Homeಮುಖಪುಟನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ಎಕ್ಸ್‌ಪ್ರೆಸ್ ವೇಗವಾಗಿ ಬರುತ್ತಿರುವುದನ್ನು ನೋಡಿ ತಮ್ಮನ್ನು ಬಿಡುವಂತೆ ಕೇಳಿಕೊಂಡರೂ ಬಿಡಲು ನಿರಾಕರಿಸಿದ ತಂದೆ!

- Advertisement -
- Advertisement -

36 ವರ್ಷದ ವ್ಯಕ್ತಿಯೊಬ್ಬ ತನ್ನ ನಾಲ್ವರು ಗಂಡು ಮಕ್ಕಳನ್ನು ರೈಲ್ವೆ ಹಳಿಗಳಿಗೆ ಕರೆದೊಯ್ದು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಹರಿಯಾಣದ ಫರಿದಾಬಾದ್‌ನ ಬಲ್ಲಭಗಢದಲ್ಲಿ ನಡೆದಿದೆ. ಸಾವಿಗೀಡಾದ ಮಕ್ಕಳಲ್ಲಿ ಅತ್ಯಂತ ಕಿರಿಯ ಮಗುವಿಗೆ ಮೂರು ವರ್ಷವಾಗಿದ್ದರೆ, ಹಿರಿಯ ಮಗನಿಗೆ ಒಂಬತ್ತು ವರ್ಷವಾಗಿತ್ತು. ವ್ಯಕ್ತಿಯು ಎಕ್ಸ್‌ಪ್ರೆಸ್ ರೈಲು ಹಾದು ಹೋಗುವವರೆಗೂ ಮಕ್ಕಳ ತೋಳುಗಳನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ನಾಲ್ವರು ಮಕ್ಕಳ ಜೊತೆಗೆ

ವ್ಯಕ್ತಿಯನ್ನು ಬಿಹಾರ ಮೂಲದ ಮನೋಜ್ ಮೆಹ್ತೋ ಎಂದು ಗುರುತಿಸಲಾಗಿದೆ. ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್ ಹಳಿಗಳ ಮೇಲೆ ವೇಗವಾಗಿ ಬರುತ್ತಿರುವುದನ್ನು ಕಂಡು, ತಮ್ಮನ್ನು ಬಿಡುವಂತೆ ಮಕ್ಕಳು ಕೇಳಿಕೊಂಡರೂ ಮನೋಜ್ ಅವರನ್ನು ಬಿಡಲು ನಿರಾಕರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ವರದಿ ಹೇಳಿದೆ. ದಿನಗೂಲಿ ಕಾರ್ಮಿಕನಾಗಿದ್ದ ಮನೋಜ್‌ ತನ್ನ ಮತ್ತು ತನ್ನ ಮಕ್ಕಳ ಜೀವನವನ್ನು ಕೊನೆಗೊಳಿಸಲು ಏಕೆ ನಿರ್ಧರಿಸಿದನೆಂದು ಸ್ಪಷ್ಟವಾಗಿಲ್ಲ ಎಂದು ವರದಿ ಉಲ್ಲೇಖಿಸಿದೆ.

“ಮುಂಬೈನಿಂದ ಬರುತ್ತಿದ್ದ ರೈಲು ಮಧ್ಯಾಹ್ನ 1.10 ರ ಸುಮಾರಿಗೆ ಐವರನ್ನು ಬಲಿ ಪಡೆದಿದೆ” ಎಂದು ಸರ್ಕಾರಿ ರೈಲ್ವೆ ಪೊಲೀಸ್ ಘಟಕದ ಎಸ್‌ಎಚ್‌ಒ ರಾಜ್‌ಪಾಲ್ ಹೇಳಿದ್ದಾರೆ. ಸುಭಾಷ್ ಕಾಲೋನಿ ಬಳಿ ವಾಸಿಸುತ್ತಿದ್ದ ಮನೋಜ್‌ ಮಧ್ಯಾಹ್ನ 12.15 ರ ಸುಮಾರಿಗೆ ಮನೆಯಿಂದ ಹೊರಡುವಾಗ ತನ್ನ ಪತ್ನಿ ಪ್ರಿಯಾಗೆ ಮಕ್ಕಳನ್ನು ಆಟವಾಡಲು ಹತ್ತಿರದ ಉದ್ಯಾನವನಕ್ಕೆ ಕರೆದೊಯ್ಯುತ್ತಿದ್ದೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮಕ್ಕಳನ್ನು ಫ್ಲೈಓವರ್ ಕೆಳಗೆ ನಿಲ್ಲಿಸಿ ಅವರಿಗೆ ಚಿಪ್ಸ್, ಕೋಲಾ ಕೂಡಾ ಖರೀದಿಸಿದ್ದರು. ಅದಾಗ್ಯೂ, ತನ್ನ ನಾಲ್ವರು ಮಕ್ಕಳನ್ನು ಆಟವಾಡಲು ಉದ್ಯಾನವನಕ್ಕೆ ಕರೆದೊಯ್ಯುವ ಬದಲು ಮನೋಜ್ ಅವರನ್ನು ರೈಲ್ವೆ ಹಳಿಗಳ ಬಳಿಗೆ ಕರೆದೊಯ್ದಿದ್ದನು. ಅಷ್ಟೆ ಅಲ್ಲದೆ, ಎಲ್ಸನ್ ಚೌಕ್ ಫ್ಲೈಓವರ್ ಕೆಳಗೆ ಸುಮಾರು ಒಂದು ಗಂಟೆ ಕುಳಿತು ರೈಲು ಬರುವವರೆಗೆ ಅವರಿಗೆ ಕಾಯುತ್ತಿದ್ದರು ಎಂದು ವರದಿಗಳು ಹೇಳಿವೆ.

