Homeಮುಖಪುಟಮಿಡ್‍ನೈಟ್ ಕೌಬಾಯ್ ಮತ್ತು ಮಿಡ್‍ನೈಟ್ ರನ್: ಮರೆಯಲಾಗದ ಎರಡು ಹಾಲಿವುಡ್ ಚಿತ್ರಗಳು

ಮಿಡ್‍ನೈಟ್ ಕೌಬಾಯ್ ಮತ್ತು ಮಿಡ್‍ನೈಟ್ ರನ್: ಮರೆಯಲಾಗದ ಎರಡು ಹಾಲಿವುಡ್ ಚಿತ್ರಗಳು

- Advertisement -
- Advertisement -

ನಮಗೆ ಯಾವಾಗಲೋ ನೋಡಿದ ಯಾವ್ಯಾವುದೋ ಚಿತ್ರಗಳು ತಲೆಯಲ್ಲಿ ಉಳಿದುಬಿಡುತ್ತವೆ. ಆ ಚಿತ್ರಗಳನ್ನು ನಾವೇಕೆ ಮರೆಯಲಿಲ್ಲ ಎನ್ನುವುದಕ್ಕೆ ಕಾರಣಗಳನ್ನು ಹುಡುಕುವುದು ಅಷ್ಟು ಸುಲಭವಲ್ಲ. ಅನೇಕ ಸಲ ಎಂದೋ ನೋಡಿದ, ಎಂದೋ ಓದಿದ ನಾವು ಇಷ್ಟಪಡದ ಕಥೆಗಳು, ಚಿತ್ರಗಳೂ ನೆನಪಿನಲ್ಲಿ ಉಳಿದುಕೊಳ್ಳುತ್ತವೆ. ಕರ್ನಾಟಕದ ಮೂಲೆಗಳಲ್ಲಿ, ಇಂಗ್ಲಿಷ್ ಗೊತ್ತಿಲ್ಲದೇ ಬೆಳೆದ ನಮ್ಮಂತವರಿಗೆ ಹಾಲಿವುಡ್ ಎನ್ನುವುದು ಗೊತ್ತಾಗಿದ್ದು ಕಾಲೇಜಿಗೆ ತಲುಪಿದ ಮೇಲೆಯೇ. ಸಿಕ್ಕಸಿಕ್ಕ ಸಿನೆಮಾಗಳನ್ನು ನೋಡುತ್ತಿದ್ದ ನಮಗೆ ಯಾವ ಚಿತ್ರ ಯಾವ ಕಾರಣಕ್ಕೆ ಇಷ್ಟವಾಗುತ್ತಿದೆ ಎನ್ನುವುದು ತಿಳಿಯುತ್ತಿರಲಿಲ್ಲ (ತಿಳಿಯಬೇಕು ಎನ್ನುವ ಯಾವ ನಿಯಮವೂ ಇಲ್ಲ). ಈ ಎರಡು ಚಿತ್ರಗಳು ನೋಡಿ ಎರಡು ದಶಕಗಳಾಗುತ್ತಿದ್ದರೂ ಸ್ಮೃತಿಪಟಲದಿಂದ ಒಂದಿಷ್ಟೂ ಮಾಸಿಲ್ಲ. ಈ ಎರಡು ಚಿತ್ರಗಳೂ ಹಾಲಿವುಡ್ ಅನ್ನು ಪ್ರತಿನಿಧಿಸುತ್ತವೆ ಎನ್ನುವುದನ್ನು ಬಿಟ್ಟರೆ ಬೇರಾವ ಸಾಮ್ಯತೆಗಳೂ ಇಲ್ಲ.

