Homeಮುಖಪುಟನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ಎಕ್ಸ್‌ಪ್ರೆಸ್ ವೇಗವಾಗಿ ಬರುತ್ತಿರುವುದನ್ನು ನೋಡಿ ತಮ್ಮನ್ನು ಬಿಡುವಂತೆ ಕೇಳಿಕೊಂಡರೂ ಬಿಡಲು ನಿರಾಕರಿಸಿದ ತಂದೆ!

- Advertisement -
- Advertisement -

36 ವರ್ಷದ ವ್ಯಕ್ತಿಯೊಬ್ಬ ತನ್ನ ನಾಲ್ವರು ಗಂಡು ಮಕ್ಕಳನ್ನು ರೈಲ್ವೆ ಹಳಿಗಳಿಗೆ ಕರೆದೊಯ್ದು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಹರಿಯಾಣದ ಫರಿದಾಬಾದ್‌ನ ಬಲ್ಲಭಗಢದಲ್ಲಿ ನಡೆದಿದೆ. ಸಾವಿಗೀಡಾದ ಮಕ್ಕಳಲ್ಲಿ ಅತ್ಯಂತ ಕಿರಿಯ ಮಗುವಿಗೆ ಮೂರು ವರ್ಷವಾಗಿದ್ದರೆ, ಹಿರಿಯ ಮಗನಿಗೆ ಒಂಬತ್ತು ವರ್ಷವಾಗಿತ್ತು. ವ್ಯಕ್ತಿಯು ಎಕ್ಸ್‌ಪ್ರೆಸ್ ರೈಲು ಹಾದು ಹೋಗುವವರೆಗೂ ಮಕ್ಕಳ ತೋಳುಗಳನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ನಾಲ್ವರು ಮಕ್ಕಳ ಜೊತೆಗೆ

ವ್ಯಕ್ತಿಯನ್ನು ಬಿಹಾರ ಮೂಲದ ಮನೋಜ್ ಮೆಹ್ತೋ ಎಂದು ಗುರುತಿಸಲಾಗಿದೆ. ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್ ಹಳಿಗಳ ಮೇಲೆ ವೇಗವಾಗಿ ಬರುತ್ತಿರುವುದನ್ನು ಕಂಡು, ತಮ್ಮನ್ನು ಬಿಡುವಂತೆ ಮಕ್ಕಳು ಕೇಳಿಕೊಂಡರೂ ಮನೋಜ್ ಅವರನ್ನು ಬಿಡಲು ನಿರಾಕರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ವರದಿ ಹೇಳಿದೆ. ದಿನಗೂಲಿ ಕಾರ್ಮಿಕನಾಗಿದ್ದ ಮನೋಜ್‌ ತನ್ನ ಮತ್ತು ತನ್ನ ಮಕ್ಕಳ ಜೀವನವನ್ನು ಕೊನೆಗೊಳಿಸಲು ಏಕೆ ನಿರ್ಧರಿಸಿದನೆಂದು ಸ್ಪಷ್ಟವಾಗಿಲ್ಲ ಎಂದು ವರದಿ ಉಲ್ಲೇಖಿಸಿದೆ.

“ಮುಂಬೈನಿಂದ ಬರುತ್ತಿದ್ದ ರೈಲು ಮಧ್ಯಾಹ್ನ 1.10 ರ ಸುಮಾರಿಗೆ ಐವರನ್ನು ಬಲಿ ಪಡೆದಿದೆ” ಎಂದು ಸರ್ಕಾರಿ ರೈಲ್ವೆ ಪೊಲೀಸ್ ಘಟಕದ ಎಸ್‌ಎಚ್‌ಒ ರಾಜ್‌ಪಾಲ್ ಹೇಳಿದ್ದಾರೆ. ಸುಭಾಷ್ ಕಾಲೋನಿ ಬಳಿ ವಾಸಿಸುತ್ತಿದ್ದ ಮನೋಜ್‌ ಮಧ್ಯಾಹ್ನ 12.15 ರ ಸುಮಾರಿಗೆ ಮನೆಯಿಂದ ಹೊರಡುವಾಗ ತನ್ನ ಪತ್ನಿ ಪ್ರಿಯಾಗೆ ಮಕ್ಕಳನ್ನು ಆಟವಾಡಲು ಹತ್ತಿರದ ಉದ್ಯಾನವನಕ್ಕೆ ಕರೆದೊಯ್ಯುತ್ತಿದ್ದೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮಕ್ಕಳನ್ನು ಫ್ಲೈಓವರ್ ಕೆಳಗೆ ನಿಲ್ಲಿಸಿ ಅವರಿಗೆ ಚಿಪ್ಸ್, ಕೋಲಾ ಕೂಡಾ ಖರೀದಿಸಿದ್ದರು. ಅದಾಗ್ಯೂ, ತನ್ನ ನಾಲ್ವರು ಮಕ್ಕಳನ್ನು ಆಟವಾಡಲು ಉದ್ಯಾನವನಕ್ಕೆ ಕರೆದೊಯ್ಯುವ ಬದಲು ಮನೋಜ್ ಅವರನ್ನು ರೈಲ್ವೆ ಹಳಿಗಳ ಬಳಿಗೆ ಕರೆದೊಯ್ದಿದ್ದನು. ಅಷ್ಟೆ ಅಲ್ಲದೆ, ಎಲ್ಸನ್ ಚೌಕ್ ಫ್ಲೈಓವರ್ ಕೆಳಗೆ ಸುಮಾರು ಒಂದು ಗಂಟೆ ಕುಳಿತು ರೈಲು ಬರುವವರೆಗೆ ಅವರಿಗೆ ಕಾಯುತ್ತಿದ್ದರು ಎಂದು ವರದಿಗಳು ಹೇಳಿವೆ.

