Homeಕರ್ನಾಟಕವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

- Advertisement -
- Advertisement -

ಶುಕ್ರವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಟೆನಿಸ್ ಪೆವಿಲಿಯನ್‌ ನಿರಾಶ್ರಿತ ಕೇಂದ್ರದ ಮೇಲ್ಛಾವಣಿ ಕುಸಿದು ವಲಸೆ ಕಾರ್ಮಿಕರ ಮೇಲೆ ಅಪ್ಪಳಿಸಿದೆ. ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಹೇಳಿಕೆಯ ಪ್ರಕಾರ, ಸುಮಾರು 100 ಪುರುಷರು, 40 ಮಹಿಳೆಯರು, 45 ಮಕ್ಕಳು ಮತ್ತು ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆರು ಮಕ್ಕಳು ಸ್ಥಳದಲ್ಲಿದ್ದರು ಎನ್ನಲಾಗಿದೆ.

ಇದರಿಂದಾಗಿ ಅಷ್ಟು ವಲಸೆ ಕಾರ್ಮಿಕರು ಮಳೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನೆನೆದಿರುವ ಅಮಾನವೀಯ ಘಟನೆ ವರದಿಯಾಗಿದೆ. ಘಟನೆ ನಡೆದ ಒಂದು ಗಂಟೆಯ ನಂತರ ಬಿಎಂಟಿಸಿ ಬಸ್ಸೊಂದು ಬಂದರೂ ಸಹ ಕಾರ್ಮಿಕರನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರನ್ನು ತಮ್ಮ ಸಾಮಾನು ಸರಂಜಾಮುಗಳನ್ನು ತೆಗೆದುಕೊಂಡು ಬೇರೆ ಸ್ಥಳಕ್ಕೆ ಹೋಗಲು ಸಿದ್ದರಾಗಿದ್ದರು. ಅವರನ್ನು ತ್ರಿಪುರ ವಾಸಿನಿಗೆ ಸ್ಥಳಾಂತರಿಸಲು ಚಿಂತನೆ ನಡೆಸಿದ್ದರು ಸಹ ಅದೂ ಮುಚ್ಚಲ್ಪಟ್ಟಿದ್ದ ಕಾರಣ ಅವರು ಕಾಯಬೇಕಾಗಿದೆ.

ಮಳೆಯಿಂದಾಗಿ ಸಂಪೂರ್ಣವಾಗಿ ತೇವಗೊಂಡಿದ್ದ ಕಾರ್ಮಿಕರು ಹಲವು ಗಂಟೆಗಳ ಕಾಲ ಬಸ್‌ನಲ್ಲಿಯೇ ಆಶ್ರಯ ಪಡೆದಿದ್ದಾರೆ. ಅಷ್ಟೂ ಜನರು ಒಂದೇ ಬಸ್‌ನಲ್ಲಿದ್ದರಿಂದ ಯಾವುದೇ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಾಗಿಲ್ಲ ಎನ್ನಲಾಗಿದೆ. ಆನಂತರ ಅವರನ್ನು ಸ್ಥಳಾಂತರಿಸಲಾಗಿದೆ.

ಘಟನೆಯನ್ನು ವಿವರಿಸುತ್ತಾ, ಕಾರ್ಮಿಕರೊಬ್ಬರು, “ಭಾರೀ ಮಳೆಗೆ ಮೇಲ್ಛಾವಣಿಯು ಕೆಳಗೆ ಬಿದ್ದಿತು. ಸಣ್ಣ ಮಕ್ಕಳು, ಮಹಿಳೆಯರು – ಬಹಳಷ್ಟು ಜನರು, ಅವರು ಇಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಾವು ಅಧಿಕಾರಿಗಳಿಗೆ ತಿಳಿಸಿದೆವು. ಉತ್ತರ ಪ್ರದೇಶ, ಚತ್ತೀಸ್‌ಘಡ, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾದ ಜನರು ಇಲ್ಲಿದ್ದಾರೆ. ಇಂದು ಈ ಜನರನ್ನು ತುರ್ತಾಗಿ ಸ್ಥಳಾಂತರಿಸುವಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ. ಇಲ್ಲಿದಿದ್ದರೆ ಇಲ್ಲಿಂದ ಕಾಲ್ನಡಿಗೆಯಲ್ಲಿ ಹೋಗಬೇಕಾಗುತ್ತದೆ ” ಎಂದು ಅವರು ಹೇಳಿದ್ದಾರೆ.

ಕೊನೆಗೂ ಸಿಕ್ಕ ಸಹಾಯ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್‌ ರವಿ ಕುಮಾರ್ ಆಗಮಿಸಿ, ಮೇಲ್ಛಾವಣಿ ಕುಸಿತಕ್ಕೊಳಗಾದವರು ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದ್ದಾರೆ.

