ಬೆಂಗಳೂರಿನ ಅರಮನೆ ಮೈದಾನದಲ್ಲಿ ತಮ್ಮ ರಾಜ್ಯಗಳಿಗೆ ಹೋಗಲು ವಲಸೆ ಕಾರ್ಮಿಕರು ಸಾಲುಗಟ್ಟಿ ನಿಂತಿರುವುದನ್ನು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಒಡಿಶಾದ ತಮ್ಮ ಊರುಗಳಿಗೆ ಪ್ರಯಾಣಿಸಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಬೆಂಗಳೂರಿನ ಅರಮನೆ ಮೈಧಾನದಲ್ಲಿ ವಲಸೆ ಕಾರ್ಮಿಕರು ಸರತಿ ಸಾಲುಗಳಲ್ಲಿ ನಿಂತಿರುವುದು ಕಂಡು ಬಂದಿದೆ.
Karnataka: Long queues seen at Palace Ground in Bengaluru as people line up to register themselves to return to their native districts in Odisha. pic.twitter.com/uoX9BrIGvX
— ANI (@ANI) May 23, 2020
ಮೇ 18 ರಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ರೈಲು ಸಂಚಾರಕ್ಕೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದ್ದರು. ಅಲ್ಲದೆ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರಿಗೆ “ಶ್ರಮಿಕ್” ವಿಶೇಷ ರೈಲುಗಳ ಸಂಚಾರಕ್ಕೆ ಅನುಮತಿ ನೀಡಿದೆ.
ಅಲ್ಲದೆ ಮೇ 21 ರಿಂದ ರೈಲು ಬುಕಿಂಗ್ ಪ್ರಾಂಭವಾಗಿದ್ದು, ಜೂನ್ 1 ರಿಂದ ಸಂಚರಿಸುವ ರೈಲುಗಳ ಪಟ್ಟಿಯನ್ನು ರೈಲ್ವೆ ಇಲಾಖೆಯು ಬಿಡುಗಡೆ ಮಾಡಿದೆ. ಆನ್ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಬಹುದಾಗಿದ್ದು. ಐಆರ್ಸಿಟಿಸಿ ವೆಬ್ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ರೈಲು ಇ-ಟಿಕೆಟ್ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ.
ಗರಿಷ್ಠ 30 ದಿನಗಳ ವರೆಗೆ ಟಿಕೆಟ್ ಕಾಯ್ದಿರಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ಟಿಕೆಟ್ ರದ್ದುಪಡಿಸುವುದಕ್ಕೆ ಸಂಬಂಧಿಸಿದಂತೆ ನಿಯಮ ರೂಪಿಸಲಾಗುವುದು. ಅಲ್ಲದೆ ವೆಯ್ಟಿಂಗ್ ಲಿಸ್ಟ್ ಟಿಕೆಟ್ ಇರುವವರು ಪ್ರಯಾಣಿಸಲು ಅವಕಾಶ ಇರುವುದಿಲ್ಲ ಎಂದು ಇಲಾಖೆ ಹೇಳಿತ್ತು.
ಓದಿ: ಬಾಲಕಿ 1200 ಕಿ.ಮಿ. ಕ್ರಮಿಸಿದ್ದು ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