Homeಮುಖಪುಟಮಿಡ್‍ನೈಟ್ ಕೌಬಾಯ್ ಮತ್ತು ಮಿಡ್‍ನೈಟ್ ರನ್: ಮರೆಯಲಾಗದ ಎರಡು ಹಾಲಿವುಡ್ ಚಿತ್ರಗಳು

ಮಿಡ್‍ನೈಟ್ ಕೌಬಾಯ್ ಮತ್ತು ಮಿಡ್‍ನೈಟ್ ರನ್: ಮರೆಯಲಾಗದ ಎರಡು ಹಾಲಿವುಡ್ ಚಿತ್ರಗಳು

- Advertisement -
- Advertisement -

ನಮಗೆ ಯಾವಾಗಲೋ ನೋಡಿದ ಯಾವ್ಯಾವುದೋ ಚಿತ್ರಗಳು ತಲೆಯಲ್ಲಿ ಉಳಿದುಬಿಡುತ್ತವೆ. ಆ ಚಿತ್ರಗಳನ್ನು ನಾವೇಕೆ ಮರೆಯಲಿಲ್ಲ ಎನ್ನುವುದಕ್ಕೆ ಕಾರಣಗಳನ್ನು ಹುಡುಕುವುದು ಅಷ್ಟು ಸುಲಭವಲ್ಲ. ಅನೇಕ ಸಲ ಎಂದೋ ನೋಡಿದ, ಎಂದೋ ಓದಿದ ನಾವು ಇಷ್ಟಪಡದ ಕಥೆಗಳು, ಚಿತ್ರಗಳೂ ನೆನಪಿನಲ್ಲಿ ಉಳಿದುಕೊಳ್ಳುತ್ತವೆ. ಕರ್ನಾಟಕದ ಮೂಲೆಗಳಲ್ಲಿ, ಇಂಗ್ಲಿಷ್ ಗೊತ್ತಿಲ್ಲದೇ ಬೆಳೆದ ನಮ್ಮಂತವರಿಗೆ ಹಾಲಿವುಡ್ ಎನ್ನುವುದು ಗೊತ್ತಾಗಿದ್ದು ಕಾಲೇಜಿಗೆ ತಲುಪಿದ ಮೇಲೆಯೇ. ಸಿಕ್ಕಸಿಕ್ಕ ಸಿನೆಮಾಗಳನ್ನು ನೋಡುತ್ತಿದ್ದ ನಮಗೆ ಯಾವ ಚಿತ್ರ ಯಾವ ಕಾರಣಕ್ಕೆ ಇಷ್ಟವಾಗುತ್ತಿದೆ ಎನ್ನುವುದು ತಿಳಿಯುತ್ತಿರಲಿಲ್ಲ (ತಿಳಿಯಬೇಕು ಎನ್ನುವ ಯಾವ ನಿಯಮವೂ ಇಲ್ಲ). ಈ ಎರಡು ಚಿತ್ರಗಳು ನೋಡಿ ಎರಡು ದಶಕಗಳಾಗುತ್ತಿದ್ದರೂ ಸ್ಮೃತಿಪಟಲದಿಂದ ಒಂದಿಷ್ಟೂ ಮಾಸಿಲ್ಲ. ಈ ಎರಡು ಚಿತ್ರಗಳೂ ಹಾಲಿವುಡ್ ಅನ್ನು ಪ್ರತಿನಿಧಿಸುತ್ತವೆ ಎನ್ನುವುದನ್ನು ಬಿಟ್ಟರೆ ಬೇರಾವ ಸಾಮ್ಯತೆಗಳೂ ಇಲ್ಲ.

