Homeಚಳವಳಿಮಧ್ಯರಾತ್ರಿಯ ಮಾಸ್ಟರ್‌ಸ್ಟ್ರೋಕ್: ಸುಳ್ಳು, ಸಂಚು, ದಮನಗಳೇ ತಿರುಗುಬಾಣವಾದ ಗಳಿಗೆ

ಮಧ್ಯರಾತ್ರಿಯ ಮಾಸ್ಟರ್‌ಸ್ಟ್ರೋಕ್: ಸುಳ್ಳು, ಸಂಚು, ದಮನಗಳೇ ತಿರುಗುಬಾಣವಾದ ಗಳಿಗೆ

ಜನವರಿ 26 ರ ಕೆಂಪುಕೋಟೆಯ ಅಹಿತಕರ ಘಟನೆಯನ್ನೇ ಮುಂದೆ ಮಾಡಿಕೊಂಡು, ಒಂದು ಅಪ್ರತಿಮ ಹೋರಾಟವನ್ನು ಬಲಪ್ರಯೋಗದಿಂದ ಹಿಮ್ಮೆಟ್ಟಿಸಲು ಯೋಚಿಸಿದ್ದ, ಯೋಜಿಸಿದ್ದ ಸರ್ಕಾರಕ್ಕೆ ಅದೇ ತಿರುಗುಬಾಣವಾಗುತ್ತಿದೆ.

- Advertisement -
- Advertisement -

ಉತ್ತರಪ್ರದೇಶ-ದೆಹಲಿ ಗಡಿಯ ಗಾಜಿಪುರ್‌‌ ಪ್ರದೇಶದಲ್ಲಿ ರಾಕೇಶ್ ಟಿಕಾಯತ್ ನೇತೃತ್ವದ ಭಾರತ್ ಕಿಸಾನ್ ಯುನಿಯುನ್ (ಬಿಕೆಯು) ಅಡಿಯಲ್ಲಿ 60 ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಮುಗಿಸಿಬಿಡಲು ಅರೆಸೇನಾ ತುಕಡಿಗಳು, ಸಿಅರ್‌ಪಿಎಫ್ ತುಕಡಿಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಪೊಲೀಸರನ್ನು ಗುರುವಾರ ಸಂಜೆ ನಿಯೋಜಿಸಲಯಿತು.

ಇದಕ್ಕು ಮೊದಲೆ ಗುರುವಾರ ರಾತ್ರಿಯೊಳಗೆ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡಬೇಕು ಎಂದು ಉತ್ತರಪ್ರದೇಶ ಆಡಳಿತವು ಹುಕುಂ ಚಲಾಯಿಸಿತ್ತು. ಮಧ್ಯರಾತ್ರಿ ಹೊತ್ತಿಗೆ ಪೊಲೀಸ್ ಲಾಠಿಗಳು, ಅಶ್ರುವಾಯು, ಜಲಫಿರಂಗಿಗಳನ್ನು ಬಳಸಿ ವ್ಯವಸ್ಥಿತವಾಗಿ ರೈತರನ್ನು ಅಲ್ಲಿಂದ ಒಕ್ಕಲೆಬ್ಬಿಸುವ ಸಂಚು ರೂಪುಗೊಂಡಿತ್ತು. ಅದಕ್ಕೆ ಪೂರ್ವಭಾವಿಯಾಗಿ 144 ಸೆಕ್ಷನ್ ಹೇರಲಾಗಿತ್ತು.

