Homeಚಳವಳಿಮಧ್ಯರಾತ್ರಿಯ ಮಾಸ್ಟರ್‌ಸ್ಟ್ರೋಕ್: ಸುಳ್ಳು, ಸಂಚು, ದಮನಗಳೇ ತಿರುಗುಬಾಣವಾದ ಗಳಿಗೆ

ಮಧ್ಯರಾತ್ರಿಯ ಮಾಸ್ಟರ್‌ಸ್ಟ್ರೋಕ್: ಸುಳ್ಳು, ಸಂಚು, ದಮನಗಳೇ ತಿರುಗುಬಾಣವಾದ ಗಳಿಗೆ

ಜನವರಿ 26 ರ ಕೆಂಪುಕೋಟೆಯ ಅಹಿತಕರ ಘಟನೆಯನ್ನೇ ಮುಂದೆ ಮಾಡಿಕೊಂಡು, ಒಂದು ಅಪ್ರತಿಮ ಹೋರಾಟವನ್ನು ಬಲಪ್ರಯೋಗದಿಂದ ಹಿಮ್ಮೆಟ್ಟಿಸಲು ಯೋಚಿಸಿದ್ದ, ಯೋಜಿಸಿದ್ದ ಸರ್ಕಾರಕ್ಕೆ ಅದೇ ತಿರುಗುಬಾಣವಾಗುತ್ತಿದೆ.

- Advertisement -
- Advertisement -

ಉತ್ತರಪ್ರದೇಶ-ದೆಹಲಿ ಗಡಿಯ ಗಾಜಿಪುರ್‌‌ ಪ್ರದೇಶದಲ್ಲಿ ರಾಕೇಶ್ ಟಿಕಾಯತ್ ನೇತೃತ್ವದ ಭಾರತ್ ಕಿಸಾನ್ ಯುನಿಯುನ್ (ಬಿಕೆಯು) ಅಡಿಯಲ್ಲಿ 60 ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಮುಗಿಸಿಬಿಡಲು ಅರೆಸೇನಾ ತುಕಡಿಗಳು, ಸಿಅರ್‌ಪಿಎಫ್ ತುಕಡಿಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಪೊಲೀಸರನ್ನು ಗುರುವಾರ ಸಂಜೆ ನಿಯೋಜಿಸಲಯಿತು.

ಇದಕ್ಕು ಮೊದಲೆ ಗುರುವಾರ ರಾತ್ರಿಯೊಳಗೆ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡಬೇಕು ಎಂದು ಉತ್ತರಪ್ರದೇಶ ಆಡಳಿತವು ಹುಕುಂ ಚಲಾಯಿಸಿತ್ತು. ಮಧ್ಯರಾತ್ರಿ ಹೊತ್ತಿಗೆ ಪೊಲೀಸ್ ಲಾಠಿಗಳು, ಅಶ್ರುವಾಯು, ಜಲಫಿರಂಗಿಗಳನ್ನು ಬಳಸಿ ವ್ಯವಸ್ಥಿತವಾಗಿ ರೈತರನ್ನು ಅಲ್ಲಿಂದ ಒಕ್ಕಲೆಬ್ಬಿಸುವ ಸಂಚು ರೂಪುಗೊಂಡಿತ್ತು. ಅದಕ್ಕೆ ಪೂರ್ವಭಾವಿಯಾಗಿ 144 ಸೆಕ್ಷನ್ ಹೇರಲಾಗಿತ್ತು.

