Homeಮುಖಪುಟನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ಎಕ್ಸ್‌ಪ್ರೆಸ್ ವೇಗವಾಗಿ ಬರುತ್ತಿರುವುದನ್ನು ನೋಡಿ ತಮ್ಮನ್ನು ಬಿಡುವಂತೆ ಕೇಳಿಕೊಂಡರೂ ಬಿಡಲು ನಿರಾಕರಿಸಿದ ತಂದೆ!

- Advertisement -
- Advertisement -

36 ವರ್ಷದ ವ್ಯಕ್ತಿಯೊಬ್ಬ ತನ್ನ ನಾಲ್ವರು ಗಂಡು ಮಕ್ಕಳನ್ನು ರೈಲ್ವೆ ಹಳಿಗಳಿಗೆ ಕರೆದೊಯ್ದು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಹರಿಯಾಣದ ಫರಿದಾಬಾದ್‌ನ ಬಲ್ಲಭಗಢದಲ್ಲಿ ನಡೆದಿದೆ. ಸಾವಿಗೀಡಾದ ಮಕ್ಕಳಲ್ಲಿ ಅತ್ಯಂತ ಕಿರಿಯ ಮಗುವಿಗೆ ಮೂರು ವರ್ಷವಾಗಿದ್ದರೆ, ಹಿರಿಯ ಮಗನಿಗೆ ಒಂಬತ್ತು ವರ್ಷವಾಗಿತ್ತು. ವ್ಯಕ್ತಿಯು ಎಕ್ಸ್‌ಪ್ರೆಸ್ ರೈಲು ಹಾದು ಹೋಗುವವರೆಗೂ ಮಕ್ಕಳ ತೋಳುಗಳನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ನಾಲ್ವರು ಮಕ್ಕಳ ಜೊತೆಗೆ

ವ್ಯಕ್ತಿಯನ್ನು ಬಿಹಾರ ಮೂಲದ ಮನೋಜ್ ಮೆಹ್ತೋ ಎಂದು ಗುರುತಿಸಲಾಗಿದೆ. ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್ ಹಳಿಗಳ ಮೇಲೆ ವೇಗವಾಗಿ ಬರುತ್ತಿರುವುದನ್ನು ಕಂಡು, ತಮ್ಮನ್ನು ಬಿಡುವಂತೆ ಮಕ್ಕಳು ಕೇಳಿಕೊಂಡರೂ ಮನೋಜ್ ಅವರನ್ನು ಬಿಡಲು ನಿರಾಕರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ವರದಿ ಹೇಳಿದೆ. ದಿನಗೂಲಿ ಕಾರ್ಮಿಕನಾಗಿದ್ದ ಮನೋಜ್‌ ತನ್ನ ಮತ್ತು ತನ್ನ ಮಕ್ಕಳ ಜೀವನವನ್ನು ಕೊನೆಗೊಳಿಸಲು ಏಕೆ ನಿರ್ಧರಿಸಿದನೆಂದು ಸ್ಪಷ್ಟವಾಗಿಲ್ಲ ಎಂದು ವರದಿ ಉಲ್ಲೇಖಿಸಿದೆ.

“ಮುಂಬೈನಿಂದ ಬರುತ್ತಿದ್ದ ರೈಲು ಮಧ್ಯಾಹ್ನ 1.10 ರ ಸುಮಾರಿಗೆ ಐವರನ್ನು ಬಲಿ ಪಡೆದಿದೆ” ಎಂದು ಸರ್ಕಾರಿ ರೈಲ್ವೆ ಪೊಲೀಸ್ ಘಟಕದ ಎಸ್‌ಎಚ್‌ಒ ರಾಜ್‌ಪಾಲ್ ಹೇಳಿದ್ದಾರೆ. ಸುಭಾಷ್ ಕಾಲೋನಿ ಬಳಿ ವಾಸಿಸುತ್ತಿದ್ದ ಮನೋಜ್‌ ಮಧ್ಯಾಹ್ನ 12.15 ರ ಸುಮಾರಿಗೆ ಮನೆಯಿಂದ ಹೊರಡುವಾಗ ತನ್ನ ಪತ್ನಿ ಪ್ರಿಯಾಗೆ ಮಕ್ಕಳನ್ನು ಆಟವಾಡಲು ಹತ್ತಿರದ ಉದ್ಯಾನವನಕ್ಕೆ ಕರೆದೊಯ್ಯುತ್ತಿದ್ದೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮಕ್ಕಳನ್ನು ಫ್ಲೈಓವರ್ ಕೆಳಗೆ ನಿಲ್ಲಿಸಿ ಅವರಿಗೆ ಚಿಪ್ಸ್, ಕೋಲಾ ಕೂಡಾ ಖರೀದಿಸಿದ್ದರು. ಅದಾಗ್ಯೂ, ತನ್ನ ನಾಲ್ವರು ಮಕ್ಕಳನ್ನು ಆಟವಾಡಲು ಉದ್ಯಾನವನಕ್ಕೆ ಕರೆದೊಯ್ಯುವ ಬದಲು ಮನೋಜ್ ಅವರನ್ನು ರೈಲ್ವೆ ಹಳಿಗಳ ಬಳಿಗೆ ಕರೆದೊಯ್ದಿದ್ದನು. ಅಷ್ಟೆ ಅಲ್ಲದೆ, ಎಲ್ಸನ್ ಚೌಕ್ ಫ್ಲೈಓವರ್ ಕೆಳಗೆ ಸುಮಾರು ಒಂದು ಗಂಟೆ ಕುಳಿತು ರೈಲು ಬರುವವರೆಗೆ ಅವರಿಗೆ ಕಾಯುತ್ತಿದ್ದರು ಎಂದು ವರದಿಗಳು ಹೇಳಿವೆ.

