Homeನಿಜವೋ ಸುಳ್ಳೋಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

- Advertisement -
- Advertisement -

ಪ್ರೆಸ್ ಇನ್ಫರ್ಮೇಶನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್‌ಚೆಕ್ ವಿಂಗ್ ವಲಸೆ ಕಾರ್ಮಿಕರ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ಮಾಧ್ಯಮ ವರದಿಗಳನ್ನು ತಪ್ಪು ಎಂದು ಘೋಷಿಸಿದೆ. ಆದರೆ ವಾಸ್ತವ ಬೇರೆಯೇ ಇದೆ. ಅವುಗಳೆಂದರೆ

1 ತಾಯಿಯ ಸಾವು…

ಮಗುವೊಂದು ಸತ್ತ ತಾಯಿಯನ್ನು ಎಬ್ಬಿಸಲು ಪ್ರಯತ್ನಿಸುತ್ತಿದ್ದ ಹೃದಯ ವಿದ್ರಾವಕ ಘಟನೆ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದ್ದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗಿತ್ತು. ಆ ತಾಯಿ 23 ವರ್ಷದ ಅರ್ವಿನಾ ಕಾಥೂನ್ ಎಂಬುವವರು ಹಸಿವು, ಬಾಯಾರಿಕೆ ಮತ್ತು ಬಿಸಿಲಿನ ಝಳ ತಾಳಲಾರದೆ ಸಾವನಪ್ಪಿದ್ದಾರೆ. ಆಕೆ ರೈಲಿನಲ್ಲಿ ಅಹಮದ್‌ಬಾದ್‌ನಿಂದ ಹೊರಟಾಗಿನಿಂದಲೂ ಆಹಾರ ನೀರು ಸಿಕ್ಕಿರಲಿಲ್ಲ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಪಿಐಬಿ ಮಾಧ್ಯಮಗಳ ವರದಿ ತಪ್ಪು ಮತ್ತು ಕಲ್ಪನೆಯಿಂದ ಕೂಡಿವೆ. ಅರ್ವಿನಾ ಮೊದಲೇ ಹಲವು ರೋಗಗಳಿಂದ ಬಳಲುತ್ತಿದ್ದಳು ಹಾಗಾಗಿ ಸಾವನಪ್ಪಿದ್ದಾಳೆ ಎಂದು ಷರಾ ಬರೆದಿದೆ.

ಫ್ಯಾಕ್ಟ್‌ಚೆಕ್:

ಅರ್ವಿನಾ ಜೊತೆಗೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆಕೆಯ ತಂಗಿ ಕೊಹಿನೂರ್ ಮತ್ತು ಮೊಹಮ್ಮದ್ ವಾಜಿರ್ ಇಬ್ಬರೂ ಸಹ ಆಕೆಗೆ ಯಾವುದೇ ರೋಗವಿರಲಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ರೈಲು ಹತ್ತುವ ಮುನ್ನ ಡಾಕ್ಟರ್ ಬಳಿ ತಪಾಸಣೆ ನಡೆಸಿದ್ದು, ಅದರಲ್ಲಿ ಅರ್ವಿನಾ ಚೆನ್ನಾಗಿದ್ದಾಳೆ ಎಂಬ ವರದಿ ಬಂದಿದೆ ಎಂದು ಅವರು ಹೇಳಿದ್ದಾರೆ.

ಆಕೆಯ ತಂದೆ ತಾಯಿ ಇಬ್ಬರೂ ಸಹ ಆಕೆ ಚೆನ್ನಾಗಿದ್ದಳು, ಲಾಕ್‌ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರಿಂದ ಊರಿಗೆ ಬರಲು ಬಯಸಿದ್ದಳು ಎಂದು ಹೇಳಿದ್ದಾರೆ.

