Homeಮುಖಪುಟನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ಎಕ್ಸ್‌ಪ್ರೆಸ್ ವೇಗವಾಗಿ ಬರುತ್ತಿರುವುದನ್ನು ನೋಡಿ ತಮ್ಮನ್ನು ಬಿಡುವಂತೆ ಕೇಳಿಕೊಂಡರೂ ಬಿಡಲು ನಿರಾಕರಿಸಿದ ತಂದೆ!

- Advertisement -
- Advertisement -

36 ವರ್ಷದ ವ್ಯಕ್ತಿಯೊಬ್ಬ ತನ್ನ ನಾಲ್ವರು ಗಂಡು ಮಕ್ಕಳನ್ನು ರೈಲ್ವೆ ಹಳಿಗಳಿಗೆ ಕರೆದೊಯ್ದು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಹರಿಯಾಣದ ಫರಿದಾಬಾದ್‌ನ ಬಲ್ಲಭಗಢದಲ್ಲಿ ನಡೆದಿದೆ. ಸಾವಿಗೀಡಾದ ಮಕ್ಕಳಲ್ಲಿ ಅತ್ಯಂತ ಕಿರಿಯ ಮಗುವಿಗೆ ಮೂರು ವರ್ಷವಾಗಿದ್ದರೆ, ಹಿರಿಯ ಮಗನಿಗೆ ಒಂಬತ್ತು ವರ್ಷವಾಗಿತ್ತು. ವ್ಯಕ್ತಿಯು ಎಕ್ಸ್‌ಪ್ರೆಸ್ ರೈಲು ಹಾದು ಹೋಗುವವರೆಗೂ ಮಕ್ಕಳ ತೋಳುಗಳನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ನಾಲ್ವರು ಮಕ್ಕಳ ಜೊತೆಗೆ

ವ್ಯಕ್ತಿಯನ್ನು ಬಿಹಾರ ಮೂಲದ ಮನೋಜ್ ಮೆಹ್ತೋ ಎಂದು ಗುರುತಿಸಲಾಗಿದೆ. ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್ ಹಳಿಗಳ ಮೇಲೆ ವೇಗವಾಗಿ ಬರುತ್ತಿರುವುದನ್ನು ಕಂಡು, ತಮ್ಮನ್ನು ಬಿಡುವಂತೆ ಮಕ್ಕಳು ಕೇಳಿಕೊಂಡರೂ ಮನೋಜ್ ಅವರನ್ನು ಬಿಡಲು ನಿರಾಕರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ವರದಿ ಹೇಳಿದೆ. ದಿನಗೂಲಿ ಕಾರ್ಮಿಕನಾಗಿದ್ದ ಮನೋಜ್‌ ತನ್ನ ಮತ್ತು ತನ್ನ ಮಕ್ಕಳ ಜೀವನವನ್ನು ಕೊನೆಗೊಳಿಸಲು ಏಕೆ ನಿರ್ಧರಿಸಿದನೆಂದು ಸ್ಪಷ್ಟವಾಗಿಲ್ಲ ಎಂದು ವರದಿ ಉಲ್ಲೇಖಿಸಿದೆ.

“ಮುಂಬೈನಿಂದ ಬರುತ್ತಿದ್ದ ರೈಲು ಮಧ್ಯಾಹ್ನ 1.10 ರ ಸುಮಾರಿಗೆ ಐವರನ್ನು ಬಲಿ ಪಡೆದಿದೆ” ಎಂದು ಸರ್ಕಾರಿ ರೈಲ್ವೆ ಪೊಲೀಸ್ ಘಟಕದ ಎಸ್‌ಎಚ್‌ಒ ರಾಜ್‌ಪಾಲ್ ಹೇಳಿದ್ದಾರೆ. ಸುಭಾಷ್ ಕಾಲೋನಿ ಬಳಿ ವಾಸಿಸುತ್ತಿದ್ದ ಮನೋಜ್‌ ಮಧ್ಯಾಹ್ನ 12.15 ರ ಸುಮಾರಿಗೆ ಮನೆಯಿಂದ ಹೊರಡುವಾಗ ತನ್ನ ಪತ್ನಿ ಪ್ರಿಯಾಗೆ ಮಕ್ಕಳನ್ನು ಆಟವಾಡಲು ಹತ್ತಿರದ ಉದ್ಯಾನವನಕ್ಕೆ ಕರೆದೊಯ್ಯುತ್ತಿದ್ದೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮಕ್ಕಳನ್ನು ಫ್ಲೈಓವರ್ ಕೆಳಗೆ ನಿಲ್ಲಿಸಿ ಅವರಿಗೆ ಚಿಪ್ಸ್, ಕೋಲಾ ಕೂಡಾ ಖರೀದಿಸಿದ್ದರು. ಅದಾಗ್ಯೂ, ತನ್ನ ನಾಲ್ವರು ಮಕ್ಕಳನ್ನು ಆಟವಾಡಲು ಉದ್ಯಾನವನಕ್ಕೆ ಕರೆದೊಯ್ಯುವ ಬದಲು ಮನೋಜ್ ಅವರನ್ನು ರೈಲ್ವೆ ಹಳಿಗಳ ಬಳಿಗೆ ಕರೆದೊಯ್ದಿದ್ದನು. ಅಷ್ಟೆ ಅಲ್ಲದೆ, ಎಲ್ಸನ್ ಚೌಕ್ ಫ್ಲೈಓವರ್ ಕೆಳಗೆ ಸುಮಾರು ಒಂದು ಗಂಟೆ ಕುಳಿತು ರೈಲು ಬರುವವರೆಗೆ ಅವರಿಗೆ ಕಾಯುತ್ತಿದ್ದರು ಎಂದು ವರದಿಗಳು ಹೇಳಿವೆ.

