Homeಮುಖಪುಟಮಿಡ್‍ನೈಟ್ ಕೌಬಾಯ್ ಮತ್ತು ಮಿಡ್‍ನೈಟ್ ರನ್: ಮರೆಯಲಾಗದ ಎರಡು ಹಾಲಿವುಡ್ ಚಿತ್ರಗಳು

ಮಿಡ್‍ನೈಟ್ ಕೌಬಾಯ್ ಮತ್ತು ಮಿಡ್‍ನೈಟ್ ರನ್: ಮರೆಯಲಾಗದ ಎರಡು ಹಾಲಿವುಡ್ ಚಿತ್ರಗಳು

- Advertisement -
- Advertisement -

ನಮಗೆ ಯಾವಾಗಲೋ ನೋಡಿದ ಯಾವ್ಯಾವುದೋ ಚಿತ್ರಗಳು ತಲೆಯಲ್ಲಿ ಉಳಿದುಬಿಡುತ್ತವೆ. ಆ ಚಿತ್ರಗಳನ್ನು ನಾವೇಕೆ ಮರೆಯಲಿಲ್ಲ ಎನ್ನುವುದಕ್ಕೆ ಕಾರಣಗಳನ್ನು ಹುಡುಕುವುದು ಅಷ್ಟು ಸುಲಭವಲ್ಲ. ಅನೇಕ ಸಲ ಎಂದೋ ನೋಡಿದ, ಎಂದೋ ಓದಿದ ನಾವು ಇಷ್ಟಪಡದ ಕಥೆಗಳು, ಚಿತ್ರಗಳೂ ನೆನಪಿನಲ್ಲಿ ಉಳಿದುಕೊಳ್ಳುತ್ತವೆ. ಕರ್ನಾಟಕದ ಮೂಲೆಗಳಲ್ಲಿ, ಇಂಗ್ಲಿಷ್ ಗೊತ್ತಿಲ್ಲದೇ ಬೆಳೆದ ನಮ್ಮಂತವರಿಗೆ ಹಾಲಿವುಡ್ ಎನ್ನುವುದು ಗೊತ್ತಾಗಿದ್ದು ಕಾಲೇಜಿಗೆ ತಲುಪಿದ ಮೇಲೆಯೇ. ಸಿಕ್ಕಸಿಕ್ಕ ಸಿನೆಮಾಗಳನ್ನು ನೋಡುತ್ತಿದ್ದ ನಮಗೆ ಯಾವ ಚಿತ್ರ ಯಾವ ಕಾರಣಕ್ಕೆ ಇಷ್ಟವಾಗುತ್ತಿದೆ ಎನ್ನುವುದು ತಿಳಿಯುತ್ತಿರಲಿಲ್ಲ (ತಿಳಿಯಬೇಕು ಎನ್ನುವ ಯಾವ ನಿಯಮವೂ ಇಲ್ಲ). ಈ ಎರಡು ಚಿತ್ರಗಳು ನೋಡಿ ಎರಡು ದಶಕಗಳಾಗುತ್ತಿದ್ದರೂ ಸ್ಮೃತಿಪಟಲದಿಂದ ಒಂದಿಷ್ಟೂ ಮಾಸಿಲ್ಲ. ಈ ಎರಡು ಚಿತ್ರಗಳೂ ಹಾಲಿವುಡ್ ಅನ್ನು ಪ್ರತಿನಿಧಿಸುತ್ತವೆ ಎನ್ನುವುದನ್ನು ಬಿಟ್ಟರೆ ಬೇರಾವ ಸಾಮ್ಯತೆಗಳೂ ಇಲ್ಲ.