ಟೆಕ್ಸಾಸ್‍ನ ಹೋಟೆಲ್ ಒಂದರಲ್ಲಿ ಪಾತ್ರ ತೊಳೆಯುವ ಕೆಲಸಕ್ಕಿದ್ದ ಒಬ್ಬ ಯುವಕ ದೊಡ್ಡ ದೊಡ್ಡ ಕನಸುಗಳನ್ನಿಟ್ಟುಕೊಂಡು ನ್ಯೂಯಾರ್ಕ್‍ಗೆ ಬಂದಿಳಿಯುತ್ತಾನೆ. ಬಿಗ್ ಆ್ಯಪಲ್ ಎಂದು ಕರೆಯಲ್ಪಡುವ ದೊಡ್ಡ ನಗರ ನ್ಯೂ ಯಾರ್ಕ್‍ನಲ್ಲಿರುವ ಮಹಿಳೆಯರಿಗೆ ಸೆಕ್ಸ್ ಮಾಡಲು ಪುರುಷರೇ ಸಿಗುವುದಿಲ್ಲವೆಂದು, ತಾನೊಬ್ಬ ಒಳ್ಳೆಯ ಪ್ರೇಮಿಯಾಗಿದ್ದರಿಂದ ಒಬ್ಬ ಯಶಸ್ವೀ ಪುರುಷ ವೇಶ್ಯೆ ಆಗಬಹುದು ಎನ್ನುವ ಬಲವಾದ ನಂಬಿಕೆ ಜೋ ಬಕ್‍ನದು (ಜಾನ್ ವಾಯಿಟ್). ಟೆಕ್ಸಾಸ್‍ನಿಂದ ನ್ಯೂಯಾರ್ಕ್‍ವರೆಗಿನ ಪಯಣದಲ್ಲಿ ಕಾಣಿಸುವ ಎಲ್ಲಾ ಬಿಲ್‍ಬೋರ್ಡ್‍ಗಳು, ರೇಡಿಯೋದಲ್ಲಿ ಬರುವ ಜಾಹೀರಾತುಗಳೆಲ್ಲವೂ ಅವನ ನಂಬಿಕೆಯನ್ನು ಬಲಪಡಿಸುತ್ತಲೇ ಇರುತ್ತವೆ. ಜೇಬಿನಲ್ಲಿ ಒಂದಿಷ್ಟು ಕಾಸನ್ನು ಇಟ್ಟುಕೊಂಡು ಬಂದಿಳಿದು, ಒಂದು ಹೋಟೆಲ್‍ನಲ್ಲಿ ಉಳಿದುಕೊಳ್ಳುತ್ತಾನೆ. ತಾನೊಬ್ಬ ಗಟ್ಟಿಗ, ಪ್ರೇಮಿ ಎಂದು ತೋರಿಸಿಕೊಳ್ಳಲು ಕೌಬಾಯ್‍ಗಳು ಹಾಕಿಕೊಳ್ಳುವ ಒಂದು ಜಾಕೆಟ್ ಮತ್ತು ಹ್ಯಾಟ್‍ಅನ್ನು ಸದಾಕಾಲ ಹಾಕಿಕೊಂಡಿರುತ್ತಾನೆ.

