Homeನಿಜವೋ ಸುಳ್ಳೋಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

- Advertisement -
- Advertisement -

ಪ್ರೆಸ್ ಇನ್ಫರ್ಮೇಶನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್‌ಚೆಕ್ ವಿಂಗ್ ವಲಸೆ ಕಾರ್ಮಿಕರ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ಮಾಧ್ಯಮ ವರದಿಗಳನ್ನು ತಪ್ಪು ಎಂದು ಘೋಷಿಸಿದೆ. ಆದರೆ ವಾಸ್ತವ ಬೇರೆಯೇ ಇದೆ. ಅವುಗಳೆಂದರೆ

1 ತಾಯಿಯ ಸಾವು…

ಮಗುವೊಂದು ಸತ್ತ ತಾಯಿಯನ್ನು ಎಬ್ಬಿಸಲು ಪ್ರಯತ್ನಿಸುತ್ತಿದ್ದ ಹೃದಯ ವಿದ್ರಾವಕ ಘಟನೆ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದ್ದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗಿತ್ತು. ಆ ತಾಯಿ 23 ವರ್ಷದ ಅರ್ವಿನಾ ಕಾಥೂನ್ ಎಂಬುವವರು ಹಸಿವು, ಬಾಯಾರಿಕೆ ಮತ್ತು ಬಿಸಿಲಿನ ಝಳ ತಾಳಲಾರದೆ ಸಾವನಪ್ಪಿದ್ದಾರೆ. ಆಕೆ ರೈಲಿನಲ್ಲಿ ಅಹಮದ್‌ಬಾದ್‌ನಿಂದ ಹೊರಟಾಗಿನಿಂದಲೂ ಆಹಾರ ನೀರು ಸಿಕ್ಕಿರಲಿಲ್ಲ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಪಿಐಬಿ ಮಾಧ್ಯಮಗಳ ವರದಿ ತಪ್ಪು ಮತ್ತು ಕಲ್ಪನೆಯಿಂದ ಕೂಡಿವೆ. ಅರ್ವಿನಾ ಮೊದಲೇ ಹಲವು ರೋಗಗಳಿಂದ ಬಳಲುತ್ತಿದ್ದಳು ಹಾಗಾಗಿ ಸಾವನಪ್ಪಿದ್ದಾಳೆ ಎಂದು ಷರಾ ಬರೆದಿದೆ.

ಫ್ಯಾಕ್ಟ್‌ಚೆಕ್:

ಅರ್ವಿನಾ ಜೊತೆಗೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಆಕೆಯ ತಂಗಿ ಕೊಹಿನೂರ್ ಮತ್ತು ಮೊಹಮ್ಮದ್ ವಾಜಿರ್ ಇಬ್ಬರೂ ಸಹ ಆಕೆಗೆ ಯಾವುದೇ ರೋಗವಿರಲಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ರೈಲು ಹತ್ತುವ ಮುನ್ನ ಡಾಕ್ಟರ್ ಬಳಿ ತಪಾಸಣೆ ನಡೆಸಿದ್ದು, ಅದರಲ್ಲಿ ಅರ್ವಿನಾ ಚೆನ್ನಾಗಿದ್ದಾಳೆ ಎಂಬ ವರದಿ ಬಂದಿದೆ ಎಂದು ಅವರು ಹೇಳಿದ್ದಾರೆ.

ಆಕೆಯ ತಂದೆ ತಾಯಿ ಇಬ್ಬರೂ ಸಹ ಆಕೆ ಚೆನ್ನಾಗಿದ್ದಳು, ಲಾಕ್‌ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರಿಂದ ಊರಿಗೆ ಬರಲು ಬಯಸಿದ್ದಳು ಎಂದು ಹೇಳಿದ್ದಾರೆ.