ಇನ್ನು ಮುಖ್ಯವಾಗಿ ಪಿಐಬಿ ಆಕೆ ಸಾವನಪ್ಪಲು ಯಾವ ರೋಗದಿಂದ ಬಳಲುತ್ತಿದ್ದಳು ಎಂಬದನ್ನು ಸ್ಪಷ್ಟವಾಗಿ ನಮೂದಿಸಿಲ್ಲ. ಅಲ್ಲದೇ ಆಕೆ ರೋಗದಿಂದ ಬಳಲುತ್ತಿದ್ದಳು ಎಂಬುದಕ್ಕೆ ಯಾವುದೇ ವೈದ್ಯಕೀಯ ದಾಖಲೆಗಳು ಸಹ ಇಲ್ಲ. ಇನ್ನು ಸರ್ಕಾರ ಆಕೆಯ ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಿಲ್ಲ. ಇಷ್ಟೆಲ್ಲ ತೊಡಕುಗಳಿದ್ದರೂ ಪಿಐಬಿ ಆಕೆ ಮುಂಚೆಯೇ ರೋಗದಿಂದ ಬಳಲುತ್ತಿದ್ದಳು ಎಂದು ಹೇಗೆ ಹೇಳಿತು?

ಪಿಐಬಿ ಒಂದನ್ನು ಮಾತ್ರ ಹೇಳುತ್ತಿದೆ. ಅದೆಂದರೆ ಆಕೆ ಮೊದಲೇ ರೋಗದಿಂದ ಬಳಲುತ್ತಿದ್ದಳು ಎಂದು ಆಕೆಯ ಸಂಬಂಧಿ ಮೊಹಮ್ಮದ್ ವಾಜಿರ್ ಹೇಳಿಕೆಯೊಂದಕ್ಕೆ ಹೆಬ್ಬೆಟ್ಟಿನ ಗುರುತು ಒತ್ತಿ ಸಹಿ ಮಾಡಿದ್ದಾರೆ ಎಂದು ವಾದಿಸಿದೆ. ಆದರೆ ಈ ಬಗ್ಗೆ ಮೊಹಮ್ಮದ್ “ನನಗೆ ಓದಲು ಮತ್ತು ಬರೆಯಲು ಬರುವುದಿಲ್ಲ. ಆ ಹೇಳಿಕೆಯನ್ನು ನಾನು ಬರೆದಿಲ್ಲ ಮತ್ತು ನನಗೆ ಅದರಲ್ಲಿ ಏನಿದೆ ಎಂದು ಯಾರೂ ಓದಿ ಹೇಳಿಲ್ಲ, ಸಹಿ ಮಾಡಿ ಎಂದಾಗ ನಾನು ಹೆಬ್ಬೆಟ್ಟು ಒತ್ತಿದೆ” ಎನ್ನುತ್ತಾರೆ.

2 ನಾಲ್ಕು ವರ್ಷದ ಮಗುವಿನ ಸಾವು

ಮೇ 28ರಂದು ಪತ್ರಕರ್ತೆ ರಾಣ ಅಯ್ಯೂಬ್‌ರವರು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದ ಮುಜಾಫರ್‌ಪುರದ ನಾಲ್ಕು ವರ್ಷದ ಮಗುವಿನ ಸಾವಿನ ಸುದ್ದಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ರೈಲ್ವೇ ಸಚಿವಾಲಯದ ವಕ್ತಾರರ ಹೇಳಿಕೆಯನ್ನು ಪಿಐಬಿ ರೀಟ್ವೀಟ್ ಮಾಡಿದೆ. ಅದರಲ್ಲಿ “ಆ ಮಗು ಮೊದಲೇ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದು ದೆಹಲಿಯಿಂದ ಹಿಂದಿರುವಾಗ ರೈಲಿನಲ್ಲಿ ಮೃತಪಟ್ಟಿದೆ. ಹಾಗಾಗಿ ಪರಿಶೀಲಿಸದ ಸುದ್ದಿಗಳನ್ನು ಪ್ರಕಟಿಸಬೇಡಿ” ಎಂದು ತಾಕೀತು ಮಾಡಿದೆ.