ಟೆಕ್ಸಾಸ್‍ನ ಹೋಟೆಲ್ ಒಂದರಲ್ಲಿ ಪಾತ್ರ ತೊಳೆಯುವ ಕೆಲಸಕ್ಕಿದ್ದ ಒಬ್ಬ ಯುವಕ ದೊಡ್ಡ ದೊಡ್ಡ ಕನಸುಗಳನ್ನಿಟ್ಟುಕೊಂಡು ನ್ಯೂಯಾರ್ಕ್‍ಗೆ ಬಂದಿಳಿಯುತ್ತಾನೆ. ಬಿಗ್ ಆ್ಯಪಲ್ ಎಂದು ಕರೆಯಲ್ಪಡುವ ದೊಡ್ಡ ನಗರ ನ್ಯೂ ಯಾರ್ಕ್‍ನಲ್ಲಿರುವ ಮಹಿಳೆಯರಿಗೆ ಸೆಕ್ಸ್ ಮಾಡಲು ಪುರುಷರೇ ಸಿಗುವುದಿಲ್ಲವೆಂದು, ತಾನೊಬ್ಬ ಒಳ್ಳೆಯ ಪ್ರೇಮಿಯಾಗಿದ್ದರಿಂದ ಒಬ್ಬ ಯಶಸ್ವೀ ಪುರುಷ ವೇಶ್ಯೆ ಆಗಬಹುದು ಎನ್ನುವ ಬಲವಾದ ನಂಬಿಕೆ ಜೋ ಬಕ್‍ನದು (ಜಾನ್ ವಾಯಿಟ್). ಟೆಕ್ಸಾಸ್‍ನಿಂದ ನ್ಯೂಯಾರ್ಕ್‍ವರೆಗಿನ ಪಯಣದಲ್ಲಿ ಕಾಣಿಸುವ ಎಲ್ಲಾ ಬಿಲ್‍ಬೋರ್ಡ್‍ಗಳು, ರೇಡಿಯೋದಲ್ಲಿ ಬರುವ ಜಾಹೀರಾತುಗಳೆಲ್ಲವೂ ಅವನ ನಂಬಿಕೆಯನ್ನು ಬಲಪಡಿಸುತ್ತಲೇ ಇರುತ್ತವೆ. ಜೇಬಿನಲ್ಲಿ ಒಂದಿಷ್ಟು ಕಾಸನ್ನು ಇಟ್ಟುಕೊಂಡು ಬಂದಿಳಿದು, ಒಂದು ಹೋಟೆಲ್‍ನಲ್ಲಿ ಉಳಿದುಕೊಳ್ಳುತ್ತಾನೆ. ತಾನೊಬ್ಬ ಗಟ್ಟಿಗ, ಪ್ರೇಮಿ ಎಂದು ತೋರಿಸಿಕೊಳ್ಳಲು ಕೌಬಾಯ್‍ಗಳು ಹಾಕಿಕೊಳ್ಳುವ ಒಂದು ಜಾಕೆಟ್ ಮತ್ತು ಹ್ಯಾಟ್‍ಅನ್ನು ಸದಾಕಾಲ ಹಾಕಿಕೊಂಡಿರುತ್ತಾನೆ.

