Homeಮುಖಪುಟಕಾಂಗ್ರೆಸ್ ತೊರೆದು ಶಿಂಧೆ ‘ಸೇನೆ’ ಸೇರಿದ ಮಿಲಿಂದ್ ದಿಯೋರಾ

ಕಾಂಗ್ರೆಸ್ ತೊರೆದು ಶಿಂಧೆ ‘ಸೇನೆ’ ಸೇರಿದ ಮಿಲಿಂದ್ ದಿಯೋರಾ

- Advertisement -
- Advertisement -

ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗಿದ್ದಾರೆ. ‘ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ” ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ವರ್ಷಗಳಲ್ಲಿ ಅವರ ಅಚಲ ಬೆಂಬಲಕ್ಕಾಗಿ ನಾನು ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳಿದರು.

‘ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದು ಮುಕ್ತಾಯವಾಗಿದೆ. ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ’ ಎಂದು ಹೇಳಿರುವ ಅವರು, “ನಾನು ಅಭಿವೃದ್ಧಿಯ ಪಥದಲ್ಲಿ ನಡೆಯುತ್ತಿದ್ದೇನೆ” ಎಂದು ತಮ್ಮ ಪತ್ನಿ ಪೂಜಾ ಅವರೊಂದಿಗೆ ಪ್ರಾರ್ಥನೆ ಸಲ್ಲಿಸಲು ಪ್ರಭಾದೇವಿಯಲ್ಲಿರುವ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಲು ತಮ್ಮ ಮನೆಯಿಂದ ಹೊರಬಂದಾಗ ಹೇಳಿದರು.

2004 ಮತ್ತು 2009 ರಲ್ಲಿ ಮುಂಬೈ ದಕ್ಷಿಣ ಕ್ಷೇತ್ರವನ್ನು ಕಾಂಗ್ರೆಸ್ ಹಿರಿಯ ಮುರಳಿ ದಿಯೋರಾ ಅವರ ಪುತ್ರ ಮಿಲಿಂದ್ ದಿಯೋರಾ ಅವರು ಗೆದ್ದಿದ್ದರು. ಅವರು 2014 ಮತ್ತು 2019 ರ ನಂತರದ ಚುನಾವಣೆಯಲ್ಲಿ ಶಿವಸೇನಾ (ಅವಿಭಜಿತ) ನಾಯಕ ಅರವಿಂದ್ ಸಾವಂತ್ ವಿರುದ್ಧ ಸೋತಿದ್ದರು.

ಮುಂಬೈ ದಕ್ಷಿಣ ಕ್ಷೇತ್ರವನ್ನು, ಇಂಡಿಯಾ ಮೈತ್ರಿ ಕೂಟದಲ್ಲಿರುವ ಉದ್ಧವ್ ಠಾಕ್ರೆ ಬಣ ಖಚಿತಪಡಿಸಿಕೊಂಡಿರುವ ಬಗ್ಗೆ ಅವರು ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. “ಇಂದು ನನಗೆ ತುಂಬಾ ರೋಮಾಂಚನಕಾರಿ ದಿನ. ನಾನು ಕಾಂಗ್ರೆಸ್ ತೊರೆಯುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. ಆದರೆ ಇಂದು ನನ್ನ ಕುಟುಂಬದ ಕಾಂಗ್ರೆಸ್ ಜೊತೆಗಿನ 55 ವರ್ಷಗಳ ಸುದೀರ್ಘ ಸಂಬಂಧ ಮುರಿದುಬಿದ್ದಿದೆ” ಎಂದು ಇಂದು ಶಿವಸೇನೆಗೆ ಸೇರ್ಪಡೆಗೊಂಡ ನಂತರ ದಿಯೋರಾ ಸುದ್ದಿಗಾರರಿಗೆ ತಿಳಿಸಿದರು.

“ನನ್ನ ರಾಜಕೀಯ ಪ್ರಗತಿಪರ ಮತ್ತು ಜಾತ್ಯತೀತ ಎಂದು ನಿಮಗೆಲ್ಲರಿಗೂ ತಿಳಿದಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಾರ್ವಜನಿಕರ ನಡುವೆ ಕೆಲಸ ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ. ನಾನು ಅವರ ಕೈಯನ್ನು ಬಲಪಡಿಸಬೇಕು” ಎಂದು ಹೇಳಿದರು.

ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿದ ಬಳಿಕ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಪಕ್ಷದಿಂದ ಮಿಲಿಂದ್ ದಿಯೋರಾ ನಿರ್ಗಮನದ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಅವರ ತಂದೆ ಮುರಳಿ ದಿಯೋರಾ ಅವರು ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದರು. ಆದರೆ ಯಾವಾಗಲೂ ಪಕ್ಷದ ಪರವಾಗಿ ಹೇಗೆ ನಿಲ್ಲುತ್ತಿದ್ದರು’ ಎಂಬುದನ್ನು ನೆನಪಿಸಿಕೊಂಡರು.

ಇದನ್ನೂ ಓದಿ; ಪಕ್ಷ ತೊರೆದ ಕಾಂಗ್ರೆಸ್ ಹಿರಿಯ ನಾಯಕ ಮಿಲಿಂದ್ ದಿಯೋರಾ: ಶಿಂಧೆ ನೇತೃತ್ವದ ಶಿವಸೇನೆ ಸೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...