ಫ್ಯಾಕ್ಟ್‌ಚೆಕ್

ಈ ಕುರಿತು ಆಲ್ಟ್‌ನ್ಯೂಸ್ ಫ್ಯಾಕ್ಟ್‌ಚೆಕ್ ನಡೆಸಿದ್ದು ಆ ಮಗು ಇರ್ಷದ್ ನ ತಂದೆ ಮೊಹ್ಮಮ್ಮದ್ ಪಿಂಟುರವರನ್ನು ಮಾತನಾಡಿಸಿದೆ. ಅವರು “ಇರ್ಷದ್‌ಗೆ ಯಾವುದೇ ಸಮಸ್ಯೆಯಿರಲಿಲ್ಲ ಮತ್ತು ಯಾವುದೇ ಚಿಕಿತ್ಸೆ ಸಹ ಕೊಡಿಸಿಲ್ಲ. ನಾವು ಮೇ 23ರಂದು ಮುಂಬೈನಿಂದ ಪಾಟ್ನಾಗೆ ಪ್ರಯಾಣಿಸುತ್ತಿದ್ದೆವು. ದೆಹಲಿ ಸರ್ಕಾರ ನಮಗೆ ಊಟ ನೀರು ನೀಡಿತ್ತು. ರೈಲಿಗೆ ದರ ಸಹ ವಿಧಿಸಿರಲಿಲ್ಲ. ಅಂದು ರಾತ್ರಿ ಲಕ್ನೋ ಸ್ಟೇಷನ್‌ನಲ್ಲಿ ನಮಗೆ ಚಿಕ್ಕ ಊಟದ ಪ್ಯಾಕೆಟ್ ಮತ್ತು ನೀರು ಕೊಟ್ಟರು. ಅಲ್ಲಿಂದ ಮುಂದಕ್ಕೆ ನಾಲ್ಕು ದಿನ ನಮಗೆ ಏನೇನು ಸಿಗಲಿಲ್ಲ. ಟ್ರೈನ್‌ ನಿಲ್ಲಿಸಿದ ಸ್ಥಳಗಳಲ್ಲಿ ತಿನ್ನಲು ಏನೂ ಸಿಗಲಿಲ್ಲ. ನಮ್ಮ ಕುಟುಂಬದ ಹದಿನಾರು ಜನ ಒಟ್ಟಿಗೆ ಹಸಿದುಕೊಂಡೇ ಪ್ರಯಾಣಿಸುತ್ತಿದ್ದೆವು. ಮಕ್ಕಳು ಬಿಸಿಲು ಬಾಯಾರಿಕೆಯಿಂದ ಬಳಲುತ್ತಿದ್ದರು. ನಾವು ಪಾಟ್ನ ತಲುಪಿ ಅಲ್ಲಿಂದ ದಾನಾಪುರಕ್ಕೆ ಬಂದು ರಾತ್ರಿ ಹತ್ತರ ವೇಳೆಗೆ ಮುಜಾಫರ್‌ಪುರಕ್ಕೆ ಬಂದಿಳಿದೆವು. ರಾತ್ರಿಯಿಂದ ಬೆಳಿಗ್ಗೆವರೆಗೆ ಕಾಯ್ದರೂ ಯಾವುದೇ ಸಾರಿಗೆ ವ್ಯವಸ್ಥೆ ಸಿಗಲಿಲ್ಲ. ಈ ನಡುವೆ ನಮ್ಮ ಮಗು ಇರ್ಷದ ಮೃತಪಟ್ಟ’ ಎನ್ನುತ್ತಾರೆ.

