Homeಮುಖಪುಟವಲಸೆಯ ವ್ಯಥೆ-3: ‘ನಾನು ಇದೇ ದೇಶದ ಪ್ರಜೆ ತಾನೆ? ಅದನ್ನು ನಾನು ‘ಆಧಾರಸಹಿತ’ ಸಾಬೀತು ಮಾಡಬೇಕೆ?’

ವಲಸೆಯ ವ್ಯಥೆ-3: ‘ನಾನು ಇದೇ ದೇಶದ ಪ್ರಜೆ ತಾನೆ? ಅದನ್ನು ನಾನು ‘ಆಧಾರಸಹಿತ’ ಸಾಬೀತು ಮಾಡಬೇಕೆ?’

ವಲಸೆ ಕಾರ್ಮಿಕರು ತಮ್ಮ ಸ್ಥಳಗಳಿಗೆ ತಲುಪಲು ಸಹಾಯ ಮಾಡುವುದಕ್ಕಾಗಿ ಆರಂಭವಾದ ಕರ್ನಾಟಕ ಜನಶಕ್ತಿ ಹೆಲ್ಫ್‌ಲೈನ್‌ನ ಭಾಗವಾದ ಮಲ್ಲಿಗೆ ಸಿರಿಮನೆಯವರು ತಮ್ಮ ಅನುಭವಕ್ಕೆ ಬಂದ ಕಾರ್ಮಿಕರ ವಸಲೆಯ ವ್ಯಥೆಗಳನ್ನು ಇಲ್ಲಿ ದಾಖಲಿಸಿದ್ದಾರೆ.

- Advertisement -
- Advertisement -

ಅಸ್ಸಾಂನ ರಾಜಧಾನಿ ಮತ್ತು ಸುಂದರ ಪಟ್ಟಣವಾದ ಗೌಹಾಟಿಯ ಅರಬಿಂದೋ ಕನ್ವರ್ 20 ವರ್ಷದ ಯುವಕ. ಇದೇ ಫೆಬ್ರವರಿ ತಿಂಗಳಿನಲ್ಲಷ್ಟೇ ಬೆಂಗಳೂರಿಗೆ ಬಂದ. ಕಟ್ಟಡ ಕಾರ್ಮಿಕನಾಗಿ ಸಿಫ್ಲೋ ಎಂಬ ಬೃಹತ್ ನಿರ್ಮಾಣ ಕಂಪೆನಿಯಲ್ಲಿ ಕೆಲಸಕ್ಕೆ ಸೇರಿದ. ಇದೇ ಕಂಪೆನಿಯಲ್ಲಿ ಈತನ ತಂದೆ ಪ್ರಥಮ್ ಕನ್ವರ್ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ.

ಈ ಕಂಪೆನಿಯ ಪ್ರಮುಖ ಕೆಲಸದ ಕ್ಷೇತ್ರ ದೊಡ್ಡ ಕಟ್ಟಡಗಳ ಛಾವಣಿಯನ್ನು ಜೋಡಿಸುವುದು. ಬಹುಮಹಡಿ ಕಟ್ಟಡಗಳ ಅತಿಯಾದ ಎತ್ತರದ ಮೇಲೆ ನಿಂತು, ಅವುಗಳ ಮೇಲ್ಛಾವಣಿಯನ್ನು (ಸೀಲಿಂಗ್) ಜೋಡಿಸುವ ಅತ್ಯಂತ ಅಪಾಯಕಾರಿ ಮತ್ತು ಅಷ್ಟೇ ಕೌಶಲ್ಯಪೂರ್ಣ ಕೆಲಸಕ್ಕೆ ಇವರಿಗೆ ಸಿಗುವುದು ದಿನಕ್ಕೆ 250-350 ರೂ ಮಾತ್ರ.

ಈತನ ಹಾಗೆಯೇ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಿಂದ ದುಡಿಯಲು ಬಂದ ನೂರಾರು ಕಾರ್ಮಿಕರು ಈ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕಂಪೆನಿಯೇ ಮಾಡಿಕೊಟ್ಟ ಚಿಕ್ಕ ರೂಮುಗಳಲ್ಲಿ 8-10 ಮಂದಿ ಕಾರ್ಮಿಕರು ಇದ್ದುಕೊಂಡು, ಇಲ್ಲಿನ ಬದುಕುವ ಖರ್ಚು ಕಳೆದು ಒಂದಷ್ಟನ್ನಾದರೂ ಉಳಿಸಿ ಊರಿಗೆ ಕಳಿಸುವ ಪ್ರಯತ್ನದಲ್ಲಿರುತ್ತಾರೆ.