ಹರಿಯಾಣ

ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ಮೀಡಿಯಾಗಳು ಸಹಜವಾಗಿಯೇ ಪ್ರತಿಭಟನೆ ಮುಗಿದ ಕತೆ ಎನ್ನುತ್ತ, ಮತ್ತೆ ಮತ್ತೆ ದೆಹಲಿಯ ಅಹಿತಕರ ಘಟನೆಯ ತುಣಕನ್ನು ಪ್ರದರ್ಶಿಸುತ್ತಿದ್ದವು. ಇದು ದೇಶದ ಎಲ್ಲ ಭಾಗದ ರೈತರಷ್ಟೇ ಅಲ್ಲದೇ, ಈ ಚಳವಳಿಯನ್ನು ಬೆಂಬಲಿಸುತ್ತ ಬಂದವರೆಲ್ಲರಿಗೂ ಆತಂಕ, ಸಂಕಟ ಶುರುವಾಗಿತ್ತು. ಎಷ್ಟೋ ಜನ ಮಧ್ಯರಾತ್ರಿ 2 ರವರೆಗೂ ನಿದ್ದೆ ಮಾಡದೇ ಏನಾಗುವುದೋ ಎಂದು ಟಿವಿ, ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದರು.

ರಾತ್ರಿಯಾಗುತ್ತಿದ್ದಂತೆ ಕೆಲವು ಬಿಜೆಪಿ ನಾಯಕರು ತಮ್ಮ ಕಾರ್ಯಕರ್ತರೊಂದಿಗೆ ಬಂದು ಅಲ್ಲಿಂದ ಜಾಗ ಖಾಲಿ ಮಾಡುವಂತೆ ಒತ್ತಡ ಹೇರುತ್ತ ಧಮಕಿ ಹಾಕತೊಡಗಿದರು. ಅವರ ಬೆನ್ನಿಗೆ ಪೊಲೀಸ್ ಪಡೆಯಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಆಗಲೇ ಭಯ ಹುಟ್ಟಿಸಿದ್ದರು. ಇನ್ನೇನು ದೌರ್ಜನ್ಯದಿಂದ ಅಲ್ಲಿನ ರೈತರನ್ನು ಓಡಿಸುತ್ತಾರೆ ಎನ್ನುವ ಹೊತ್ತಿಗೆ ಹಿರಿಯ ರೈತ ನಾಯಕ ರಾಕೇಶ್ ಟಿಕಾಯತ್ ಮೈಕ್ ತೆಗೆದುಕೊಂಡರು.

ಇದನ್ನೂ ಓದಿ: ರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌

ಮಧ್ಯರಾತ್ರಿಯ ಮಾಸ್ಟರ್‌ಸ್ಟ್ರೋಕ್

ತೀವ್ರ ನೊಂದಿದ್ದ ಟಿಕಾಯತ್, “ನಾವು ಇಲ್ಲಿಂದ ಕದಲುವುದಿಲ್ಲ. ಗುಂಡಿಗೆ ಬೇಕಾದರೆ ಎದೆ ಕೊಡುತ್ತೇನೆ ಇಲ್ಲವೇ ಇಲ್ಲೇ ನೇಣು ಹಾಕಿಕೊಳ್ಳುತ್ತೇನೆ. ಪೊಲೀಸರು ಮತ್ತು ಬಿಜೆಪಿಯವರು ಸೇರಿ ನಮ್ಮನ್ನೆಲ್ಲ ದೌರ್ಜನ್ಯದಿಂದ ಕೊಲ್ಲಲು ಬಂದಿದ್ದಾರೆ. ಆದರೆ ಯಾರೂ ಧೃತಿಗೆಡಬೇಡಿ” ಎನ್ನುತ್ತ ಭಾವುಕರಾದರು. ಅವರ ಕಣ್ಣುಗಳು ತೇವಗೊಂಡವು.

