Homeಮುಖಪುಟನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ಎಕ್ಸ್‌ಪ್ರೆಸ್ ವೇಗವಾಗಿ ಬರುತ್ತಿರುವುದನ್ನು ನೋಡಿ ತಮ್ಮನ್ನು ಬಿಡುವಂತೆ ಕೇಳಿಕೊಂಡರೂ ಬಿಡಲು ನಿರಾಕರಿಸಿದ ತಂದೆ!

- Advertisement -
- Advertisement -

36 ವರ್ಷದ ವ್ಯಕ್ತಿಯೊಬ್ಬ ತನ್ನ ನಾಲ್ವರು ಗಂಡು ಮಕ್ಕಳನ್ನು ರೈಲ್ವೆ ಹಳಿಗಳಿಗೆ ಕರೆದೊಯ್ದು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಹರಿಯಾಣದ ಫರಿದಾಬಾದ್‌ನ ಬಲ್ಲಭಗಢದಲ್ಲಿ ನಡೆದಿದೆ. ಸಾವಿಗೀಡಾದ ಮಕ್ಕಳಲ್ಲಿ ಅತ್ಯಂತ ಕಿರಿಯ ಮಗುವಿಗೆ ಮೂರು ವರ್ಷವಾಗಿದ್ದರೆ, ಹಿರಿಯ ಮಗನಿಗೆ ಒಂಬತ್ತು ವರ್ಷವಾಗಿತ್ತು. ವ್ಯಕ್ತಿಯು ಎಕ್ಸ್‌ಪ್ರೆಸ್ ರೈಲು ಹಾದು ಹೋಗುವವರೆಗೂ ಮಕ್ಕಳ ತೋಳುಗಳನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ನಾಲ್ವರು ಮಕ್ಕಳ ಜೊತೆಗೆ

ವ್ಯಕ್ತಿಯನ್ನು ಬಿಹಾರ ಮೂಲದ ಮನೋಜ್ ಮೆಹ್ತೋ ಎಂದು ಗುರುತಿಸಲಾಗಿದೆ. ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್ ಹಳಿಗಳ ಮೇಲೆ ವೇಗವಾಗಿ ಬರುತ್ತಿರುವುದನ್ನು ಕಂಡು, ತಮ್ಮನ್ನು ಬಿಡುವಂತೆ ಮಕ್ಕಳು ಕೇಳಿಕೊಂಡರೂ ಮನೋಜ್ ಅವರನ್ನು ಬಿಡಲು ನಿರಾಕರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ವರದಿ ಹೇಳಿದೆ. ದಿನಗೂಲಿ ಕಾರ್ಮಿಕನಾಗಿದ್ದ ಮನೋಜ್‌ ತನ್ನ ಮತ್ತು ತನ್ನ ಮಕ್ಕಳ ಜೀವನವನ್ನು ಕೊನೆಗೊಳಿಸಲು ಏಕೆ ನಿರ್ಧರಿಸಿದನೆಂದು ಸ್ಪಷ್ಟವಾಗಿಲ್ಲ ಎಂದು ವರದಿ ಉಲ್ಲೇಖಿಸಿದೆ.

“ಮುಂಬೈನಿಂದ ಬರುತ್ತಿದ್ದ ರೈಲು ಮಧ್ಯಾಹ್ನ 1.10 ರ ಸುಮಾರಿಗೆ ಐವರನ್ನು ಬಲಿ ಪಡೆದಿದೆ” ಎಂದು ಸರ್ಕಾರಿ ರೈಲ್ವೆ ಪೊಲೀಸ್ ಘಟಕದ ಎಸ್‌ಎಚ್‌ಒ ರಾಜ್‌ಪಾಲ್ ಹೇಳಿದ್ದಾರೆ. ಸುಭಾಷ್ ಕಾಲೋನಿ ಬಳಿ ವಾಸಿಸುತ್ತಿದ್ದ ಮನೋಜ್‌ ಮಧ್ಯಾಹ್ನ 12.15 ರ ಸುಮಾರಿಗೆ ಮನೆಯಿಂದ ಹೊರಡುವಾಗ ತನ್ನ ಪತ್ನಿ ಪ್ರಿಯಾಗೆ ಮಕ್ಕಳನ್ನು ಆಟವಾಡಲು ಹತ್ತಿರದ ಉದ್ಯಾನವನಕ್ಕೆ ಕರೆದೊಯ್ಯುತ್ತಿದ್ದೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮಕ್ಕಳನ್ನು ಫ್ಲೈಓವರ್ ಕೆಳಗೆ ನಿಲ್ಲಿಸಿ ಅವರಿಗೆ ಚಿಪ್ಸ್, ಕೋಲಾ ಕೂಡಾ ಖರೀದಿಸಿದ್ದರು. ಅದಾಗ್ಯೂ, ತನ್ನ ನಾಲ್ವರು ಮಕ್ಕಳನ್ನು ಆಟವಾಡಲು ಉದ್ಯಾನವನಕ್ಕೆ ಕರೆದೊಯ್ಯುವ ಬದಲು ಮನೋಜ್ ಅವರನ್ನು ರೈಲ್ವೆ ಹಳಿಗಳ ಬಳಿಗೆ ಕರೆದೊಯ್ದಿದ್ದನು. ಅಷ್ಟೆ ಅಲ್ಲದೆ, ಎಲ್ಸನ್ ಚೌಕ್ ಫ್ಲೈಓವರ್ ಕೆಳಗೆ ಸುಮಾರು ಒಂದು ಗಂಟೆ ಕುಳಿತು ರೈಲು ಬರುವವರೆಗೆ ಅವರಿಗೆ ಕಾಯುತ್ತಿದ್ದರು ಎಂದು ವರದಿಗಳು ಹೇಳಿವೆ.

