Homeಮುಖಪುಟವಲಸೆಯ ವ್ಯಥೆ-3: ‘ನಾನು ಇದೇ ದೇಶದ ಪ್ರಜೆ ತಾನೆ? ಅದನ್ನು ನಾನು ‘ಆಧಾರಸಹಿತ’ ಸಾಬೀತು ಮಾಡಬೇಕೆ?’

ವಲಸೆಯ ವ್ಯಥೆ-3: ‘ನಾನು ಇದೇ ದೇಶದ ಪ್ರಜೆ ತಾನೆ? ಅದನ್ನು ನಾನು ‘ಆಧಾರಸಹಿತ’ ಸಾಬೀತು ಮಾಡಬೇಕೆ?’

ವಲಸೆ ಕಾರ್ಮಿಕರು ತಮ್ಮ ಸ್ಥಳಗಳಿಗೆ ತಲುಪಲು ಸಹಾಯ ಮಾಡುವುದಕ್ಕಾಗಿ ಆರಂಭವಾದ ಕರ್ನಾಟಕ ಜನಶಕ್ತಿ ಹೆಲ್ಫ್‌ಲೈನ್‌ನ ಭಾಗವಾದ ಮಲ್ಲಿಗೆ ಸಿರಿಮನೆಯವರು ತಮ್ಮ ಅನುಭವಕ್ಕೆ ಬಂದ ಕಾರ್ಮಿಕರ ವಸಲೆಯ ವ್ಯಥೆಗಳನ್ನು ಇಲ್ಲಿ ದಾಖಲಿಸಿದ್ದಾರೆ.

- Advertisement -
- Advertisement -

ಅಸ್ಸಾಂನ ರಾಜಧಾನಿ ಮತ್ತು ಸುಂದರ ಪಟ್ಟಣವಾದ ಗೌಹಾಟಿಯ ಅರಬಿಂದೋ ಕನ್ವರ್ 20 ವರ್ಷದ ಯುವಕ. ಇದೇ ಫೆಬ್ರವರಿ ತಿಂಗಳಿನಲ್ಲಷ್ಟೇ ಬೆಂಗಳೂರಿಗೆ ಬಂದ. ಕಟ್ಟಡ ಕಾರ್ಮಿಕನಾಗಿ ಸಿಫ್ಲೋ ಎಂಬ ಬೃಹತ್ ನಿರ್ಮಾಣ ಕಂಪೆನಿಯಲ್ಲಿ ಕೆಲಸಕ್ಕೆ ಸೇರಿದ. ಇದೇ ಕಂಪೆನಿಯಲ್ಲಿ ಈತನ ತಂದೆ ಪ್ರಥಮ್ ಕನ್ವರ್ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ.

ಈ ಕಂಪೆನಿಯ ಪ್ರಮುಖ ಕೆಲಸದ ಕ್ಷೇತ್ರ ದೊಡ್ಡ ಕಟ್ಟಡಗಳ ಛಾವಣಿಯನ್ನು ಜೋಡಿಸುವುದು. ಬಹುಮಹಡಿ ಕಟ್ಟಡಗಳ ಅತಿಯಾದ ಎತ್ತರದ ಮೇಲೆ ನಿಂತು, ಅವುಗಳ ಮೇಲ್ಛಾವಣಿಯನ್ನು (ಸೀಲಿಂಗ್) ಜೋಡಿಸುವ ಅತ್ಯಂತ ಅಪಾಯಕಾರಿ ಮತ್ತು ಅಷ್ಟೇ ಕೌಶಲ್ಯಪೂರ್ಣ ಕೆಲಸಕ್ಕೆ ಇವರಿಗೆ ಸಿಗುವುದು ದಿನಕ್ಕೆ 250-350 ರೂ ಮಾತ್ರ.

ಈತನ ಹಾಗೆಯೇ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಿಂದ ದುಡಿಯಲು ಬಂದ ನೂರಾರು ಕಾರ್ಮಿಕರು ಈ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕಂಪೆನಿಯೇ ಮಾಡಿಕೊಟ್ಟ ಚಿಕ್ಕ ರೂಮುಗಳಲ್ಲಿ 8-10 ಮಂದಿ ಕಾರ್ಮಿಕರು ಇದ್ದುಕೊಂಡು, ಇಲ್ಲಿನ ಬದುಕುವ ಖರ್ಚು ಕಳೆದು ಒಂದಷ್ಟನ್ನಾದರೂ ಉಳಿಸಿ ಊರಿಗೆ ಕಳಿಸುವ ಪ್ರಯತ್ನದಲ್ಲಿರುತ್ತಾರೆ.

