Homeನಿಜವೋ ಸುಳ್ಳೋಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

- Advertisement -
- Advertisement -

ಪ್ರೆಸ್ ಇನ್ಫರ್ಮೇಶನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್‌ಚೆಕ್ ವಿಂಗ್ ವಲಸೆ ಕಾರ್ಮಿಕರ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ಮಾಧ್ಯಮ ವರದಿಗಳನ್ನು ತಪ್ಪು ಎಂದು ಘೋಷಿಸಿದೆ. ಆದರೆ ವಾಸ್ತವ ಬೇರೆಯೇ ಇದೆ. ಅವುಗಳೆಂದರೆ

1 ತಾಯಿಯ ಸಾವು…

ಮಗುವೊಂದು ಸತ್ತ ತಾಯಿಯನ್ನು ಎಬ್ಬಿಸಲು ಪ್ರಯತ್ನಿಸುತ್ತಿದ್ದ ಹೃದಯ ವಿದ್ರಾವಕ ಘಟನೆ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದ್ದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗಿತ್ತು. ಆ ತಾಯಿ 23 ವರ್ಷದ ಅರ್ವಿನಾ ಕಾಥೂನ್ ಎಂಬುವವರು ಹಸಿವು, ಬಾಯಾರಿಕೆ ಮತ್ತು ಬಿಸಿಲಿನ ಝಳ ತಾಳಲಾರದೆ ಸಾವನಪ್ಪಿದ್ದಾರೆ. ಆಕೆ ರೈಲಿನಲ್ಲಿ ಅಹಮದ್‌ಬಾದ್‌ನಿಂದ ಹೊರಟಾಗಿನಿಂದಲೂ ಆಹಾರ ನೀರು ಸಿಕ್ಕಿರಲಿಲ್ಲ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಪಿಐಬಿ ಮಾಧ್ಯಮಗಳ ವರದಿ ತಪ್ಪು ಮತ್ತು ಕಲ್ಪನೆಯಿಂದ ಕೂಡಿವೆ. ಅರ್ವಿನಾ ಮೊದಲೇ ಹಲವು ರೋಗಗಳಿಂದ ಬಳಲುತ್ತಿದ್ದಳು ಹಾಗಾಗಿ ಸಾವನಪ್ಪಿದ್ದಾಳೆ ಎಂದು ಷರಾ ಬರೆದಿದೆ.

ಫ್ಯಾಕ್ಟ್‌ಚೆಕ್:

ಅರ್ವಿನಾ ಜೊತೆಗೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆಕೆಯ ತಂಗಿ ಕೊಹಿನೂರ್ ಮತ್ತು ಮೊಹಮ್ಮದ್ ವಾಜಿರ್ ಇಬ್ಬರೂ ಸಹ ಆಕೆಗೆ ಯಾವುದೇ ರೋಗವಿರಲಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ರೈಲು ಹತ್ತುವ ಮುನ್ನ ಡಾಕ್ಟರ್ ಬಳಿ ತಪಾಸಣೆ ನಡೆಸಿದ್ದು, ಅದರಲ್ಲಿ ಅರ್ವಿನಾ ಚೆನ್ನಾಗಿದ್ದಾಳೆ ಎಂಬ ವರದಿ ಬಂದಿದೆ ಎಂದು ಅವರು ಹೇಳಿದ್ದಾರೆ.

ಆಕೆಯ ತಂದೆ ತಾಯಿ ಇಬ್ಬರೂ ಸಹ ಆಕೆ ಚೆನ್ನಾಗಿದ್ದಳು, ಲಾಕ್‌ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರಿಂದ ಊರಿಗೆ ಬರಲು ಬಯಸಿದ್ದಳು ಎಂದು ಹೇಳಿದ್ದಾರೆ.

