Homeಕರ್ನಾಟಕವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

- Advertisement -
- Advertisement -

ಶುಕ್ರವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಟೆನಿಸ್ ಪೆವಿಲಿಯನ್‌ ನಿರಾಶ್ರಿತ ಕೇಂದ್ರದ ಮೇಲ್ಛಾವಣಿ ಕುಸಿದು ವಲಸೆ ಕಾರ್ಮಿಕರ ಮೇಲೆ ಅಪ್ಪಳಿಸಿದೆ. ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಹೇಳಿಕೆಯ ಪ್ರಕಾರ, ಸುಮಾರು 100 ಪುರುಷರು, 40 ಮಹಿಳೆಯರು, 45 ಮಕ್ಕಳು ಮತ್ತು ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆರು ಮಕ್ಕಳು ಸ್ಥಳದಲ್ಲಿದ್ದರು ಎನ್ನಲಾಗಿದೆ.

ಇದರಿಂದಾಗಿ ಅಷ್ಟು ವಲಸೆ ಕಾರ್ಮಿಕರು ಮಳೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನೆನೆದಿರುವ ಅಮಾನವೀಯ ಘಟನೆ ವರದಿಯಾಗಿದೆ. ಘಟನೆ ನಡೆದ ಒಂದು ಗಂಟೆಯ ನಂತರ ಬಿಎಂಟಿಸಿ ಬಸ್ಸೊಂದು ಬಂದರೂ ಸಹ ಕಾರ್ಮಿಕರನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರನ್ನು ತಮ್ಮ ಸಾಮಾನು ಸರಂಜಾಮುಗಳನ್ನು ತೆಗೆದುಕೊಂಡು ಬೇರೆ ಸ್ಥಳಕ್ಕೆ ಹೋಗಲು ಸಿದ್ದರಾಗಿದ್ದರು. ಅವರನ್ನು ತ್ರಿಪುರ ವಾಸಿನಿಗೆ ಸ್ಥಳಾಂತರಿಸಲು ಚಿಂತನೆ ನಡೆಸಿದ್ದರು ಸಹ ಅದೂ ಮುಚ್ಚಲ್ಪಟ್ಟಿದ್ದ ಕಾರಣ ಅವರು ಕಾಯಬೇಕಾಗಿದೆ.

ಮಳೆಯಿಂದಾಗಿ ಸಂಪೂರ್ಣವಾಗಿ ತೇವಗೊಂಡಿದ್ದ ಕಾರ್ಮಿಕರು ಹಲವು ಗಂಟೆಗಳ ಕಾಲ ಬಸ್‌ನಲ್ಲಿಯೇ ಆಶ್ರಯ ಪಡೆದಿದ್ದಾರೆ. ಅಷ್ಟೂ ಜನರು ಒಂದೇ ಬಸ್‌ನಲ್ಲಿದ್ದರಿಂದ ಯಾವುದೇ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಾಗಿಲ್ಲ ಎನ್ನಲಾಗಿದೆ. ಆನಂತರ ಅವರನ್ನು ಸ್ಥಳಾಂತರಿಸಲಾಗಿದೆ.

ಘಟನೆಯನ್ನು ವಿವರಿಸುತ್ತಾ, ಕಾರ್ಮಿಕರೊಬ್ಬರು, “ಭಾರೀ ಮಳೆಗೆ ಮೇಲ್ಛಾವಣಿಯು ಕೆಳಗೆ ಬಿದ್ದಿತು. ಸಣ್ಣ ಮಕ್ಕಳು, ಮಹಿಳೆಯರು – ಬಹಳಷ್ಟು ಜನರು, ಅವರು ಇಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಾವು ಅಧಿಕಾರಿಗಳಿಗೆ ತಿಳಿಸಿದೆವು. ಉತ್ತರ ಪ್ರದೇಶ, ಚತ್ತೀಸ್‌ಘಡ, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾದ ಜನರು ಇಲ್ಲಿದ್ದಾರೆ. ಇಂದು ಈ ಜನರನ್ನು ತುರ್ತಾಗಿ ಸ್ಥಳಾಂತರಿಸುವಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ. ಇಲ್ಲಿದಿದ್ದರೆ ಇಲ್ಲಿಂದ ಕಾಲ್ನಡಿಗೆಯಲ್ಲಿ ಹೋಗಬೇಕಾಗುತ್ತದೆ ” ಎಂದು ಅವರು ಹೇಳಿದ್ದಾರೆ.

ಕೊನೆಗೂ ಸಿಕ್ಕ ಸಹಾಯ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್‌ ರವಿ ಕುಮಾರ್ ಆಗಮಿಸಿ, ಮೇಲ್ಛಾವಣಿ ಕುಸಿತಕ್ಕೊಳಗಾದವರು ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದ್ದಾರೆ.