ಘಟನೆಯ ನಂತರ, ಲೋಕೋ ಪೈಲಟ್ ಬಲ್ಲಭಗಢ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೋಜ್ ಅವರ ಆಧಾರ್ ಕಾರ್ಡ್ ಮೂಲಕ ಗುರುತಿಸಿದ್ದರು. ಅವರ ಜೇಬಿನಲ್ಲಿರುವ ಚಿಟ್‌ನಲ್ಲಿ ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಬರೆದಿರುವುದು ಕಂಡುಬಂದಿತ್ತು. ಈ ಎಲ್ಲಾ ಮಾಹಿತಿಗಳು ಅವರ ಕೃತ್ಯಗಳು ಪೂರ್ವಯೋಜಿತವೆಂದು ಸೂಚಿಸುತ್ತದೆ ಎಂದು ವರದಿ ಹೇಳಿದೆ.

“ಒಬ್ಬ ಮಹಿಳೆ ಮತ್ತು ಆಕೆಯ ಮಕ್ಕಳು ರೈಲಿನ ಮುಂದೆ ಹಾರಿದ್ದಾರೆ ಎಂದು ನಮಗೆ ಆರಂಭದಲ್ಲಿ ಮಾಹಿತಿ ಬಂದಿತು. ಆದರೆ ನಾವು ಸ್ಥಳಕ್ಕೆ ತಲುಪಿದಾಗ, ತಂದೆ ಮತ್ತು ಅವರ ಪುತ್ರರು ಹಳಿಗಳ ಮೇಲೆ ಸಿಲುಕಿದ್ದಾರೆ ಎಂದು ನಮಗೆ ತಿಳಿದುಬಂದಿದೆ” ಎಂದು ಜಿಆರ್‌ಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮನೋಜ್ ಪತ್ನಿ ಪ್ರಿಯಾ ಅವರಿಗೆ ಕರೆ ಮಾಡಿದಾಗ, ತನ್ನ ಪತಿ ಮಕ್ಕಳನ್ನು ಉದ್ಯಾನವನಕ್ಕೆ ಕರೆದೊಯ್ದಿದ್ದು, ಶೀಘ್ರದಲ್ಲೇ ಮನೆಗೆ ಹಿಂತಿರುಗುತ್ತಾರೆ ಎಂದು ಜಿಆರ್‌ಪಿ ಸಿಬ್ಬಂದಿಗೆ ತಿಳಿಸಿದ್ದಾರೆ. ನಂತರ ಅವರನ್ನು ಸ್ಥಳಕ್ಕೆ ಬರುವಂತೆ ಕೇಳಿಕೊಂಡಿದ್ದು, ಅಲ್ಲಿ ಅವರು ಗಂಡ ಮತ್ತು ಮಕ್ಕಳ ಶವಗಳನ್ನು ನೋಡಿ ಮೂರ್ಛೆ ಹೋದರು ಎಂದು ವರದಿ ತಿಳಿಸಿದೆ.

ಶವಪರೀಕ್ಷೆಗಾಗಿ ಬಾದ್‌ಶಾ ಖಾನ್ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ಕೊಂಡೊಯ್ಯಲಾಗಿದೆ.

ಮನೋಜ್ ಏಕೆ ಇಂತಹ ನಿರ್ಧಾರ ಕೈಗೊಂಡರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿವಾಹದ ವೇಳೆ ತೊಂದರೆಯಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಆದರೆ ಅದಕ್ಕೂ ಇದಕ್ಕೂ ಸಂಬಂಧವಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

“ಮನೋಜ್ ಅವರ ಮನಸ್ಥಿತಿ ಮತ್ತು ಅಂತಹ ನಿರ್ಧಾರ ಕೈಗೊಳ್ಳಲು ಏನು ಕಾರಣ ಎಂಬುವುದು ಕಂಡುಕೊಳ್ಳುವುದು ಈಗ ಆದ್ಯತೆಯಾಗಿದೆ. ಜೊತೆಗೆ ದುಃಖಿತ ಕುಟುಂಬದ ಜೊತೆಗೆ ನಿಲ್ಲುವುದು ಕೂಡಾ ಸಹ ಮುಖ್ಯವಾಗಿದೆ.” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಾಲ್ವರು ಮಕ್ಕಳ ಜೊತೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...