ಇನ್ನು ಮುಖ್ಯವಾಗಿ ಪಿಐಬಿ ಆಕೆ ಸಾವನಪ್ಪಲು ಯಾವ ರೋಗದಿಂದ ಬಳಲುತ್ತಿದ್ದಳು ಎಂಬದನ್ನು ಸ್ಪಷ್ಟವಾಗಿ ನಮೂದಿಸಿಲ್ಲ. ಅಲ್ಲದೇ ಆಕೆ ರೋಗದಿಂದ ಬಳಲುತ್ತಿದ್ದಳು ಎಂಬುದಕ್ಕೆ ಯಾವುದೇ ವೈದ್ಯಕೀಯ ದಾಖಲೆಗಳು ಸಹ ಇಲ್ಲ. ಇನ್ನು ಸರ್ಕಾರ ಆಕೆಯ ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಿಲ್ಲ. ಇಷ್ಟೆಲ್ಲ ತೊಡಕುಗಳಿದ್ದರೂ ಪಿಐಬಿ ಆಕೆ ಮುಂಚೆಯೇ ರೋಗದಿಂದ ಬಳಲುತ್ತಿದ್ದಳು ಎಂದು ಹೇಗೆ ಹೇಳಿತು?

ಪಿಐಬಿ ಒಂದನ್ನು ಮಾತ್ರ ಹೇಳುತ್ತಿದೆ. ಅದೆಂದರೆ ಆಕೆ ಮೊದಲೇ ರೋಗದಿಂದ ಬಳಲುತ್ತಿದ್ದಳು ಎಂದು ಆಕೆಯ ಸಂಬಂಧಿ ಮೊಹಮ್ಮದ್ ವಾಜಿರ್ ಹೇಳಿಕೆಯೊಂದಕ್ಕೆ ಹೆಬ್ಬೆಟ್ಟಿನ ಗುರುತು ಒತ್ತಿ ಸಹಿ ಮಾಡಿದ್ದಾರೆ ಎಂದು ವಾದಿಸಿದೆ. ಆದರೆ ಈ ಬಗ್ಗೆ ಮೊಹಮ್ಮದ್ “ನನಗೆ ಓದಲು ಮತ್ತು ಬರೆಯಲು ಬರುವುದಿಲ್ಲ. ಆ ಹೇಳಿಕೆಯನ್ನು ನಾನು ಬರೆದಿಲ್ಲ ಮತ್ತು ನನಗೆ ಅದರಲ್ಲಿ ಏನಿದೆ ಎಂದು ಯಾರೂ ಓದಿ ಹೇಳಿಲ್ಲ, ಸಹಿ ಮಾಡಿ ಎಂದಾಗ ನಾನು ಹೆಬ್ಬೆಟ್ಟು ಒತ್ತಿದೆ” ಎನ್ನುತ್ತಾರೆ.

2 ನಾಲ್ಕು ವರ್ಷದ ಮಗುವಿನ ಸಾವು

ಮೇ 28ರಂದು ಪತ್ರಕರ್ತೆ ರಾಣ ಅಯ್ಯೂಬ್‌ರವರು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದ ಮುಜಾಫರ್‌ಪುರದ ನಾಲ್ಕು ವರ್ಷದ ಮಗುವಿನ ಸಾವಿನ ಸುದ್ದಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ರೈಲ್ವೇ ಸಚಿವಾಲಯದ ವಕ್ತಾರರ ಹೇಳಿಕೆಯನ್ನು ಪಿಐಬಿ ರೀಟ್ವೀಟ್ ಮಾಡಿದೆ. ಅದರಲ್ಲಿ “ಆ ಮಗು ಮೊದಲೇ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದು ದೆಹಲಿಯಿಂದ ಹಿಂದಿರುವಾಗ ರೈಲಿನಲ್ಲಿ ಮೃತಪಟ್ಟಿದೆ. ಹಾಗಾಗಿ ಪರಿಶೀಲಿಸದ ಸುದ್ದಿಗಳನ್ನು ಪ್ರಕಟಿಸಬೇಡಿ” ಎಂದು ತಾಕೀತು ಮಾಡಿದೆ.

