Homeಮುಖಪುಟನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ಎಕ್ಸ್‌ಪ್ರೆಸ್ ವೇಗವಾಗಿ ಬರುತ್ತಿರುವುದನ್ನು ನೋಡಿ ತಮ್ಮನ್ನು ಬಿಡುವಂತೆ ಕೇಳಿಕೊಂಡರೂ ಬಿಡಲು ನಿರಾಕರಿಸಿದ ತಂದೆ!

- Advertisement -
- Advertisement -

36 ವರ್ಷದ ವ್ಯಕ್ತಿಯೊಬ್ಬ ತನ್ನ ನಾಲ್ವರು ಗಂಡು ಮಕ್ಕಳನ್ನು ರೈಲ್ವೆ ಹಳಿಗಳಿಗೆ ಕರೆದೊಯ್ದು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಹರಿಯಾಣದ ಫರಿದಾಬಾದ್‌ನ ಬಲ್ಲಭಗಢದಲ್ಲಿ ನಡೆದಿದೆ. ಸಾವಿಗೀಡಾದ ಮಕ್ಕಳಲ್ಲಿ ಅತ್ಯಂತ ಕಿರಿಯ ಮಗುವಿಗೆ ಮೂರು ವರ್ಷವಾಗಿದ್ದರೆ, ಹಿರಿಯ ಮಗನಿಗೆ ಒಂಬತ್ತು ವರ್ಷವಾಗಿತ್ತು. ವ್ಯಕ್ತಿಯು ಎಕ್ಸ್‌ಪ್ರೆಸ್ ರೈಲು ಹಾದು ಹೋಗುವವರೆಗೂ ಮಕ್ಕಳ ತೋಳುಗಳನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ನಾಲ್ವರು ಮಕ್ಕಳ ಜೊತೆಗೆ

ವ್ಯಕ್ತಿಯನ್ನು ಬಿಹಾರ ಮೂಲದ ಮನೋಜ್ ಮೆಹ್ತೋ ಎಂದು ಗುರುತಿಸಲಾಗಿದೆ. ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್ ಹಳಿಗಳ ಮೇಲೆ ವೇಗವಾಗಿ ಬರುತ್ತಿರುವುದನ್ನು ಕಂಡು, ತಮ್ಮನ್ನು ಬಿಡುವಂತೆ ಮಕ್ಕಳು ಕೇಳಿಕೊಂಡರೂ ಮನೋಜ್ ಅವರನ್ನು ಬಿಡಲು ನಿರಾಕರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ವರದಿ ಹೇಳಿದೆ. ದಿನಗೂಲಿ ಕಾರ್ಮಿಕನಾಗಿದ್ದ ಮನೋಜ್‌ ತನ್ನ ಮತ್ತು ತನ್ನ ಮಕ್ಕಳ ಜೀವನವನ್ನು ಕೊನೆಗೊಳಿಸಲು ಏಕೆ ನಿರ್ಧರಿಸಿದನೆಂದು ಸ್ಪಷ್ಟವಾಗಿಲ್ಲ ಎಂದು ವರದಿ ಉಲ್ಲೇಖಿಸಿದೆ.

“ಮುಂಬೈನಿಂದ ಬರುತ್ತಿದ್ದ ರೈಲು ಮಧ್ಯಾಹ್ನ 1.10 ರ ಸುಮಾರಿಗೆ ಐವರನ್ನು ಬಲಿ ಪಡೆದಿದೆ” ಎಂದು ಸರ್ಕಾರಿ ರೈಲ್ವೆ ಪೊಲೀಸ್ ಘಟಕದ ಎಸ್‌ಎಚ್‌ಒ ರಾಜ್‌ಪಾಲ್ ಹೇಳಿದ್ದಾರೆ. ಸುಭಾಷ್ ಕಾಲೋನಿ ಬಳಿ ವಾಸಿಸುತ್ತಿದ್ದ ಮನೋಜ್‌ ಮಧ್ಯಾಹ್ನ 12.15 ರ ಸುಮಾರಿಗೆ ಮನೆಯಿಂದ ಹೊರಡುವಾಗ ತನ್ನ ಪತ್ನಿ ಪ್ರಿಯಾಗೆ ಮಕ್ಕಳನ್ನು ಆಟವಾಡಲು ಹತ್ತಿರದ ಉದ್ಯಾನವನಕ್ಕೆ ಕರೆದೊಯ್ಯುತ್ತಿದ್ದೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮಕ್ಕಳನ್ನು ಫ್ಲೈಓವರ್ ಕೆಳಗೆ ನಿಲ್ಲಿಸಿ ಅವರಿಗೆ ಚಿಪ್ಸ್, ಕೋಲಾ ಕೂಡಾ ಖರೀದಿಸಿದ್ದರು. ಅದಾಗ್ಯೂ, ತನ್ನ ನಾಲ್ವರು ಮಕ್ಕಳನ್ನು ಆಟವಾಡಲು ಉದ್ಯಾನವನಕ್ಕೆ ಕರೆದೊಯ್ಯುವ ಬದಲು ಮನೋಜ್ ಅವರನ್ನು ರೈಲ್ವೆ ಹಳಿಗಳ ಬಳಿಗೆ ಕರೆದೊಯ್ದಿದ್ದನು. ಅಷ್ಟೆ ಅಲ್ಲದೆ, ಎಲ್ಸನ್ ಚೌಕ್ ಫ್ಲೈಓವರ್ ಕೆಳಗೆ ಸುಮಾರು ಒಂದು ಗಂಟೆ ಕುಳಿತು ರೈಲು ಬರುವವರೆಗೆ ಅವರಿಗೆ ಕಾಯುತ್ತಿದ್ದರು ಎಂದು ವರದಿಗಳು ಹೇಳಿವೆ.

