Homeಕರ್ನಾಟಕವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

- Advertisement -
- Advertisement -

ಶುಕ್ರವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಟೆನಿಸ್ ಪೆವಿಲಿಯನ್‌ ನಿರಾಶ್ರಿತ ಕೇಂದ್ರದ ಮೇಲ್ಛಾವಣಿ ಕುಸಿದು ವಲಸೆ ಕಾರ್ಮಿಕರ ಮೇಲೆ ಅಪ್ಪಳಿಸಿದೆ. ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಹೇಳಿಕೆಯ ಪ್ರಕಾರ, ಸುಮಾರು 100 ಪುರುಷರು, 40 ಮಹಿಳೆಯರು, 45 ಮಕ್ಕಳು ಮತ್ತು ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆರು ಮಕ್ಕಳು ಸ್ಥಳದಲ್ಲಿದ್ದರು ಎನ್ನಲಾಗಿದೆ.

ಇದರಿಂದಾಗಿ ಅಷ್ಟು ವಲಸೆ ಕಾರ್ಮಿಕರು ಮಳೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನೆನೆದಿರುವ ಅಮಾನವೀಯ ಘಟನೆ ವರದಿಯಾಗಿದೆ. ಘಟನೆ ನಡೆದ ಒಂದು ಗಂಟೆಯ ನಂತರ ಬಿಎಂಟಿಸಿ ಬಸ್ಸೊಂದು ಬಂದರೂ ಸಹ ಕಾರ್ಮಿಕರನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರನ್ನು ತಮ್ಮ ಸಾಮಾನು ಸರಂಜಾಮುಗಳನ್ನು ತೆಗೆದುಕೊಂಡು ಬೇರೆ ಸ್ಥಳಕ್ಕೆ ಹೋಗಲು ಸಿದ್ದರಾಗಿದ್ದರು. ಅವರನ್ನು ತ್ರಿಪುರ ವಾಸಿನಿಗೆ ಸ್ಥಳಾಂತರಿಸಲು ಚಿಂತನೆ ನಡೆಸಿದ್ದರು ಸಹ ಅದೂ ಮುಚ್ಚಲ್ಪಟ್ಟಿದ್ದ ಕಾರಣ ಅವರು ಕಾಯಬೇಕಾಗಿದೆ.

ಮಳೆಯಿಂದಾಗಿ ಸಂಪೂರ್ಣವಾಗಿ ತೇವಗೊಂಡಿದ್ದ ಕಾರ್ಮಿಕರು ಹಲವು ಗಂಟೆಗಳ ಕಾಲ ಬಸ್‌ನಲ್ಲಿಯೇ ಆಶ್ರಯ ಪಡೆದಿದ್ದಾರೆ. ಅಷ್ಟೂ ಜನರು ಒಂದೇ ಬಸ್‌ನಲ್ಲಿದ್ದರಿಂದ ಯಾವುದೇ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಾಗಿಲ್ಲ ಎನ್ನಲಾಗಿದೆ. ಆನಂತರ ಅವರನ್ನು ಸ್ಥಳಾಂತರಿಸಲಾಗಿದೆ.

ಘಟನೆಯನ್ನು ವಿವರಿಸುತ್ತಾ, ಕಾರ್ಮಿಕರೊಬ್ಬರು, “ಭಾರೀ ಮಳೆಗೆ ಮೇಲ್ಛಾವಣಿಯು ಕೆಳಗೆ ಬಿದ್ದಿತು. ಸಣ್ಣ ಮಕ್ಕಳು, ಮಹಿಳೆಯರು – ಬಹಳಷ್ಟು ಜನರು, ಅವರು ಇಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಾವು ಅಧಿಕಾರಿಗಳಿಗೆ ತಿಳಿಸಿದೆವು. ಉತ್ತರ ಪ್ರದೇಶ, ಚತ್ತೀಸ್‌ಘಡ, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾದ ಜನರು ಇಲ್ಲಿದ್ದಾರೆ. ಇಂದು ಈ ಜನರನ್ನು ತುರ್ತಾಗಿ ಸ್ಥಳಾಂತರಿಸುವಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ. ಇಲ್ಲಿದಿದ್ದರೆ ಇಲ್ಲಿಂದ ಕಾಲ್ನಡಿಗೆಯಲ್ಲಿ ಹೋಗಬೇಕಾಗುತ್ತದೆ ” ಎಂದು ಅವರು ಹೇಳಿದ್ದಾರೆ.

ಕೊನೆಗೂ ಸಿಕ್ಕ ಸಹಾಯ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್‌ ರವಿ ಕುಮಾರ್ ಆಗಮಿಸಿ, ಮೇಲ್ಛಾವಣಿ ಕುಸಿತಕ್ಕೊಳಗಾದವರು ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದ್ದಾರೆ.

