Homeಮುಖಪುಟಗೋವಾ ಕರಾವಳಿಯಲ್ಲಿ ಮಿಗ್‌‌ 29K ಯುದ್ಧ ವಿಮಾನ ಪತನ

ಗೋವಾ ಕರಾವಳಿಯಲ್ಲಿ ಮಿಗ್‌‌ 29K ಯುದ್ಧ ವಿಮಾನ ಪತನ

- Advertisement -
- Advertisement -

ಭಾರತೀಯ ನೌಕಾಪಡೆಯ ಮಿಗ್‌‌ 29K ಫೈಟರ್ ಜೆಟ್ ತಾಂತ್ರಿಕ ದೋಷದಿಂದ ಬುಧವಾರ ಬೆಳಿಗ್ಗೆ ಗೋವಾ ಕರಾವಳಿಯಲ್ಲಿ ಪತನಗೊಂಡಿದೆ. ಪೈಲಟ್ ಸುರಕ್ಷಿತವಾಗಿ ಹೊರಬಿದ್ದಿದ್ದಾರೆ ಎಂದು ನೌಕಾಪಡೆ ತಿಳಿಸಿದೆ. ಘಟನೆಯ ಕುರಿತು ತನಿಖೆ ನಡೆಸುವಂತೆ ನೌಕಾಪಡೆಯ ಪ್ರಧಾನ ಕಛೇರಿಯು ತನಿಖಾ ಮಂಡಳಿಗೆ (BoI) ಆದೇಶಿಸಿದೆ.

“ಗೋವಾ ಸಮುದ್ರದ ಮೇಲೆ ದಿನನಿತ್ಯದ ಹಾರಾಟದಲ್ಲಿ ಮಿಗ್ 29K ಬೇಸ್‌ಗೆ ಹಿಂತಿರುಗುವಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ವೇಳೆ ಪೈಲಟ್ ಸುರಕ್ಷಿತವಾಗಿ ಹೊರ ಬಿದ್ದಿದ್ದು, ತ್ವರಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಿಂದ ಚೇತರಿಸಿಕೊಂಡಿದ್ದಾರೆ” ಎಂದು ನೌಕಾಪಡೆ ತನ್ನ ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೈಲಟ್ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಘಟನೆಗೆ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ (BoI) ಆದೇಶಿಸಲಾಗಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ನೇಪಾಳ: ನಾಲ್ವರು ಭಾರತೀಯರು ಸೇರಿದಂತೆ 22 ಜನರಿದ್ದ ವಿಮಾನ ಪತನ

ಮಿಗ್‌ 29K ರಷ್ಯಾದ ಏರೋಸ್ಪೇಸ್ ಕಂಪನಿಯಾದ ಮಿಕೊಯಾನ್ (MiG) ಅಭಿವೃದ್ಧಿಪಡಿಸಿದ ಎಲ್ಲಾ ಹವಾಮಾನ ವಾಹಕ ಆಧಾರಿತ ಮಲ್ಟಿರೋಲ್ ಫೈಟರ್ ವಿಮಾನವಾಗಿದೆ. ಭಾರತೀಯ ನೌಕಾಪಡೆಯು ಐಎನ್‌ಎಸ್‌ ವಿಕ್ರಮಾದಿತ್ಯದಿಂದ ಕಾರ್ಯನಿರ್ವಹಿಸಲು ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಒಂದು ದಶಕದ ಹಿಂದೆ ರಷ್ಯಾದಿಂದ 45 ಮಿಗ್‌‌-29K ಗಳನ್ನು ಖರೀದಿಸಿತ್ತು.

2020ರ ನವೆಂಬರ್‌ನಲ್ಲಿ ನೌಕಾಪಡೆಯ ಮಿಗ್‌‌ 29K ವಿಮಾನವು ವಿಮಾನ ವಾಹಕ ನೌಕೆ ಐಎನ್‌ಎಸ್‌ ವಿಕ್ರಮಾದಿತ್ಯದಿಂದ ಟೇಕಾಫ್ ಆದ ನಂತರ ಗೋವಾ ಕರಾವಳಿಯ ಅರಬ್ಬಿ ಸಮುದ್ರಕ್ಕೆ ಪತನಗೊಂಡಿತು.

2019 ರ ನವೆಂಬರ್‌ನಲ್ಲಿ ಕೂಡಾ ದಕ್ಷಿಣ ಗೋವಾ ಜಿಲ್ಲೆಯಲ್ಲಿ ಮಿಗ್‌ 29K ಯ ಅವಳಿ ಆಸನದ ಯುದ್ಧ ವಿಮಾನವು ಪತನಗೊಂಡಿತ್ತು. ಈ ವೇಳೆ ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿ ಹೊರಬಿದ್ದಿದ್ದರು.

ಇದನ್ನೂ ಓದಿ: ರಾಜಸ್ಥಾನ: ವಾಯುಪಡೆಯ ಫೈಟರ್ ಜೆಟ್ ಪತನ; ಇಬ್ಬರು ಯೋಧರು ಮೃತ

ಮತ್ತೊಂದು ಮಿಗ್‌ 29K 2020ರ ಫೆಬ್ರವರಿ 23 ರಂದು ಗೋವಾದ ವಾಸ್ಕೋದಲ್ಲಿನ ಪ್ರಮುಖ ನೌಕಾ ವಾಯು ನಿಲ್ದಾಣವಾದ ಐಎನ್‌ಎಸ್‌‌ ಹಂಸಾದಿಂದ ಟೇಕ್ ಆಫ್ ಆದ ನಂತರ ಗೋವಾ ಕರಾವಳಿಯಲ್ಲಿ ಅರಬ್ಬಿ ಸಮುದ್ರಕ್ಕೆ ಅಪ್ಪಳಿಸಿತ್ತು. ಈ ವೇಳೆ ಕೂಡಾ ವಿಮಾನದ ಪೈಲಟ್‌ ಸುರಕ್ಷಿತವಾಗಿ ಹೊರಬೀಳುವಲ್ಲಿ ಯಶಸ್ವಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...