Homeಕರ್ನಾಟಕವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

- Advertisement -
- Advertisement -

ಶುಕ್ರವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಟೆನಿಸ್ ಪೆವಿಲಿಯನ್‌ ನಿರಾಶ್ರಿತ ಕೇಂದ್ರದ ಮೇಲ್ಛಾವಣಿ ಕುಸಿದು ವಲಸೆ ಕಾರ್ಮಿಕರ ಮೇಲೆ ಅಪ್ಪಳಿಸಿದೆ. ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಹೇಳಿಕೆಯ ಪ್ರಕಾರ, ಸುಮಾರು 100 ಪುರುಷರು, 40 ಮಹಿಳೆಯರು, 45 ಮಕ್ಕಳು ಮತ್ತು ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆರು ಮಕ್ಕಳು ಸ್ಥಳದಲ್ಲಿದ್ದರು ಎನ್ನಲಾಗಿದೆ.

ಇದರಿಂದಾಗಿ ಅಷ್ಟು ವಲಸೆ ಕಾರ್ಮಿಕರು ಮಳೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನೆನೆದಿರುವ ಅಮಾನವೀಯ ಘಟನೆ ವರದಿಯಾಗಿದೆ. ಘಟನೆ ನಡೆದ ಒಂದು ಗಂಟೆಯ ನಂತರ ಬಿಎಂಟಿಸಿ ಬಸ್ಸೊಂದು ಬಂದರೂ ಸಹ ಕಾರ್ಮಿಕರನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರನ್ನು ತಮ್ಮ ಸಾಮಾನು ಸರಂಜಾಮುಗಳನ್ನು ತೆಗೆದುಕೊಂಡು ಬೇರೆ ಸ್ಥಳಕ್ಕೆ ಹೋಗಲು ಸಿದ್ದರಾಗಿದ್ದರು. ಅವರನ್ನು ತ್ರಿಪುರ ವಾಸಿನಿಗೆ ಸ್ಥಳಾಂತರಿಸಲು ಚಿಂತನೆ ನಡೆಸಿದ್ದರು ಸಹ ಅದೂ ಮುಚ್ಚಲ್ಪಟ್ಟಿದ್ದ ಕಾರಣ ಅವರು ಕಾಯಬೇಕಾಗಿದೆ.

ಮಳೆಯಿಂದಾಗಿ ಸಂಪೂರ್ಣವಾಗಿ ತೇವಗೊಂಡಿದ್ದ ಕಾರ್ಮಿಕರು ಹಲವು ಗಂಟೆಗಳ ಕಾಲ ಬಸ್‌ನಲ್ಲಿಯೇ ಆಶ್ರಯ ಪಡೆದಿದ್ದಾರೆ. ಅಷ್ಟೂ ಜನರು ಒಂದೇ ಬಸ್‌ನಲ್ಲಿದ್ದರಿಂದ ಯಾವುದೇ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಾಗಿಲ್ಲ ಎನ್ನಲಾಗಿದೆ. ಆನಂತರ ಅವರನ್ನು ಸ್ಥಳಾಂತರಿಸಲಾಗಿದೆ.

ಘಟನೆಯನ್ನು ವಿವರಿಸುತ್ತಾ, ಕಾರ್ಮಿಕರೊಬ್ಬರು, “ಭಾರೀ ಮಳೆಗೆ ಮೇಲ್ಛಾವಣಿಯು ಕೆಳಗೆ ಬಿದ್ದಿತು. ಸಣ್ಣ ಮಕ್ಕಳು, ಮಹಿಳೆಯರು – ಬಹಳಷ್ಟು ಜನರು, ಅವರು ಇಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಾವು ಅಧಿಕಾರಿಗಳಿಗೆ ತಿಳಿಸಿದೆವು. ಉತ್ತರ ಪ್ರದೇಶ, ಚತ್ತೀಸ್‌ಘಡ, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾದ ಜನರು ಇಲ್ಲಿದ್ದಾರೆ. ಇಂದು ಈ ಜನರನ್ನು ತುರ್ತಾಗಿ ಸ್ಥಳಾಂತರಿಸುವಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ. ಇಲ್ಲಿದಿದ್ದರೆ ಇಲ್ಲಿಂದ ಕಾಲ್ನಡಿಗೆಯಲ್ಲಿ ಹೋಗಬೇಕಾಗುತ್ತದೆ ” ಎಂದು ಅವರು ಹೇಳಿದ್ದಾರೆ.

ಕೊನೆಗೂ ಸಿಕ್ಕ ಸಹಾಯ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್‌ ರವಿ ಕುಮಾರ್ ಆಗಮಿಸಿ, ಮೇಲ್ಛಾವಣಿ ಕುಸಿತಕ್ಕೊಳಗಾದವರು ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದ್ದಾರೆ.