ಘಟನೆಯ ನಂತರ, ಲೋಕೋ ಪೈಲಟ್ ಬಲ್ಲಭಗಢ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೋಜ್ ಅವರ ಆಧಾರ್ ಕಾರ್ಡ್ ಮೂಲಕ ಗುರುತಿಸಿದ್ದರು. ಅವರ ಜೇಬಿನಲ್ಲಿರುವ ಚಿಟ್‌ನಲ್ಲಿ ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಬರೆದಿರುವುದು ಕಂಡುಬಂದಿತ್ತು. ಈ ಎಲ್ಲಾ ಮಾಹಿತಿಗಳು ಅವರ ಕೃತ್ಯಗಳು ಪೂರ್ವಯೋಜಿತವೆಂದು ಸೂಚಿಸುತ್ತದೆ ಎಂದು ವರದಿ ಹೇಳಿದೆ.

“ಒಬ್ಬ ಮಹಿಳೆ ಮತ್ತು ಆಕೆಯ ಮಕ್ಕಳು ರೈಲಿನ ಮುಂದೆ ಹಾರಿದ್ದಾರೆ ಎಂದು ನಮಗೆ ಆರಂಭದಲ್ಲಿ ಮಾಹಿತಿ ಬಂದಿತು. ಆದರೆ ನಾವು ಸ್ಥಳಕ್ಕೆ ತಲುಪಿದಾಗ, ತಂದೆ ಮತ್ತು ಅವರ ಪುತ್ರರು ಹಳಿಗಳ ಮೇಲೆ ಸಿಲುಕಿದ್ದಾರೆ ಎಂದು ನಮಗೆ ತಿಳಿದುಬಂದಿದೆ” ಎಂದು ಜಿಆರ್‌ಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮನೋಜ್ ಪತ್ನಿ ಪ್ರಿಯಾ ಅವರಿಗೆ ಕರೆ ಮಾಡಿದಾಗ, ತನ್ನ ಪತಿ ಮಕ್ಕಳನ್ನು ಉದ್ಯಾನವನಕ್ಕೆ ಕರೆದೊಯ್ದಿದ್ದು, ಶೀಘ್ರದಲ್ಲೇ ಮನೆಗೆ ಹಿಂತಿರುಗುತ್ತಾರೆ ಎಂದು ಜಿಆರ್‌ಪಿ ಸಿಬ್ಬಂದಿಗೆ ತಿಳಿಸಿದ್ದಾರೆ. ನಂತರ ಅವರನ್ನು ಸ್ಥಳಕ್ಕೆ ಬರುವಂತೆ ಕೇಳಿಕೊಂಡಿದ್ದು, ಅಲ್ಲಿ ಅವರು ಗಂಡ ಮತ್ತು ಮಕ್ಕಳ ಶವಗಳನ್ನು ನೋಡಿ ಮೂರ್ಛೆ ಹೋದರು ಎಂದು ವರದಿ ತಿಳಿಸಿದೆ.

ಶವಪರೀಕ್ಷೆಗಾಗಿ ಬಾದ್‌ಶಾ ಖಾನ್ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ಕೊಂಡೊಯ್ಯಲಾಗಿದೆ.

ಮನೋಜ್ ಏಕೆ ಇಂತಹ ನಿರ್ಧಾರ ಕೈಗೊಂಡರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿವಾಹದ ವೇಳೆ ತೊಂದರೆಯಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಆದರೆ ಅದಕ್ಕೂ ಇದಕ್ಕೂ ಸಂಬಂಧವಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

“ಮನೋಜ್ ಅವರ ಮನಸ್ಥಿತಿ ಮತ್ತು ಅಂತಹ ನಿರ್ಧಾರ ಕೈಗೊಳ್ಳಲು ಏನು ಕಾರಣ ಎಂಬುವುದು ಕಂಡುಕೊಳ್ಳುವುದು ಈಗ ಆದ್ಯತೆಯಾಗಿದೆ. ಜೊತೆಗೆ ದುಃಖಿತ ಕುಟುಂಬದ ಜೊತೆಗೆ ನಿಲ್ಲುವುದು ಕೂಡಾ ಸಹ ಮುಖ್ಯವಾಗಿದೆ.” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಾಲ್ವರು ಮಕ್ಕಳ ಜೊತೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...