ಘಟನೆಯ ನಂತರ, ಲೋಕೋ ಪೈಲಟ್ ಬಲ್ಲಭಗಢ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೋಜ್ ಅವರ ಆಧಾರ್ ಕಾರ್ಡ್ ಮೂಲಕ ಗುರುತಿಸಿದ್ದರು. ಅವರ ಜೇಬಿನಲ್ಲಿರುವ ಚಿಟ್‌ನಲ್ಲಿ ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಬರೆದಿರುವುದು ಕಂಡುಬಂದಿತ್ತು. ಈ ಎಲ್ಲಾ ಮಾಹಿತಿಗಳು ಅವರ ಕೃತ್ಯಗಳು ಪೂರ್ವಯೋಜಿತವೆಂದು ಸೂಚಿಸುತ್ತದೆ ಎಂದು ವರದಿ ಹೇಳಿದೆ.

“ಒಬ್ಬ ಮಹಿಳೆ ಮತ್ತು ಆಕೆಯ ಮಕ್ಕಳು ರೈಲಿನ ಮುಂದೆ ಹಾರಿದ್ದಾರೆ ಎಂದು ನಮಗೆ ಆರಂಭದಲ್ಲಿ ಮಾಹಿತಿ ಬಂದಿತು. ಆದರೆ ನಾವು ಸ್ಥಳಕ್ಕೆ ತಲುಪಿದಾಗ, ತಂದೆ ಮತ್ತು ಅವರ ಪುತ್ರರು ಹಳಿಗಳ ಮೇಲೆ ಸಿಲುಕಿದ್ದಾರೆ ಎಂದು ನಮಗೆ ತಿಳಿದುಬಂದಿದೆ” ಎಂದು ಜಿಆರ್‌ಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮನೋಜ್ ಪತ್ನಿ ಪ್ರಿಯಾ ಅವರಿಗೆ ಕರೆ ಮಾಡಿದಾಗ, ತನ್ನ ಪತಿ ಮಕ್ಕಳನ್ನು ಉದ್ಯಾನವನಕ್ಕೆ ಕರೆದೊಯ್ದಿದ್ದು, ಶೀಘ್ರದಲ್ಲೇ ಮನೆಗೆ ಹಿಂತಿರುಗುತ್ತಾರೆ ಎಂದು ಜಿಆರ್‌ಪಿ ಸಿಬ್ಬಂದಿಗೆ ತಿಳಿಸಿದ್ದಾರೆ. ನಂತರ ಅವರನ್ನು ಸ್ಥಳಕ್ಕೆ ಬರುವಂತೆ ಕೇಳಿಕೊಂಡಿದ್ದು, ಅಲ್ಲಿ ಅವರು ಗಂಡ ಮತ್ತು ಮಕ್ಕಳ ಶವಗಳನ್ನು ನೋಡಿ ಮೂರ್ಛೆ ಹೋದರು ಎಂದು ವರದಿ ತಿಳಿಸಿದೆ.

ಶವಪರೀಕ್ಷೆಗಾಗಿ ಬಾದ್‌ಶಾ ಖಾನ್ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ಕೊಂಡೊಯ್ಯಲಾಗಿದೆ.

ಮನೋಜ್ ಏಕೆ ಇಂತಹ ನಿರ್ಧಾರ ಕೈಗೊಂಡರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿವಾಹದ ವೇಳೆ ತೊಂದರೆಯಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಆದರೆ ಅದಕ್ಕೂ ಇದಕ್ಕೂ ಸಂಬಂಧವಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

“ಮನೋಜ್ ಅವರ ಮನಸ್ಥಿತಿ ಮತ್ತು ಅಂತಹ ನಿರ್ಧಾರ ಕೈಗೊಳ್ಳಲು ಏನು ಕಾರಣ ಎಂಬುವುದು ಕಂಡುಕೊಳ್ಳುವುದು ಈಗ ಆದ್ಯತೆಯಾಗಿದೆ. ಜೊತೆಗೆ ದುಃಖಿತ ಕುಟುಂಬದ ಜೊತೆಗೆ ನಿಲ್ಲುವುದು ಕೂಡಾ ಸಹ ಮುಖ್ಯವಾಗಿದೆ.” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಾಲ್ವರು ಮಕ್ಕಳ ಜೊತೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...