Homeಮುಖಪುಟಕಾಂಗ್ರೆಸ್ ತೊರೆದು ಶಿಂಧೆ ‘ಸೇನೆ’ ಸೇರಿದ ಮಿಲಿಂದ್ ದಿಯೋರಾ

ಕಾಂಗ್ರೆಸ್ ತೊರೆದು ಶಿಂಧೆ ‘ಸೇನೆ’ ಸೇರಿದ ಮಿಲಿಂದ್ ದಿಯೋರಾ

- Advertisement -
- Advertisement -

ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗಿದ್ದಾರೆ. ‘ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ” ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ವರ್ಷಗಳಲ್ಲಿ ಅವರ ಅಚಲ ಬೆಂಬಲಕ್ಕಾಗಿ ನಾನು ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳಿದರು.

‘ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದು ಮುಕ್ತಾಯವಾಗಿದೆ. ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ’ ಎಂದು ಹೇಳಿರುವ ಅವರು, “ನಾನು ಅಭಿವೃದ್ಧಿಯ ಪಥದಲ್ಲಿ ನಡೆಯುತ್ತಿದ್ದೇನೆ” ಎಂದು ತಮ್ಮ ಪತ್ನಿ ಪೂಜಾ ಅವರೊಂದಿಗೆ ಪ್ರಾರ್ಥನೆ ಸಲ್ಲಿಸಲು ಪ್ರಭಾದೇವಿಯಲ್ಲಿರುವ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಲು ತಮ್ಮ ಮನೆಯಿಂದ ಹೊರಬಂದಾಗ ಹೇಳಿದರು.

2004 ಮತ್ತು 2009 ರಲ್ಲಿ ಮುಂಬೈ ದಕ್ಷಿಣ ಕ್ಷೇತ್ರವನ್ನು ಕಾಂಗ್ರೆಸ್ ಹಿರಿಯ ಮುರಳಿ ದಿಯೋರಾ ಅವರ ಪುತ್ರ ಮಿಲಿಂದ್ ದಿಯೋರಾ ಅವರು ಗೆದ್ದಿದ್ದರು. ಅವರು 2014 ಮತ್ತು 2019 ರ ನಂತರದ ಚುನಾವಣೆಯಲ್ಲಿ ಶಿವಸೇನಾ (ಅವಿಭಜಿತ) ನಾಯಕ ಅರವಿಂದ್ ಸಾವಂತ್ ವಿರುದ್ಧ ಸೋತಿದ್ದರು.

ಮುಂಬೈ ದಕ್ಷಿಣ ಕ್ಷೇತ್ರವನ್ನು, ಇಂಡಿಯಾ ಮೈತ್ರಿ ಕೂಟದಲ್ಲಿರುವ ಉದ್ಧವ್ ಠಾಕ್ರೆ ಬಣ ಖಚಿತಪಡಿಸಿಕೊಂಡಿರುವ ಬಗ್ಗೆ ಅವರು ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. “ಇಂದು ನನಗೆ ತುಂಬಾ ರೋಮಾಂಚನಕಾರಿ ದಿನ. ನಾನು ಕಾಂಗ್ರೆಸ್ ತೊರೆಯುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. ಆದರೆ ಇಂದು ನನ್ನ ಕುಟುಂಬದ ಕಾಂಗ್ರೆಸ್ ಜೊತೆಗಿನ 55 ವರ್ಷಗಳ ಸುದೀರ್ಘ ಸಂಬಂಧ ಮುರಿದುಬಿದ್ದಿದೆ” ಎಂದು ಇಂದು ಶಿವಸೇನೆಗೆ ಸೇರ್ಪಡೆಗೊಂಡ ನಂತರ ದಿಯೋರಾ ಸುದ್ದಿಗಾರರಿಗೆ ತಿಳಿಸಿದರು.

“ನನ್ನ ರಾಜಕೀಯ ಪ್ರಗತಿಪರ ಮತ್ತು ಜಾತ್ಯತೀತ ಎಂದು ನಿಮಗೆಲ್ಲರಿಗೂ ತಿಳಿದಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಾರ್ವಜನಿಕರ ನಡುವೆ ಕೆಲಸ ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ. ನಾನು ಅವರ ಕೈಯನ್ನು ಬಲಪಡಿಸಬೇಕು” ಎಂದು ಹೇಳಿದರು.

ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿದ ಬಳಿಕ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಪಕ್ಷದಿಂದ ಮಿಲಿಂದ್ ದಿಯೋರಾ ನಿರ್ಗಮನದ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಅವರ ತಂದೆ ಮುರಳಿ ದಿಯೋರಾ ಅವರು ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದರು. ಆದರೆ ಯಾವಾಗಲೂ ಪಕ್ಷದ ಪರವಾಗಿ ಹೇಗೆ ನಿಲ್ಲುತ್ತಿದ್ದರು’ ಎಂಬುದನ್ನು ನೆನಪಿಸಿಕೊಂಡರು.

ಇದನ್ನೂ ಓದಿ; ಪಕ್ಷ ತೊರೆದ ಕಾಂಗ್ರೆಸ್ ಹಿರಿಯ ನಾಯಕ ಮಿಲಿಂದ್ ದಿಯೋರಾ: ಶಿಂಧೆ ನೇತೃತ್ವದ ಶಿವಸೇನೆ ಸೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...