Homeನಿಜವೋ ಸುಳ್ಳೋಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

- Advertisement -
- Advertisement -

ಪ್ರೆಸ್ ಇನ್ಫರ್ಮೇಶನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್‌ಚೆಕ್ ವಿಂಗ್ ವಲಸೆ ಕಾರ್ಮಿಕರ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ಮಾಧ್ಯಮ ವರದಿಗಳನ್ನು ತಪ್ಪು ಎಂದು ಘೋಷಿಸಿದೆ. ಆದರೆ ವಾಸ್ತವ ಬೇರೆಯೇ ಇದೆ. ಅವುಗಳೆಂದರೆ

1 ತಾಯಿಯ ಸಾವು…

ಮಗುವೊಂದು ಸತ್ತ ತಾಯಿಯನ್ನು ಎಬ್ಬಿಸಲು ಪ್ರಯತ್ನಿಸುತ್ತಿದ್ದ ಹೃದಯ ವಿದ್ರಾವಕ ಘಟನೆ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದ್ದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗಿತ್ತು. ಆ ತಾಯಿ 23 ವರ್ಷದ ಅರ್ವಿನಾ ಕಾಥೂನ್ ಎಂಬುವವರು ಹಸಿವು, ಬಾಯಾರಿಕೆ ಮತ್ತು ಬಿಸಿಲಿನ ಝಳ ತಾಳಲಾರದೆ ಸಾವನಪ್ಪಿದ್ದಾರೆ. ಆಕೆ ರೈಲಿನಲ್ಲಿ ಅಹಮದ್‌ಬಾದ್‌ನಿಂದ ಹೊರಟಾಗಿನಿಂದಲೂ ಆಹಾರ ನೀರು ಸಿಕ್ಕಿರಲಿಲ್ಲ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಪಿಐಬಿ ಮಾಧ್ಯಮಗಳ ವರದಿ ತಪ್ಪು ಮತ್ತು ಕಲ್ಪನೆಯಿಂದ ಕೂಡಿವೆ. ಅರ್ವಿನಾ ಮೊದಲೇ ಹಲವು ರೋಗಗಳಿಂದ ಬಳಲುತ್ತಿದ್ದಳು ಹಾಗಾಗಿ ಸಾವನಪ್ಪಿದ್ದಾಳೆ ಎಂದು ಷರಾ ಬರೆದಿದೆ.

ಫ್ಯಾಕ್ಟ್‌ಚೆಕ್:

ಅರ್ವಿನಾ ಜೊತೆಗೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆಕೆಯ ತಂಗಿ ಕೊಹಿನೂರ್ ಮತ್ತು ಮೊಹಮ್ಮದ್ ವಾಜಿರ್ ಇಬ್ಬರೂ ಸಹ ಆಕೆಗೆ ಯಾವುದೇ ರೋಗವಿರಲಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ರೈಲು ಹತ್ತುವ ಮುನ್ನ ಡಾಕ್ಟರ್ ಬಳಿ ತಪಾಸಣೆ ನಡೆಸಿದ್ದು, ಅದರಲ್ಲಿ ಅರ್ವಿನಾ ಚೆನ್ನಾಗಿದ್ದಾಳೆ ಎಂಬ ವರದಿ ಬಂದಿದೆ ಎಂದು ಅವರು ಹೇಳಿದ್ದಾರೆ.

ಆಕೆಯ ತಂದೆ ತಾಯಿ ಇಬ್ಬರೂ ಸಹ ಆಕೆ ಚೆನ್ನಾಗಿದ್ದಳು, ಲಾಕ್‌ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರಿಂದ ಊರಿಗೆ ಬರಲು ಬಯಸಿದ್ದಳು ಎಂದು ಹೇಳಿದ್ದಾರೆ.

