊಂದಿಗೆ ಚರ್ಚೆಯಲ್ಲಿದೆ ಎಂದು ಹೇಳಿದೆ.

ಅದಾಗ್ಯೂ ಬೈಟೆಡೆನ್ಸ್ ಜಾಗತಿಕ ಕಂಪನಿಯಾಗಲು ಬದ್ಧವಾಗಿದೆ ಮತ್ತು ಸ್ಥಳೀಯ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತದೆ ಎಂದು ಟಿಕ್‌ಟಾಕ್ ಮಾಲೀಕರು ಆನ್‌ಲೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಟಿಕ್‌ಟಾಕ್ ಅನ್ನು ಎರಡು ವರ್ಷಗಳ ಹಿಂದೆ ಅಮೆರಿಕದಲ್ಲಿ ಪ್ರಾರಂಭಿಸಲಾಯಿತು. ಟಿಕ್‌ಟಾಕ್ ಜನಪ್ರಿಯವಾಗುತ್ತಿದ್ದಂತೆ, ಅದರ ವಿರುದ್ಧ ಟೀಕೆಗಳು ಸಹ ಕೇಳಿಬಂದಿವೆ.


ಓದಿ: ಅಮೇರಿಕದಲ್ಲಿ ಟಿಕ್ ಟಾಕ್ ಬ್ಯಾನ್ ಮಾಡುತ್ತೇವೆ; ಡೋನಾಲ್ಡ್ ಟ್ರಂಪ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...