ಅಲ್ಲಿಗೇ ಮತ್ತೆ ರೈತರಲ್ಲಿ ಹೊಸ ಚೈತನ್ಯ ಸಂಚಯವಾಯಿತು. ನಾವ್ಯಾರೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಸಾರಿದರು. ಟಿಕಾಯತ್ ಭಾಷಣ ವೈರಲ್ ಆಯಿತು. ಇದು ಪಶ್ಚಿಮ ಉತ್ತರಪ್ರದೇಶ ಮತ್ತು ಹರಿಯಾಣದಲ್ಲಿ ಪೊಲೀಸರ ಮೇಲೆ ಆಕ್ರೋಶ ಹೆಚ್ಚಲು ಕಾರಣವಾಯಿತು, ರಾತ್ರಿಯೇ ತಂಡೋಪತಂಡವಾಗಿ ಟ್ರ್ಯಾಕ್ಟರಿಗಳಲ್ಲಿ ರೈತರು ಗಾಜಿಪುರ್‌ದತ್ತ ಬರತೊಡಗಿದರು. ಆಗ ರೈತಶಕ್ತಿಯೇ ಪ್ರಭುತ್ವಕ್ಕೆ ಒಂದು ಮಾಸ್ಟರ್‌ಸ್ಟ್ರೋಕ್ ತೋರಿಸಿದಂತಾಗಿತು. ಮುಂಜಾನೆ ಹೊತ್ತಿಗೆ ರೈತರ ಜಮಾವಣೆ ಹೆಚ್ಚುತ್ತಲೇ ಹೋಯಿತು. ದೇಶದ ಎಲ್ಲೆಡೆಯಿಂದ ರೈತರಿಗೆ ಬೆಂಬಲ ದ್ವಿಗುಣಗೊಂಡಿತು.

ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಮಿಂದೆದ್ದ ರೈತ ಗಣರಾಜ್ಯೋತ್ಸವ: ವಿಶೇಷ ವರದಿ

ಜಾಟರ ಸಿಟ್ಟು ಬಿಜೆಪಿ ಮೇಲೆ

ಪಶ್ಚಿಮ ಉತ್ತರಪ್ರದೇಶ, ಹರಿಯಾಣ ಮತ್ತು ಪೂರ್ವ ರಾಜಸ್ತಾನದಲ್ಲಿ ಕೃಷಿಕ ಜಾಟ್ ಸಮುದಾಯ ಪ್ರಬಲವಾಗಿದೆ, ಜನಸಂಖ್ಯೆಯಲ್ಲೂ ಗಣನೀಯವಾಗಿದೆ. 2013 ರಲ್ಲಿ ಉತ್ತರಪ್ರದೇಶದ ಮುಜಾಫರ್‌ಘರ್‌ನಲ್ಲಿ ಸಂಭವಿಸಿದ (ಸೃಷ್ಟಿಸಿದ) ಹೇಯ ಕೋಮು ಗಲಭೆಯ ನಂತರ, ಜಾಟರು ಮತ್ತು ಮುಸ್ಲಿಮರ ನಡುವೆ ಬಿರುಕು ತಂದ ಬಿಜೆಪಿ ಅಲ್ಲಿ ಜಾಟರ ವೊಟ್‌ಬ್ಯಾಂಕ್ ಅನ್ನು ಭದ್ರಪಡಿಸಿಕೊಂಡು ಚುನಾವಣೆಗಳನ್ನು ಗೆಲ್ಲುತ್ತಾ ಬಂದಿದೆ.

ನೇರ ರಾಜಕಾರಣ ಮಾಡದಿದ್ದರೂ ಟಿಕಾಯತ್ ಸಹೋದರರು ಬಿಜೆಪಿಗೆ ಬಹಿರಂಗ ಬೆಂಬಲ ಕೊಡುತ್ತ ಬಂದಿದ್ದರು. ತಮ್ಮ ರೈತ ನಾಯಕ ಕಣ್ಣೀರು ಹಾಕುವಂತೆ ಮಾಡಿದ ಬಿಜೆಪಿ ವಿರುದ್ದ ಜಾಟರು ತಿರುಗಿ ಬೀಳಬಹುದು ಎಂದು ರಾಜಕಿಯ ವಿಶ್ಲೇಷಕರು ಅಬಿಪ್ರಾಯ ಪಟ್ಟಿದ್ದಾರೆ. ಶುಕ್ರವಾರ ಅದರ ಕುರುಹುಗಳು ಢಾಳಾಗಿಯೇ ಗೋಚರಿಸಿವೆ ಅಲ್ಲವೇ?