ಈ ಹೊಸ ಅಪರಿಚಿತ ನಗರದಲ್ಲಿ ಗಮ್ ಅಗಿಯುತ್ತ, ರಸ್ತೆಗಳಲ್ಲಿ ಅಲೆಯುತ್ತ ಕಂಡಕಂಡ ಮಹಿಳೆಯರಿಗೆ ಮಾತನಾಡಿಸಲು ಪ್ರಯತ್ನಿಸುತ್ತಾನೆ. ಕನಸುಗಳು ಎಷ್ಟೇ ಪ್ರಬಲವಾಗಿದ್ದರೂ ಶಹರದ ವಾಸ್ತವ, ತನ್ನ ಕೆಲಸದಲ್ಲಿ ಮರೀಚಿಕೆಯಾದ ಯಶಸ್ಸು, ಬರಿದಾಗುತ್ತಿರುವ ಜೇಬು ಇವನನ್ನು ವಾಸ್ತವಕ್ಕೆ ಎಳೆಯುವ ಪ್ರಯತ್ನ ಮಾಡುತ್ತವೆ. ಆದರೆ ನಮ್ಮ ಹೀರೋನ ಭ್ರಮೆ ಅಷ್ಟು ಸುಲಭಕ್ಕೆ ಕರಗುವಷ್ಟು ಪೊಳ್ಳಾಗಿಲ್ಲ. ಆಗ ಅವನಿಗೆ ಸಿಗುವನು ರಿಕೊ/ರ್ಯಾಟ್ಸೋ (ಡಸ್ಟಿನ್ ಹಾಫ್‍ಮನ್). ರಿಕೋ ಸದಾ ಕೆಮ್ಮುತ್ತಿರುವ, ಕುಂಟುನಡೆಯುವ ಸಣ್ಣಪುಟ್ಟ ಕಳ್ಳತನ, ಜನರಿಗೆ ಟೋಪಿ ಹಾಕುವ ಕೆಲಸ ಮಾಡುವ ವ್ಯಕ್ತಿ. ಜೋ ಬಕ್‍ನನ್ನು ನೋಡಿದಕೂಡಲೇ, ಅವನ ಸ್ನೇಹ ಸಂಪಾದಿಸಿ, ಅವನು ಹೀಗೆಲ್ಲ ರಸ್ತೆಯಲ್ಲಿ ಹುಡುಕಾಟ ಮಾಡಬಾರದೆಂದೂ, ಅವನಿಗೆ ಒಬ್ಬ ಮ್ಯಾನೇಜರ್‍ನ ಅವಶ್ಯಕತೆ ಇದೆಯೆಂದು ನಂಬಿಸಿ, ಒಂದಿಷ್ಟು ದುಡ್ಡು ಕಿತ್ತುಕೊಂಡು ಕಳುಹಿಸುತ್ತಾನೆ. ತಾನು ಮೋಸ ಹೋದೆನೆಂದು ತಿಳಿಯಲು ಜೋಗೆ ಹೆಚ್ಚು ಸಮಯ ಹಿಡಿಯುವದಿಲ್ಲ.

ಜೋ ದುಡ್ಡು ಕಟ್ಟಿಲ್ಲವೆಂದು ಹೋಟೆಲ್‍ನಿಂದ ಹೊರದಬ್ಬಲ್ಪಟ್ಟು, ತಿನ್ನಲೂ ಕಾಸಿಲ್ಲದೇ ಅಲೆಯುತ್ತಿರುವಾಗ ಮತ್ತೆ ಸಿಗುವನು ರ್ಯಾಟ್ಸೋ. ಆಗ ಶುರುವಾಗುವುದು ಅವರಿಬ್ಬರ ಸೋಲು, ಗೆಲುವು, ನೋವು, ಹತಾಶೆಗಳ ಪಯಣ.

ಈ ಚಿತ್ರ ಏಕೆ ಇಷ್ಟವಾಗುತ್ತೆ ಎಂದು ಅನೇಕ ಸಲ ಪ್ರಶ್ನೆ ಕೇಳಿದ್ದೇನೆ. ಅಲೆಕ್ಸಾಂಡರ್ ಪೇನ್ ಒಂದು ಮಾತು ಹೇಳುತ್ತಾರೆ, ‘ನಿರ್ದೇಶನವೆಂದರೆ 90% ಕಾಸ್ಟಿಂಗ್ ಹಾಗೂ ಬಾಕಿ 10% ಮಾತ್ರ ನಿರ್ದೇಶನ’. ಈ ಚಿತ್ರದಲ್ಲಿ ಕನಸುಗಣ್ಣುಗಳ ಮುಗ್ಧ ಜಾನ್ ವಾಯಿಟ್ ಏನೇ ಮಾಡಿದರೂ ನಮಗೆ ಇಷ್ಟವಾಗುತ್ತಾನೆ. ಚಿತ್ರದಲ್ಲಿ ಬರುವ ಫ್ಲ್ಯಾಷ್‍ಬ್ಯಾಕ್, ಕನಸುಗಳು, ಪಾರ್ಟಿಯ ದೃಶ್ಯಗಳು, ಹಿಂಸೆ, ಲೈಂಗಿಕತೆಯ ಬಗ್ಗೆ ಟೀಕೆಗಳು ಬಂದಿವೆ. ಅವುಗಳು ಇಲ್ಲದಿದ್ದರೂ ಈ ಚಿತ್ರ ನಮಗೆ ಇಷ್ಟವಾಗುತ್ತಿತ್ತೇನೋ.

