Homeಚಳವಳಿಮಧ್ಯರಾತ್ರಿಯ ಮಾಸ್ಟರ್‌ಸ್ಟ್ರೋಕ್: ಸುಳ್ಳು, ಸಂಚು, ದಮನಗಳೇ ತಿರುಗುಬಾಣವಾದ ಗಳಿಗೆ

ಮಧ್ಯರಾತ್ರಿಯ ಮಾಸ್ಟರ್‌ಸ್ಟ್ರೋಕ್: ಸುಳ್ಳು, ಸಂಚು, ದಮನಗಳೇ ತಿರುಗುಬಾಣವಾದ ಗಳಿಗೆ

ಜನವರಿ 26 ರ ಕೆಂಪುಕೋಟೆಯ ಅಹಿತಕರ ಘಟನೆಯನ್ನೇ ಮುಂದೆ ಮಾಡಿಕೊಂಡು, ಒಂದು ಅಪ್ರತಿಮ ಹೋರಾಟವನ್ನು ಬಲಪ್ರಯೋಗದಿಂದ ಹಿಮ್ಮೆಟ್ಟಿಸಲು ಯೋಚಿಸಿದ್ದ, ಯೋಜಿಸಿದ್ದ ಸರ್ಕಾರಕ್ಕೆ ಅದೇ ತಿರುಗುಬಾಣವಾಗುತ್ತಿದೆ.

- Advertisement -
- Advertisement -

ಉತ್ತರಪ್ರದೇಶ-ದೆಹಲಿ ಗಡಿಯ ಗಾಜಿಪುರ್‌‌ ಪ್ರದೇಶದಲ್ಲಿ ರಾಕೇಶ್ ಟಿಕಾಯತ್ ನೇತೃತ್ವದ ಭಾರತ್ ಕಿಸಾನ್ ಯುನಿಯುನ್ (ಬಿಕೆಯು) ಅಡಿಯಲ್ಲಿ 60 ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಮುಗಿಸಿಬಿಡಲು ಅರೆಸೇನಾ ತುಕಡಿಗಳು, ಸಿಅರ್‌ಪಿಎಫ್ ತುಕಡಿಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಪೊಲೀಸರನ್ನು ಗುರುವಾರ ಸಂಜೆ ನಿಯೋಜಿಸಲಯಿತು.

ಇದಕ್ಕು ಮೊದಲೆ ಗುರುವಾರ ರಾತ್ರಿಯೊಳಗೆ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡಬೇಕು ಎಂದು ಉತ್ತರಪ್ರದೇಶ ಆಡಳಿತವು ಹುಕುಂ ಚಲಾಯಿಸಿತ್ತು. ಮಧ್ಯರಾತ್ರಿ ಹೊತ್ತಿಗೆ ಪೊಲೀಸ್ ಲಾಠಿಗಳು, ಅಶ್ರುವಾಯು, ಜಲಫಿರಂಗಿಗಳನ್ನು ಬಳಸಿ ವ್ಯವಸ್ಥಿತವಾಗಿ ರೈತರನ್ನು ಅಲ್ಲಿಂದ ಒಕ್ಕಲೆಬ್ಬಿಸುವ ಸಂಚು ರೂಪುಗೊಂಡಿತ್ತು. ಅದಕ್ಕೆ ಪೂರ್ವಭಾವಿಯಾಗಿ 144 ಸೆಕ್ಷನ್ ಹೇರಲಾಗಿತ್ತು.