ಅರಬಿಂದೋ ಇಂದ ನಮ್ಮ ಹೆಲ್ಪ್‌ಲೈನ್‌ಗೆ ಕರೆ ಬಂದಾಗ, ಅನೇಕ ಉತ್ತರ ಭಾರತದ ಕಾರ್ಮಿಕರಂತೆಯೇ ಈತನದ್ದೂ ಕೂಡಾ ‘ನಾವು ಯಾವಾಗ ಊರಿಗೆ ಹೋಗಲು ಸಾಧ್ಯ? ಸೇವಾ ಸಿಂಧು ಆಪ್ ನಲ್ಲಿ ಹೆಸರು ನೋಂದಣಿ ಮಾಡಿಸಲು ಪೊಲೀಸ್ ಠಾಣೆಯಲ್ಲಿ ಕೊಟ್ಟಿದ್ದೇವೆ, ನಮಗಿನ್ನೂ ನಮ್ಮ ಸರದಿ ನಂಬರ್ ಸಿಕ್ಕಿಲ್ಲ, ಯಾವಾಗ ಸಿಗುತ್ತದೆ? ಹೇಗಾದರೂ ನಮ್ಮನ್ನು ಊರಿಗೆ ಕಳಿಸಿ’ ಎಂಬ ಅಳಲು.

ಪೊಲೀಸ್ ಠಾಣೆಯಲ್ಲಿ ಕೊಟ್ಟಿದ್ದರೆ ಆಗುತ್ತದೆ, ಸ್ವಲ್ಪ ಕಾದು ನೋಡಿ ಎಂಬ ನಮ್ಮ ಧೈರ್ಯ ತುಂಬುವ ಮಾತುಗಳಿಂದ ಸ್ವಲ್ಪ ದಿನ ಸಮಾಧಾನಪಡಿಸುವ ಪ್ರಯತ್ನ ಮಾಡಿಯಾಯಿತು. ಆದರೆ, ಮತ್ತೆ ಮತ್ತೆ ಅರಬಿಂದೋನ ಕರೆ. ಕೊನೆಗೊಮ್ಮೆ, “ಎಲ್ಲ ಕಡೆ ಖಾಯಿಲೆ ಹರಡುತ್ತಿದೆ. ನಾನು ನಮ್ಮ ತಾಯಿಯೊಂದಿಗೆ ಇರಬೇಕೆನಿಸುತ್ತಿದೆ, ನನ್ನನ್ನು ದಯವಿಟ್ಟು ಕಳಿಸಿಕೊಡಿ” ಎನ್ನುತ್ತಾ ಅಕ್ಷರಶಃ ಆತ ಅಳಲಾರಂಭಿಸಿದಾಗ, ಕರುಳು ಚುರ್ ಎಂದಿತು.

ಪುಟ್ಟ ಮಗುವಿನಂತೆ ತಾಯಿಗಾಗಿ ಹಂಬಲಿಸುತ್ತಿರುವ ಈ ಹುಡುಗನನ್ನು ಊರಿಗೆ ಕಳಿಸಲೇಬೇಕೆಂದು ತೀರ್ಮಾನಿಸಿ, ಆತನ ‘ಸೇವಾ ಸಿಂಧು’ ನೋಂದಣಿಯನ್ನು ಹೆಲ್ಪ್‌ಲೈನ್‌ನ ವಾಲಂಟಿಯರ್ ಆದ ಸಾಫ್ಟ್ವೇರ್ ತಂತ್ರಜ್ಞ ಭರತ್ ಹೆಬ್ಬಾಳ್ ಪರಿಶೀಲಿಸಿದರು. ನೋಡಿದರೆ ಆತನ ನೋಂದಣಿ ಆಗಿರಲಿಲ್ಲ. ಅದನ್ನೂ ನಾವೇ ಮಾಡೋಣವೆಂದು ಅಂದುಕೊಂಡು ವಿವರಗಳನ್ನು ತುಂಬಿಸುತ್ತಾ ಬಂದೆವು. ಆಗ ನಮಗೆ ಸರ್ಕಾರದ ನೀತಿಗಳಲ್ಲಿರುವ ಉದ್ದೇಶಪೂರ್ವಕ ಅಡೆತಡೆಗಳ ಮತ್ತೊಂದು ಜೀವಂತ ಉದಾಹರಣೆ ಸಿಕ್ಕಿತು.