ಇನ್ನು ಮುಖ್ಯವಾಗಿ ಪಿಐಬಿ ಆಕೆ ಸಾವನಪ್ಪಲು ಯಾವ ರೋಗದಿಂದ ಬಳಲುತ್ತಿದ್ದಳು ಎಂಬದನ್ನು ಸ್ಪಷ್ಟವಾಗಿ ನಮೂದಿಸಿಲ್ಲ. ಅಲ್ಲದೇ ಆಕೆ ರೋಗದಿಂದ ಬಳಲುತ್ತಿದ್ದಳು ಎಂಬುದಕ್ಕೆ ಯಾವುದೇ ವೈದ್ಯಕೀಯ ದಾಖಲೆಗಳು ಸಹ ಇಲ್ಲ. ಇನ್ನು ಸರ್ಕಾರ ಆಕೆಯ ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಿಲ್ಲ. ಇಷ್ಟೆಲ್ಲ ತೊಡಕುಗಳಿದ್ದರೂ ಪಿಐಬಿ ಆಕೆ ಮುಂಚೆಯೇ ರೋಗದಿಂದ ಬಳಲುತ್ತಿದ್ದಳು ಎಂದು ಹೇಗೆ ಹೇಳಿತು?

ಪಿಐಬಿ ಒಂದನ್ನು ಮಾತ್ರ ಹೇಳುತ್ತಿದೆ. ಅದೆಂದರೆ ಆಕೆ ಮೊದಲೇ ರೋಗದಿಂದ ಬಳಲುತ್ತಿದ್ದಳು ಎಂದು ಆಕೆಯ ಸಂಬಂಧಿ ಮೊಹಮ್ಮದ್ ವಾಜಿರ್ ಹೇಳಿಕೆಯೊಂದಕ್ಕೆ ಹೆಬ್ಬೆಟ್ಟಿನ ಗುರುತು ಒತ್ತಿ ಸಹಿ ಮಾಡಿದ್ದಾರೆ ಎಂದು ವಾದಿಸಿದೆ. ಆದರೆ ಈ ಬಗ್ಗೆ ಮೊಹಮ್ಮದ್ “ನನಗೆ ಓದಲು ಮತ್ತು ಬರೆಯಲು ಬರುವುದಿಲ್ಲ. ಆ ಹೇಳಿಕೆಯನ್ನು ನಾನು ಬರೆದಿಲ್ಲ ಮತ್ತು ನನಗೆ ಅದರಲ್ಲಿ ಏನಿದೆ ಎಂದು ಯಾರೂ ಓದಿ ಹೇಳಿಲ್ಲ, ಸಹಿ ಮಾಡಿ ಎಂದಾಗ ನಾನು ಹೆಬ್ಬೆಟ್ಟು ಒತ್ತಿದೆ” ಎನ್ನುತ್ತಾರೆ.

2 ನಾಲ್ಕು ವರ್ಷದ ಮಗುವಿನ ಸಾವು

ಮೇ 28ರಂದು ಪತ್ರಕರ್ತೆ ರಾಣ ಅಯ್ಯೂಬ್‌ರವರು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದ ಮುಜಾಫರ್‌ಪುರದ ನಾಲ್ಕು ವರ್ಷದ ಮಗುವಿನ ಸಾವಿನ ಸುದ್ದಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ರೈಲ್ವೇ ಸಚಿವಾಲಯದ ವಕ್ತಾರರ ಹೇಳಿಕೆಯನ್ನು ಪಿಐಬಿ ರೀಟ್ವೀಟ್ ಮಾಡಿದೆ. ಅದರಲ್ಲಿ “ಆ ಮಗು ಮೊದಲೇ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದು ದೆಹಲಿಯಿಂದ ಹಿಂದಿರುವಾಗ ರೈಲಿನಲ್ಲಿ ಮೃತಪಟ್ಟಿದೆ. ಹಾಗಾಗಿ ಪರಿಶೀಲಿಸದ ಸುದ್ದಿಗಳನ್ನು ಪ್ರಕಟಿಸಬೇಡಿ” ಎಂದು ತಾಕೀತು ಮಾಡಿದೆ.