ಹರಿಯಾಣ

ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ಮೀಡಿಯಾಗಳು ಸಹಜವಾಗಿಯೇ ಪ್ರತಿಭಟನೆ ಮುಗಿದ ಕತೆ ಎನ್ನುತ್ತ, ಮತ್ತೆ ಮತ್ತೆ ದೆಹಲಿಯ ಅಹಿತಕರ ಘಟನೆಯ ತುಣಕನ್ನು ಪ್ರದರ್ಶಿಸುತ್ತಿದ್ದವು. ಇದು ದೇಶದ ಎಲ್ಲ ಭಾಗದ ರೈತರಷ್ಟೇ ಅಲ್ಲದೇ, ಈ ಚಳವಳಿಯನ್ನು ಬೆಂಬಲಿಸುತ್ತ ಬಂದವರೆಲ್ಲರಿಗೂ ಆತಂಕ, ಸಂಕಟ ಶುರುವಾಗಿತ್ತು. ಎಷ್ಟೋ ಜನ ಮಧ್ಯರಾತ್ರಿ 2 ರವರೆಗೂ ನಿದ್ದೆ ಮಾಡದೇ ಏನಾಗುವುದೋ ಎಂದು ಟಿವಿ, ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದರು.

ರಾತ್ರಿಯಾಗುತ್ತಿದ್ದಂತೆ ಕೆಲವು ಬಿಜೆಪಿ ನಾಯಕರು ತಮ್ಮ ಕಾರ್ಯಕರ್ತರೊಂದಿಗೆ ಬಂದು ಅಲ್ಲಿಂದ ಜಾಗ ಖಾಲಿ ಮಾಡುವಂತೆ ಒತ್ತಡ ಹೇರುತ್ತ ಧಮಕಿ ಹಾಕತೊಡಗಿದರು. ಅವರ ಬೆನ್ನಿಗೆ ಪೊಲೀಸ್ ಪಡೆಯಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಆಗಲೇ ಭಯ ಹುಟ್ಟಿಸಿದ್ದರು. ಇನ್ನೇನು ದೌರ್ಜನ್ಯದಿಂದ ಅಲ್ಲಿನ ರೈತರನ್ನು ಓಡಿಸುತ್ತಾರೆ ಎನ್ನುವ ಹೊತ್ತಿಗೆ ಹಿರಿಯ ರೈತ ನಾಯಕ ರಾಕೇಶ್ ಟಿಕಾಯತ್ ಮೈಕ್ ತೆಗೆದುಕೊಂಡರು.

ಇದನ್ನೂ ಓದಿ: ರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌

ಮಧ್ಯರಾತ್ರಿಯ ಮಾಸ್ಟರ್‌ಸ್ಟ್ರೋಕ್

ತೀವ್ರ ನೊಂದಿದ್ದ ಟಿಕಾಯತ್, “ನಾವು ಇಲ್ಲಿಂದ ಕದಲುವುದಿಲ್ಲ. ಗುಂಡಿಗೆ ಬೇಕಾದರೆ ಎದೆ ಕೊಡುತ್ತೇನೆ ಇಲ್ಲವೇ ಇಲ್ಲೇ ನೇಣು ಹಾಕಿಕೊಳ್ಳುತ್ತೇನೆ. ಪೊಲೀಸರು ಮತ್ತು ಬಿಜೆಪಿಯವರು ಸೇರಿ ನಮ್ಮನ್ನೆಲ್ಲ ದೌರ್ಜನ್ಯದಿಂದ ಕೊಲ್ಲಲು ಬಂದಿದ್ದಾರೆ. ಆದರೆ ಯಾರೂ ಧೃತಿಗೆಡಬೇಡಿ” ಎನ್ನುತ್ತ ಭಾವುಕರಾದರು. ಅವರ ಕಣ್ಣುಗಳು ತೇವಗೊಂಡವು.