“ನಾವು ಹೇಗೋ ಬದುಕುಳಿದಿದ್ದೇವೆ. ನಮಗೆ ಪೊಲೀಸ್ ಅಧಿಕಾರಿಯೊಬ್ಬರು ಸಹಾಯ ಮಾಡಿದರು. ಆನಂತರ ಮೇಲ್ಛಾವಣಿ ತೆರವುಗೊಳಿಸಲು ಬಹಳಷ್ಟು ಜನರು ಮುಂದೆ ಬಂದರು. ಎಲ್ಲರ ನಗದು ಸೇರಿದಂತೆ ಸಾಮಾನು, ಮೊಬೈಲ್ ಮತ್ತಿತರ ವಸ್ತುಗಳ ಅಡಿಯಲ್ಲಿ ಉಳಿದುಕೊಂಡಿವೆ ಎಂದು ಕಾರ್ಮಿಕರೊಬ್ಬರು ತಿಳಿಸಿದ್ದಾರೆ.

ನಮ್ಮೂರಿಗೆ ಕಳಿಸಿಕೊಡಿ

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಛಾವಣಿ ಕುಸಿದಾಗ ನನ್ನ ಹೆಗಲ ಮೇಲೆ ಮಗುವನ್ನಿಟ್ಟುಕೊಂಡಿದ್ದೆ. ಇದರಿಂದ ನನಗೆ ತೀವ್ರ ಭಯವಾಗಿದೆ. ಇಲ್ಲಿಯೇ ಇದ್ದರೆ ನನ್ನ ಮಗುವನ್ನು ಕಳೆದುಕೊಳ್ಳಬಹುದೆಂಬ ಭಯ ನನ್ನನ್ನು ಕಾಡುತ್ತಿದೆ. ಆ ಮಗು ಕೇವಲ ಹಾಲು ಕುಡಿಯುತ್ತಿದ್ದು, ಅದಕ್ಕೂ ನಮ್ಮ ಬಳಿ ಹಣವಿಲ್ಲದಂತಾಗಿದೆ. ಹಾಗಾಗಿ ಇಲ್ಲಿಂದ ನಮ್ಮ ರಾಜ್ಯಕ್ಕೆ ಹೊರಡಲು ದಯವಿಟ್ಟು ಅವಕಾಶಮಾಡಿಕೊಡಿ ಎಂದು ಬೇಡಿಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಇಲ್ಲಿಂದ ಹೊರಡಲು ನಮಗೆ ಸರ್ಕಾರ ಸಹಾಯ ಮಾಡದಿದ್ದರೆ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ. ಏನಾದರೂ ಆಗಲಿ ನಾವು ಬೆಳಿಗ್ಗೆಯೇ ಹೊರಡುವಂತೆ ವ್ಯವಸ್ಥೆ ಮಾಡಿ. ಇಲ್ಲದಿದ್ದರೆ ನಾವು ಕಾಲ್ನಡಿಗೆಯಲ್ಲಿ ಹೊರಡುತ್ತೇವೆ. ಇಲ್ಲಿ ಏನಾದರೂ ಆದರೆ ಯಾರು ಹೊಣೆ? ನಮ್ಮನ್ನು ನಂಬಿ ನಮ್ಮೀಡಿ ಕುಟುಂಬ ಬದುಕುತ್ತಿದೆ ಎಂದು ತನ್ನ ಆತಂಕ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಆದಾಗಿನಿಂದ ಆರಂಭವಾದ ವಲಸೆ ಕಾರ್ಮಿಕರ ಸಂಕಷ್ಟುಗಳು ಇನ್ನು ಪರಿಹಾರಗೊಂಡಿಲ್ಲ. ಅತ್ತ ಸುಪ್ರೀಂ ಕೋರ್ಟ್‌ ಕಡೆಗೂ ವಲಸೆ ಕಾರ್ಮಿಕರಿಗೆ ಊಟ, ವಸತಿ ನೀಡಬೇಕು, ಸರ್ಕಾರದ ವೆಚ್ಚದಲ್ಲಿ ಅವರು ತಮ್ಮ ಮನೆ ತಲುಪಲು ವ್ಯವಸ್ಥೆ ಮಾಡಬೇಕೆಂದು ಆದೇಶ ನೀಡಿದೆ. ಆದರೆ ವಲಸೆ ಕಾರ್ಮಿಕರ ಬವಣೆ ಮಾತ್ರ ತಪ್ಪಿಲ್ಲ. ಈಗಲಾದರೂ ಸರ್ಕಾರಗಳು ಈ ವಿಚಾರದಲ್ಲಿ ಅತಿ ವೇಗವಾಗಿ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: ಮೋದಿ 2.1: ದೇಶವನ್ನು ಉಳಿಸಿ, ಬೆಳೆಸುವ ಪ್ಯಾಕೇಜ್ ಹೇಗಿರಬೇಕು? – ಅಮಿತ್‌ ಬಾಸೋಲೆ 


Also read: SC directs States: No Travel Fare for Migrants, Provide Food For Stranded Migrants

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...