ಇನ್ನು ಮುಖ್ಯವಾಗಿ ಪಿಐಬಿ ಆಕೆ ಸಾವನಪ್ಪಲು ಯಾವ ರೋಗದಿಂದ ಬಳಲುತ್ತಿದ್ದಳು ಎಂಬದನ್ನು ಸ್ಪಷ್ಟವಾಗಿ ನಮೂದಿಸಿಲ್ಲ. ಅಲ್ಲದೇ ಆಕೆ ರೋಗದಿಂದ ಬಳಲುತ್ತಿದ್ದಳು ಎಂಬುದಕ್ಕೆ ಯಾವುದೇ ವೈದ್ಯಕೀಯ ದಾಖಲೆಗಳು ಸಹ ಇಲ್ಲ. ಇನ್ನು ಸರ್ಕಾರ ಆಕೆಯ ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಿಲ್ಲ. ಇಷ್ಟೆಲ್ಲ ತೊಡಕುಗಳಿದ್ದರೂ ಪಿಐಬಿ ಆಕೆ ಮುಂಚೆಯೇ ರೋಗದಿಂದ ಬಳಲುತ್ತಿದ್ದಳು ಎಂದು ಹೇಗೆ ಹೇಳಿತು?

ಪಿಐಬಿ ಒಂದನ್ನು ಮಾತ್ರ ಹೇಳುತ್ತಿದೆ. ಅದೆಂದರೆ ಆಕೆ ಮೊದಲೇ ರೋಗದಿಂದ ಬಳಲುತ್ತಿದ್ದಳು ಎಂದು ಆಕೆಯ ಸಂಬಂಧಿ ಮೊಹಮ್ಮದ್ ವಾಜಿರ್ ಹೇಳಿಕೆಯೊಂದಕ್ಕೆ ಹೆಬ್ಬೆಟ್ಟಿನ ಗುರುತು ಒತ್ತಿ ಸಹಿ ಮಾಡಿದ್ದಾರೆ ಎಂದು ವಾದಿಸಿದೆ. ಆದರೆ ಈ ಬಗ್ಗೆ ಮೊಹಮ್ಮದ್ “ನನಗೆ ಓದಲು ಮತ್ತು ಬರೆಯಲು ಬರುವುದಿಲ್ಲ. ಆ ಹೇಳಿಕೆಯನ್ನು ನಾನು ಬರೆದಿಲ್ಲ ಮತ್ತು ನನಗೆ ಅದರಲ್ಲಿ ಏನಿದೆ ಎಂದು ಯಾರೂ ಓದಿ ಹೇಳಿಲ್ಲ, ಸಹಿ ಮಾಡಿ ಎಂದಾಗ ನಾನು ಹೆಬ್ಬೆಟ್ಟು ಒತ್ತಿದೆ” ಎನ್ನುತ್ತಾರೆ.

2 ನಾಲ್ಕು ವರ್ಷದ ಮಗುವಿನ ಸಾವು

ಮೇ 28ರಂದು ಪತ್ರಕರ್ತೆ ರಾಣ ಅಯ್ಯೂಬ್‌ರವರು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದ ಮುಜಾಫರ್‌ಪುರದ ನಾಲ್ಕು ವರ್ಷದ ಮಗುವಿನ ಸಾವಿನ ಸುದ್ದಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ರೈಲ್ವೇ ಸಚಿವಾಲಯದ ವಕ್ತಾರರ ಹೇಳಿಕೆಯನ್ನು ಪಿಐಬಿ ರೀಟ್ವೀಟ್ ಮಾಡಿದೆ. ಅದರಲ್ಲಿ “ಆ ಮಗು ಮೊದಲೇ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದು ದೆಹಲಿಯಿಂದ ಹಿಂದಿರುವಾಗ ರೈಲಿನಲ್ಲಿ ಮೃತಪಟ್ಟಿದೆ. ಹಾಗಾಗಿ ಪರಿಶೀಲಿಸದ ಸುದ್ದಿಗಳನ್ನು ಪ್ರಕಟಿಸಬೇಡಿ” ಎಂದು ತಾಕೀತು ಮಾಡಿದೆ.

