Homeಮುಖಪುಟಗೋವಾ ಕರಾವಳಿಯಲ್ಲಿ ಮಿಗ್‌‌ 29K ಯುದ್ಧ ವಿಮಾನ ಪತನ

ಗೋವಾ ಕರಾವಳಿಯಲ್ಲಿ ಮಿಗ್‌‌ 29K ಯುದ್ಧ ವಿಮಾನ ಪತನ

- Advertisement -
- Advertisement -

ಭಾರತೀಯ ನೌಕಾಪಡೆಯ ಮಿಗ್‌‌ 29K ಫೈಟರ್ ಜೆಟ್ ತಾಂತ್ರಿಕ ದೋಷದಿಂದ ಬುಧವಾರ ಬೆಳಿಗ್ಗೆ ಗೋವಾ ಕರಾವಳಿಯಲ್ಲಿ ಪತನಗೊಂಡಿದೆ. ಪೈಲಟ್ ಸುರಕ್ಷಿತವಾಗಿ ಹೊರಬಿದ್ದಿದ್ದಾರೆ ಎಂದು ನೌಕಾಪಡೆ ತಿಳಿಸಿದೆ. ಘಟನೆಯ ಕುರಿತು ತನಿಖೆ ನಡೆಸುವಂತೆ ನೌಕಾಪಡೆಯ ಪ್ರಧಾನ ಕಛೇರಿಯು ತನಿಖಾ ಮಂಡಳಿಗೆ (BoI) ಆದೇಶಿಸಿದೆ.

“ಗೋವಾ ಸಮುದ್ರದ ಮೇಲೆ ದಿನನಿತ್ಯದ ಹಾರಾಟದಲ್ಲಿ ಮಿಗ್ 29K ಬೇಸ್‌ಗೆ ಹಿಂತಿರುಗುವಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ವೇಳೆ ಪೈಲಟ್ ಸುರಕ್ಷಿತವಾಗಿ ಹೊರ ಬಿದ್ದಿದ್ದು, ತ್ವರಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಿಂದ ಚೇತರಿಸಿಕೊಂಡಿದ್ದಾರೆ” ಎಂದು ನೌಕಾಪಡೆ ತನ್ನ ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೈಲಟ್ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಘಟನೆಗೆ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ (BoI) ಆದೇಶಿಸಲಾಗಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ನೇಪಾಳ: ನಾಲ್ವರು ಭಾರತೀಯರು ಸೇರಿದಂತೆ 22 ಜನರಿದ್ದ ವಿಮಾನ ಪತನ

ಮಿಗ್‌ 29K ರಷ್ಯಾದ ಏರೋಸ್ಪೇಸ್ ಕಂಪನಿಯಾದ ಮಿಕೊಯಾನ್ (MiG) ಅಭಿವೃದ್ಧಿಪಡಿಸಿದ ಎಲ್ಲಾ ಹವಾಮಾನ ವಾಹಕ ಆಧಾರಿತ ಮಲ್ಟಿರೋಲ್ ಫೈಟರ್ ವಿಮಾನವಾಗಿದೆ. ಭಾರತೀಯ ನೌಕಾಪಡೆಯು ಐಎನ್‌ಎಸ್‌ ವಿಕ್ರಮಾದಿತ್ಯದಿಂದ ಕಾರ್ಯನಿರ್ವಹಿಸಲು ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಒಂದು ದಶಕದ ಹಿಂದೆ ರಷ್ಯಾದಿಂದ 45 ಮಿಗ್‌‌-29K ಗಳನ್ನು ಖರೀದಿಸಿತ್ತು.

2020ರ ನವೆಂಬರ್‌ನಲ್ಲಿ ನೌಕಾಪಡೆಯ ಮಿಗ್‌‌ 29K ವಿಮಾನವು ವಿಮಾನ ವಾಹಕ ನೌಕೆ ಐಎನ್‌ಎಸ್‌ ವಿಕ್ರಮಾದಿತ್ಯದಿಂದ ಟೇಕಾಫ್ ಆದ ನಂತರ ಗೋವಾ ಕರಾವಳಿಯ ಅರಬ್ಬಿ ಸಮುದ್ರಕ್ಕೆ ಪತನಗೊಂಡಿತು.

2019 ರ ನವೆಂಬರ್‌ನಲ್ಲಿ ಕೂಡಾ ದಕ್ಷಿಣ ಗೋವಾ ಜಿಲ್ಲೆಯಲ್ಲಿ ಮಿಗ್‌ 29K ಯ ಅವಳಿ ಆಸನದ ಯುದ್ಧ ವಿಮಾನವು ಪತನಗೊಂಡಿತ್ತು. ಈ ವೇಳೆ ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿ ಹೊರಬಿದ್ದಿದ್ದರು.

ಇದನ್ನೂ ಓದಿ: ರಾಜಸ್ಥಾನ: ವಾಯುಪಡೆಯ ಫೈಟರ್ ಜೆಟ್ ಪತನ; ಇಬ್ಬರು ಯೋಧರು ಮೃತ

ಮತ್ತೊಂದು ಮಿಗ್‌ 29K 2020ರ ಫೆಬ್ರವರಿ 23 ರಂದು ಗೋವಾದ ವಾಸ್ಕೋದಲ್ಲಿನ ಪ್ರಮುಖ ನೌಕಾ ವಾಯು ನಿಲ್ದಾಣವಾದ ಐಎನ್‌ಎಸ್‌‌ ಹಂಸಾದಿಂದ ಟೇಕ್ ಆಫ್ ಆದ ನಂತರ ಗೋವಾ ಕರಾವಳಿಯಲ್ಲಿ ಅರಬ್ಬಿ ಸಮುದ್ರಕ್ಕೆ ಅಪ್ಪಳಿಸಿತ್ತು. ಈ ವೇಳೆ ಕೂಡಾ ವಿಮಾನದ ಪೈಲಟ್‌ ಸುರಕ್ಷಿತವಾಗಿ ಹೊರಬೀಳುವಲ್ಲಿ ಯಶಸ್ವಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...