ಹರಿಯಾಣ

ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ಮೀಡಿಯಾಗಳು ಸಹಜವಾಗಿಯೇ ಪ್ರತಿಭಟನೆ ಮುಗಿದ ಕತೆ ಎನ್ನುತ್ತ, ಮತ್ತೆ ಮತ್ತೆ ದೆಹಲಿಯ ಅಹಿತಕರ ಘಟನೆಯ ತುಣಕನ್ನು ಪ್ರದರ್ಶಿಸುತ್ತಿದ್ದವು. ಇದು ದೇಶದ ಎಲ್ಲ ಭಾಗದ ರೈತರಷ್ಟೇ ಅಲ್ಲದೇ, ಈ ಚಳವಳಿಯನ್ನು ಬೆಂಬಲಿಸುತ್ತ ಬಂದವರೆಲ್ಲರಿಗೂ ಆತಂಕ, ಸಂಕಟ ಶುರುವಾಗಿತ್ತು. ಎಷ್ಟೋ ಜನ ಮಧ್ಯರಾತ್ರಿ 2 ರವರೆಗೂ ನಿದ್ದೆ ಮಾಡದೇ ಏನಾಗುವುದೋ ಎಂದು ಟಿವಿ, ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದರು.

ರಾತ್ರಿಯಾಗುತ್ತಿದ್ದಂತೆ ಕೆಲವು ಬಿಜೆಪಿ ನಾಯಕರು ತಮ್ಮ ಕಾರ್ಯಕರ್ತರೊಂದಿಗೆ ಬಂದು ಅಲ್ಲಿಂದ ಜಾಗ ಖಾಲಿ ಮಾಡುವಂತೆ ಒತ್ತಡ ಹೇರುತ್ತ ಧಮಕಿ ಹಾಕತೊಡಗಿದರು. ಅವರ ಬೆನ್ನಿಗೆ ಪೊಲೀಸ್ ಪಡೆಯಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಆಗಲೇ ಭಯ ಹುಟ್ಟಿಸಿದ್ದರು. ಇನ್ನೇನು ದೌರ್ಜನ್ಯದಿಂದ ಅಲ್ಲಿನ ರೈತರನ್ನು ಓಡಿಸುತ್ತಾರೆ ಎನ್ನುವ ಹೊತ್ತಿಗೆ ಹಿರಿಯ ರೈತ ನಾಯಕ ರಾಕೇಶ್ ಟಿಕಾಯತ್ ಮೈಕ್ ತೆಗೆದುಕೊಂಡರು.

ಇದನ್ನೂ ಓದಿ: ರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌

ಮಧ್ಯರಾತ್ರಿಯ ಮಾಸ್ಟರ್‌ಸ್ಟ್ರೋಕ್

ತೀವ್ರ ನೊಂದಿದ್ದ ಟಿಕಾಯತ್, “ನಾವು ಇಲ್ಲಿಂದ ಕದಲುವುದಿಲ್ಲ. ಗುಂಡಿಗೆ ಬೇಕಾದರೆ ಎದೆ ಕೊಡುತ್ತೇನೆ ಇಲ್ಲವೇ ಇಲ್ಲೇ ನೇಣು ಹಾಕಿಕೊಳ್ಳುತ್ತೇನೆ. ಪೊಲೀಸರು ಮತ್ತು ಬಿಜೆಪಿಯವರು ಸೇರಿ ನಮ್ಮನ್ನೆಲ್ಲ ದೌರ್ಜನ್ಯದಿಂದ ಕೊಲ್ಲಲು ಬಂದಿದ್ದಾರೆ. ಆದರೆ ಯಾರೂ ಧೃತಿಗೆಡಬೇಡಿ” ಎನ್ನುತ್ತ ಭಾವುಕರಾದರು. ಅವರ ಕಣ್ಣುಗಳು ತೇವಗೊಂಡವು.