ಘಟನೆಯ ನಂತರ, ಲೋಕೋ ಪೈಲಟ್ ಬಲ್ಲಭಗಢ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೋಜ್ ಅವರ ಆಧಾರ್ ಕಾರ್ಡ್ ಮೂಲಕ ಗುರುತಿಸಿದ್ದರು. ಅವರ ಜೇಬಿನಲ್ಲಿರುವ ಚಿಟ್‌ನಲ್ಲಿ ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಬರೆದಿರುವುದು ಕಂಡುಬಂದಿತ್ತು. ಈ ಎಲ್ಲಾ ಮಾಹಿತಿಗಳು ಅವರ ಕೃತ್ಯಗಳು ಪೂರ್ವಯೋಜಿತವೆಂದು ಸೂಚಿಸುತ್ತದೆ ಎಂದು ವರದಿ ಹೇಳಿದೆ.

“ಒಬ್ಬ ಮಹಿಳೆ ಮತ್ತು ಆಕೆಯ ಮಕ್ಕಳು ರೈಲಿನ ಮುಂದೆ ಹಾರಿದ್ದಾರೆ ಎಂದು ನಮಗೆ ಆರಂಭದಲ್ಲಿ ಮಾಹಿತಿ ಬಂದಿತು. ಆದರೆ ನಾವು ಸ್ಥಳಕ್ಕೆ ತಲುಪಿದಾಗ, ತಂದೆ ಮತ್ತು ಅವರ ಪುತ್ರರು ಹಳಿಗಳ ಮೇಲೆ ಸಿಲುಕಿದ್ದಾರೆ ಎಂದು ನಮಗೆ ತಿಳಿದುಬಂದಿದೆ” ಎಂದು ಜಿಆರ್‌ಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮನೋಜ್ ಪತ್ನಿ ಪ್ರಿಯಾ ಅವರಿಗೆ ಕರೆ ಮಾಡಿದಾಗ, ತನ್ನ ಪತಿ ಮಕ್ಕಳನ್ನು ಉದ್ಯಾನವನಕ್ಕೆ ಕರೆದೊಯ್ದಿದ್ದು, ಶೀಘ್ರದಲ್ಲೇ ಮನೆಗೆ ಹಿಂತಿರುಗುತ್ತಾರೆ ಎಂದು ಜಿಆರ್‌ಪಿ ಸಿಬ್ಬಂದಿಗೆ ತಿಳಿಸಿದ್ದಾರೆ. ನಂತರ ಅವರನ್ನು ಸ್ಥಳಕ್ಕೆ ಬರುವಂತೆ ಕೇಳಿಕೊಂಡಿದ್ದು, ಅಲ್ಲಿ ಅವರು ಗಂಡ ಮತ್ತು ಮಕ್ಕಳ ಶವಗಳನ್ನು ನೋಡಿ ಮೂರ್ಛೆ ಹೋದರು ಎಂದು ವರದಿ ತಿಳಿಸಿದೆ.

ಶವಪರೀಕ್ಷೆಗಾಗಿ ಬಾದ್‌ಶಾ ಖಾನ್ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ಕೊಂಡೊಯ್ಯಲಾಗಿದೆ.

ಮನೋಜ್ ಏಕೆ ಇಂತಹ ನಿರ್ಧಾರ ಕೈಗೊಂಡರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿವಾಹದ ವೇಳೆ ತೊಂದರೆಯಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಆದರೆ ಅದಕ್ಕೂ ಇದಕ್ಕೂ ಸಂಬಂಧವಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

“ಮನೋಜ್ ಅವರ ಮನಸ್ಥಿತಿ ಮತ್ತು ಅಂತಹ ನಿರ್ಧಾರ ಕೈಗೊಳ್ಳಲು ಏನು ಕಾರಣ ಎಂಬುವುದು ಕಂಡುಕೊಳ್ಳುವುದು ಈಗ ಆದ್ಯತೆಯಾಗಿದೆ. ಜೊತೆಗೆ ದುಃಖಿತ ಕುಟುಂಬದ ಜೊತೆಗೆ ನಿಲ್ಲುವುದು ಕೂಡಾ ಸಹ ಮುಖ್ಯವಾಗಿದೆ.” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಾಲ್ವರು ಮಕ್ಕಳ ಜೊತೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...