ನಮಗೆ ಈ ಚಿತ್ರ ನೆನಪಿನಲ್ಲುಳಿಯುವುದು ಪಾತ್ರಗಳ ಮುಗ್ಧತೆಯಿಂದ. ದೊಡ್ಡ ನಗರದಲ್ಲಿ ಮಿಸ್‍ಫಿಟ್ ಆಗಿರುವ ಇವರು, ನಿಜಜೀವನದಲ್ಲಿ ನಮಗೆ ಕಂಡರೆ ಬಹುಶಃ ಹೇಸಿಗೆ ಪಟ್ಟು ಮುಂದೆ ಹೋಗುತ್ತೇವೆ ಆದರೆ ಇಲ್ಲಿ ಅವರನ್ನೇ ಇಷ್ಟಪಡುತ್ತೇವೆ. ಇವರ ಮೂರ್ಖತೆ ಮುರ್ಖತೆಯಾಗಿ ಕಾಣಿಸದೇ ಮುಗ್ಧತೆಯಾಗಿ ಕಾಣಿಸುತ್ತದೆ. ಇವರ ಸತ್ಯವನ್ನು ನಾಗರಿಕ ಸಮಾಜವೇಕೆ ಅರ್ಥಮಾಡಿಕೊಳ್ಳುವುದಿಲ್ಲ ಎಂದು ದೂರುತ್ತೇವೆ. ತನ್ನನ್ನು ತಾನು ಒಪ್ಪಿಕೊಳ್ಳುವ ಕಥೆಯನ್ನು ಹೇಳುವ, ತನ್ನ ತಪ್ಪುಗಳನ್ನು ಕ್ಷಮಿಸುವ ಕಥೆಯಾಗಿ ನೆನಪಿನಲ್ಲಿ ಉಳಿಯುತ್ತದೆ ಜಾನ್ ಶ್ಲೆಲಿಂಜರ್ ಅವರ ನಿರ್ದೇಶನದ ಈ ಚಿತ್ರ ಮಿಡ್‍ನೈಟ್ ಕೌಬಾಯ್.

ಜಾಕ್ (ರಾಬರ್ಟ್ ಡಿ ನೀರೊ) ಒಬ್ಬ ಮಾಜಿ ಪೊಲೀಸ್, ಈಗ ಒಬ್ಬ ಬೌಂಟಿ ಹಂಟರ್, ಜಾಮೀನಿನ ಮೇಲೆ ಹೊರಗೆ ಬಂದು ತಪ್ಪಿಸಿಕೊಳ್ಳುವ ವ್ಯಕ್ತಿಗಳನ್ನು ಬಂಧಿಸುವುದು ಇವನ ಕೆಲಸ. ಜಾನಾಥನ್ ಒಬ್ಬ ಅಕೌಂಟಂಟ್, ಜಾಮೀನಿನಲ್ಲಿ ಹೊರಬಂದು ತಪ್ಪಿಸಿಕೊಂಡಿದ್ದಾನೆ. ಈಗ ಅವನನ್ನು ಹಿಡಿದು ಒಪ್ಪಿಸಬೇಕಿದೆ. ಇದು ಮಾರ್ಟಿನ್ ಬ್ರೆಸ್ಟ್ ಅವರ ಮಿಡ್‍ನೈಟ್ ರನ್ ಚಿತ್ರ.