“ನಾವು ಹೇಗೋ ಬದುಕುಳಿದಿದ್ದೇವೆ. ನಮಗೆ ಪೊಲೀಸ್ ಅಧಿಕಾರಿಯೊಬ್ಬರು ಸಹಾಯ ಮಾಡಿದರು. ಆನಂತರ ಮೇಲ್ಛಾವಣಿ ತೆರವುಗೊಳಿಸಲು ಬಹಳಷ್ಟು ಜನರು ಮುಂದೆ ಬಂದರು. ಎಲ್ಲರ ನಗದು ಸೇರಿದಂತೆ ಸಾಮಾನು, ಮೊಬೈಲ್ ಮತ್ತಿತರ ವಸ್ತುಗಳ ಅಡಿಯಲ್ಲಿ ಉಳಿದುಕೊಂಡಿವೆ ಎಂದು ಕಾರ್ಮಿಕರೊಬ್ಬರು ತಿಳಿಸಿದ್ದಾರೆ.

ನಮ್ಮೂರಿಗೆ ಕಳಿಸಿಕೊಡಿ

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಛಾವಣಿ ಕುಸಿದಾಗ ನನ್ನ ಹೆಗಲ ಮೇಲೆ ಮಗುವನ್ನಿಟ್ಟುಕೊಂಡಿದ್ದೆ. ಇದರಿಂದ ನನಗೆ ತೀವ್ರ ಭಯವಾಗಿದೆ. ಇಲ್ಲಿಯೇ ಇದ್ದರೆ ನನ್ನ ಮಗುವನ್ನು ಕಳೆದುಕೊಳ್ಳಬಹುದೆಂಬ ಭಯ ನನ್ನನ್ನು ಕಾಡುತ್ತಿದೆ. ಆ ಮಗು ಕೇವಲ ಹಾಲು ಕುಡಿಯುತ್ತಿದ್ದು, ಅದಕ್ಕೂ ನಮ್ಮ ಬಳಿ ಹಣವಿಲ್ಲದಂತಾಗಿದೆ. ಹಾಗಾಗಿ ಇಲ್ಲಿಂದ ನಮ್ಮ ರಾಜ್ಯಕ್ಕೆ ಹೊರಡಲು ದಯವಿಟ್ಟು ಅವಕಾಶಮಾಡಿಕೊಡಿ ಎಂದು ಬೇಡಿಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಇಲ್ಲಿಂದ ಹೊರಡಲು ನಮಗೆ ಸರ್ಕಾರ ಸಹಾಯ ಮಾಡದಿದ್ದರೆ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ. ಏನಾದರೂ ಆಗಲಿ ನಾವು ಬೆಳಿಗ್ಗೆಯೇ ಹೊರಡುವಂತೆ ವ್ಯವಸ್ಥೆ ಮಾಡಿ. ಇಲ್ಲದಿದ್ದರೆ ನಾವು ಕಾಲ್ನಡಿಗೆಯಲ್ಲಿ ಹೊರಡುತ್ತೇವೆ. ಇಲ್ಲಿ ಏನಾದರೂ ಆದರೆ ಯಾರು ಹೊಣೆ? ನಮ್ಮನ್ನು ನಂಬಿ ನಮ್ಮೀಡಿ ಕುಟುಂಬ ಬದುಕುತ್ತಿದೆ ಎಂದು ತನ್ನ ಆತಂಕ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಆದಾಗಿನಿಂದ ಆರಂಭವಾದ ವಲಸೆ ಕಾರ್ಮಿಕರ ಸಂಕಷ್ಟುಗಳು ಇನ್ನು ಪರಿಹಾರಗೊಂಡಿಲ್ಲ. ಅತ್ತ ಸುಪ್ರೀಂ ಕೋರ್ಟ್‌ ಕಡೆಗೂ ವಲಸೆ ಕಾರ್ಮಿಕರಿಗೆ ಊಟ, ವಸತಿ ನೀಡಬೇಕು, ಸರ್ಕಾರದ ವೆಚ್ಚದಲ್ಲಿ ಅವರು ತಮ್ಮ ಮನೆ ತಲುಪಲು ವ್ಯವಸ್ಥೆ ಮಾಡಬೇಕೆಂದು ಆದೇಶ ನೀಡಿದೆ. ಆದರೆ ವಲಸೆ ಕಾರ್ಮಿಕರ ಬವಣೆ ಮಾತ್ರ ತಪ್ಪಿಲ್ಲ. ಈಗಲಾದರೂ ಸರ್ಕಾರಗಳು ಈ ವಿಚಾರದಲ್ಲಿ ಅತಿ ವೇಗವಾಗಿ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: ಮೋದಿ 2.1: ದೇಶವನ್ನು ಉಳಿಸಿ, ಬೆಳೆಸುವ ಪ್ಯಾಕೇಜ್ ಹೇಗಿರಬೇಕು? – ಅಮಿತ್‌ ಬಾಸೋಲೆ 


Also read: SC directs States: No Travel Fare for Migrants, Provide Food For Stranded Migrants

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...