Homeಕರ್ನಾಟಕವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

- Advertisement -
- Advertisement -

ಶುಕ್ರವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಟೆನಿಸ್ ಪೆವಿಲಿಯನ್‌ ನಿರಾಶ್ರಿತ ಕೇಂದ್ರದ ಮೇಲ್ಛಾವಣಿ ಕುಸಿದು ವಲಸೆ ಕಾರ್ಮಿಕರ ಮೇಲೆ ಅಪ್ಪಳಿಸಿದೆ. ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಹೇಳಿಕೆಯ ಪ್ರಕಾರ, ಸುಮಾರು 100 ಪುರುಷರು, 40 ಮಹಿಳೆಯರು, 45 ಮಕ್ಕಳು ಮತ್ತು ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆರು ಮಕ್ಕಳು ಸ್ಥಳದಲ್ಲಿದ್ದರು ಎನ್ನಲಾಗಿದೆ.

ಇದರಿಂದಾಗಿ ಅಷ್ಟು ವಲಸೆ ಕಾರ್ಮಿಕರು ಮಳೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನೆನೆದಿರುವ ಅಮಾನವೀಯ ಘಟನೆ ವರದಿಯಾಗಿದೆ. ಘಟನೆ ನಡೆದ ಒಂದು ಗಂಟೆಯ ನಂತರ ಬಿಎಂಟಿಸಿ ಬಸ್ಸೊಂದು ಬಂದರೂ ಸಹ ಕಾರ್ಮಿಕರನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರನ್ನು ತಮ್ಮ ಸಾಮಾನು ಸರಂಜಾಮುಗಳನ್ನು ತೆಗೆದುಕೊಂಡು ಬೇರೆ ಸ್ಥಳಕ್ಕೆ ಹೋಗಲು ಸಿದ್ದರಾಗಿದ್ದರು. ಅವರನ್ನು ತ್ರಿಪುರ ವಾಸಿನಿಗೆ ಸ್ಥಳಾಂತರಿಸಲು ಚಿಂತನೆ ನಡೆಸಿದ್ದರು ಸಹ ಅದೂ ಮುಚ್ಚಲ್ಪಟ್ಟಿದ್ದ ಕಾರಣ ಅವರು ಕಾಯಬೇಕಾಗಿದೆ.

ಮಳೆಯಿಂದಾಗಿ ಸಂಪೂರ್ಣವಾಗಿ ತೇವಗೊಂಡಿದ್ದ ಕಾರ್ಮಿಕರು ಹಲವು ಗಂಟೆಗಳ ಕಾಲ ಬಸ್‌ನಲ್ಲಿಯೇ ಆಶ್ರಯ ಪಡೆದಿದ್ದಾರೆ. ಅಷ್ಟೂ ಜನರು ಒಂದೇ ಬಸ್‌ನಲ್ಲಿದ್ದರಿಂದ ಯಾವುದೇ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಾಗಿಲ್ಲ ಎನ್ನಲಾಗಿದೆ. ಆನಂತರ ಅವರನ್ನು ಸ್ಥಳಾಂತರಿಸಲಾಗಿದೆ.

ಘಟನೆಯನ್ನು ವಿವರಿಸುತ್ತಾ, ಕಾರ್ಮಿಕರೊಬ್ಬರು, “ಭಾರೀ ಮಳೆಗೆ ಮೇಲ್ಛಾವಣಿಯು ಕೆಳಗೆ ಬಿದ್ದಿತು. ಸಣ್ಣ ಮಕ್ಕಳು, ಮಹಿಳೆಯರು – ಬಹಳಷ್ಟು ಜನರು, ಅವರು ಇಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಾವು ಅಧಿಕಾರಿಗಳಿಗೆ ತಿಳಿಸಿದೆವು. ಉತ್ತರ ಪ್ರದೇಶ, ಚತ್ತೀಸ್‌ಘಡ, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾದ ಜನರು ಇಲ್ಲಿದ್ದಾರೆ. ಇಂದು ಈ ಜನರನ್ನು ತುರ್ತಾಗಿ ಸ್ಥಳಾಂತರಿಸುವಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ. ಇಲ್ಲಿದಿದ್ದರೆ ಇಲ್ಲಿಂದ ಕಾಲ್ನಡಿಗೆಯಲ್ಲಿ ಹೋಗಬೇಕಾಗುತ್ತದೆ ” ಎಂದು ಅವರು ಹೇಳಿದ್ದಾರೆ.

ಕೊನೆಗೂ ಸಿಕ್ಕ ಸಹಾಯ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್‌ ರವಿ ಕುಮಾರ್ ಆಗಮಿಸಿ, ಮೇಲ್ಛಾವಣಿ ಕುಸಿತಕ್ಕೊಳಗಾದವರು ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದ್ದಾರೆ.