ಈ ಹೊಸ ಅಪರಿಚಿತ ನಗರದಲ್ಲಿ ಗಮ್ ಅಗಿಯುತ್ತ, ರಸ್ತೆಗಳಲ್ಲಿ ಅಲೆಯುತ್ತ ಕಂಡಕಂಡ ಮಹಿಳೆಯರಿಗೆ ಮಾತನಾಡಿಸಲು ಪ್ರಯತ್ನಿಸುತ್ತಾನೆ. ಕನಸುಗಳು ಎಷ್ಟೇ ಪ್ರಬಲವಾಗಿದ್ದರೂ ಶಹರದ ವಾಸ್ತವ, ತನ್ನ ಕೆಲಸದಲ್ಲಿ ಮರೀಚಿಕೆಯಾದ ಯಶಸ್ಸು, ಬರಿದಾಗುತ್ತಿರುವ ಜೇಬು ಇವನನ್ನು ವಾಸ್ತವಕ್ಕೆ ಎಳೆಯುವ ಪ್ರಯತ್ನ ಮಾಡುತ್ತವೆ. ಆದರೆ ನಮ್ಮ ಹೀರೋನ ಭ್ರಮೆ ಅಷ್ಟು ಸುಲಭಕ್ಕೆ ಕರಗುವಷ್ಟು ಪೊಳ್ಳಾಗಿಲ್ಲ. ಆಗ ಅವನಿಗೆ ಸಿಗುವನು ರಿಕೊ/ರ್ಯಾಟ್ಸೋ (ಡಸ್ಟಿನ್ ಹಾಫ್‍ಮನ್). ರಿಕೋ ಸದಾ ಕೆಮ್ಮುತ್ತಿರುವ, ಕುಂಟುನಡೆಯುವ ಸಣ್ಣಪುಟ್ಟ ಕಳ್ಳತನ, ಜನರಿಗೆ ಟೋಪಿ ಹಾಕುವ ಕೆಲಸ ಮಾಡುವ ವ್ಯಕ್ತಿ. ಜೋ ಬಕ್‍ನನ್ನು ನೋಡಿದಕೂಡಲೇ, ಅವನ ಸ್ನೇಹ ಸಂಪಾದಿಸಿ, ಅವನು ಹೀಗೆಲ್ಲ ರಸ್ತೆಯಲ್ಲಿ ಹುಡುಕಾಟ ಮಾಡಬಾರದೆಂದೂ, ಅವನಿಗೆ ಒಬ್ಬ ಮ್ಯಾನೇಜರ್‍ನ ಅವಶ್ಯಕತೆ ಇದೆಯೆಂದು ನಂಬಿಸಿ, ಒಂದಿಷ್ಟು ದುಡ್ಡು ಕಿತ್ತುಕೊಂಡು ಕಳುಹಿಸುತ್ತಾನೆ. ತಾನು ಮೋಸ ಹೋದೆನೆಂದು ತಿಳಿಯಲು ಜೋಗೆ ಹೆಚ್ಚು ಸಮಯ ಹಿಡಿಯುವದಿಲ್ಲ.

ಜೋ ದುಡ್ಡು ಕಟ್ಟಿಲ್ಲವೆಂದು ಹೋಟೆಲ್‍ನಿಂದ ಹೊರದಬ್ಬಲ್ಪಟ್ಟು, ತಿನ್ನಲೂ ಕಾಸಿಲ್ಲದೇ ಅಲೆಯುತ್ತಿರುವಾಗ ಮತ್ತೆ ಸಿಗುವನು ರ್ಯಾಟ್ಸೋ. ಆಗ ಶುರುವಾಗುವುದು ಅವರಿಬ್ಬರ ಸೋಲು, ಗೆಲುವು, ನೋವು, ಹತಾಶೆಗಳ ಪಯಣ.

ಈ ಚಿತ್ರ ಏಕೆ ಇಷ್ಟವಾಗುತ್ತೆ ಎಂದು ಅನೇಕ ಸಲ ಪ್ರಶ್ನೆ ಕೇಳಿದ್ದೇನೆ. ಅಲೆಕ್ಸಾಂಡರ್ ಪೇನ್ ಒಂದು ಮಾತು ಹೇಳುತ್ತಾರೆ, ‘ನಿರ್ದೇಶನವೆಂದರೆ 90% ಕಾಸ್ಟಿಂಗ್ ಹಾಗೂ ಬಾಕಿ 10% ಮಾತ್ರ ನಿರ್ದೇಶನ’. ಈ ಚಿತ್ರದಲ್ಲಿ ಕನಸುಗಣ್ಣುಗಳ ಮುಗ್ಧ ಜಾನ್ ವಾಯಿಟ್ ಏನೇ ಮಾಡಿದರೂ ನಮಗೆ ಇಷ್ಟವಾಗುತ್ತಾನೆ. ಚಿತ್ರದಲ್ಲಿ ಬರುವ ಫ್ಲ್ಯಾಷ್‍ಬ್ಯಾಕ್, ಕನಸುಗಳು, ಪಾರ್ಟಿಯ ದೃಶ್ಯಗಳು, ಹಿಂಸೆ, ಲೈಂಗಿಕತೆಯ ಬಗ್ಗೆ ಟೀಕೆಗಳು ಬಂದಿವೆ. ಅವುಗಳು ಇಲ್ಲದಿದ್ದರೂ ಈ ಚಿತ್ರ ನಮಗೆ ಇಷ್ಟವಾಗುತ್ತಿತ್ತೇನೋ.