ಜಾನಾಥನ್ ಎಂಬ ಈ ಅಕೌಂಟಂಟ್ ಜಿಮಿ ಸೆರಾನೋ ಎನ್ನುವ ಮಾಫಿಯಾ ಡಾನ್‍ನ ದುಡ್ಡನ್ನೆ ಎಗರಿಸಿ ಚಾರಿಟಿಗೆ ಹಂಚಿದ್ದಾನೆ. ಹಾಗಾಗಿ ಆ ಡಾನ್ ಇವನನ್ನು ಹುಡುಕಿ ಮುಗಿಸಬೇಕಿದೆ. ಪೊಲೀಸರಿಗೂ ಇವನ ಹುಡುಕಾಟ, ಜಾನಾಥನ್‍ನ್ನು ಜಾಕ್ ತನ್ನ ವಶಕ್ಕೆ ತೆಗೆದುಕೊಂಡರೆ ಪೊಲೀಸರ ಕೆಲಸ ಕೆಡುತ್ತೆ ಹಾಗಾಗಿ ಜಾಕ್ ಮೇಲೆ ಕಣ್ಣಿಟ್ಟಿದ್ದಾರೆ. ಯಾರೇ ಬಂಧಿಸಿದರೂ ತನ್ನನ್ನು ಮುಗಿಸಿಬಿಡುವರು ಎಂದು ಜಾನಾಥನ್‍ಗೆ ತಿಳಿದಿದೆ ಹಾಗಾಗಿ ಅವನು ಈ ಮೂವರಿಂದಲೂ ಪಾರಾಗಬೇಕು. ಜಾಕ್‍ಗೆ ಜಾನಾಥನ್‍ನನ್ನು ಹುಡುಕುವುದು ಕಷ್ಟವಾಗಿಲ್ಲ, ಆದರೆ ಅವನನ್ನು ನ್ಯೂ ಯಾರ್ಕ್‍ನಿಂದ ಲಾಸ್ ಏಂಜೆಲ್ಸ್‍ಗೆ ತರಲೇಬೇಕಿದೆ, ಇಲ್ಲದಿದ್ದರೆ ಅವನಿಗೆ ದುಡ್ಡು ಸಿಗುವುದಿಲ್ಲ. ಈ ಪಯಣದಲ್ಲಿ ಅವರಿಬ್ಬರ ಸಂಬಂಧ. ಇಬ್ಬರೂ ಒಳ್ಳೆಯವರೆ ಆದರೆ ಸಂದರ್ಭ ಒಳ್ಳೆಯತನಕ್ಕೆ ಅನುವು ಮಾಡಿಕೊಡುವುದಿಲ್ಲ.

ಇದೊಂದು ಪಕ್ಕಾ ಹಾಲಿವುಡ್ ಫಾರ್ಮುಲಾ ಸಿನೆಮಾ. ಇವುಗಳನ್ನು ‘ಬಡಿ’ (buddy) ಫಿಲ್ಮ್‍ಗಳು ಎನ್ನಲಾಗುತ್ತದೆ. ಇಬ್ಬರು ವ್ಯವಸ್ಥೆ ಮತ್ತು ತಮ್ಮತಮ್ಮ ಪರಿಸ್ಥಿತಿಗಳ ವಿರುದ್ಧ ಹೋರಾಡುವ ಕಥೆ ಹಾಗೂ ಇದೊಂದು ಕಾಮೆಡಿ. ಎಲ್ಲಾ ಪಾತ್ರಗಳಿಗೂ ಒಂದು ಉದ್ದೇಶವಿದೆ, ಕಥೆ ಲೀನಿಯರ್ ಆಗಿ, ಗಂಭೀರಗೊಂಡಂತೆ ಹೆಚ್ಚೆಚ್ಚು ಕಾಮೆಡಿಯಾಗತೊಡಗುತ್ತದೆ. ಸಂಘರ್ಷವೆನ್ನುವುದು ಗಟ್ಟಿಗೊಳ್ಳುತ್ತ ಕ್ಲೈಮ್ಯಾಕ್ಸ್ ತಲುಪುತ್ತದೆ. ಸಾಹಸದೃಶ್ಯಗಳು, ಚೇಸ್‍ಗಳು, ಚಾಪರ್ ಶಾಟ್‍ಗಳನ್ನು ಒಳಗೊಂಡ ಈ ಚಿತ್ರವನ್ನು ಫಾರ್ಮುಲಾ ಚಿತ್ರವೆಂದು ಕರೆದಲ್ಲಿ, ಫಾರ್ಮುಲಾ ಚಿತ್ರದ ಶ್ರೇಷ್ಠ ನಿದರ್ಶನ ಎನ್ನಬಹುದು. ಈ ಚಿತ್ರದ ವಿಶೇಷತೆಯೂ ಇದರ ಕಾಸ್ಟಿಂಗ್. ಬೌಂಟಿ ಹಂಟರ್ ಆಗಿರುವ ರಾಬರ್ಟ್ ಡಿ ನೀರೋ ಯಾವಾಗಲೂ ಗಂಭೀರವಾಗಿಯೇ ಇದ್ದಾನೆ; ಚಾಲ್ರ್ಸ್ ಗೋರ್ಡಿನ್ ಒಬ್ಬ ವೈಟ್‍ಕಾಲರ್ ಕೆಲಸದ ಸಂಭಾವಿತ ವ್ಯಕ್ತಿಯಾಗಿ ಶಾಂತವಾಗೇ ಇರುತ್ತಾನೆ. ಇವರು ಯಾವ ಸಂದರ್ಭದಲ್ಲೂ ಕಾಮೆಡಿ ಮಾಡುವ ಪ್ರಯತ್ನ ಮಾಡುವುದಿಲ್ಲ. ಅವರ ಪರಿಸ್ಥಿತಿಗಳೆ, ಅವರ ಸಂಕಷ್ಟಗಳೇ ಕಾಮೆಡಿಯಾಗಿ ಪರಿಣಮಿಸುತ್ತವೆ.