ಫ್ಯಾಕ್ಟ್‌ಚೆಕ್

ಈ ಕುರಿತು ಆಲ್ಟ್‌ನ್ಯೂಸ್ ಫ್ಯಾಕ್ಟ್‌ಚೆಕ್ ನಡೆಸಿದ್ದು ಆ ಮಗು ಇರ್ಷದ್ ನ ತಂದೆ ಮೊಹ್ಮಮ್ಮದ್ ಪಿಂಟುರವರನ್ನು ಮಾತನಾಡಿಸಿದೆ. ಅವರು “ಇರ್ಷದ್‌ಗೆ ಯಾವುದೇ ಸಮಸ್ಯೆಯಿರಲಿಲ್ಲ ಮತ್ತು ಯಾವುದೇ ಚಿಕಿತ್ಸೆ ಸಹ ಕೊಡಿಸಿಲ್ಲ. ನಾವು ಮೇ 23ರಂದು ಮುಂಬೈನಿಂದ ಪಾಟ್ನಾಗೆ ಪ್ರಯಾಣಿಸುತ್ತಿದ್ದೆವು. ದೆಹಲಿ ಸರ್ಕಾರ ನಮಗೆ ಊಟ ನೀರು ನೀಡಿತ್ತು. ರೈಲಿಗೆ ದರ ಸಹ ವಿಧಿಸಿರಲಿಲ್ಲ. ಅಂದು ರಾತ್ರಿ ಲಕ್ನೋ ಸ್ಟೇಷನ್‌ನಲ್ಲಿ ನಮಗೆ ಚಿಕ್ಕ ಊಟದ ಪ್ಯಾಕೆಟ್ ಮತ್ತು ನೀರು ಕೊಟ್ಟರು. ಅಲ್ಲಿಂದ ಮುಂದಕ್ಕೆ ನಾಲ್ಕು ದಿನ ನಮಗೆ ಏನೇನು ಸಿಗಲಿಲ್ಲ. ಟ್ರೈನ್‌ ನಿಲ್ಲಿಸಿದ ಸ್ಥಳಗಳಲ್ಲಿ ತಿನ್ನಲು ಏನೂ ಸಿಗಲಿಲ್ಲ. ನಮ್ಮ ಕುಟುಂಬದ ಹದಿನಾರು ಜನ ಒಟ್ಟಿಗೆ ಹಸಿದುಕೊಂಡೇ ಪ್ರಯಾಣಿಸುತ್ತಿದ್ದೆವು. ಮಕ್ಕಳು ಬಿಸಿಲು ಬಾಯಾರಿಕೆಯಿಂದ ಬಳಲುತ್ತಿದ್ದರು. ನಾವು ಪಾಟ್ನ ತಲುಪಿ ಅಲ್ಲಿಂದ ದಾನಾಪುರಕ್ಕೆ ಬಂದು ರಾತ್ರಿ ಹತ್ತರ ವೇಳೆಗೆ ಮುಜಾಫರ್‌ಪುರಕ್ಕೆ ಬಂದಿಳಿದೆವು. ರಾತ್ರಿಯಿಂದ ಬೆಳಿಗ್ಗೆವರೆಗೆ ಕಾಯ್ದರೂ ಯಾವುದೇ ಸಾರಿಗೆ ವ್ಯವಸ್ಥೆ ಸಿಗಲಿಲ್ಲ. ಈ ನಡುವೆ ನಮ್ಮ ಮಗು ಇರ್ಷದ ಮೃತಪಟ್ಟ’ ಎನ್ನುತ್ತಾರೆ.