“ನಾವು ಹೇಗೋ ಬದುಕುಳಿದಿದ್ದೇವೆ. ನಮಗೆ ಪೊಲೀಸ್ ಅಧಿಕಾರಿಯೊಬ್ಬರು ಸಹಾಯ ಮಾಡಿದರು. ಆನಂತರ ಮೇಲ್ಛಾವಣಿ ತೆರವುಗೊಳಿಸಲು ಬಹಳಷ್ಟು ಜನರು ಮುಂದೆ ಬಂದರು. ಎಲ್ಲರ ನಗದು ಸೇರಿದಂತೆ ಸಾಮಾನು, ಮೊಬೈಲ್ ಮತ್ತಿತರ ವಸ್ತುಗಳ ಅಡಿಯಲ್ಲಿ ಉಳಿದುಕೊಂಡಿವೆ ಎಂದು ಕಾರ್ಮಿಕರೊಬ್ಬರು ತಿಳಿಸಿದ್ದಾರೆ.

ನಮ್ಮೂರಿಗೆ ಕಳಿಸಿಕೊಡಿ

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಛಾವಣಿ ಕುಸಿದಾಗ ನನ್ನ ಹೆಗಲ ಮೇಲೆ ಮಗುವನ್ನಿಟ್ಟುಕೊಂಡಿದ್ದೆ. ಇದರಿಂದ ನನಗೆ ತೀವ್ರ ಭಯವಾಗಿದೆ. ಇಲ್ಲಿಯೇ ಇದ್ದರೆ ನನ್ನ ಮಗುವನ್ನು ಕಳೆದುಕೊಳ್ಳಬಹುದೆಂಬ ಭಯ ನನ್ನನ್ನು ಕಾಡುತ್ತಿದೆ. ಆ ಮಗು ಕೇವಲ ಹಾಲು ಕುಡಿಯುತ್ತಿದ್ದು, ಅದಕ್ಕೂ ನಮ್ಮ ಬಳಿ ಹಣವಿಲ್ಲದಂತಾಗಿದೆ. ಹಾಗಾಗಿ ಇಲ್ಲಿಂದ ನಮ್ಮ ರಾಜ್ಯಕ್ಕೆ ಹೊರಡಲು ದಯವಿಟ್ಟು ಅವಕಾಶಮಾಡಿಕೊಡಿ ಎಂದು ಬೇಡಿಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಇಲ್ಲಿಂದ ಹೊರಡಲು ನಮಗೆ ಸರ್ಕಾರ ಸಹಾಯ ಮಾಡದಿದ್ದರೆ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ. ಏನಾದರೂ ಆಗಲಿ ನಾವು ಬೆಳಿಗ್ಗೆಯೇ ಹೊರಡುವಂತೆ ವ್ಯವಸ್ಥೆ ಮಾಡಿ. ಇಲ್ಲದಿದ್ದರೆ ನಾವು ಕಾಲ್ನಡಿಗೆಯಲ್ಲಿ ಹೊರಡುತ್ತೇವೆ. ಇಲ್ಲಿ ಏನಾದರೂ ಆದರೆ ಯಾರು ಹೊಣೆ? ನಮ್ಮನ್ನು ನಂಬಿ ನಮ್ಮೀಡಿ ಕುಟುಂಬ ಬದುಕುತ್ತಿದೆ ಎಂದು ತನ್ನ ಆತಂಕ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಆದಾಗಿನಿಂದ ಆರಂಭವಾದ ವಲಸೆ ಕಾರ್ಮಿಕರ ಸಂಕಷ್ಟುಗಳು ಇನ್ನು ಪರಿಹಾರಗೊಂಡಿಲ್ಲ. ಅತ್ತ ಸುಪ್ರೀಂ ಕೋರ್ಟ್‌ ಕಡೆಗೂ ವಲಸೆ ಕಾರ್ಮಿಕರಿಗೆ ಊಟ, ವಸತಿ ನೀಡಬೇಕು, ಸರ್ಕಾರದ ವೆಚ್ಚದಲ್ಲಿ ಅವರು ತಮ್ಮ ಮನೆ ತಲುಪಲು ವ್ಯವಸ್ಥೆ ಮಾಡಬೇಕೆಂದು ಆದೇಶ ನೀಡಿದೆ. ಆದರೆ ವಲಸೆ ಕಾರ್ಮಿಕರ ಬವಣೆ ಮಾತ್ರ ತಪ್ಪಿಲ್ಲ. ಈಗಲಾದರೂ ಸರ್ಕಾರಗಳು ಈ ವಿಚಾರದಲ್ಲಿ ಅತಿ ವೇಗವಾಗಿ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: ಮೋದಿ 2.1: ದೇಶವನ್ನು ಉಳಿಸಿ, ಬೆಳೆಸುವ ಪ್ಯಾಕೇಜ್ ಹೇಗಿರಬೇಕು? – ಅಮಿತ್‌ ಬಾಸೋಲೆ 


Also read: SC directs States: No Travel Fare for Migrants, Provide Food For Stranded Migrants

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...