ಫಾರ್ಮುಲಾ ಚಿತ್ರವಾಗಿದ್ದು, ಹಾಲಿವುಡ್‍ನ ಸ್ಟ್ರಕ್ಚರ್‍ಗೆ ಬದ್ಧವಾಗಿದ್ದು, ಸ್ಟಾರ್‍ಗಳನ್ನು ಹಾಕಿಕೊಂಡರೂ ಈ ಚಿತ್ರ ಮಾನವೀಯತೆಗೆ ಬದ್ಧವಾಗಿದೆ. ಕಾಮೆಡಿ, ಥ್ರಿಲರ್, ಬಡಿ, ಚೇಸ್ ಸಿನೆಮಾ ಎಂಬ ಹಣೆಪಟ್ಟಿಯ ಅಡಿಯಲ್ಲಿ ಬಂದರೂ, ಪಾತ್ರಗಳು ಮಾನವೀಯತೆಯನ್ನು ಎತ್ತಿಹಿಡಿಯುತ್ತವೆ, ಅವರ ಸಮಸ್ಯೆಗಳಿಗೆ ಮಿಡಿಯುವಂತೆ ಮಾಡುತ್ತದೆ. ಜಾಕ್ ತನ್ನ ಮಾಜಿ ಹೆಂಡತಿಯನ್ನು ಭೇಟಿ ಮಾಡುವುದು, ತನ್ನ ಮಗಳನ್ನು ಅನೇಕ ವರ್ಷಗಳ ನಂತರ ನೋಡುವುದು, ಸೆಂಟಿಮೆಂಟಲ್ ಅಂಶಗಳನ್ನು ತುರುಕುವ ಸಲುವಾಗಿ ಸೇರಿಸಿಲ್ಲ. ತಾನು ಹೇಳಬೇಕಾದ ಕಥೆಗೆ ಬದ್ಧನಾಗಿ ಪ್ರಾಮಾಣಿಕವಾಗಿ ಹೇಳಿದ್ದರಿಂದಲೇ ಮೂಡಿಬಂದಿದ್ದು ಮಿಡ್‍ನೈಟ್ ರನ್ ಎನ್ನುವ ಮಾರ್ಟಿನ್ ಬ್ರೆಸ್ಟ್ ಅವರ ನಿರ್ದೇಶನದ ಅದ್ಭುತ ಚಿತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...