ಇರ್ಷದ್ ಆರೋಗ್ಯವಾಗಿಯೇ ಇದ್ದ. ರೈಲು ಹತ್ತುವ ಮುನ್ನ ನಡೆಸಿದ ಮೆಡಿಕಲ್ ಚೆಕಪ್ ನಡೆಸಲಾಗಿತ್ತು. ಅಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಸಮಸ್ಯೆಯಿದ್ದರೆ ರೈಲು ಹತ್ತಲು ಸಹ ಬಿಡುವುದಿಲ್ಲ ಅಲ್ಲವೆ ಎಂದು ಅವರು ಪ್ರಶ್ನಿಸುತ್ತಾರೆ..

3 ಇಬ್ಬರ ಸಾವು

ಮೇ 27ರಂದು ರೈಲ್ವೇ ಸಚಿವಾಲಯದ ವಕ್ತಾರರ ಟ್ವೀಟ್ ಅನ್ನು ಪಿಐಬಿ ರೀಟ್ವೀಟ್ ಮಾಡಿದೆ. ಅದರಲ್ಲಿ ಮುಂಬೈನಿಂದ ವಾರಣಾಸಿಗೆ ತೆರಳುತ್ತಿದ್ದ ರೈಲಿನಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು ಅವರಿಗೆ ಪ್ಯಾರಲೈಸ್, ಕಿಡ್ನಿ ವೈಫಲ್ಯ ಮುಂತಾದ ರೋಗಗಳಿದ್ದವು ಎಂದಿದೆ.

ಫ್ಯಾಕ್ಟ್‌ಚೆಕ್:

ಮೃತ ವ್ಯಕ್ತಿಗಳಾದ ದಿವ್ಯಾಂಗ್ ದಶರಥ್(30) ಮತ್ತು ರಾಮರ್ಥನ್ ರಘುನಾಥ್ (63) ಅಧಿಕ ಉಷ್ಣಾಂಶ ಮತ್ತು ಹಸಿವಿನಿಂದ ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದರಲ್ಲಿ ರಾಮರ್ಥನ್‌ನರವರ ಮಗ ರಾಜೇಶ್ ಮಾತನಾಡಿ “ಅವರಿಗೆ ಯಾವುದೇ ಸಮಸ್ಯೆಯಿರಲಿಲ್ಲ. ಬಿಪಿ ಕೂಡ ಇರಲಿಲ್ಲ. ಅವರು ಪ್ರಯಾಣದ ಸಂದರ್ಭದಲ್ಲಿ ಫೋನ್‌ನಲ್ಲಿ ಮಾತನಾಡಿದ್ದೇ” ಎಂದಿದ್ದಾರೆ.

ಮೃತಪಟ್ಟವರೆಲ್ಲರೂ ಬಡವರಾಗಿದ್ದು ಅಪೌಷ್ಠಿಕತೆ, ಲಾಕ್‌ಡೌನ್‌ನಿಂದಾದ ಆರ್ಥಿಕ ಸಂಕಷ್ಟ, ದಣಿವು, ಹಸಿವು ಎಲ್ಲಾ ಸೇರಿ ಸಾವಿಗೆ ಕಾರಣವಾಗಿದೆ. ಆದರೆ ಪಿಐಬಿ ಮಾತ್ರ ಮೊದಲೇ ಧೀರ್ಘಕಾಲದ ರೋಗ ಇತ್ತು, ಈಗ ರೈಲಿನಲ್ಲಿ ಸತ್ತಿದ್ದಾರೆ ಎಂಬ ಕಾಟಾಚಾರದ ಫ್ಯಾಕ್ಟ್‌ಚೆಕ್ ಮಾಡಿ ಕೈತೊಳೆದುಕೊಂಡಿದೆ. ಒಟ್ಟಿನಲ್ಲಿ ಪಿಐಬಿ ಬೇಜವಾಬ್ದಾರಿಯಿಂದ ವರ್ತಿಸಿದ್ದು ಬಡಜನರ ಪ್ರಾಣದ ವಿಚಾರದಲ್ಲಿಯೂ ಅಮಾನವೀಯತೆಯಿಂದ ವರ್ತಿಸಿದೆ.


ಇದನ್ನೂ ಓದಿ: ನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...