ಅಲ್ಲಿಗೇ ಮತ್ತೆ ರೈತರಲ್ಲಿ ಹೊಸ ಚೈತನ್ಯ ಸಂಚಯವಾಯಿತು. ನಾವ್ಯಾರೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಸಾರಿದರು. ಟಿಕಾಯತ್ ಭಾಷಣ ವೈರಲ್ ಆಯಿತು. ಇದು ಪಶ್ಚಿಮ ಉತ್ತರಪ್ರದೇಶ ಮತ್ತು ಹರಿಯಾಣದಲ್ಲಿ ಪೊಲೀಸರ ಮೇಲೆ ಆಕ್ರೋಶ ಹೆಚ್ಚಲು ಕಾರಣವಾಯಿತು, ರಾತ್ರಿಯೇ ತಂಡೋಪತಂಡವಾಗಿ ಟ್ರ್ಯಾಕ್ಟರಿಗಳಲ್ಲಿ ರೈತರು ಗಾಜಿಪುರ್‌ದತ್ತ ಬರತೊಡಗಿದರು. ಆಗ ರೈತಶಕ್ತಿಯೇ ಪ್ರಭುತ್ವಕ್ಕೆ ಒಂದು ಮಾಸ್ಟರ್‌ಸ್ಟ್ರೋಕ್ ತೋರಿಸಿದಂತಾಗಿತು. ಮುಂಜಾನೆ ಹೊತ್ತಿಗೆ ರೈತರ ಜಮಾವಣೆ ಹೆಚ್ಚುತ್ತಲೇ ಹೋಯಿತು. ದೇಶದ ಎಲ್ಲೆಡೆಯಿಂದ ರೈತರಿಗೆ ಬೆಂಬಲ ದ್ವಿಗುಣಗೊಂಡಿತು.

ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಮಿಂದೆದ್ದ ರೈತ ಗಣರಾಜ್ಯೋತ್ಸವ: ವಿಶೇಷ ವರದಿ

ಜಾಟರ ಸಿಟ್ಟು ಬಿಜೆಪಿ ಮೇಲೆ

ಪಶ್ಚಿಮ ಉತ್ತರಪ್ರದೇಶ, ಹರಿಯಾಣ ಮತ್ತು ಪೂರ್ವ ರಾಜಸ್ತಾನದಲ್ಲಿ ಕೃಷಿಕ ಜಾಟ್ ಸಮುದಾಯ ಪ್ರಬಲವಾಗಿದೆ, ಜನಸಂಖ್ಯೆಯಲ್ಲೂ ಗಣನೀಯವಾಗಿದೆ. 2013 ರಲ್ಲಿ ಉತ್ತರಪ್ರದೇಶದ ಮುಜಾಫರ್‌ಘರ್‌ನಲ್ಲಿ ಸಂಭವಿಸಿದ (ಸೃಷ್ಟಿಸಿದ) ಹೇಯ ಕೋಮು ಗಲಭೆಯ ನಂತರ, ಜಾಟರು ಮತ್ತು ಮುಸ್ಲಿಮರ ನಡುವೆ ಬಿರುಕು ತಂದ ಬಿಜೆಪಿ ಅಲ್ಲಿ ಜಾಟರ ವೊಟ್‌ಬ್ಯಾಂಕ್ ಅನ್ನು ಭದ್ರಪಡಿಸಿಕೊಂಡು ಚುನಾವಣೆಗಳನ್ನು ಗೆಲ್ಲುತ್ತಾ ಬಂದಿದೆ.

ನೇರ ರಾಜಕಾರಣ ಮಾಡದಿದ್ದರೂ ಟಿಕಾಯತ್ ಸಹೋದರರು ಬಿಜೆಪಿಗೆ ಬಹಿರಂಗ ಬೆಂಬಲ ಕೊಡುತ್ತ ಬಂದಿದ್ದರು. ತಮ್ಮ ರೈತ ನಾಯಕ ಕಣ್ಣೀರು ಹಾಕುವಂತೆ ಮಾಡಿದ ಬಿಜೆಪಿ ವಿರುದ್ದ ಜಾಟರು ತಿರುಗಿ ಬೀಳಬಹುದು ಎಂದು ರಾಜಕಿಯ ವಿಶ್ಲೇಷಕರು ಅಬಿಪ್ರಾಯ ಪಟ್ಟಿದ್ದಾರೆ. ಶುಕ್ರವಾರ ಅದರ ಕುರುಹುಗಳು ಢಾಳಾಗಿಯೇ ಗೋಚರಿಸಿವೆ ಅಲ್ಲವೇ?