ತಿರುಗುಬಾಣ

ಈ ಮಾಸ್ಟರ್‌ಸ್ಟ್ರೋಕ್‌ನಿಂದಾಗಿ ಕೇಂದ್ರ ಸರ್ಕಾರದ ಸುಳ್ಳು, ಸಂಚು ಮತ್ತು ದಮನಕಾರಿ ಪ್ರವೃತ್ತಿಯೇ ಅದಕ್ಕೆ ತಿರುಗುಬಾಣವಾಗಿತು. ರಾತ್ರಿಯೇ ಸ್ಥಗಿತಗೊಂಡಿದ್ದ ವಿದ್ಯುತ್, ನೀರು ಸೌಲಭ್ಯ ಮುಂಜಾನೆ ವಾಪಸ್ ಬಂದಿತು. ಹೆಚ್ಚುವರಿ ತುಕಡಿಗಳು ಮತ್ತು ಪೊಲೀಸರನ್ನು ಸರ್ಕಾರ ಹಿಂದಕ್ಕೆ ಕರೆಸಿಕೊಂಡಿತು. ಜಾಗ ಖಾಲಿ ಮಾಡಿಸಲು ಬಂದ ಸರ್ಕಾರವೇ ಜಾಗ ಖಾಲಿ ಮಾಡಬೇಕಾಯಿತು.

ಶುಕ್ರವಾರ ಮಧ್ಯಾಹ್ನ ಪಕ್ಷವೊಂದರ ಬಾಲಂಗೋಚಿಗಳಾದ ದುಷ್ಕರ್ಮಿಗಳು ಪ್ರತಿಭಟನೆಯ ಒಂದು ಸ್ಥಳಕ್ಕೆ ನುಗ್ಗಿ ದಾಂಧಲೆ ಮಾಡಿ, ರೈತರನ್ನು ಬೆದರಿಸಲು ನೋಡಿದರು. ರೈತರು ಅದಕ್ಕೆ ಪ್ರತ್ಯುತ್ತರ ನೀಡಿದರು.
ಶುಕ್ರವಾರ ಸಿಂಘುವಿನಲ್ಲಿ ಸಂಯುಕ್ತ್ ಕಿಸಾನ್ ಮೋರ್ಚಾ ತನ್ನ ಪ್ರತಿಭಟನೆಯನ್ನು ಚುರುಕುಗೊಳಿಸಿದೆ, ಪ್ರತಿಭಟನಾಕಾರರ ಹುಮ್ಮಸ್ಸನ್ನು ಹೆಚ್ಚಿಸಿದೆ.

ಸರ್ಕಾರ ಬೇರೊಂದು ಮಾರ್ಗದಲ್ಲಿ ದಮನ ಮಾಡಲು ಯತ್ನಿಸಬಹುದು. ಅದನ್ನು ವಿಫಲಗೊಳಿಸುವ ಶಕ್ತಿ ರೈತ ಹೋರಾಟಕ್ಕೆ ಇನ್ನಷ್ಟು ಸಂಚಯವಾಗಲಿ. ಅದಾಗಬೇಕೆಂದರೆ, ನಮ್ಮ ನಮ್ಮ ನೆಲೆಯಲ್ಲಿ ನಾವು ರೈತರ ಪರ ಧ್ವನಿ ಎತ್ತಬೇಕಾದ ತುರ್ತು ಸಮಯವಿದು.

ಇದನ್ನೂ ಓದಿ: ‘ಜ. 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ’: ಬಿಜೆಪಿ ತೊರೆದ ಹಿರಿಯ ನಾಯಕ ರಾಂಪಾಲ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...