ನಮಗೆ ಈ ಚಿತ್ರ ನೆನಪಿನಲ್ಲುಳಿಯುವುದು ಪಾತ್ರಗಳ ಮುಗ್ಧತೆಯಿಂದ. ದೊಡ್ಡ ನಗರದಲ್ಲಿ ಮಿಸ್‍ಫಿಟ್ ಆಗಿರುವ ಇವರು, ನಿಜಜೀವನದಲ್ಲಿ ನಮಗೆ ಕಂಡರೆ ಬಹುಶಃ ಹೇಸಿಗೆ ಪಟ್ಟು ಮುಂದೆ ಹೋಗುತ್ತೇವೆ ಆದರೆ ಇಲ್ಲಿ ಅವರನ್ನೇ ಇಷ್ಟಪಡುತ್ತೇವೆ. ಇವರ ಮೂರ್ಖತೆ ಮುರ್ಖತೆಯಾಗಿ ಕಾಣಿಸದೇ ಮುಗ್ಧತೆಯಾಗಿ ಕಾಣಿಸುತ್ತದೆ. ಇವರ ಸತ್ಯವನ್ನು ನಾಗರಿಕ ಸಮಾಜವೇಕೆ ಅರ್ಥಮಾಡಿಕೊಳ್ಳುವುದಿಲ್ಲ ಎಂದು ದೂರುತ್ತೇವೆ. ತನ್ನನ್ನು ತಾನು ಒಪ್ಪಿಕೊಳ್ಳುವ ಕಥೆಯನ್ನು ಹೇಳುವ, ತನ್ನ ತಪ್ಪುಗಳನ್ನು ಕ್ಷಮಿಸುವ ಕಥೆಯಾಗಿ ನೆನಪಿನಲ್ಲಿ ಉಳಿಯುತ್ತದೆ ಜಾನ್ ಶ್ಲೆಲಿಂಜರ್ ಅವರ ನಿರ್ದೇಶನದ ಈ ಚಿತ್ರ ಮಿಡ್‍ನೈಟ್ ಕೌಬಾಯ್.

ಜಾಕ್ (ರಾಬರ್ಟ್ ಡಿ ನೀರೊ) ಒಬ್ಬ ಮಾಜಿ ಪೊಲೀಸ್, ಈಗ ಒಬ್ಬ ಬೌಂಟಿ ಹಂಟರ್, ಜಾಮೀನಿನ ಮೇಲೆ ಹೊರಗೆ ಬಂದು ತಪ್ಪಿಸಿಕೊಳ್ಳುವ ವ್ಯಕ್ತಿಗಳನ್ನು ಬಂಧಿಸುವುದು ಇವನ ಕೆಲಸ. ಜಾನಾಥನ್ ಒಬ್ಬ ಅಕೌಂಟಂಟ್, ಜಾಮೀನಿನಲ್ಲಿ ಹೊರಬಂದು ತಪ್ಪಿಸಿಕೊಂಡಿದ್ದಾನೆ. ಈಗ ಅವನನ್ನು ಹಿಡಿದು ಒಪ್ಪಿಸಬೇಕಿದೆ. ಇದು ಮಾರ್ಟಿನ್ ಬ್ರೆಸ್ಟ್ ಅವರ ಮಿಡ್‍ನೈಟ್ ರನ್ ಚಿತ್ರ.