ತಿರುಗುಬಾಣ

ಈ ಮಾಸ್ಟರ್‌ಸ್ಟ್ರೋಕ್‌ನಿಂದಾಗಿ ಕೇಂದ್ರ ಸರ್ಕಾರದ ಸುಳ್ಳು, ಸಂಚು ಮತ್ತು ದಮನಕಾರಿ ಪ್ರವೃತ್ತಿಯೇ ಅದಕ್ಕೆ ತಿರುಗುಬಾಣವಾಗಿತು. ರಾತ್ರಿಯೇ ಸ್ಥಗಿತಗೊಂಡಿದ್ದ ವಿದ್ಯುತ್, ನೀರು ಸೌಲಭ್ಯ ಮುಂಜಾನೆ ವಾಪಸ್ ಬಂದಿತು. ಹೆಚ್ಚುವರಿ ತುಕಡಿಗಳು ಮತ್ತು ಪೊಲೀಸರನ್ನು ಸರ್ಕಾರ ಹಿಂದಕ್ಕೆ ಕರೆಸಿಕೊಂಡಿತು. ಜಾಗ ಖಾಲಿ ಮಾಡಿಸಲು ಬಂದ ಸರ್ಕಾರವೇ ಜಾಗ ಖಾಲಿ ಮಾಡಬೇಕಾಯಿತು.

ಶುಕ್ರವಾರ ಮಧ್ಯಾಹ್ನ ಪಕ್ಷವೊಂದರ ಬಾಲಂಗೋಚಿಗಳಾದ ದುಷ್ಕರ್ಮಿಗಳು ಪ್ರತಿಭಟನೆಯ ಒಂದು ಸ್ಥಳಕ್ಕೆ ನುಗ್ಗಿ ದಾಂಧಲೆ ಮಾಡಿ, ರೈತರನ್ನು ಬೆದರಿಸಲು ನೋಡಿದರು. ರೈತರು ಅದಕ್ಕೆ ಪ್ರತ್ಯುತ್ತರ ನೀಡಿದರು.
ಶುಕ್ರವಾರ ಸಿಂಘುವಿನಲ್ಲಿ ಸಂಯುಕ್ತ್ ಕಿಸಾನ್ ಮೋರ್ಚಾ ತನ್ನ ಪ್ರತಿಭಟನೆಯನ್ನು ಚುರುಕುಗೊಳಿಸಿದೆ, ಪ್ರತಿಭಟನಾಕಾರರ ಹುಮ್ಮಸ್ಸನ್ನು ಹೆಚ್ಚಿಸಿದೆ.

ಸರ್ಕಾರ ಬೇರೊಂದು ಮಾರ್ಗದಲ್ಲಿ ದಮನ ಮಾಡಲು ಯತ್ನಿಸಬಹುದು. ಅದನ್ನು ವಿಫಲಗೊಳಿಸುವ ಶಕ್ತಿ ರೈತ ಹೋರಾಟಕ್ಕೆ ಇನ್ನಷ್ಟು ಸಂಚಯವಾಗಲಿ. ಅದಾಗಬೇಕೆಂದರೆ, ನಮ್ಮ ನಮ್ಮ ನೆಲೆಯಲ್ಲಿ ನಾವು ರೈತರ ಪರ ಧ್ವನಿ ಎತ್ತಬೇಕಾದ ತುರ್ತು ಸಮಯವಿದು.

ಇದನ್ನೂ ಓದಿ: ‘ಜ. 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ’: ಬಿಜೆಪಿ ತೊರೆದ ಹಿರಿಯ ನಾಯಕ ರಾಂಪಾಲ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...