ಇರ್ಷದ್ ಆರೋಗ್ಯವಾಗಿಯೇ ಇದ್ದ. ರೈಲು ಹತ್ತುವ ಮುನ್ನ ನಡೆಸಿದ ಮೆಡಿಕಲ್ ಚೆಕಪ್ ನಡೆಸಲಾಗಿತ್ತು. ಅಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಸಮಸ್ಯೆಯಿದ್ದರೆ ರೈಲು ಹತ್ತಲು ಸಹ ಬಿಡುವುದಿಲ್ಲ ಅಲ್ಲವೆ ಎಂದು ಅವರು ಪ್ರಶ್ನಿಸುತ್ತಾರೆ..

3 ಇಬ್ಬರ ಸಾವು

ಮೇ 27ರಂದು ರೈಲ್ವೇ ಸಚಿವಾಲಯದ ವಕ್ತಾರರ ಟ್ವೀಟ್ ಅನ್ನು ಪಿಐಬಿ ರೀಟ್ವೀಟ್ ಮಾಡಿದೆ. ಅದರಲ್ಲಿ ಮುಂಬೈನಿಂದ ವಾರಣಾಸಿಗೆ ತೆರಳುತ್ತಿದ್ದ ರೈಲಿನಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು ಅವರಿಗೆ ಪ್ಯಾರಲೈಸ್, ಕಿಡ್ನಿ ವೈಫಲ್ಯ ಮುಂತಾದ ರೋಗಗಳಿದ್ದವು ಎಂದಿದೆ.

ಫ್ಯಾಕ್ಟ್‌ಚೆಕ್:

ಮೃತ ವ್ಯಕ್ತಿಗಳಾದ ದಿವ್ಯಾಂಗ್ ದಶರಥ್(30) ಮತ್ತು ರಾಮರ್ಥನ್ ರಘುನಾಥ್ (63) ಅಧಿಕ ಉಷ್ಣಾಂಶ ಮತ್ತು ಹಸಿವಿನಿಂದ ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದರಲ್ಲಿ ರಾಮರ್ಥನ್‌ನರವರ ಮಗ ರಾಜೇಶ್ ಮಾತನಾಡಿ “ಅವರಿಗೆ ಯಾವುದೇ ಸಮಸ್ಯೆಯಿರಲಿಲ್ಲ. ಬಿಪಿ ಕೂಡ ಇರಲಿಲ್ಲ. ಅವರು ಪ್ರಯಾಣದ ಸಂದರ್ಭದಲ್ಲಿ ಫೋನ್‌ನಲ್ಲಿ ಮಾತನಾಡಿದ್ದೇ” ಎಂದಿದ್ದಾರೆ.

ಮೃತಪಟ್ಟವರೆಲ್ಲರೂ ಬಡವರಾಗಿದ್ದು ಅಪೌಷ್ಠಿಕತೆ, ಲಾಕ್‌ಡೌನ್‌ನಿಂದಾದ ಆರ್ಥಿಕ ಸಂಕಷ್ಟ, ದಣಿವು, ಹಸಿವು ಎಲ್ಲಾ ಸೇರಿ ಸಾವಿಗೆ ಕಾರಣವಾಗಿದೆ. ಆದರೆ ಪಿಐಬಿ ಮಾತ್ರ ಮೊದಲೇ ಧೀರ್ಘಕಾಲದ ರೋಗ ಇತ್ತು, ಈಗ ರೈಲಿನಲ್ಲಿ ಸತ್ತಿದ್ದಾರೆ ಎಂಬ ಕಾಟಾಚಾರದ ಫ್ಯಾಕ್ಟ್‌ಚೆಕ್ ಮಾಡಿ ಕೈತೊಳೆದುಕೊಂಡಿದೆ. ಒಟ್ಟಿನಲ್ಲಿ ಪಿಐಬಿ ಬೇಜವಾಬ್ದಾರಿಯಿಂದ ವರ್ತಿಸಿದ್ದು ಬಡಜನರ ಪ್ರಾಣದ ವಿಚಾರದಲ್ಲಿಯೂ ಅಮಾನವೀಯತೆಯಿಂದ ವರ್ತಿಸಿದೆ.


ಇದನ್ನೂ ಓದಿ: ನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...