Homeಅಂತರಾಷ್ಟ್ರೀಯಸೋವಿಯತ್ ಒಕ್ಕೂಟದ ಅಂತಿಮ ನಾಯಕ ಮಿಖಾಯಿಲ್ ಗೋರ್ಬಚೇವ್(91) ನಿಧನ

ಸೋವಿಯತ್ ಒಕ್ಕೂಟದ ಅಂತಿಮ ನಾಯಕ ಮಿಖಾಯಿಲ್ ಗೋರ್ಬಚೇವ್(91) ನಿಧನ

- Advertisement -
- Advertisement -

ಸೋವಿಯತ್ ಒಕ್ಕೂಟದ ಕೊನೆಯ ನಾಯಕ ಮಿಖಾಯಿಲ್ ಗೋರ್ಬಚೇವ್ ಅವರು ರಷ್ಯಾದ ಮಾಸ್ಕೋದಲ್ಲಿ ತನ್ನ 91 ನೇ ವಯಸ್ಸಿನಲ್ಲಿ ನಿಧನರಾದರು. “ಗಂಭೀರ ಮತ್ತು ದೀರ್ಘಕಾಲದ ಅನಾರೋಗ್ಯದಲ್ಲಿದ್ದ ಮಿಖಾಯಿಲ್ ಸೆರ್ಗೆವಿಚ್ ಗೋರ್ಬಚೇವ್ ಇಂದು ಸಂಜೆ ನಿಧನರಾದರು ಎಂದು ಸೆಂಟ್ರಲ್ ಕ್ಲಿನಿಕಲ್ ಹಾಸ್ಪಿಟಲ್ (ಸಿಸಿಎಚ್) ಮಂಗಳವಾರ ತಡವಾಗಿ ಘೋಷಿಸಿದೆ ಎಂದು” ಐಎಎನ್ಎಸ್ ವರದಿ ಮಾಡಿದೆ.

ರಷ್ಯಾದ ಪ್ರಸಿದ್ಧ ರಾಜಕಾರಣಿಗಳು ಮತ್ತು ಬರಹಗಾರರ ಸಮಾಧಿ ಇರುವ ಮಾಸ್ಕೋದ ನೊವೊಡೆವಿಚಿ ಸ್ಮಶಾನದಲ್ಲಿ ಅವರ ಹೆಂಡತಿಯ ಸಮಾಧಿ ಪಕ್ಕದಲ್ಲಿ ಗೋರ್ಬಚೇವ್‌ ಅವರನ್ನೂ ಸಮಾಧಿ ಮಾಡಲಾಗುವುದು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದ ಮಾಜಿ ನಾಯಕನಿಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸಂತಾಪ ಸೂಚಿಸಿದ್ದಾರೆ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಮಂಗಳವಾರ ಸಂಜೆ ಹೇಳಿದ್ದಾರೆ. ‘ನೊವಾಯಾ ಗೆಜೆಟಾ’ ಪತ್ರಿಕೆಯ ಸಹ-ಸ್ಥಾಪಕರಾದ ಗೋರ್ಬಚೇವ್‌ ಅವರು ಕ್ರೆಮ್ಲಿನ್ ಅನ್ನು ಟೀಕಿಸಿ, ರಷ್ಯಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಅನೇಕ ಬಾರಿ ಬಹಿರಂಗಪಡಿಸಿದ್ದರು.

ಪರಮಾಣು ನಿಶ್ಯಸ್ತ್ರೀಕರಣ ಮತ್ತು ಶಸ್ತ್ರಾಸ್ತ್ರ ನಿಯಂತ್ರಣಕ್ಕಾಗಿ 1980 ರ ದಶಕದಲ್ಲಿ ಅಮೆರಿಕಾದೊಂದು ಒಪ್ಪಂದಗಳನ್ನು ಮಾಡಿಕೊಳ್ಳುವ ಪ್ರಯತ್ನಗಳನ್ನು ಮಾಡಿದ್ದರು. ಅವರು 1990 ರಲ್ಲಿ ನೊಬೆಲ್ ಪ್ರಶಸ್ತಿಯನ್ನು ಪಡೆದಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

1991 ರಲ್ಲಿ ಸೋವಿಯತ್ ಒಕ್ಕೂಟ ವಿಭಜನೆಯಾಗಿ ಗೋರ್ಬಚೇವ್ ಅವರ ರಾಜಕೀಯ ಅವನತಿಗೆ ಕಾರಣವಾಯಿತು. ಇದರ ನಂತರ ಗೋರ್ಬಚೇವ್‌ ಸೋವಿಯತ್ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಮ್ಯುನಿಷ್ಟ್‌‌ ರಷ್ಯಾ 15 ಸ್ವತಂತ್ರ ದೇಶಗಳಾಗಿ ವಿಸರ್ಜಿಸಲ್ಪಟ್ಟಿತು.

ಗೋರ್ಬಚೇವ್‌‌ ನಿಧನಕ್ಕೆ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್, ಯುರೋಪಿಯನ್ ಕಮಿಷನ್ ಅಧ್ಯಕ್ಷ ಉರ್ಸುಲಾ ವಾನ್ ಡೆರ್ ಲೇಯೆನ್, ಬ್ರಿಟನ್‌ನ ನಿರ್ಗಮಿತ ಪ್ರಧಾನಿ ಬೋರಿಸ್ ಜಾನ್ಸನ್ ಸೇರಿದಂತೆ ಹಲವಾರು ಪ್ರಮುಖ ವ್ಯಕ್ತಿಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...