Homeಚಳವಳಿ#MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ - ಟ್ವಿಟ್ಟರ್ ಅಭಿಯಾನ

#MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಯಾವುದೇ ಯೋಜನೆ ಕೈಗೊಳ್ಳದೆ ಏಕಾಏಕಿ ಲಾಕ್‌ಡೌನ್ ಘೋಷಣೆ ಮಾಡಿ ಸಾವಿರಾರು ವಲಸೆ ಕಾರ್ಮಿಕರ ಸಾವಿಗೆ ಕೇಂದ್ರ ಕಾರಣವಾಗಿದೆ. ಆದರೆ ಈ ಕುರಿತು ಮಾಹಿತಿಯಿಲ್ಲದ ಕಾರಣ ಪರಿಹಾರ ಸಹ ಇಲ್ಲ ಎಂದು ಕೇಂದ್ರ ಕೈಚೆಲ್ಲಿ ಕುಳಿತಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಸಾಂಕ್ರಮಿಕ ದೇಶಕ್ಕೆ ಅಪ್ಪಳಿಸಿದ ಮೇಲೆ ಕೇಂದ್ರ ಸರ್ಕಾರ ಏಕಾಏಕಿ ಘೋಷಣೆ ಮಾಡಿದ ಲಾಕ್‌ಡೌನ್‌ನಿಂದ ಆದ ದುಷ್ಪರಿಣಾಮಗಳು, ಪಿಎಂ ನಿಧಿಯ ವಿವರಗಳು, ವಲಸೆ ಕಾರ್ಮಿಕರ ಬಗ್ಗೆ ಗಮನ ಹರಿಸದ ಸರ್ಕಾರದ ವಿರುದ್ಧ ಟ್ವಿಟ್ಟರ್ ಅಭಿಯಾನ ಶುರುವಾಗಿದೆ. ಇಂದು ಸಂಜೆ 7 ಗಂಟೆಯಿಂದ #MigrantLivesStillMatter ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಅಭಿಯಾನ ನಡೆಯಲಿದೆ ಎಂದು Migrant Workers Solidarity Network ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿ ಆರು ತಿಂಗಳು ಕಳೆದಿದೆ. ಯಾವುದೇ ಮುನ್ನೆಚ್ಚರಿಕಾ ಕ್ರಮಗಳಿಲ್ಲದೇ, ಯಾವುದೇ ಯೋಜನೆ ಕೈಗೊಳ್ಳದೆ ಏಕಾಏಕಿ ಲಾಕ್‌ಡೌನ್ ಘೋಷಣೆ ಮಾಡಿ ಸಾವಿರಾರು ವಲಸೆ ಕಾರ್ಮಿಕರ ಸಾವಿಗೆ ಕೇಂದ್ರ ಕಾರಣವಾಗಿದೆ. ಆದರೆ ಈ ಕುರಿತು ಮಾಹಿತಿಯಿಲ್ಲದ ಕಾರಣ ಪರಿಹಾರ ಸಹ ಇಲ್ಲ ಎಂದು ಕೇಂದ್ರ ಕೈಚೆಲ್ಲಿ ಕುಳಿತಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: NEP ಜಾರಿ ಕರ್ನಾಟಕದಲ್ಲಿಯೇ ಮೊದಲು ಎಂದ ಡಿಸಿಎಂ: ಟ್ವಿಟ್ಟರ್‌ನಲ್ಲಿ ‘#RejectNEP2020’ ಟ್ರೆಂಡ್‌

ಆರು ತಿಂಗಳು ಕಳೆದರು ಈ ದುರ್ಘಟನೆಗಳಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ವಲಸೆ ಕಾರ್ಮಿಕರ ಜೀವನೋಪಾಯಕ್ಕೆ ಸರ್ಕಾರ ಯಾವುದೇ ಹೆಜ್ಜೆ ಮುಂದಿಡುತ್ತಿಲ್ಲ. ಅವರಿಗೆ ಸೂಕ್ತ ಮೂಲಸೌಕರ್ಯಗಳನ್ನು ಸಹ ಸರ್ಕಾರ ನೀಡಿಲ್ಲ. ಪಿಎಂ ನಿಧಿ ಬಗ್ಗೆ ಈವರೆಗೆ ಯಾರಿಗೂ ಮಾಹಿತಿ ನೀಡುತ್ತಿಲ್ಲ. ಕೊರೊನಾ ಕಾರಣದಿಂದ ಕಷ್ಟದಲ್ಲಿರುವವರ ಸಹಾಯಕ್ಕೆ ಎಂದು ಕೋಟ್ಯಾಂತರ ಜನ ಕೋಟ್ಯಾಂತರ ರೂಪಾಯಿಗಳನ್ನು ದಾನ ನೀಡಿದ್ದಾರೆ ಆದರೆ ಅದರ ಬಗ್ಗೆ ಕೇಂದ್ರ ಸರ್ಕಾರ ತುಟಿಕ್ ಪಿಟಿಕ್ ಎನ್ನುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರು ದೂರಿದ್ದಾರೆ.

ಇತ್ತ ಮಾಧ್ಯಮಗಳು ಜನರ ಜೀವನೋಪಾಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಜನಸಾಮಾನ್ಯರನ್ನು ಬೇರೆಡೆಗೆ ತಿರುಗಿಸುವ ಕೆಲಸ ಮಾಡುತ್ತಿದ್ದು, ವಾಸ್ತವದ ಸಮಸ್ಯೆಗಳನ್ನು ಮರೆಮಾಚುತ್ತಿವೆ. ಈ ಎಲ್ಲಾ ವಿಚಾರಗಳ ವಿರುದ್ಧ ಪ್ರತಿಭಟಿಸಲು ಟ್ವಿಟ್ಟರ್ ಅಭಿಯಾನ ಕೈಗೊಂಡಿದೆ. 7 ಗಂಟೆಯಿಂದ #MigrantLivesStillMatter ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಲು Migrant Workers Solidarity Network ಮನವಿ ಮಾಡಿದೆ.


ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...