ಟೆಕ್ಸಾಸ್‍ನ ಹೋಟೆಲ್ ಒಂದರಲ್ಲಿ ಪಾತ್ರ ತೊಳೆಯುವ ಕೆಲಸಕ್ಕಿದ್ದ ಒಬ್ಬ ಯುವಕ ದೊಡ್ಡ ದೊಡ್ಡ ಕನಸುಗಳನ್ನಿಟ್ಟುಕೊಂಡು ನ್ಯೂಯಾರ್ಕ್‍ಗೆ ಬಂದಿಳಿಯುತ್ತಾನೆ. ಬಿಗ್ ಆ್ಯಪಲ್ ಎಂದು ಕರೆಯಲ್ಪಡುವ ದೊಡ್ಡ ನಗರ ನ್ಯೂ ಯಾರ್ಕ್‍ನಲ್ಲಿರುವ ಮಹಿಳೆಯರಿಗೆ ಸೆಕ್ಸ್ ಮಾಡಲು ಪುರುಷರೇ ಸಿಗುವುದಿಲ್ಲವೆಂದು, ತಾನೊಬ್ಬ ಒಳ್ಳೆಯ ಪ್ರೇಮಿಯಾಗಿದ್ದರಿಂದ ಒಬ್ಬ ಯಶಸ್ವೀ ಪುರುಷ ವೇಶ್ಯೆ ಆಗಬಹುದು ಎನ್ನುವ ಬಲವಾದ ನಂಬಿಕೆ ಜೋ ಬಕ್‍ನದು (ಜಾನ್ ವಾಯಿಟ್). ಟೆಕ್ಸಾಸ್‍ನಿಂದ ನ್ಯೂಯಾರ್ಕ್‍ವರೆಗಿನ ಪಯಣದಲ್ಲಿ ಕಾಣಿಸುವ ಎಲ್ಲಾ ಬಿಲ್‍ಬೋರ್ಡ್‍ಗಳು, ರೇಡಿಯೋದಲ್ಲಿ ಬರುವ ಜಾಹೀರಾತುಗಳೆಲ್ಲವೂ ಅವನ ನಂಬಿಕೆಯನ್ನು ಬಲಪಡಿಸುತ್ತಲೇ ಇರುತ್ತವೆ. ಜೇಬಿನಲ್ಲಿ ಒಂದಿಷ್ಟು ಕಾಸನ್ನು ಇಟ್ಟುಕೊಂಡು ಬಂದಿಳಿದು, ಒಂದು ಹೋಟೆಲ್‍ನಲ್ಲಿ ಉಳಿದುಕೊಳ್ಳುತ್ತಾನೆ. ತಾನೊಬ್ಬ ಗಟ್ಟಿಗ, ಪ್ರೇಮಿ ಎಂದು ತೋರಿಸಿಕೊಳ್ಳಲು ಕೌಬಾಯ್‍ಗಳು ಹಾಕಿಕೊಳ್ಳುವ ಒಂದು ಜಾಕೆಟ್ ಮತ್ತು ಹ್ಯಾಟ್‍ಅನ್ನು ಸದಾಕಾಲ ಹಾಕಿಕೊಂಡಿರುತ್ತಾನೆ.