ಫ್ಯಾಕ್ಟ್‌ಚೆಕ್

ಈ ಕುರಿತು ಆಲ್ಟ್‌ನ್ಯೂಸ್ ಫ್ಯಾಕ್ಟ್‌ಚೆಕ್ ನಡೆಸಿದ್ದು ಆ ಮಗು ಇರ್ಷದ್ ನ ತಂದೆ ಮೊಹ್ಮಮ್ಮದ್ ಪಿಂಟುರವರನ್ನು ಮಾತನಾಡಿಸಿದೆ. ಅವರು “ಇರ್ಷದ್‌ಗೆ ಯಾವುದೇ ಸಮಸ್ಯೆಯಿರಲಿಲ್ಲ ಮತ್ತು ಯಾವುದೇ ಚಿಕಿತ್ಸೆ ಸಹ ಕೊಡಿಸಿಲ್ಲ. ನಾವು ಮೇ 23ರಂದು ಮುಂಬೈನಿಂದ ಪಾಟ್ನಾಗೆ ಪ್ರಯಾಣಿಸುತ್ತಿದ್ದೆವು. ದೆಹಲಿ ಸರ್ಕಾರ ನಮಗೆ ಊಟ ನೀರು ನೀಡಿತ್ತು. ರೈಲಿಗೆ ದರ ಸಹ ವಿಧಿಸಿರಲಿಲ್ಲ. ಅಂದು ರಾತ್ರಿ ಲಕ್ನೋ ಸ್ಟೇಷನ್‌ನಲ್ಲಿ ನಮಗೆ ಚಿಕ್ಕ ಊಟದ ಪ್ಯಾಕೆಟ್ ಮತ್ತು ನೀರು ಕೊಟ್ಟರು. ಅಲ್ಲಿಂದ ಮುಂದಕ್ಕೆ ನಾಲ್ಕು ದಿನ ನಮಗೆ ಏನೇನು ಸಿಗಲಿಲ್ಲ. ಟ್ರೈನ್‌ ನಿಲ್ಲಿಸಿದ ಸ್ಥಳಗಳಲ್ಲಿ ತಿನ್ನಲು ಏನೂ ಸಿಗಲಿಲ್ಲ. ನಮ್ಮ ಕುಟುಂಬದ ಹದಿನಾರು ಜನ ಒಟ್ಟಿಗೆ ಹಸಿದುಕೊಂಡೇ ಪ್ರಯಾಣಿಸುತ್ತಿದ್ದೆವು. ಮಕ್ಕಳು ಬಿಸಿಲು ಬಾಯಾರಿಕೆಯಿಂದ ಬಳಲುತ್ತಿದ್ದರು. ನಾವು ಪಾಟ್ನ ತಲುಪಿ ಅಲ್ಲಿಂದ ದಾನಾಪುರಕ್ಕೆ ಬಂದು ರಾತ್ರಿ ಹತ್ತರ ವೇಳೆಗೆ ಮುಜಾಫರ್‌ಪುರಕ್ಕೆ ಬಂದಿಳಿದೆವು. ರಾತ್ರಿಯಿಂದ ಬೆಳಿಗ್ಗೆವರೆಗೆ ಕಾಯ್ದರೂ ಯಾವುದೇ ಸಾರಿಗೆ ವ್ಯವಸ್ಥೆ ಸಿಗಲಿಲ್ಲ. ಈ ನಡುವೆ ನಮ್ಮ ಮಗು ಇರ್ಷದ ಮೃತಪಟ್ಟ’ ಎನ್ನುತ್ತಾರೆ.