ಅರಬಿಂದೋ ಇಂದ ನಮ್ಮ ಹೆಲ್ಪ್‌ಲೈನ್‌ಗೆ ಕರೆ ಬಂದಾಗ, ಅನೇಕ ಉತ್ತರ ಭಾರತದ ಕಾರ್ಮಿಕರಂತೆಯೇ ಈತನದ್ದೂ ಕೂಡಾ ‘ನಾವು ಯಾವಾಗ ಊರಿಗೆ ಹೋಗಲು ಸಾಧ್ಯ? ಸೇವಾ ಸಿಂಧು ಆಪ್ ನಲ್ಲಿ ಹೆಸರು ನೋಂದಣಿ ಮಾಡಿಸಲು ಪೊಲೀಸ್ ಠಾಣೆಯಲ್ಲಿ ಕೊಟ್ಟಿದ್ದೇವೆ, ನಮಗಿನ್ನೂ ನಮ್ಮ ಸರದಿ ನಂಬರ್ ಸಿಕ್ಕಿಲ್ಲ, ಯಾವಾಗ ಸಿಗುತ್ತದೆ? ಹೇಗಾದರೂ ನಮ್ಮನ್ನು ಊರಿಗೆ ಕಳಿಸಿ’ ಎಂಬ ಅಳಲು.

ಪೊಲೀಸ್ ಠಾಣೆಯಲ್ಲಿ ಕೊಟ್ಟಿದ್ದರೆ ಆಗುತ್ತದೆ, ಸ್ವಲ್ಪ ಕಾದು ನೋಡಿ ಎಂಬ ನಮ್ಮ ಧೈರ್ಯ ತುಂಬುವ ಮಾತುಗಳಿಂದ ಸ್ವಲ್ಪ ದಿನ ಸಮಾಧಾನಪಡಿಸುವ ಪ್ರಯತ್ನ ಮಾಡಿಯಾಯಿತು. ಆದರೆ, ಮತ್ತೆ ಮತ್ತೆ ಅರಬಿಂದೋನ ಕರೆ. ಕೊನೆಗೊಮ್ಮೆ, “ಎಲ್ಲ ಕಡೆ ಖಾಯಿಲೆ ಹರಡುತ್ತಿದೆ. ನಾನು ನಮ್ಮ ತಾಯಿಯೊಂದಿಗೆ ಇರಬೇಕೆನಿಸುತ್ತಿದೆ, ನನ್ನನ್ನು ದಯವಿಟ್ಟು ಕಳಿಸಿಕೊಡಿ” ಎನ್ನುತ್ತಾ ಅಕ್ಷರಶಃ ಆತ ಅಳಲಾರಂಭಿಸಿದಾಗ, ಕರುಳು ಚುರ್ ಎಂದಿತು.

ಪುಟ್ಟ ಮಗುವಿನಂತೆ ತಾಯಿಗಾಗಿ ಹಂಬಲಿಸುತ್ತಿರುವ ಈ ಹುಡುಗನನ್ನು ಊರಿಗೆ ಕಳಿಸಲೇಬೇಕೆಂದು ತೀರ್ಮಾನಿಸಿ, ಆತನ ‘ಸೇವಾ ಸಿಂಧು’ ನೋಂದಣಿಯನ್ನು ಹೆಲ್ಪ್‌ಲೈನ್‌ನ ವಾಲಂಟಿಯರ್ ಆದ ಸಾಫ್ಟ್ವೇರ್ ತಂತ್ರಜ್ಞ ಭರತ್ ಹೆಬ್ಬಾಳ್ ಪರಿಶೀಲಿಸಿದರು. ನೋಡಿದರೆ ಆತನ ನೋಂದಣಿ ಆಗಿರಲಿಲ್ಲ. ಅದನ್ನೂ ನಾವೇ ಮಾಡೋಣವೆಂದು ಅಂದುಕೊಂಡು ವಿವರಗಳನ್ನು ತುಂಬಿಸುತ್ತಾ ಬಂದೆವು. ಆಗ ನಮಗೆ ಸರ್ಕಾರದ ನೀತಿಗಳಲ್ಲಿರುವ ಉದ್ದೇಶಪೂರ್ವಕ ಅಡೆತಡೆಗಳ ಮತ್ತೊಂದು ಜೀವಂತ ಉದಾಹರಣೆ ಸಿಕ್ಕಿತು.