ಘಟನೆಯ ನಂತರ, ಲೋಕೋ ಪೈಲಟ್ ಬಲ್ಲಭಗಢ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೋಜ್ ಅವರ ಆಧಾರ್ ಕಾರ್ಡ್ ಮೂಲಕ ಗುರುತಿಸಿದ್ದರು. ಅವರ ಜೇಬಿನಲ್ಲಿರುವ ಚಿಟ್‌ನಲ್ಲಿ ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಬರೆದಿರುವುದು ಕಂಡುಬಂದಿತ್ತು. ಈ ಎಲ್ಲಾ ಮಾಹಿತಿಗಳು ಅವರ ಕೃತ್ಯಗಳು ಪೂರ್ವಯೋಜಿತವೆಂದು ಸೂಚಿಸುತ್ತದೆ ಎಂದು ವರದಿ ಹೇಳಿದೆ.

“ಒಬ್ಬ ಮಹಿಳೆ ಮತ್ತು ಆಕೆಯ ಮಕ್ಕಳು ರೈಲಿನ ಮುಂದೆ ಹಾರಿದ್ದಾರೆ ಎಂದು ನಮಗೆ ಆರಂಭದಲ್ಲಿ ಮಾಹಿತಿ ಬಂದಿತು. ಆದರೆ ನಾವು ಸ್ಥಳಕ್ಕೆ ತಲುಪಿದಾಗ, ತಂದೆ ಮತ್ತು ಅವರ ಪುತ್ರರು ಹಳಿಗಳ ಮೇಲೆ ಸಿಲುಕಿದ್ದಾರೆ ಎಂದು ನಮಗೆ ತಿಳಿದುಬಂದಿದೆ” ಎಂದು ಜಿಆರ್‌ಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮನೋಜ್ ಪತ್ನಿ ಪ್ರಿಯಾ ಅವರಿಗೆ ಕರೆ ಮಾಡಿದಾಗ, ತನ್ನ ಪತಿ ಮಕ್ಕಳನ್ನು ಉದ್ಯಾನವನಕ್ಕೆ ಕರೆದೊಯ್ದಿದ್ದು, ಶೀಘ್ರದಲ್ಲೇ ಮನೆಗೆ ಹಿಂತಿರುಗುತ್ತಾರೆ ಎಂದು ಜಿಆರ್‌ಪಿ ಸಿಬ್ಬಂದಿಗೆ ತಿಳಿಸಿದ್ದಾರೆ. ನಂತರ ಅವರನ್ನು ಸ್ಥಳಕ್ಕೆ ಬರುವಂತೆ ಕೇಳಿಕೊಂಡಿದ್ದು, ಅಲ್ಲಿ ಅವರು ಗಂಡ ಮತ್ತು ಮಕ್ಕಳ ಶವಗಳನ್ನು ನೋಡಿ ಮೂರ್ಛೆ ಹೋದರು ಎಂದು ವರದಿ ತಿಳಿಸಿದೆ.

ಶವಪರೀಕ್ಷೆಗಾಗಿ ಬಾದ್‌ಶಾ ಖಾನ್ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ಕೊಂಡೊಯ್ಯಲಾಗಿದೆ.

ಮನೋಜ್ ಏಕೆ ಇಂತಹ ನಿರ್ಧಾರ ಕೈಗೊಂಡರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿವಾಹದ ವೇಳೆ ತೊಂದರೆಯಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಆದರೆ ಅದಕ್ಕೂ ಇದಕ್ಕೂ ಸಂಬಂಧವಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

“ಮನೋಜ್ ಅವರ ಮನಸ್ಥಿತಿ ಮತ್ತು ಅಂತಹ ನಿರ್ಧಾರ ಕೈಗೊಳ್ಳಲು ಏನು ಕಾರಣ ಎಂಬುವುದು ಕಂಡುಕೊಳ್ಳುವುದು ಈಗ ಆದ್ಯತೆಯಾಗಿದೆ. ಜೊತೆಗೆ ದುಃಖಿತ ಕುಟುಂಬದ ಜೊತೆಗೆ ನಿಲ್ಲುವುದು ಕೂಡಾ ಸಹ ಮುಖ್ಯವಾಗಿದೆ.” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಾಲ್ವರು ಮಕ್ಕಳ ಜೊತೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...