ಈ ಹೊಸ ಅಪರಿಚಿತ ನಗರದಲ್ಲಿ ಗಮ್ ಅಗಿಯುತ್ತ, ರಸ್ತೆಗಳಲ್ಲಿ ಅಲೆಯುತ್ತ ಕಂಡಕಂಡ ಮಹಿಳೆಯರಿಗೆ ಮಾತನಾಡಿಸಲು ಪ್ರಯತ್ನಿಸುತ್ತಾನೆ. ಕನಸುಗಳು ಎಷ್ಟೇ ಪ್ರಬಲವಾಗಿದ್ದರೂ ಶಹರದ ವಾಸ್ತವ, ತನ್ನ ಕೆಲಸದಲ್ಲಿ ಮರೀಚಿಕೆಯಾದ ಯಶಸ್ಸು, ಬರಿದಾಗುತ್ತಿರುವ ಜೇಬು ಇವನನ್ನು ವಾಸ್ತವಕ್ಕೆ ಎಳೆಯುವ ಪ್ರಯತ್ನ ಮಾಡುತ್ತವೆ. ಆದರೆ ನಮ್ಮ ಹೀರೋನ ಭ್ರಮೆ ಅಷ್ಟು ಸುಲಭಕ್ಕೆ ಕರಗುವಷ್ಟು ಪೊಳ್ಳಾಗಿಲ್ಲ. ಆಗ ಅವನಿಗೆ ಸಿಗುವನು ರಿಕೊ/ರ್ಯಾಟ್ಸೋ (ಡಸ್ಟಿನ್ ಹಾಫ್‍ಮನ್). ರಿಕೋ ಸದಾ ಕೆಮ್ಮುತ್ತಿರುವ, ಕುಂಟುನಡೆಯುವ ಸಣ್ಣಪುಟ್ಟ ಕಳ್ಳತನ, ಜನರಿಗೆ ಟೋಪಿ ಹಾಕುವ ಕೆಲಸ ಮಾಡುವ ವ್ಯಕ್ತಿ. ಜೋ ಬಕ್‍ನನ್ನು ನೋಡಿದಕೂಡಲೇ, ಅವನ ಸ್ನೇಹ ಸಂಪಾದಿಸಿ, ಅವನು ಹೀಗೆಲ್ಲ ರಸ್ತೆಯಲ್ಲಿ ಹುಡುಕಾಟ ಮಾಡಬಾರದೆಂದೂ, ಅವನಿಗೆ ಒಬ್ಬ ಮ್ಯಾನೇಜರ್‍ನ ಅವಶ್ಯಕತೆ ಇದೆಯೆಂದು ನಂಬಿಸಿ, ಒಂದಿಷ್ಟು ದುಡ್ಡು ಕಿತ್ತುಕೊಂಡು ಕಳುಹಿಸುತ್ತಾನೆ. ತಾನು ಮೋಸ ಹೋದೆನೆಂದು ತಿಳಿಯಲು ಜೋಗೆ ಹೆಚ್ಚು ಸಮಯ ಹಿಡಿಯುವದಿಲ್ಲ.

ಜೋ ದುಡ್ಡು ಕಟ್ಟಿಲ್ಲವೆಂದು ಹೋಟೆಲ್‍ನಿಂದ ಹೊರದಬ್ಬಲ್ಪಟ್ಟು, ತಿನ್ನಲೂ ಕಾಸಿಲ್ಲದೇ ಅಲೆಯುತ್ತಿರುವಾಗ ಮತ್ತೆ ಸಿಗುವನು ರ್ಯಾಟ್ಸೋ. ಆಗ ಶುರುವಾಗುವುದು ಅವರಿಬ್ಬರ ಸೋಲು, ಗೆಲುವು, ನೋವು, ಹತಾಶೆಗಳ ಪಯಣ.

ಈ ಚಿತ್ರ ಏಕೆ ಇಷ್ಟವಾಗುತ್ತೆ ಎಂದು ಅನೇಕ ಸಲ ಪ್ರಶ್ನೆ ಕೇಳಿದ್ದೇನೆ. ಅಲೆಕ್ಸಾಂಡರ್ ಪೇನ್ ಒಂದು ಮಾತು ಹೇಳುತ್ತಾರೆ, ‘ನಿರ್ದೇಶನವೆಂದರೆ 90% ಕಾಸ್ಟಿಂಗ್ ಹಾಗೂ ಬಾಕಿ 10% ಮಾತ್ರ ನಿರ್ದೇಶನ’. ಈ ಚಿತ್ರದಲ್ಲಿ ಕನಸುಗಣ್ಣುಗಳ ಮುಗ್ಧ ಜಾನ್ ವಾಯಿಟ್ ಏನೇ ಮಾಡಿದರೂ ನಮಗೆ ಇಷ್ಟವಾಗುತ್ತಾನೆ. ಚಿತ್ರದಲ್ಲಿ ಬರುವ ಫ್ಲ್ಯಾಷ್‍ಬ್ಯಾಕ್, ಕನಸುಗಳು, ಪಾರ್ಟಿಯ ದೃಶ್ಯಗಳು, ಹಿಂಸೆ, ಲೈಂಗಿಕತೆಯ ಬಗ್ಗೆ ಟೀಕೆಗಳು ಬಂದಿವೆ. ಅವುಗಳು ಇಲ್ಲದಿದ್ದರೂ ಈ ಚಿತ್ರ ನಮಗೆ ಇಷ್ಟವಾಗುತ್ತಿತ್ತೇನೋ.

