Homeಕರ್ನಾಟಕವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

- Advertisement -
- Advertisement -

ಶುಕ್ರವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಟೆನಿಸ್ ಪೆವಿಲಿಯನ್‌ ನಿರಾಶ್ರಿತ ಕೇಂದ್ರದ ಮೇಲ್ಛಾವಣಿ ಕುಸಿದು ವಲಸೆ ಕಾರ್ಮಿಕರ ಮೇಲೆ ಅಪ್ಪಳಿಸಿದೆ. ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಹೇಳಿಕೆಯ ಪ್ರಕಾರ, ಸುಮಾರು 100 ಪುರುಷರು, 40 ಮಹಿಳೆಯರು, 45 ಮಕ್ಕಳು ಮತ್ತು ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆರು ಮಕ್ಕಳು ಸ್ಥಳದಲ್ಲಿದ್ದರು ಎನ್ನಲಾಗಿದೆ.

ಇದರಿಂದಾಗಿ ಅಷ್ಟು ವಲಸೆ ಕಾರ್ಮಿಕರು ಮಳೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನೆನೆದಿರುವ ಅಮಾನವೀಯ ಘಟನೆ ವರದಿಯಾಗಿದೆ. ಘಟನೆ ನಡೆದ ಒಂದು ಗಂಟೆಯ ನಂತರ ಬಿಎಂಟಿಸಿ ಬಸ್ಸೊಂದು ಬಂದರೂ ಸಹ ಕಾರ್ಮಿಕರನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರನ್ನು ತಮ್ಮ ಸಾಮಾನು ಸರಂಜಾಮುಗಳನ್ನು ತೆಗೆದುಕೊಂಡು ಬೇರೆ ಸ್ಥಳಕ್ಕೆ ಹೋಗಲು ಸಿದ್ದರಾಗಿದ್ದರು. ಅವರನ್ನು ತ್ರಿಪುರ ವಾಸಿನಿಗೆ ಸ್ಥಳಾಂತರಿಸಲು ಚಿಂತನೆ ನಡೆಸಿದ್ದರು ಸಹ ಅದೂ ಮುಚ್ಚಲ್ಪಟ್ಟಿದ್ದ ಕಾರಣ ಅವರು ಕಾಯಬೇಕಾಗಿದೆ.

ಮಳೆಯಿಂದಾಗಿ ಸಂಪೂರ್ಣವಾಗಿ ತೇವಗೊಂಡಿದ್ದ ಕಾರ್ಮಿಕರು ಹಲವು ಗಂಟೆಗಳ ಕಾಲ ಬಸ್‌ನಲ್ಲಿಯೇ ಆಶ್ರಯ ಪಡೆದಿದ್ದಾರೆ. ಅಷ್ಟೂ ಜನರು ಒಂದೇ ಬಸ್‌ನಲ್ಲಿದ್ದರಿಂದ ಯಾವುದೇ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಾಗಿಲ್ಲ ಎನ್ನಲಾಗಿದೆ. ಆನಂತರ ಅವರನ್ನು ಸ್ಥಳಾಂತರಿಸಲಾಗಿದೆ.

ಘಟನೆಯನ್ನು ವಿವರಿಸುತ್ತಾ, ಕಾರ್ಮಿಕರೊಬ್ಬರು, “ಭಾರೀ ಮಳೆಗೆ ಮೇಲ್ಛಾವಣಿಯು ಕೆಳಗೆ ಬಿದ್ದಿತು. ಸಣ್ಣ ಮಕ್ಕಳು, ಮಹಿಳೆಯರು – ಬಹಳಷ್ಟು ಜನರು, ಅವರು ಇಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಾವು ಅಧಿಕಾರಿಗಳಿಗೆ ತಿಳಿಸಿದೆವು. ಉತ್ತರ ಪ್ರದೇಶ, ಚತ್ತೀಸ್‌ಘಡ, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾದ ಜನರು ಇಲ್ಲಿದ್ದಾರೆ. ಇಂದು ಈ ಜನರನ್ನು ತುರ್ತಾಗಿ ಸ್ಥಳಾಂತರಿಸುವಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ. ಇಲ್ಲಿದಿದ್ದರೆ ಇಲ್ಲಿಂದ ಕಾಲ್ನಡಿಗೆಯಲ್ಲಿ ಹೋಗಬೇಕಾಗುತ್ತದೆ ” ಎಂದು ಅವರು ಹೇಳಿದ್ದಾರೆ.

ಕೊನೆಗೂ ಸಿಕ್ಕ ಸಹಾಯ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್‌ ರವಿ ಕುಮಾರ್ ಆಗಮಿಸಿ, ಮೇಲ್ಛಾವಣಿ ಕುಸಿತಕ್ಕೊಳಗಾದವರು ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದ್ದಾರೆ.