ಫ್ಯಾಕ್ಟ್‌ಚೆಕ್

ಈ ಕುರಿತು ಆಲ್ಟ್‌ನ್ಯೂಸ್ ಫ್ಯಾಕ್ಟ್‌ಚೆಕ್ ನಡೆಸಿದ್ದು ಆ ಮಗು ಇರ್ಷದ್ ನ ತಂದೆ ಮೊಹ್ಮಮ್ಮದ್ ಪಿಂಟುರವರನ್ನು ಮಾತನಾಡಿಸಿದೆ. ಅವರು “ಇರ್ಷದ್‌ಗೆ ಯಾವುದೇ ಸಮಸ್ಯೆಯಿರಲಿಲ್ಲ ಮತ್ತು ಯಾವುದೇ ಚಿಕಿತ್ಸೆ ಸಹ ಕೊಡಿಸಿಲ್ಲ. ನಾವು ಮೇ 23ರಂದು ಮುಂಬೈನಿಂದ ಪಾಟ್ನಾಗೆ ಪ್ರಯಾಣಿಸುತ್ತಿದ್ದೆವು. ದೆಹಲಿ ಸರ್ಕಾರ ನಮಗೆ ಊಟ ನೀರು ನೀಡಿತ್ತು. ರೈಲಿಗೆ ದರ ಸಹ ವಿಧಿಸಿರಲಿಲ್ಲ. ಅಂದು ರಾತ್ರಿ ಲಕ್ನೋ ಸ್ಟೇಷನ್‌ನಲ್ಲಿ ನಮಗೆ ಚಿಕ್ಕ ಊಟದ ಪ್ಯಾಕೆಟ್ ಮತ್ತು ನೀರು ಕೊಟ್ಟರು. ಅಲ್ಲಿಂದ ಮುಂದಕ್ಕೆ ನಾಲ್ಕು ದಿನ ನಮಗೆ ಏನೇನು ಸಿಗಲಿಲ್ಲ. ಟ್ರೈನ್‌ ನಿಲ್ಲಿಸಿದ ಸ್ಥಳಗಳಲ್ಲಿ ತಿನ್ನಲು ಏನೂ ಸಿಗಲಿಲ್ಲ. ನಮ್ಮ ಕುಟುಂಬದ ಹದಿನಾರು ಜನ ಒಟ್ಟಿಗೆ ಹಸಿದುಕೊಂಡೇ ಪ್ರಯಾಣಿಸುತ್ತಿದ್ದೆವು. ಮಕ್ಕಳು ಬಿಸಿಲು ಬಾಯಾರಿಕೆಯಿಂದ ಬಳಲುತ್ತಿದ್ದರು. ನಾವು ಪಾಟ್ನ ತಲುಪಿ ಅಲ್ಲಿಂದ ದಾನಾಪುರಕ್ಕೆ ಬಂದು ರಾತ್ರಿ ಹತ್ತರ ವೇಳೆಗೆ ಮುಜಾಫರ್‌ಪುರಕ್ಕೆ ಬಂದಿಳಿದೆವು. ರಾತ್ರಿಯಿಂದ ಬೆಳಿಗ್ಗೆವರೆಗೆ ಕಾಯ್ದರೂ ಯಾವುದೇ ಸಾರಿಗೆ ವ್ಯವಸ್ಥೆ ಸಿಗಲಿಲ್ಲ. ಈ ನಡುವೆ ನಮ್ಮ ಮಗು ಇರ್ಷದ ಮೃತಪಟ್ಟ’ ಎನ್ನುತ್ತಾರೆ.