ನಮಗೆ ಈ ಚಿತ್ರ ನೆನಪಿನಲ್ಲುಳಿಯುವುದು ಪಾತ್ರಗಳ ಮುಗ್ಧತೆಯಿಂದ. ದೊಡ್ಡ ನಗರದಲ್ಲಿ ಮಿಸ್‍ಫಿಟ್ ಆಗಿರುವ ಇವರು, ನಿಜಜೀವನದಲ್ಲಿ ನಮಗೆ ಕಂಡರೆ ಬಹುಶಃ ಹೇಸಿಗೆ ಪಟ್ಟು ಮುಂದೆ ಹೋಗುತ್ತೇವೆ ಆದರೆ ಇಲ್ಲಿ ಅವರನ್ನೇ ಇಷ್ಟಪಡುತ್ತೇವೆ. ಇವರ ಮೂರ್ಖತೆ ಮುರ್ಖತೆಯಾಗಿ ಕಾಣಿಸದೇ ಮುಗ್ಧತೆಯಾಗಿ ಕಾಣಿಸುತ್ತದೆ. ಇವರ ಸತ್ಯವನ್ನು ನಾಗರಿಕ ಸಮಾಜವೇಕೆ ಅರ್ಥಮಾಡಿಕೊಳ್ಳುವುದಿಲ್ಲ ಎಂದು ದೂರುತ್ತೇವೆ. ತನ್ನನ್ನು ತಾನು ಒಪ್ಪಿಕೊಳ್ಳುವ ಕಥೆಯನ್ನು ಹೇಳುವ, ತನ್ನ ತಪ್ಪುಗಳನ್ನು ಕ್ಷಮಿಸುವ ಕಥೆಯಾಗಿ ನೆನಪಿನಲ್ಲಿ ಉಳಿಯುತ್ತದೆ ಜಾನ್ ಶ್ಲೆಲಿಂಜರ್ ಅವರ ನಿರ್ದೇಶನದ ಈ ಚಿತ್ರ ಮಿಡ್‍ನೈಟ್ ಕೌಬಾಯ್.

ಜಾಕ್ (ರಾಬರ್ಟ್ ಡಿ ನೀರೊ) ಒಬ್ಬ ಮಾಜಿ ಪೊಲೀಸ್, ಈಗ ಒಬ್ಬ ಬೌಂಟಿ ಹಂಟರ್, ಜಾಮೀನಿನ ಮೇಲೆ ಹೊರಗೆ ಬಂದು ತಪ್ಪಿಸಿಕೊಳ್ಳುವ ವ್ಯಕ್ತಿಗಳನ್ನು ಬಂಧಿಸುವುದು ಇವನ ಕೆಲಸ. ಜಾನಾಥನ್ ಒಬ್ಬ ಅಕೌಂಟಂಟ್, ಜಾಮೀನಿನಲ್ಲಿ ಹೊರಬಂದು ತಪ್ಪಿಸಿಕೊಂಡಿದ್ದಾನೆ. ಈಗ ಅವನನ್ನು ಹಿಡಿದು ಒಪ್ಪಿಸಬೇಕಿದೆ. ಇದು ಮಾರ್ಟಿನ್ ಬ್ರೆಸ್ಟ್ ಅವರ ಮಿಡ್‍ನೈಟ್ ರನ್ ಚಿತ್ರ.