“ನಾವು ಹೇಗೋ ಬದುಕುಳಿದಿದ್ದೇವೆ. ನಮಗೆ ಪೊಲೀಸ್ ಅಧಿಕಾರಿಯೊಬ್ಬರು ಸಹಾಯ ಮಾಡಿದರು. ಆನಂತರ ಮೇಲ್ಛಾವಣಿ ತೆರವುಗೊಳಿಸಲು ಬಹಳಷ್ಟು ಜನರು ಮುಂದೆ ಬಂದರು. ಎಲ್ಲರ ನಗದು ಸೇರಿದಂತೆ ಸಾಮಾನು, ಮೊಬೈಲ್ ಮತ್ತಿತರ ವಸ್ತುಗಳ ಅಡಿಯಲ್ಲಿ ಉಳಿದುಕೊಂಡಿವೆ ಎಂದು ಕಾರ್ಮಿಕರೊಬ್ಬರು ತಿಳಿಸಿದ್ದಾರೆ.

ನಮ್ಮೂರಿಗೆ ಕಳಿಸಿಕೊಡಿ

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಛಾವಣಿ ಕುಸಿದಾಗ ನನ್ನ ಹೆಗಲ ಮೇಲೆ ಮಗುವನ್ನಿಟ್ಟುಕೊಂಡಿದ್ದೆ. ಇದರಿಂದ ನನಗೆ ತೀವ್ರ ಭಯವಾಗಿದೆ. ಇಲ್ಲಿಯೇ ಇದ್ದರೆ ನನ್ನ ಮಗುವನ್ನು ಕಳೆದುಕೊಳ್ಳಬಹುದೆಂಬ ಭಯ ನನ್ನನ್ನು ಕಾಡುತ್ತಿದೆ. ಆ ಮಗು ಕೇವಲ ಹಾಲು ಕುಡಿಯುತ್ತಿದ್ದು, ಅದಕ್ಕೂ ನಮ್ಮ ಬಳಿ ಹಣವಿಲ್ಲದಂತಾಗಿದೆ. ಹಾಗಾಗಿ ಇಲ್ಲಿಂದ ನಮ್ಮ ರಾಜ್ಯಕ್ಕೆ ಹೊರಡಲು ದಯವಿಟ್ಟು ಅವಕಾಶಮಾಡಿಕೊಡಿ ಎಂದು ಬೇಡಿಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಇಲ್ಲಿಂದ ಹೊರಡಲು ನಮಗೆ ಸರ್ಕಾರ ಸಹಾಯ ಮಾಡದಿದ್ದರೆ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ. ಏನಾದರೂ ಆಗಲಿ ನಾವು ಬೆಳಿಗ್ಗೆಯೇ ಹೊರಡುವಂತೆ ವ್ಯವಸ್ಥೆ ಮಾಡಿ. ಇಲ್ಲದಿದ್ದರೆ ನಾವು ಕಾಲ್ನಡಿಗೆಯಲ್ಲಿ ಹೊರಡುತ್ತೇವೆ. ಇಲ್ಲಿ ಏನಾದರೂ ಆದರೆ ಯಾರು ಹೊಣೆ? ನಮ್ಮನ್ನು ನಂಬಿ ನಮ್ಮೀಡಿ ಕುಟುಂಬ ಬದುಕುತ್ತಿದೆ ಎಂದು ತನ್ನ ಆತಂಕ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಆದಾಗಿನಿಂದ ಆರಂಭವಾದ ವಲಸೆ ಕಾರ್ಮಿಕರ ಸಂಕಷ್ಟುಗಳು ಇನ್ನು ಪರಿಹಾರಗೊಂಡಿಲ್ಲ. ಅತ್ತ ಸುಪ್ರೀಂ ಕೋರ್ಟ್‌ ಕಡೆಗೂ ವಲಸೆ ಕಾರ್ಮಿಕರಿಗೆ ಊಟ, ವಸತಿ ನೀಡಬೇಕು, ಸರ್ಕಾರದ ವೆಚ್ಚದಲ್ಲಿ ಅವರು ತಮ್ಮ ಮನೆ ತಲುಪಲು ವ್ಯವಸ್ಥೆ ಮಾಡಬೇಕೆಂದು ಆದೇಶ ನೀಡಿದೆ. ಆದರೆ ವಲಸೆ ಕಾರ್ಮಿಕರ ಬವಣೆ ಮಾತ್ರ ತಪ್ಪಿಲ್ಲ. ಈಗಲಾದರೂ ಸರ್ಕಾರಗಳು ಈ ವಿಚಾರದಲ್ಲಿ ಅತಿ ವೇಗವಾಗಿ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: ಮೋದಿ 2.1: ದೇಶವನ್ನು ಉಳಿಸಿ, ಬೆಳೆಸುವ ಪ್ಯಾಕೇಜ್ ಹೇಗಿರಬೇಕು? – ಅಮಿತ್‌ ಬಾಸೋಲೆ 


Also read: SC directs States: No Travel Fare for Migrants, Provide Food For Stranded Migrants

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...