ಇರ್ಷದ್ ಆರೋಗ್ಯವಾಗಿಯೇ ಇದ್ದ. ರೈಲು ಹತ್ತುವ ಮುನ್ನ ನಡೆಸಿದ ಮೆಡಿಕಲ್ ಚೆಕಪ್ ನಡೆಸಲಾಗಿತ್ತು. ಅಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಸಮಸ್ಯೆಯಿದ್ದರೆ ರೈಲು ಹತ್ತಲು ಸಹ ಬಿಡುವುದಿಲ್ಲ ಅಲ್ಲವೆ ಎಂದು ಅವರು ಪ್ರಶ್ನಿಸುತ್ತಾರೆ..

3 ಇಬ್ಬರ ಸಾವು

ಮೇ 27ರಂದು ರೈಲ್ವೇ ಸಚಿವಾಲಯದ ವಕ್ತಾರರ ಟ್ವೀಟ್ ಅನ್ನು ಪಿಐಬಿ ರೀಟ್ವೀಟ್ ಮಾಡಿದೆ. ಅದರಲ್ಲಿ ಮುಂಬೈನಿಂದ ವಾರಣಾಸಿಗೆ ತೆರಳುತ್ತಿದ್ದ ರೈಲಿನಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು ಅವರಿಗೆ ಪ್ಯಾರಲೈಸ್, ಕಿಡ್ನಿ ವೈಫಲ್ಯ ಮುಂತಾದ ರೋಗಗಳಿದ್ದವು ಎಂದಿದೆ.

ಫ್ಯಾಕ್ಟ್‌ಚೆಕ್:

ಮೃತ ವ್ಯಕ್ತಿಗಳಾದ ದಿವ್ಯಾಂಗ್ ದಶರಥ್(30) ಮತ್ತು ರಾಮರ್ಥನ್ ರಘುನಾಥ್ (63) ಅಧಿಕ ಉಷ್ಣಾಂಶ ಮತ್ತು ಹಸಿವಿನಿಂದ ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದರಲ್ಲಿ ರಾಮರ್ಥನ್‌ನರವರ ಮಗ ರಾಜೇಶ್ ಮಾತನಾಡಿ “ಅವರಿಗೆ ಯಾವುದೇ ಸಮಸ್ಯೆಯಿರಲಿಲ್ಲ. ಬಿಪಿ ಕೂಡ ಇರಲಿಲ್ಲ. ಅವರು ಪ್ರಯಾಣದ ಸಂದರ್ಭದಲ್ಲಿ ಫೋನ್‌ನಲ್ಲಿ ಮಾತನಾಡಿದ್ದೇ” ಎಂದಿದ್ದಾರೆ.

ಮೃತಪಟ್ಟವರೆಲ್ಲರೂ ಬಡವರಾಗಿದ್ದು ಅಪೌಷ್ಠಿಕತೆ, ಲಾಕ್‌ಡೌನ್‌ನಿಂದಾದ ಆರ್ಥಿಕ ಸಂಕಷ್ಟ, ದಣಿವು, ಹಸಿವು ಎಲ್ಲಾ ಸೇರಿ ಸಾವಿಗೆ ಕಾರಣವಾಗಿದೆ. ಆದರೆ ಪಿಐಬಿ ಮಾತ್ರ ಮೊದಲೇ ಧೀರ್ಘಕಾಲದ ರೋಗ ಇತ್ತು, ಈಗ ರೈಲಿನಲ್ಲಿ ಸತ್ತಿದ್ದಾರೆ ಎಂಬ ಕಾಟಾಚಾರದ ಫ್ಯಾಕ್ಟ್‌ಚೆಕ್ ಮಾಡಿ ಕೈತೊಳೆದುಕೊಂಡಿದೆ. ಒಟ್ಟಿನಲ್ಲಿ ಪಿಐಬಿ ಬೇಜವಾಬ್ದಾರಿಯಿಂದ ವರ್ತಿಸಿದ್ದು ಬಡಜನರ ಪ್ರಾಣದ ವಿಚಾರದಲ್ಲಿಯೂ ಅಮಾನವೀಯತೆಯಿಂದ ವರ್ತಿಸಿದೆ.


ಇದನ್ನೂ ಓದಿ: ನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...