ಜಾನಾಥನ್ ಎಂಬ ಈ ಅಕೌಂಟಂಟ್ ಜಿಮಿ ಸೆರಾನೋ ಎನ್ನುವ ಮಾಫಿಯಾ ಡಾನ್‍ನ ದುಡ್ಡನ್ನೆ ಎಗರಿಸಿ ಚಾರಿಟಿಗೆ ಹಂಚಿದ್ದಾನೆ. ಹಾಗಾಗಿ ಆ ಡಾನ್ ಇವನನ್ನು ಹುಡುಕಿ ಮುಗಿಸಬೇಕಿದೆ. ಪೊಲೀಸರಿಗೂ ಇವನ ಹುಡುಕಾಟ, ಜಾನಾಥನ್‍ನ್ನು ಜಾಕ್ ತನ್ನ ವಶಕ್ಕೆ ತೆಗೆದುಕೊಂಡರೆ ಪೊಲೀಸರ ಕೆಲಸ ಕೆಡುತ್ತೆ ಹಾಗಾಗಿ ಜಾಕ್ ಮೇಲೆ ಕಣ್ಣಿಟ್ಟಿದ್ದಾರೆ. ಯಾರೇ ಬಂಧಿಸಿದರೂ ತನ್ನನ್ನು ಮುಗಿಸಿಬಿಡುವರು ಎಂದು ಜಾನಾಥನ್‍ಗೆ ತಿಳಿದಿದೆ ಹಾಗಾಗಿ ಅವನು ಈ ಮೂವರಿಂದಲೂ ಪಾರಾಗಬೇಕು. ಜಾಕ್‍ಗೆ ಜಾನಾಥನ್‍ನನ್ನು ಹುಡುಕುವುದು ಕಷ್ಟವಾಗಿಲ್ಲ, ಆದರೆ ಅವನನ್ನು ನ್ಯೂ ಯಾರ್ಕ್‍ನಿಂದ ಲಾಸ್ ಏಂಜೆಲ್ಸ್‍ಗೆ ತರಲೇಬೇಕಿದೆ, ಇಲ್ಲದಿದ್ದರೆ ಅವನಿಗೆ ದುಡ್ಡು ಸಿಗುವುದಿಲ್ಲ. ಈ ಪಯಣದಲ್ಲಿ ಅವರಿಬ್ಬರ ಸಂಬಂಧ. ಇಬ್ಬರೂ ಒಳ್ಳೆಯವರೆ ಆದರೆ ಸಂದರ್ಭ ಒಳ್ಳೆಯತನಕ್ಕೆ ಅನುವು ಮಾಡಿಕೊಡುವುದಿಲ್ಲ.

ಇದೊಂದು ಪಕ್ಕಾ ಹಾಲಿವುಡ್ ಫಾರ್ಮುಲಾ ಸಿನೆಮಾ. ಇವುಗಳನ್ನು ‘ಬಡಿ’ (buddy) ಫಿಲ್ಮ್‍ಗಳು ಎನ್ನಲಾಗುತ್ತದೆ. ಇಬ್ಬರು ವ್ಯವಸ್ಥೆ ಮತ್ತು ತಮ್ಮತಮ್ಮ ಪರಿಸ್ಥಿತಿಗಳ ವಿರುದ್ಧ ಹೋರಾಡುವ ಕಥೆ ಹಾಗೂ ಇದೊಂದು ಕಾಮೆಡಿ. ಎಲ್ಲಾ ಪಾತ್ರಗಳಿಗೂ ಒಂದು ಉದ್ದೇಶವಿದೆ, ಕಥೆ ಲೀನಿಯರ್ ಆಗಿ, ಗಂಭೀರಗೊಂಡಂತೆ ಹೆಚ್ಚೆಚ್ಚು ಕಾಮೆಡಿಯಾಗತೊಡಗುತ್ತದೆ. ಸಂಘರ್ಷವೆನ್ನುವುದು ಗಟ್ಟಿಗೊಳ್ಳುತ್ತ ಕ್ಲೈಮ್ಯಾಕ್ಸ್ ತಲುಪುತ್ತದೆ. ಸಾಹಸದೃಶ್ಯಗಳು, ಚೇಸ್‍ಗಳು, ಚಾಪರ್ ಶಾಟ್‍ಗಳನ್ನು ಒಳಗೊಂಡ ಈ ಚಿತ್ರವನ್ನು ಫಾರ್ಮುಲಾ ಚಿತ್ರವೆಂದು ಕರೆದಲ್ಲಿ, ಫಾರ್ಮುಲಾ ಚಿತ್ರದ ಶ್ರೇಷ್ಠ ನಿದರ್ಶನ ಎನ್ನಬಹುದು. ಈ ಚಿತ್ರದ ವಿಶೇಷತೆಯೂ ಇದರ ಕಾಸ್ಟಿಂಗ್. ಬೌಂಟಿ ಹಂಟರ್ ಆಗಿರುವ ರಾಬರ್ಟ್ ಡಿ ನೀರೋ ಯಾವಾಗಲೂ ಗಂಭೀರವಾಗಿಯೇ ಇದ್ದಾನೆ; ಚಾಲ್ರ್ಸ್ ಗೋರ್ಡಿನ್ ಒಬ್ಬ ವೈಟ್‍ಕಾಲರ್ ಕೆಲಸದ ಸಂಭಾವಿತ ವ್ಯಕ್ತಿಯಾಗಿ ಶಾಂತವಾಗೇ ಇರುತ್ತಾನೆ. ಇವರು ಯಾವ ಸಂದರ್ಭದಲ್ಲೂ ಕಾಮೆಡಿ ಮಾಡುವ ಪ್ರಯತ್ನ ಮಾಡುವುದಿಲ್ಲ. ಅವರ ಪರಿಸ್ಥಿತಿಗಳೆ, ಅವರ ಸಂಕಷ್ಟಗಳೇ ಕಾಮೆಡಿಯಾಗಿ ಪರಿಣಮಿಸುತ್ತವೆ.