“ನಾವು ಹೇಗೋ ಬದುಕುಳಿದಿದ್ದೇವೆ. ನಮಗೆ ಪೊಲೀಸ್ ಅಧಿಕಾರಿಯೊಬ್ಬರು ಸಹಾಯ ಮಾಡಿದರು. ಆನಂತರ ಮೇಲ್ಛಾವಣಿ ತೆರವುಗೊಳಿಸಲು ಬಹಳಷ್ಟು ಜನರು ಮುಂದೆ ಬಂದರು. ಎಲ್ಲರ ನಗದು ಸೇರಿದಂತೆ ಸಾಮಾನು, ಮೊಬೈಲ್ ಮತ್ತಿತರ ವಸ್ತುಗಳ ಅಡಿಯಲ್ಲಿ ಉಳಿದುಕೊಂಡಿವೆ ಎಂದು ಕಾರ್ಮಿಕರೊಬ್ಬರು ತಿಳಿಸಿದ್ದಾರೆ.

ನಮ್ಮೂರಿಗೆ ಕಳಿಸಿಕೊಡಿ

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಛಾವಣಿ ಕುಸಿದಾಗ ನನ್ನ ಹೆಗಲ ಮೇಲೆ ಮಗುವನ್ನಿಟ್ಟುಕೊಂಡಿದ್ದೆ. ಇದರಿಂದ ನನಗೆ ತೀವ್ರ ಭಯವಾಗಿದೆ. ಇಲ್ಲಿಯೇ ಇದ್ದರೆ ನನ್ನ ಮಗುವನ್ನು ಕಳೆದುಕೊಳ್ಳಬಹುದೆಂಬ ಭಯ ನನ್ನನ್ನು ಕಾಡುತ್ತಿದೆ. ಆ ಮಗು ಕೇವಲ ಹಾಲು ಕುಡಿಯುತ್ತಿದ್ದು, ಅದಕ್ಕೂ ನಮ್ಮ ಬಳಿ ಹಣವಿಲ್ಲದಂತಾಗಿದೆ. ಹಾಗಾಗಿ ಇಲ್ಲಿಂದ ನಮ್ಮ ರಾಜ್ಯಕ್ಕೆ ಹೊರಡಲು ದಯವಿಟ್ಟು ಅವಕಾಶಮಾಡಿಕೊಡಿ ಎಂದು ಬೇಡಿಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಇಲ್ಲಿಂದ ಹೊರಡಲು ನಮಗೆ ಸರ್ಕಾರ ಸಹಾಯ ಮಾಡದಿದ್ದರೆ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ. ಏನಾದರೂ ಆಗಲಿ ನಾವು ಬೆಳಿಗ್ಗೆಯೇ ಹೊರಡುವಂತೆ ವ್ಯವಸ್ಥೆ ಮಾಡಿ. ಇಲ್ಲದಿದ್ದರೆ ನಾವು ಕಾಲ್ನಡಿಗೆಯಲ್ಲಿ ಹೊರಡುತ್ತೇವೆ. ಇಲ್ಲಿ ಏನಾದರೂ ಆದರೆ ಯಾರು ಹೊಣೆ? ನಮ್ಮನ್ನು ನಂಬಿ ನಮ್ಮೀಡಿ ಕುಟುಂಬ ಬದುಕುತ್ತಿದೆ ಎಂದು ತನ್ನ ಆತಂಕ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಆದಾಗಿನಿಂದ ಆರಂಭವಾದ ವಲಸೆ ಕಾರ್ಮಿಕರ ಸಂಕಷ್ಟುಗಳು ಇನ್ನು ಪರಿಹಾರಗೊಂಡಿಲ್ಲ. ಅತ್ತ ಸುಪ್ರೀಂ ಕೋರ್ಟ್‌ ಕಡೆಗೂ ವಲಸೆ ಕಾರ್ಮಿಕರಿಗೆ ಊಟ, ವಸತಿ ನೀಡಬೇಕು, ಸರ್ಕಾರದ ವೆಚ್ಚದಲ್ಲಿ ಅವರು ತಮ್ಮ ಮನೆ ತಲುಪಲು ವ್ಯವಸ್ಥೆ ಮಾಡಬೇಕೆಂದು ಆದೇಶ ನೀಡಿದೆ. ಆದರೆ ವಲಸೆ ಕಾರ್ಮಿಕರ ಬವಣೆ ಮಾತ್ರ ತಪ್ಪಿಲ್ಲ. ಈಗಲಾದರೂ ಸರ್ಕಾರಗಳು ಈ ವಿಚಾರದಲ್ಲಿ ಅತಿ ವೇಗವಾಗಿ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: ಮೋದಿ 2.1: ದೇಶವನ್ನು ಉಳಿಸಿ, ಬೆಳೆಸುವ ಪ್ಯಾಕೇಜ್ ಹೇಗಿರಬೇಕು? – ಅಮಿತ್‌ ಬಾಸೋಲೆ 


Also read: SC directs States: No Travel Fare for Migrants, Provide Food For Stranded Migrants

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...