ಘಟನೆಯ ನಂತರ, ಲೋಕೋ ಪೈಲಟ್ ಬಲ್ಲಭಗಢ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೋಜ್ ಅವರ ಆಧಾರ್ ಕಾರ್ಡ್ ಮೂಲಕ ಗುರುತಿಸಿದ್ದರು. ಅವರ ಜೇಬಿನಲ್ಲಿರುವ ಚಿಟ್‌ನಲ್ಲಿ ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಬರೆದಿರುವುದು ಕಂಡುಬಂದಿತ್ತು. ಈ ಎಲ್ಲಾ ಮಾಹಿತಿಗಳು ಅವರ ಕೃತ್ಯಗಳು ಪೂರ್ವಯೋಜಿತವೆಂದು ಸೂಚಿಸುತ್ತದೆ ಎಂದು ವರದಿ ಹೇಳಿದೆ.

“ಒಬ್ಬ ಮಹಿಳೆ ಮತ್ತು ಆಕೆಯ ಮಕ್ಕಳು ರೈಲಿನ ಮುಂದೆ ಹಾರಿದ್ದಾರೆ ಎಂದು ನಮಗೆ ಆರಂಭದಲ್ಲಿ ಮಾಹಿತಿ ಬಂದಿತು. ಆದರೆ ನಾವು ಸ್ಥಳಕ್ಕೆ ತಲುಪಿದಾಗ, ತಂದೆ ಮತ್ತು ಅವರ ಪುತ್ರರು ಹಳಿಗಳ ಮೇಲೆ ಸಿಲುಕಿದ್ದಾರೆ ಎಂದು ನಮಗೆ ತಿಳಿದುಬಂದಿದೆ” ಎಂದು ಜಿಆರ್‌ಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮನೋಜ್ ಪತ್ನಿ ಪ್ರಿಯಾ ಅವರಿಗೆ ಕರೆ ಮಾಡಿದಾಗ, ತನ್ನ ಪತಿ ಮಕ್ಕಳನ್ನು ಉದ್ಯಾನವನಕ್ಕೆ ಕರೆದೊಯ್ದಿದ್ದು, ಶೀಘ್ರದಲ್ಲೇ ಮನೆಗೆ ಹಿಂತಿರುಗುತ್ತಾರೆ ಎಂದು ಜಿಆರ್‌ಪಿ ಸಿಬ್ಬಂದಿಗೆ ತಿಳಿಸಿದ್ದಾರೆ. ನಂತರ ಅವರನ್ನು ಸ್ಥಳಕ್ಕೆ ಬರುವಂತೆ ಕೇಳಿಕೊಂಡಿದ್ದು, ಅಲ್ಲಿ ಅವರು ಗಂಡ ಮತ್ತು ಮಕ್ಕಳ ಶವಗಳನ್ನು ನೋಡಿ ಮೂರ್ಛೆ ಹೋದರು ಎಂದು ವರದಿ ತಿಳಿಸಿದೆ.

ಶವಪರೀಕ್ಷೆಗಾಗಿ ಬಾದ್‌ಶಾ ಖಾನ್ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ಕೊಂಡೊಯ್ಯಲಾಗಿದೆ.

ಮನೋಜ್ ಏಕೆ ಇಂತಹ ನಿರ್ಧಾರ ಕೈಗೊಂಡರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿವಾಹದ ವೇಳೆ ತೊಂದರೆಯಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಆದರೆ ಅದಕ್ಕೂ ಇದಕ್ಕೂ ಸಂಬಂಧವಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

“ಮನೋಜ್ ಅವರ ಮನಸ್ಥಿತಿ ಮತ್ತು ಅಂತಹ ನಿರ್ಧಾರ ಕೈಗೊಳ್ಳಲು ಏನು ಕಾರಣ ಎಂಬುವುದು ಕಂಡುಕೊಳ್ಳುವುದು ಈಗ ಆದ್ಯತೆಯಾಗಿದೆ. ಜೊತೆಗೆ ದುಃಖಿತ ಕುಟುಂಬದ ಜೊತೆಗೆ ನಿಲ್ಲುವುದು ಕೂಡಾ ಸಹ ಮುಖ್ಯವಾಗಿದೆ.” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಾಲ್ವರು ಮಕ್ಕಳ ಜೊತೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...