ಜಾನಾಥನ್ ಎಂಬ ಈ ಅಕೌಂಟಂಟ್ ಜಿಮಿ ಸೆರಾನೋ ಎನ್ನುವ ಮಾಫಿಯಾ ಡಾನ್‍ನ ದುಡ್ಡನ್ನೆ ಎಗರಿಸಿ ಚಾರಿಟಿಗೆ ಹಂಚಿದ್ದಾನೆ. ಹಾಗಾಗಿ ಆ ಡಾನ್ ಇವನನ್ನು ಹುಡುಕಿ ಮುಗಿಸಬೇಕಿದೆ. ಪೊಲೀಸರಿಗೂ ಇವನ ಹುಡುಕಾಟ, ಜಾನಾಥನ್‍ನ್ನು ಜಾಕ್ ತನ್ನ ವಶಕ್ಕೆ ತೆಗೆದುಕೊಂಡರೆ ಪೊಲೀಸರ ಕೆಲಸ ಕೆಡುತ್ತೆ ಹಾಗಾಗಿ ಜಾಕ್ ಮೇಲೆ ಕಣ್ಣಿಟ್ಟಿದ್ದಾರೆ. ಯಾರೇ ಬಂಧಿಸಿದರೂ ತನ್ನನ್ನು ಮುಗಿಸಿಬಿಡುವರು ಎಂದು ಜಾನಾಥನ್‍ಗೆ ತಿಳಿದಿದೆ ಹಾಗಾಗಿ ಅವನು ಈ ಮೂವರಿಂದಲೂ ಪಾರಾಗಬೇಕು. ಜಾಕ್‍ಗೆ ಜಾನಾಥನ್‍ನನ್ನು ಹುಡುಕುವುದು ಕಷ್ಟವಾಗಿಲ್ಲ, ಆದರೆ ಅವನನ್ನು ನ್ಯೂ ಯಾರ್ಕ್‍ನಿಂದ ಲಾಸ್ ಏಂಜೆಲ್ಸ್‍ಗೆ ತರಲೇಬೇಕಿದೆ, ಇಲ್ಲದಿದ್ದರೆ ಅವನಿಗೆ ದುಡ್ಡು ಸಿಗುವುದಿಲ್ಲ. ಈ ಪಯಣದಲ್ಲಿ ಅವರಿಬ್ಬರ ಸಂಬಂಧ. ಇಬ್ಬರೂ ಒಳ್ಳೆಯವರೆ ಆದರೆ ಸಂದರ್ಭ ಒಳ್ಳೆಯತನಕ್ಕೆ ಅನುವು ಮಾಡಿಕೊಡುವುದಿಲ್ಲ.

ಇದೊಂದು ಪಕ್ಕಾ ಹಾಲಿವುಡ್ ಫಾರ್ಮುಲಾ ಸಿನೆಮಾ. ಇವುಗಳನ್ನು ‘ಬಡಿ’ (buddy) ಫಿಲ್ಮ್‍ಗಳು ಎನ್ನಲಾಗುತ್ತದೆ. ಇಬ್ಬರು ವ್ಯವಸ್ಥೆ ಮತ್ತು ತಮ್ಮತಮ್ಮ ಪರಿಸ್ಥಿತಿಗಳ ವಿರುದ್ಧ ಹೋರಾಡುವ ಕಥೆ ಹಾಗೂ ಇದೊಂದು ಕಾಮೆಡಿ. ಎಲ್ಲಾ ಪಾತ್ರಗಳಿಗೂ ಒಂದು ಉದ್ದೇಶವಿದೆ, ಕಥೆ ಲೀನಿಯರ್ ಆಗಿ, ಗಂಭೀರಗೊಂಡಂತೆ ಹೆಚ್ಚೆಚ್ಚು ಕಾಮೆಡಿಯಾಗತೊಡಗುತ್ತದೆ. ಸಂಘರ್ಷವೆನ್ನುವುದು ಗಟ್ಟಿಗೊಳ್ಳುತ್ತ ಕ್ಲೈಮ್ಯಾಕ್ಸ್ ತಲುಪುತ್ತದೆ. ಸಾಹಸದೃಶ್ಯಗಳು, ಚೇಸ್‍ಗಳು, ಚಾಪರ್ ಶಾಟ್‍ಗಳನ್ನು ಒಳಗೊಂಡ ಈ ಚಿತ್ರವನ್ನು ಫಾರ್ಮುಲಾ ಚಿತ್ರವೆಂದು ಕರೆದಲ್ಲಿ, ಫಾರ್ಮುಲಾ ಚಿತ್ರದ ಶ್ರೇಷ್ಠ ನಿದರ್ಶನ ಎನ್ನಬಹುದು. ಈ ಚಿತ್ರದ ವಿಶೇಷತೆಯೂ ಇದರ ಕಾಸ್ಟಿಂಗ್. ಬೌಂಟಿ ಹಂಟರ್ ಆಗಿರುವ ರಾಬರ್ಟ್ ಡಿ ನೀರೋ ಯಾವಾಗಲೂ ಗಂಭೀರವಾಗಿಯೇ ಇದ್ದಾನೆ; ಚಾಲ್ರ್ಸ್ ಗೋರ್ಡಿನ್ ಒಬ್ಬ ವೈಟ್‍ಕಾಲರ್ ಕೆಲಸದ ಸಂಭಾವಿತ ವ್ಯಕ್ತಿಯಾಗಿ ಶಾಂತವಾಗೇ ಇರುತ್ತಾನೆ. ಇವರು ಯಾವ ಸಂದರ್ಭದಲ್ಲೂ ಕಾಮೆಡಿ ಮಾಡುವ ಪ್ರಯತ್ನ ಮಾಡುವುದಿಲ್ಲ. ಅವರ ಪರಿಸ್ಥಿತಿಗಳೆ, ಅವರ ಸಂಕಷ್ಟಗಳೇ ಕಾಮೆಡಿಯಾಗಿ ಪರಿಣಮಿಸುತ್ತವೆ.