ಆಧಾರ್ ಸಂಖ್ಯೆ ಇಲ್ಲದೆ ಸೇವಾ ಸಿಂಧುವಿನಲ್ಲಿ ನೋಂದಣಿ ಸಾಧ್ಯವಿರಲಿಲ್ಲ; ಈಶಾನ್ಯ ರಾಜ್ಯಗಳ ಪ್ರಜೆಯಾದ ಅರಬಿಂಧೋ ಬಳಿ ಆಧಾರ್ ಕಾರ್ಡ್ ಇರಲಿಲ್ಲ! ಅವನೊಬ್ಬನೇ ಅಲ್ಲ, ಅಂತಹ ಹಲವು ಮಂದಿ ಇದ್ದಾರೆಂದು ತಿಳಿಯಿತು.

ಮೊದಮೊದಲಿಗೆ ವಲಸೆ ಕಾರ್ಮಿಕರ ಮರಳುವಿಕೆಗೆ ಸಂಬಂಧಿಸಿ ಬಂದ ಪ್ರಕಟಣೆಗಳನ್ನು ಹುಡುಕಿ ತೆಗೆದು ನೋಡಿದರೆ, ಅದರಲ್ಲಿ ಯಾವುದಾದರೊಂದು ಐಡಿ ಪ್ರೂಫ್ ಇದ್ದರೆ ಸಾಕು ಎಂದು ಹೇಳಲಾಗಿದೆ. ಆದರೆ, ಸೇವಾಸಿಂಧು ರಚನೆಯಲ್ಲಿ ಮಾತ್ರ ಆಧಾರ್ ಸಂಖ್ಯೆ ಇಲ್ಲದೆ ಮುಂದುವರೆಯಲು ಸಾಧ್ಯವಿಲ್ಲದಂತಹ ವ್ಯವಸ್ಥೆ ಮಾಡಲಾಗಿದೆ. ಸರಾಗವಾಗಿ ನಡೆಯಬಹುದಾದ ಪ್ರಕ್ರಿಯೆಯನ್ನು ಸಂಕೀರ್ಣಗೊಳಿಸಿ, ಒಂದಷ್ಟು ಮಂದಿ ಕಾರ್ಮಿಕರು ಈ ಕೂಡಲೇ ಮರಳಲು ಸಾಧ್ಯವಾಗದಂತಹ ಸ್ಥಿತಿ ಉಂಟುಮಾಡುವುದು ಬಿಟ್ಟು ಇದಕ್ಕೆ ಬೇರೇನಾದರೂ ತರ್ಕವಿರಲು ಸಾಧ್ಯವೇ?

ಅದರ ಬಗ್ಗೆ ಎಲ್ಲ ದಿಕ್ಕಿನಿಂದ ಪರಿಶೀಲನೆ ನಡೆಸಿ ಆಯಿತು. ಈ ಸಮಸ್ಯೆಯ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ಪರಿಸ್ಥಿತಿ ವಿವರಿಸಿದೆವು; ಸರ್ಕಾರದ ಹಿರಿಯ ಅಧಿಕಾರಿಗಳನ್ನು ಮಾತಾಡಿಸಿದೆವು; ಅಷ್ಟೆಲ್ಲ ಮಾಡಿದ ನಂತರ ನಮಗೆ ಗೊತ್ತಾದದ್ದೇನೆಂದರೆ, ಅವರ‍್ಯಾರಿಗೂ ಈ ಬಗ್ಗೆ ಏನೂ ಮಾಹಿತಿ ಇರಲಿಲ್ಲ. ಅಷ್ಟಕ್ಕೂ ಹೆಚ್ಚಾಗಿ ಇದೊಂದಷ್ಟು ಮಂದಿ ಕಾರ್ಮಿಕರು ವಾಪಾಸ್ ಹೋಗದಿದ್ದರೆ ಯಾರ ಮನೆ ಕೊಚ್ಚಿಹೋಗುತ್ತದೆ ಎಂಬಂತಹ ಧೋರಣೆ ಕಂಡಿತು.