ಆಧಾರ್ ಸಂಖ್ಯೆ ಇಲ್ಲದೆ ಸೇವಾ ಸಿಂಧುವಿನಲ್ಲಿ ನೋಂದಣಿ ಸಾಧ್ಯವಿರಲಿಲ್ಲ; ಈಶಾನ್ಯ ರಾಜ್ಯಗಳ ಪ್ರಜೆಯಾದ ಅರಬಿಂಧೋ ಬಳಿ ಆಧಾರ್ ಕಾರ್ಡ್ ಇರಲಿಲ್ಲ! ಅವನೊಬ್ಬನೇ ಅಲ್ಲ, ಅಂತಹ ಹಲವು ಮಂದಿ ಇದ್ದಾರೆಂದು ತಿಳಿಯಿತು.

ಮೊದಮೊದಲಿಗೆ ವಲಸೆ ಕಾರ್ಮಿಕರ ಮರಳುವಿಕೆಗೆ ಸಂಬಂಧಿಸಿ ಬಂದ ಪ್ರಕಟಣೆಗಳನ್ನು ಹುಡುಕಿ ತೆಗೆದು ನೋಡಿದರೆ, ಅದರಲ್ಲಿ ಯಾವುದಾದರೊಂದು ಐಡಿ ಪ್ರೂಫ್ ಇದ್ದರೆ ಸಾಕು ಎಂದು ಹೇಳಲಾಗಿದೆ. ಆದರೆ, ಸೇವಾಸಿಂಧು ರಚನೆಯಲ್ಲಿ ಮಾತ್ರ ಆಧಾರ್ ಸಂಖ್ಯೆ ಇಲ್ಲದೆ ಮುಂದುವರೆಯಲು ಸಾಧ್ಯವಿಲ್ಲದಂತಹ ವ್ಯವಸ್ಥೆ ಮಾಡಲಾಗಿದೆ. ಸರಾಗವಾಗಿ ನಡೆಯಬಹುದಾದ ಪ್ರಕ್ರಿಯೆಯನ್ನು ಸಂಕೀರ್ಣಗೊಳಿಸಿ, ಒಂದಷ್ಟು ಮಂದಿ ಕಾರ್ಮಿಕರು ಈ ಕೂಡಲೇ ಮರಳಲು ಸಾಧ್ಯವಾಗದಂತಹ ಸ್ಥಿತಿ ಉಂಟುಮಾಡುವುದು ಬಿಟ್ಟು ಇದಕ್ಕೆ ಬೇರೇನಾದರೂ ತರ್ಕವಿರಲು ಸಾಧ್ಯವೇ?

ಅದರ ಬಗ್ಗೆ ಎಲ್ಲ ದಿಕ್ಕಿನಿಂದ ಪರಿಶೀಲನೆ ನಡೆಸಿ ಆಯಿತು. ಈ ಸಮಸ್ಯೆಯ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ಪರಿಸ್ಥಿತಿ ವಿವರಿಸಿದೆವು; ಸರ್ಕಾರದ ಹಿರಿಯ ಅಧಿಕಾರಿಗಳನ್ನು ಮಾತಾಡಿಸಿದೆವು; ಅಷ್ಟೆಲ್ಲ ಮಾಡಿದ ನಂತರ ನಮಗೆ ಗೊತ್ತಾದದ್ದೇನೆಂದರೆ, ಅವರ‍್ಯಾರಿಗೂ ಈ ಬಗ್ಗೆ ಏನೂ ಮಾಹಿತಿ ಇರಲಿಲ್ಲ. ಅಷ್ಟಕ್ಕೂ ಹೆಚ್ಚಾಗಿ ಇದೊಂದಷ್ಟು ಮಂದಿ ಕಾರ್ಮಿಕರು ವಾಪಾಸ್ ಹೋಗದಿದ್ದರೆ ಯಾರ ಮನೆ ಕೊಚ್ಚಿಹೋಗುತ್ತದೆ ಎಂಬಂತಹ ಧೋರಣೆ ಕಂಡಿತು.