ಇರ್ಷದ್ ಆರೋಗ್ಯವಾಗಿಯೇ ಇದ್ದ. ರೈಲು ಹತ್ತುವ ಮುನ್ನ ನಡೆಸಿದ ಮೆಡಿಕಲ್ ಚೆಕಪ್ ನಡೆಸಲಾಗಿತ್ತು. ಅಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಸಮಸ್ಯೆಯಿದ್ದರೆ ರೈಲು ಹತ್ತಲು ಸಹ ಬಿಡುವುದಿಲ್ಲ ಅಲ್ಲವೆ ಎಂದು ಅವರು ಪ್ರಶ್ನಿಸುತ್ತಾರೆ..

3 ಇಬ್ಬರ ಸಾವು

ಮೇ 27ರಂದು ರೈಲ್ವೇ ಸಚಿವಾಲಯದ ವಕ್ತಾರರ ಟ್ವೀಟ್ ಅನ್ನು ಪಿಐಬಿ ರೀಟ್ವೀಟ್ ಮಾಡಿದೆ. ಅದರಲ್ಲಿ ಮುಂಬೈನಿಂದ ವಾರಣಾಸಿಗೆ ತೆರಳುತ್ತಿದ್ದ ರೈಲಿನಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು ಅವರಿಗೆ ಪ್ಯಾರಲೈಸ್, ಕಿಡ್ನಿ ವೈಫಲ್ಯ ಮುಂತಾದ ರೋಗಗಳಿದ್ದವು ಎಂದಿದೆ.

ಫ್ಯಾಕ್ಟ್‌ಚೆಕ್:

ಮೃತ ವ್ಯಕ್ತಿಗಳಾದ ದಿವ್ಯಾಂಗ್ ದಶರಥ್(30) ಮತ್ತು ರಾಮರ್ಥನ್ ರಘುನಾಥ್ (63) ಅಧಿಕ ಉಷ್ಣಾಂಶ ಮತ್ತು ಹಸಿವಿನಿಂದ ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದರಲ್ಲಿ ರಾಮರ್ಥನ್‌ನರವರ ಮಗ ರಾಜೇಶ್ ಮಾತನಾಡಿ “ಅವರಿಗೆ ಯಾವುದೇ ಸಮಸ್ಯೆಯಿರಲಿಲ್ಲ. ಬಿಪಿ ಕೂಡ ಇರಲಿಲ್ಲ. ಅವರು ಪ್ರಯಾಣದ ಸಂದರ್ಭದಲ್ಲಿ ಫೋನ್‌ನಲ್ಲಿ ಮಾತನಾಡಿದ್ದೇ” ಎಂದಿದ್ದಾರೆ.

ಮೃತಪಟ್ಟವರೆಲ್ಲರೂ ಬಡವರಾಗಿದ್ದು ಅಪೌಷ್ಠಿಕತೆ, ಲಾಕ್‌ಡೌನ್‌ನಿಂದಾದ ಆರ್ಥಿಕ ಸಂಕಷ್ಟ, ದಣಿವು, ಹಸಿವು ಎಲ್ಲಾ ಸೇರಿ ಸಾವಿಗೆ ಕಾರಣವಾಗಿದೆ. ಆದರೆ ಪಿಐಬಿ ಮಾತ್ರ ಮೊದಲೇ ಧೀರ್ಘಕಾಲದ ರೋಗ ಇತ್ತು, ಈಗ ರೈಲಿನಲ್ಲಿ ಸತ್ತಿದ್ದಾರೆ ಎಂಬ ಕಾಟಾಚಾರದ ಫ್ಯಾಕ್ಟ್‌ಚೆಕ್ ಮಾಡಿ ಕೈತೊಳೆದುಕೊಂಡಿದೆ. ಒಟ್ಟಿನಲ್ಲಿ ಪಿಐಬಿ ಬೇಜವಾಬ್ದಾರಿಯಿಂದ ವರ್ತಿಸಿದ್ದು ಬಡಜನರ ಪ್ರಾಣದ ವಿಚಾರದಲ್ಲಿಯೂ ಅಮಾನವೀಯತೆಯಿಂದ ವರ್ತಿಸಿದೆ.


ಇದನ್ನೂ ಓದಿ: ನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...