ಫಾರ್ಮುಲಾ ಚಿತ್ರವಾಗಿದ್ದು, ಹಾಲಿವುಡ್‍ನ ಸ್ಟ್ರಕ್ಚರ್‍ಗೆ ಬದ್ಧವಾಗಿದ್ದು, ಸ್ಟಾರ್‍ಗಳನ್ನು ಹಾಕಿಕೊಂಡರೂ ಈ ಚಿತ್ರ ಮಾನವೀಯತೆಗೆ ಬದ್ಧವಾಗಿದೆ. ಕಾಮೆಡಿ, ಥ್ರಿಲರ್, ಬಡಿ, ಚೇಸ್ ಸಿನೆಮಾ ಎಂಬ ಹಣೆಪಟ್ಟಿಯ ಅಡಿಯಲ್ಲಿ ಬಂದರೂ, ಪಾತ್ರಗಳು ಮಾನವೀಯತೆಯನ್ನು ಎತ್ತಿಹಿಡಿಯುತ್ತವೆ, ಅವರ ಸಮಸ್ಯೆಗಳಿಗೆ ಮಿಡಿಯುವಂತೆ ಮಾಡುತ್ತದೆ. ಜಾಕ್ ತನ್ನ ಮಾಜಿ ಹೆಂಡತಿಯನ್ನು ಭೇಟಿ ಮಾಡುವುದು, ತನ್ನ ಮಗಳನ್ನು ಅನೇಕ ವರ್ಷಗಳ ನಂತರ ನೋಡುವುದು, ಸೆಂಟಿಮೆಂಟಲ್ ಅಂಶಗಳನ್ನು ತುರುಕುವ ಸಲುವಾಗಿ ಸೇರಿಸಿಲ್ಲ. ತಾನು ಹೇಳಬೇಕಾದ ಕಥೆಗೆ ಬದ್ಧನಾಗಿ ಪ್ರಾಮಾಣಿಕವಾಗಿ ಹೇಳಿದ್ದರಿಂದಲೇ ಮೂಡಿಬಂದಿದ್ದು ಮಿಡ್‍ನೈಟ್ ರನ್ ಎನ್ನುವ ಮಾರ್ಟಿನ್ ಬ್ರೆಸ್ಟ್ ಅವರ ನಿರ್ದೇಶನದ ಅದ್ಭುತ ಚಿತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...