ಅಲ್ಲಿಗೇ ಮತ್ತೆ ರೈತರಲ್ಲಿ ಹೊಸ ಚೈತನ್ಯ ಸಂಚಯವಾಯಿತು. ನಾವ್ಯಾರೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಸಾರಿದರು. ಟಿಕಾಯತ್ ಭಾಷಣ ವೈರಲ್ ಆಯಿತು. ಇದು ಪಶ್ಚಿಮ ಉತ್ತರಪ್ರದೇಶ ಮತ್ತು ಹರಿಯಾಣದಲ್ಲಿ ಪೊಲೀಸರ ಮೇಲೆ ಆಕ್ರೋಶ ಹೆಚ್ಚಲು ಕಾರಣವಾಯಿತು, ರಾತ್ರಿಯೇ ತಂಡೋಪತಂಡವಾಗಿ ಟ್ರ್ಯಾಕ್ಟರಿಗಳಲ್ಲಿ ರೈತರು ಗಾಜಿಪುರ್‌ದತ್ತ ಬರತೊಡಗಿದರು. ಆಗ ರೈತಶಕ್ತಿಯೇ ಪ್ರಭುತ್ವಕ್ಕೆ ಒಂದು ಮಾಸ್ಟರ್‌ಸ್ಟ್ರೋಕ್ ತೋರಿಸಿದಂತಾಗಿತು. ಮುಂಜಾನೆ ಹೊತ್ತಿಗೆ ರೈತರ ಜಮಾವಣೆ ಹೆಚ್ಚುತ್ತಲೇ ಹೋಯಿತು. ದೇಶದ ಎಲ್ಲೆಡೆಯಿಂದ ರೈತರಿಗೆ ಬೆಂಬಲ ದ್ವಿಗುಣಗೊಂಡಿತು.

ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಮಿಂದೆದ್ದ ರೈತ ಗಣರಾಜ್ಯೋತ್ಸವ: ವಿಶೇಷ ವರದಿ

ಜಾಟರ ಸಿಟ್ಟು ಬಿಜೆಪಿ ಮೇಲೆ

ಪಶ್ಚಿಮ ಉತ್ತರಪ್ರದೇಶ, ಹರಿಯಾಣ ಮತ್ತು ಪೂರ್ವ ರಾಜಸ್ತಾನದಲ್ಲಿ ಕೃಷಿಕ ಜಾಟ್ ಸಮುದಾಯ ಪ್ರಬಲವಾಗಿದೆ, ಜನಸಂಖ್ಯೆಯಲ್ಲೂ ಗಣನೀಯವಾಗಿದೆ. 2013 ರಲ್ಲಿ ಉತ್ತರಪ್ರದೇಶದ ಮುಜಾಫರ್‌ಘರ್‌ನಲ್ಲಿ ಸಂಭವಿಸಿದ (ಸೃಷ್ಟಿಸಿದ) ಹೇಯ ಕೋಮು ಗಲಭೆಯ ನಂತರ, ಜಾಟರು ಮತ್ತು ಮುಸ್ಲಿಮರ ನಡುವೆ ಬಿರುಕು ತಂದ ಬಿಜೆಪಿ ಅಲ್ಲಿ ಜಾಟರ ವೊಟ್‌ಬ್ಯಾಂಕ್ ಅನ್ನು ಭದ್ರಪಡಿಸಿಕೊಂಡು ಚುನಾವಣೆಗಳನ್ನು ಗೆಲ್ಲುತ್ತಾ ಬಂದಿದೆ.

ನೇರ ರಾಜಕಾರಣ ಮಾಡದಿದ್ದರೂ ಟಿಕಾಯತ್ ಸಹೋದರರು ಬಿಜೆಪಿಗೆ ಬಹಿರಂಗ ಬೆಂಬಲ ಕೊಡುತ್ತ ಬಂದಿದ್ದರು. ತಮ್ಮ ರೈತ ನಾಯಕ ಕಣ್ಣೀರು ಹಾಕುವಂತೆ ಮಾಡಿದ ಬಿಜೆಪಿ ವಿರುದ್ದ ಜಾಟರು ತಿರುಗಿ ಬೀಳಬಹುದು ಎಂದು ರಾಜಕಿಯ ವಿಶ್ಲೇಷಕರು ಅಬಿಪ್ರಾಯ ಪಟ್ಟಿದ್ದಾರೆ. ಶುಕ್ರವಾರ ಅದರ ಕುರುಹುಗಳು ಢಾಳಾಗಿಯೇ ಗೋಚರಿಸಿವೆ ಅಲ್ಲವೇ?