“ನಾವು ಹೇಗೋ ಬದುಕುಳಿದಿದ್ದೇವೆ. ನಮಗೆ ಪೊಲೀಸ್ ಅಧಿಕಾರಿಯೊಬ್ಬರು ಸಹಾಯ ಮಾಡಿದರು. ಆನಂತರ ಮೇಲ್ಛಾವಣಿ ತೆರವುಗೊಳಿಸಲು ಬಹಳಷ್ಟು ಜನರು ಮುಂದೆ ಬಂದರು. ಎಲ್ಲರ ನಗದು ಸೇರಿದಂತೆ ಸಾಮಾನು, ಮೊಬೈಲ್ ಮತ್ತಿತರ ವಸ್ತುಗಳ ಅಡಿಯಲ್ಲಿ ಉಳಿದುಕೊಂಡಿವೆ ಎಂದು ಕಾರ್ಮಿಕರೊಬ್ಬರು ತಿಳಿಸಿದ್ದಾರೆ.

ನಮ್ಮೂರಿಗೆ ಕಳಿಸಿಕೊಡಿ

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಛಾವಣಿ ಕುಸಿದಾಗ ನನ್ನ ಹೆಗಲ ಮೇಲೆ ಮಗುವನ್ನಿಟ್ಟುಕೊಂಡಿದ್ದೆ. ಇದರಿಂದ ನನಗೆ ತೀವ್ರ ಭಯವಾಗಿದೆ. ಇಲ್ಲಿಯೇ ಇದ್ದರೆ ನನ್ನ ಮಗುವನ್ನು ಕಳೆದುಕೊಳ್ಳಬಹುದೆಂಬ ಭಯ ನನ್ನನ್ನು ಕಾಡುತ್ತಿದೆ. ಆ ಮಗು ಕೇವಲ ಹಾಲು ಕುಡಿಯುತ್ತಿದ್ದು, ಅದಕ್ಕೂ ನಮ್ಮ ಬಳಿ ಹಣವಿಲ್ಲದಂತಾಗಿದೆ. ಹಾಗಾಗಿ ಇಲ್ಲಿಂದ ನಮ್ಮ ರಾಜ್ಯಕ್ಕೆ ಹೊರಡಲು ದಯವಿಟ್ಟು ಅವಕಾಶಮಾಡಿಕೊಡಿ ಎಂದು ಬೇಡಿಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಇಲ್ಲಿಂದ ಹೊರಡಲು ನಮಗೆ ಸರ್ಕಾರ ಸಹಾಯ ಮಾಡದಿದ್ದರೆ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ. ಏನಾದರೂ ಆಗಲಿ ನಾವು ಬೆಳಿಗ್ಗೆಯೇ ಹೊರಡುವಂತೆ ವ್ಯವಸ್ಥೆ ಮಾಡಿ. ಇಲ್ಲದಿದ್ದರೆ ನಾವು ಕಾಲ್ನಡಿಗೆಯಲ್ಲಿ ಹೊರಡುತ್ತೇವೆ. ಇಲ್ಲಿ ಏನಾದರೂ ಆದರೆ ಯಾರು ಹೊಣೆ? ನಮ್ಮನ್ನು ನಂಬಿ ನಮ್ಮೀಡಿ ಕುಟುಂಬ ಬದುಕುತ್ತಿದೆ ಎಂದು ತನ್ನ ಆತಂಕ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಆದಾಗಿನಿಂದ ಆರಂಭವಾದ ವಲಸೆ ಕಾರ್ಮಿಕರ ಸಂಕಷ್ಟುಗಳು ಇನ್ನು ಪರಿಹಾರಗೊಂಡಿಲ್ಲ. ಅತ್ತ ಸುಪ್ರೀಂ ಕೋರ್ಟ್‌ ಕಡೆಗೂ ವಲಸೆ ಕಾರ್ಮಿಕರಿಗೆ ಊಟ, ವಸತಿ ನೀಡಬೇಕು, ಸರ್ಕಾರದ ವೆಚ್ಚದಲ್ಲಿ ಅವರು ತಮ್ಮ ಮನೆ ತಲುಪಲು ವ್ಯವಸ್ಥೆ ಮಾಡಬೇಕೆಂದು ಆದೇಶ ನೀಡಿದೆ. ಆದರೆ ವಲಸೆ ಕಾರ್ಮಿಕರ ಬವಣೆ ಮಾತ್ರ ತಪ್ಪಿಲ್ಲ. ಈಗಲಾದರೂ ಸರ್ಕಾರಗಳು ಈ ವಿಚಾರದಲ್ಲಿ ಅತಿ ವೇಗವಾಗಿ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: ಮೋದಿ 2.1: ದೇಶವನ್ನು ಉಳಿಸಿ, ಬೆಳೆಸುವ ಪ್ಯಾಕೇಜ್ ಹೇಗಿರಬೇಕು? – ಅಮಿತ್‌ ಬಾಸೋಲೆ 


Also read: SC directs States: No Travel Fare for Migrants, Provide Food For Stranded Migrants

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...