ಫಾರ್ಮುಲಾ ಚಿತ್ರವಾಗಿದ್ದು, ಹಾಲಿವುಡ್‍ನ ಸ್ಟ್ರಕ್ಚರ್‍ಗೆ ಬದ್ಧವಾಗಿದ್ದು, ಸ್ಟಾರ್‍ಗಳನ್ನು ಹಾಕಿಕೊಂಡರೂ ಈ ಚಿತ್ರ ಮಾನವೀಯತೆಗೆ ಬದ್ಧವಾಗಿದೆ. ಕಾಮೆಡಿ, ಥ್ರಿಲರ್, ಬಡಿ, ಚೇಸ್ ಸಿನೆಮಾ ಎಂಬ ಹಣೆಪಟ್ಟಿಯ ಅಡಿಯಲ್ಲಿ ಬಂದರೂ, ಪಾತ್ರಗಳು ಮಾನವೀಯತೆಯನ್ನು ಎತ್ತಿಹಿಡಿಯುತ್ತವೆ, ಅವರ ಸಮಸ್ಯೆಗಳಿಗೆ ಮಿಡಿಯುವಂತೆ ಮಾಡುತ್ತದೆ. ಜಾಕ್ ತನ್ನ ಮಾಜಿ ಹೆಂಡತಿಯನ್ನು ಭೇಟಿ ಮಾಡುವುದು, ತನ್ನ ಮಗಳನ್ನು ಅನೇಕ ವರ್ಷಗಳ ನಂತರ ನೋಡುವುದು, ಸೆಂಟಿಮೆಂಟಲ್ ಅಂಶಗಳನ್ನು ತುರುಕುವ ಸಲುವಾಗಿ ಸೇರಿಸಿಲ್ಲ. ತಾನು ಹೇಳಬೇಕಾದ ಕಥೆಗೆ ಬದ್ಧನಾಗಿ ಪ್ರಾಮಾಣಿಕವಾಗಿ ಹೇಳಿದ್ದರಿಂದಲೇ ಮೂಡಿಬಂದಿದ್ದು ಮಿಡ್‍ನೈಟ್ ರನ್ ಎನ್ನುವ ಮಾರ್ಟಿನ್ ಬ್ರೆಸ್ಟ್ ಅವರ ನಿರ್ದೇಶನದ ಅದ್ಭುತ ಚಿತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...