ತಿರುಗುಬಾಣ

ಈ ಮಾಸ್ಟರ್‌ಸ್ಟ್ರೋಕ್‌ನಿಂದಾಗಿ ಕೇಂದ್ರ ಸರ್ಕಾರದ ಸುಳ್ಳು, ಸಂಚು ಮತ್ತು ದಮನಕಾರಿ ಪ್ರವೃತ್ತಿಯೇ ಅದಕ್ಕೆ ತಿರುಗುಬಾಣವಾಗಿತು. ರಾತ್ರಿಯೇ ಸ್ಥಗಿತಗೊಂಡಿದ್ದ ವಿದ್ಯುತ್, ನೀರು ಸೌಲಭ್ಯ ಮುಂಜಾನೆ ವಾಪಸ್ ಬಂದಿತು. ಹೆಚ್ಚುವರಿ ತುಕಡಿಗಳು ಮತ್ತು ಪೊಲೀಸರನ್ನು ಸರ್ಕಾರ ಹಿಂದಕ್ಕೆ ಕರೆಸಿಕೊಂಡಿತು. ಜಾಗ ಖಾಲಿ ಮಾಡಿಸಲು ಬಂದ ಸರ್ಕಾರವೇ ಜಾಗ ಖಾಲಿ ಮಾಡಬೇಕಾಯಿತು.

ಶುಕ್ರವಾರ ಮಧ್ಯಾಹ್ನ ಪಕ್ಷವೊಂದರ ಬಾಲಂಗೋಚಿಗಳಾದ ದುಷ್ಕರ್ಮಿಗಳು ಪ್ರತಿಭಟನೆಯ ಒಂದು ಸ್ಥಳಕ್ಕೆ ನುಗ್ಗಿ ದಾಂಧಲೆ ಮಾಡಿ, ರೈತರನ್ನು ಬೆದರಿಸಲು ನೋಡಿದರು. ರೈತರು ಅದಕ್ಕೆ ಪ್ರತ್ಯುತ್ತರ ನೀಡಿದರು.
ಶುಕ್ರವಾರ ಸಿಂಘುವಿನಲ್ಲಿ ಸಂಯುಕ್ತ್ ಕಿಸಾನ್ ಮೋರ್ಚಾ ತನ್ನ ಪ್ರತಿಭಟನೆಯನ್ನು ಚುರುಕುಗೊಳಿಸಿದೆ, ಪ್ರತಿಭಟನಾಕಾರರ ಹುಮ್ಮಸ್ಸನ್ನು ಹೆಚ್ಚಿಸಿದೆ.

ಸರ್ಕಾರ ಬೇರೊಂದು ಮಾರ್ಗದಲ್ಲಿ ದಮನ ಮಾಡಲು ಯತ್ನಿಸಬಹುದು. ಅದನ್ನು ವಿಫಲಗೊಳಿಸುವ ಶಕ್ತಿ ರೈತ ಹೋರಾಟಕ್ಕೆ ಇನ್ನಷ್ಟು ಸಂಚಯವಾಗಲಿ. ಅದಾಗಬೇಕೆಂದರೆ, ನಮ್ಮ ನಮ್ಮ ನೆಲೆಯಲ್ಲಿ ನಾವು ರೈತರ ಪರ ಧ್ವನಿ ಎತ್ತಬೇಕಾದ ತುರ್ತು ಸಮಯವಿದು.

ಇದನ್ನೂ ಓದಿ: ‘ಜ. 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ’: ಬಿಜೆಪಿ ತೊರೆದ ಹಿರಿಯ ನಾಯಕ ರಾಂಪಾಲ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...