ಪೊಲೀಸ್ ಠಾಣೆಯ ಮುಂದೆ ಕಾರ್ಮಿಕರ ಉದ್ದನೆಯ ಸರತಿ ಸಾಲಿನಲ್ಲಿ ನಿಂತು, ತಾನೇ ಏನಾದರೂ ಮಾಡಲು ಸಾಧ್ಯವೇ ಎಂದು ಪ್ರಯತ್ನಿಸಲು ಹೋದ ಅರಬಿಂಧೋ ಒಂದು ದಿನ ಅವರಿಂದ ಲಾಠಿಯೇಟು ತಿಂದು ನಿರಾಶನಾಗಿ ಮರಳಿ ಬಂದ. ಕಣ್ಣಲ್ಲಿ ನೀರು ತುಂಬಿಕೊಂಡು “ನನ್ನ ಬಳಿ ವೋಟರ್ ಐಡಿ ಇದೆ, ರೇಷನ್ ಕಾರ್ಡ್ ಇದೆ, ಪಾನ್ ಕಾರ್ಡ್ ಇದೆ, ಡ್ರೈವಿಂಗ್ ಲೈಸನ್ಸ್ ಇದೆ…………. ಇವ್ಯಾವುವೂ ನನ್ನ ಗುರುತಿನ ಅಧಿಕೃತ ದಾಖಲೆಗಳಲ್ಲವೇ? ಇವೆಲ್ಲವುಗಳ ಪ್ರಕಾರ ನಾನು ಈ ದೇಶದ ಪ್ರಜೆಯಲ್ಲವೇ? ನಮ್ಮ ರಾಜ್ಯದಲ್ಲಿ ನಮಗೆ ಆಧಾರ್ ಯಾವುದಕ್ಕೂ ಬೇಕಿಲ್ಲ. ಅದನ್ನು ಕಡ್ಡಾಯ ಮಾಡಿಲ್ಲ. ಆದ್ದರಿಂದ ನಾನು ಮಾಡಿಸಿಕೊಂಡಿರಲಿಲ್ಲ; ಇಲ್ಲಿಗೆ ಬಂದು ದುಡಿಯುವಾಗ ಬೇಕಿಲ್ಲದ ಆಧಾರ್, ಈಗ ಮಾತ್ರ ಬೇಕಾಗಿದೆಯೇ? ನಾನು ಮಾತ್ರ ಯಾಕೆ ವಾಪಾಸ್ ಹೋಗಲು ಸಾಧ್ಯವಿಲ್ಲ”? ಎಂದ ಅರಬಿಂಧೋನ ಪ್ರಶ್ನೆಗಳಿಗೆ ನಮ್ಮಲ್ಲಿ ಉತ್ತರವಿರಲಿಲ್ಲ!

ಅವನ ಕಣ್ಣೀರು ಮುಖದ ಗುರುತನ್ನು ಮರೆಮಾಡುತ್ತಿದ್ದ ಮಾಸ್ಕ್‌ನೊಳಗೆ ಇಂಗಿಹೋಯಿತು. ದೇಶದ ಪ್ರಜೆಯಾಗಿ ತನ್ನ ಗುರುತಿನ ಬಗ್ಗೆ ಅವನ ಪ್ರಶ್ನೆಗಳು ದೇಶದ ಬಡವರನ್ನು ಇಲ್ಲದ ಸಮಸ್ಯೆಗಳ ಸುಳಿಗಳಿಗೆ ಸಿಲುಕಿಸುತ್ತಿರುವ ಪ್ರಭುತ್ವಗಳು ಹೆಣೆದಿರುವ ಚಕ್ರವ್ಯೂಹದಲ್ಲಿ ಇಂಗಿಹೋದವು!

ಹೇಗಾದರೂ ಮಾಡಿ ಅರಬಿಂದೋ ಮತ್ತು ಅಂತಹ ದುಡಿಮೆಗಾರರನ್ನು ಅವರೂರಿಗೆ ತಲುಪಿಸಲು ನಮ್ಮ ಪ್ರಯತ್ನ ಮುಂದುವರೆದಿದೆ……… ಅರಬಿಂದೋನ ಕಾಯುವಿಕೆಯಂತೆಯೇ ನಿರಂತರವಾಗಿ………
ಈ ಪ್ರಯತ್ನದಲ್ಲಿ ಯಶಸ್ಸುಗಳಿತ್ತೇವೆಂದು ನಂಬಲು ನಮಗೆ ಯಾವುದೇ ‘ಆಧಾರ’ಗಳಿಲ್ಲ; ಆದರೂ ಪ್ರಯತ್ನ ನಿಲ್ಲುವುದಿಲ್ಲ!!


ಇದನ್ನೂ ಓದಿ: ವಲಸೆಯ ವ್ಯಥೆ: ಈ ಮಹಾವಲಸೆಯ ಮಹಾಘಾತದ ಕೆಲವು ತುಣುಕುಗಳು ನಿಮ್ಮ ಮುಂದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...