ಪೊಲೀಸ್ ಠಾಣೆಯ ಮುಂದೆ ಕಾರ್ಮಿಕರ ಉದ್ದನೆಯ ಸರತಿ ಸಾಲಿನಲ್ಲಿ ನಿಂತು, ತಾನೇ ಏನಾದರೂ ಮಾಡಲು ಸಾಧ್ಯವೇ ಎಂದು ಪ್ರಯತ್ನಿಸಲು ಹೋದ ಅರಬಿಂಧೋ ಒಂದು ದಿನ ಅವರಿಂದ ಲಾಠಿಯೇಟು ತಿಂದು ನಿರಾಶನಾಗಿ ಮರಳಿ ಬಂದ. ಕಣ್ಣಲ್ಲಿ ನೀರು ತುಂಬಿಕೊಂಡು “ನನ್ನ ಬಳಿ ವೋಟರ್ ಐಡಿ ಇದೆ, ರೇಷನ್ ಕಾರ್ಡ್ ಇದೆ, ಪಾನ್ ಕಾರ್ಡ್ ಇದೆ, ಡ್ರೈವಿಂಗ್ ಲೈಸನ್ಸ್ ಇದೆ…………. ಇವ್ಯಾವುವೂ ನನ್ನ ಗುರುತಿನ ಅಧಿಕೃತ ದಾಖಲೆಗಳಲ್ಲವೇ? ಇವೆಲ್ಲವುಗಳ ಪ್ರಕಾರ ನಾನು ಈ ದೇಶದ ಪ್ರಜೆಯಲ್ಲವೇ? ನಮ್ಮ ರಾಜ್ಯದಲ್ಲಿ ನಮಗೆ ಆಧಾರ್ ಯಾವುದಕ್ಕೂ ಬೇಕಿಲ್ಲ. ಅದನ್ನು ಕಡ್ಡಾಯ ಮಾಡಿಲ್ಲ. ಆದ್ದರಿಂದ ನಾನು ಮಾಡಿಸಿಕೊಂಡಿರಲಿಲ್ಲ; ಇಲ್ಲಿಗೆ ಬಂದು ದುಡಿಯುವಾಗ ಬೇಕಿಲ್ಲದ ಆಧಾರ್, ಈಗ ಮಾತ್ರ ಬೇಕಾಗಿದೆಯೇ? ನಾನು ಮಾತ್ರ ಯಾಕೆ ವಾಪಾಸ್ ಹೋಗಲು ಸಾಧ್ಯವಿಲ್ಲ”? ಎಂದ ಅರಬಿಂಧೋನ ಪ್ರಶ್ನೆಗಳಿಗೆ ನಮ್ಮಲ್ಲಿ ಉತ್ತರವಿರಲಿಲ್ಲ!

ಅವನ ಕಣ್ಣೀರು ಮುಖದ ಗುರುತನ್ನು ಮರೆಮಾಡುತ್ತಿದ್ದ ಮಾಸ್ಕ್‌ನೊಳಗೆ ಇಂಗಿಹೋಯಿತು. ದೇಶದ ಪ್ರಜೆಯಾಗಿ ತನ್ನ ಗುರುತಿನ ಬಗ್ಗೆ ಅವನ ಪ್ರಶ್ನೆಗಳು ದೇಶದ ಬಡವರನ್ನು ಇಲ್ಲದ ಸಮಸ್ಯೆಗಳ ಸುಳಿಗಳಿಗೆ ಸಿಲುಕಿಸುತ್ತಿರುವ ಪ್ರಭುತ್ವಗಳು ಹೆಣೆದಿರುವ ಚಕ್ರವ್ಯೂಹದಲ್ಲಿ ಇಂಗಿಹೋದವು!

ಹೇಗಾದರೂ ಮಾಡಿ ಅರಬಿಂದೋ ಮತ್ತು ಅಂತಹ ದುಡಿಮೆಗಾರರನ್ನು ಅವರೂರಿಗೆ ತಲುಪಿಸಲು ನಮ್ಮ ಪ್ರಯತ್ನ ಮುಂದುವರೆದಿದೆ……… ಅರಬಿಂದೋನ ಕಾಯುವಿಕೆಯಂತೆಯೇ ನಿರಂತರವಾಗಿ………
ಈ ಪ್ರಯತ್ನದಲ್ಲಿ ಯಶಸ್ಸುಗಳಿತ್ತೇವೆಂದು ನಂಬಲು ನಮಗೆ ಯಾವುದೇ ‘ಆಧಾರ’ಗಳಿಲ್ಲ; ಆದರೂ ಪ್ರಯತ್ನ ನಿಲ್ಲುವುದಿಲ್ಲ!!


ಇದನ್ನೂ ಓದಿ: ವಲಸೆಯ ವ್ಯಥೆ: ಈ ಮಹಾವಲಸೆಯ ಮಹಾಘಾತದ ಕೆಲವು ತುಣುಕುಗಳು ನಿಮ್ಮ ಮುಂದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....